<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ಕಲಿಕೆ</title>
	<atom:link href="http://dnshankarabhat.net/tag/%e0%b2%95%e0%b2%b2%e0%b2%bf%e0%b2%95%e0%b3%86/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಕಿವುಡರ ಸನ್ನೆನುಡಿಯೂ ಒಂದು ನುಡಿಯೇ</title>
		<link>http://dnshankarabhat.net/%e0%b2%95%e0%b2%bf%e0%b2%b5%e0%b3%81%e0%b2%a1%e0%b2%b0-%e0%b2%b8%e0%b2%a8%e0%b3%8d%e0%b2%a8%e0%b3%86%e0%b2%a8%e0%b3%81%e0%b2%a1%e0%b2%bf%e0%b2%af%e0%b3%82-%e0%b2%92%e0%b2%82%e0%b2%a6%e0%b3%81/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25bf%25e0%25b2%25b5%25e0%25b3%2581%25e0%25b2%25a1%25e0%25b2%25b0-%25e0%25b2%25b8%25e0%25b2%25a8%25e0%25b3%258d%25e0%25b2%25a8%25e0%25b3%2586%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af%25e0%25b3%2582-%25e0%25b2%2592%25e0%25b2%2582%25e0%25b2%25a6%25e0%25b3%2581</link>
		<comments>http://dnshankarabhat.net/%e0%b2%95%e0%b2%bf%e0%b2%b5%e0%b3%81%e0%b2%a1%e0%b2%b0-%e0%b2%b8%e0%b2%a8%e0%b3%8d%e0%b2%a8%e0%b3%86%e0%b2%a8%e0%b3%81%e0%b2%a1%e0%b2%bf%e0%b2%af%e0%b3%82-%e0%b2%92%e0%b2%82%e0%b2%a6%e0%b3%81/#comments</comments>
		<pubDate>Mon, 14 Apr 2014 16:58:52 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[hearing impair]]></category>
		<category><![CDATA[hearing problem]]></category>
		<category><![CDATA[Kannada linguistics]]></category>
		<category><![CDATA[learning]]></category>
		<category><![CDATA[linguistics]]></category>
		<category><![CDATA[physically challenged]]></category>
		<category><![CDATA[sign language]]></category>
		<category><![CDATA[teaching]]></category>
		<category><![CDATA[ಕಣ್ಣುಸನ್ನೆ]]></category>
		<category><![CDATA[ಕಯ್ಸನ್ನೆ]]></category>
		<category><![CDATA[ಕಲಿಕೆ]]></category>
		<category><![CDATA[ಕಿವುಡ]]></category>
		<category><![CDATA[ಮಕ್ಕಳು]]></category>
		<category><![CDATA[ಸನ್ನೆನುಡಿ]]></category>

		<guid isPermaLink="false">http://dnshankarabhat.net/?p=109</guid>
		<description><![CDATA[ನುಡಿಯರಿಮೆಯ ಇಣುಕುನೋಟ – 24 ನಾವು ಮಾತನಾಡುವಾಗ ಉಲಿಗಳನ್ನು ಬಳಸುತ್ತೇವೆ. ಈ ಉಲಿಗಳು ಕಿವುಡರಿಗೆ ಕೇಳಿಸುವುದಿಲ್ಲವಾದ ಕಾರಣ, ಕಿವುಡರಾಗಿರುವ ಚಿಕ್ಕ ಮಕ್ಕಳು ಉಲಿಗಳಿರುವ ಮಾತುಗಳನ್ನು ಕಲಿಯಲಾರರು. ಹಾಗಾಗಿ, ದೊಡ್ಡವರಾಗುತ್ತಿರುವಂತೆ ಅಂತಹ ಮಾತುಗಳನ್ನು ಬಳಸಲೂ ಅವರಿಗೆ ಸಾದ್ಯವಾಗುವುದಿಲ್ಲ. ಹೆಚ್ಚು ಕಿವುಡಿಲ್ಲದ ಮಕ್ಕಳಿಗೆ ಚಿಕ್ಕಂದಿನಲ್ಲೇನೇ ಕೇಳಿಸುವ ಉಪಕರಣವನ್ನು ತೊಡಿಸಿದಲ್ಲಿ ಅವರೂ ಇತರ ಮಕ್ಕಳ ಹಾಗೆ ಮಾತನಾಡಲು ಕಲಿಯಬಲ್ಲರು. ಆದರೆ ಏನೂ ಕೇಳಿಸದ ಮಕ್ಕಳಿಗೆ ಹೀಗೆ ಮಾಡಲು ಸಾದ್ಯವಾಗುವುದಿಲ್ಲ. ಹೀಗಿದ್ದರೂ, ಅಂತಹ ಮಕ್ಕಳಿಗೆ ಉಲಿಗಳ ಬದಲು ಸನ್ನೆಗಳನ್ನು ಬಳಸುವ ಮಾತನ್ನು ಕಲಿಸಿದಲ್ಲಿ ಅವರು ಅದನ್ನು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 24</strong></p>
<p>ನಾವು ಮಾತನಾಡುವಾಗ ಉಲಿಗಳನ್ನು ಬಳಸುತ್ತೇವೆ. ಈ ಉಲಿಗಳು <strong>ಕಿವುಡರಿಗೆ</strong> ಕೇಳಿಸುವುದಿಲ್ಲವಾದ ಕಾರಣ, ಕಿವುಡರಾಗಿರುವ ಚಿಕ್ಕ ಮಕ್ಕಳು ಉಲಿಗಳಿರುವ ಮಾತುಗಳನ್ನು ಕಲಿಯಲಾರರು. ಹಾಗಾಗಿ, ದೊಡ್ಡವರಾಗುತ್ತಿರುವಂತೆ ಅಂತಹ ಮಾತುಗಳನ್ನು ಬಳಸಲೂ ಅವರಿಗೆ ಸಾದ್ಯವಾಗುವುದಿಲ್ಲ. ಹೆಚ್ಚು ಕಿವುಡಿಲ್ಲದ ಮಕ್ಕಳಿಗೆ ಚಿಕ್ಕಂದಿನಲ್ಲೇನೇ ಕೇಳಿಸುವ ಉಪಕರಣವನ್ನು ತೊಡಿಸಿದಲ್ಲಿ ಅವರೂ ಇತರ ಮಕ್ಕಳ ಹಾಗೆ ಮಾತನಾಡಲು ಕಲಿಯಬಲ್ಲರು. ಆದರೆ ಏನೂ ಕೇಳಿಸದ ಮಕ್ಕಳಿಗೆ ಹೀಗೆ ಮಾಡಲು ಸಾದ್ಯವಾಗುವುದಿಲ್ಲ. ಹೀಗಿದ್ದರೂ, ಅಂತಹ ಮಕ್ಕಳಿಗೆ ಉಲಿಗಳ ಬದಲು ಸನ್ನೆಗಳನ್ನು ಬಳಸುವ ಮಾತನ್ನು ಕಲಿಸಿದಲ್ಲಿ ಅವರು ಅದನ್ನು ಕಲಿಯಬಲ್ಲರು. ಈ ರೀತಿ ಉಲಿಗಳ ಬದಲು ಸನ್ನೆಗಳನ್ನು ಬಳಸುವ ಕಿವುಡರ ನುಡಿಯನ್ನು ಸನ್ನೆನುಡಿಯೆಂದು ಕರೆಯಬಹುದು.</p>
<p>ಕಿವುಡರ ಈ ಸನ್ನೆನುಡಿ ನಾವಾಡುವ ಉಲಿನುಡಿಗಿಂತ ಒಂದು ಮುಕ್ಯವಾದ ವಿಶಯದಲ್ಲಿ ಬೇರಾಗಿದೆ. ಅದು ಕಣ್ಣಿಗೆ ಕಾಣಿಸುವ ಸನ್ನೆಗಳ ನುಡಿಯಾದ ಕಾರಣ, ಅದರಲ್ಲಿ ಒಂದೇ ಬಾರಿಗೆ ಕಯ್ಸನ್ನೆ, ಕಣ್ಣುಸನ್ನೆ, ಹುಬ್ಬುಗಳ ಕುಣಿತ, ತುಟಿಗಳ ಚಲನೆ, ನಿಲ್ಲುವ ಕ್ರಮ ಮೊದಲಾದ ಹಲವು ಬಗೆಯ ಸನ್ನೆಗಳನ್ನು ಒಟ್ಟಾಗಿ ಬಳಸಿಕೊಳ್ಳಲಾಗುತ್ತದೆ. ನಮ್ಮ ಮಾತುಗಳಲ್ಲಿ ಬಳಕೆಯಾಗುವ ಉಲಿಗಳು ಒಂದರ ಅನಂತರ ಒಂದರಂತೆ ಬರಬಲ್ಲುವಲ್ಲದೆ ಹಾಗೆ ಒಟ್ಟಾಗಿ ಬರಲಾರವು. ಈ ವಿಶಯದಲ್ಲಿ ಸನ್ನೆನುಡಿಗೆ ಉಲಿನುಡಿಗಿಂತ ಹೆಚ್ಚಿನ ಕಸುವಿದೆ. ಆದರೆ, ಇನ್ನೊಂದು ವಿಶಯದಲ್ಲಿ ಉಲಿನುಡಿಗೇನೇ ಹೆಚ್ಚಿನ ಕಸುವಿದೆ; ಸನ್ನೆನುಡಿಯಲ್ಲಿ ಒಬ್ಬರು ನುಡಿದ ಮಾತನ್ನು ಇನ್ನೊಬ್ಬರು ತಿಳಿಯಬೇಕಿದ್ದಲ್ಲಿ ಅವರಿಬ್ಬರೂ ಎದುರೆದುರಿಗೇನೇ ಇರಬೇಕಾಗುತ್ತದೆ; ಆದರೆ, ಉಲಿನುಡಿಯಲ್ಲಿ ಆ ರೀತಿ ಎದುರೆದುರಿಗಿರಬೇಕಾಗಿಲ್ಲ.</p>
<p>ಈ ಎರಡು ವಿಶಯಗಳನ್ನು ಹೊರತುಪಡಿಸಿ, ಬೇರೆಲ್ಲಾ ವಿಶಯಗಳಲ್ಲೂ ಕಿವುಡರ ಸನ್ನೆನುಡಿಗೆ ಕಿವಿ ಕೇಳುವವರ ಉಲಿನುಡಿಯಂತಹದೇ ಕಸುವಿದೆ. ಅದರಲ್ಲಿ ಬಳಕೆಯಾಗುವ ಸನ್ನೆಗಳಿಗೆ ಉಲಿನುಡಿಯ ಉಲಿಗಳ ಹಾಗೆ ನೇರವಾದ ಅರ‍್ತವಿರುವುದಿಲ್ಲ, ಮತ್ತು ಅಂತಹ ಅರ‍್ತವಿಲ್ಲದ ಸನ್ನೆಗಳ ಮೂಲಕ ಉಲಿನುಡಿಯ ಹಾಗೆ ಸನ್ನೆನುಡಿಯಲ್ಲೂ ಸಾವಿರಾರು ಅರ‍್ತವಿರುವ ಪದಗಳನ್ನು ರಚಿಸಿಕೊಳ್ಳಲಾಗುತ್ತದೆ. ಇದಲ್ಲದೆ, ಉಲಿನುಡಿಯ ಹಾಗೆ ಸನ್ನೆನುಡಿಯಲ್ಲೂ ಬಹಳ ಸಿಕ್ಕಲು ಸಿಕ್ಕಲಾದ ನೂರಾರು ಸೊಲ್ಲರಿಮೆಯ ಕಟ್ಟಲೆಗಳನ್ನು ಬಳಸಲಾಗುತ್ತದೆ. ಅವುಗಳ ಮೂಲಕ ಎಂತಹ ವಿಶಯವನ್ನು ಬೇಕಿದ್ದರೂ ಸನ್ನೆನುಡಿಯಲ್ಲಿ ತಿಳಿಸಿ ಹೇಳಲು ಬರುತ್ತದೆ.</p>
<p>ಆದರೆ ಒಂದೇ ಸಮಾಜದಲ್ಲಿ ಬಳಕೆಯಾಗುವ ಉಲಿನುಡಿಯ ಕಟ್ಟಲೆಗಳಿಗೂ ಸನ್ನೆನುಡಿಯ ಕಟ್ಟಲೆಗಳಿಗೂ ನಡುವೆ ಯಾವ ಸಂಬಂದವೂ ಇರುವುದಿಲ್ಲ. ಅವೆರಡು ಒಂದಕ್ಕಿಂತ ಒಂದು ತೀರಾ ಬೇರಾಗಿರುತ್ತವೆ. ಎತ್ತುಗೆಗಾಗಿ, ಅಮೆರಿಕಾದ ಕಿವುಡರು ಬಳಸುವ ಸನ್ನೆನುಡಿಗಿರುವ ಸೊಲ್ಲರಿಮೆಯ ಕಟ್ಟಲೆಗಳು ಅಲ್ಲಿ ಇತರರು ಬಳಸುವ ಇಂಗ್ಲಿಶ್ ನುಡಿಯ ಕಟ್ಟಲೆಗಳಿಗಿಂತ ತೀರ ಬೇರಾಗಿವೆ. ಇಂಗ್ಲಿಶ್ ನುಡಿಯಲ್ಲಿ ಬಳಕೆಯಾಗುವ ಪದಗಳಿಗೆ ಹೆಚ್ಚು ಸಿಕ್ಕಲಾದ ರೂಪಾವಳಿಗಳಿಲ್ಲ. ಆದರೆ, ಅಮೆರಿಕಾದ ಸನ್ನೆನುಡಿಯಲ್ಲಿ ಬಳಕೆಯಾಗುವ ಪದಗಳಿಗೆ ಬಹಳ ಸಿಕ್ಕಲಾದ ರೂಪಾವಳಿಗಳಿವೆ. ಅವುಗಳಲ್ಲಿ ಬರುವ ಎಸಕ(ಕ್ರಿಯಾ)ಪದಗಳ ರೂಪಗಳಿಂದ ಒಂದು ಇಡೀ ಸೊಲ್ಲಿನಲ್ಲಿ ಬರುವ ವಿಶಯಗಳೆಲ್ಲವನ್ನೂ ಸೂಚಿಸಲು ಬರುತ್ತದೆ: ಒಂದು ಕೆಲಸವನ್ನು ಮಾಡಿದವನು, ಅದರಿಂದ ತೊಂದರೆಗೊಳಗಾದವನು, ಆ ಕೆಲಸಕ್ಕೆ ಬಳಸಿದ ವಸ್ತು, ಸಮಯ, ಜಾಗ ಮೊದಲಾದ ಹಲವು ವಿಶಯಗಳನ್ನು ಅಂತಹ ಒಂದೇ ಒಂದು ಎಸಕರೂಪದೊಳಗೆ ಹಿಡಿಸಲು ಬರುತ್ತದೆ.</p>
<p>ಇದಲ್ಲದೆ, ಅಮೆರಿಕಾದ ಈ ಸನ್ನೆನುಡಿಯಲ್ಲಿ ಪದಗಳನ್ನು ಜೋಡಿಸಿ ಸೊಲ್ಲುಗಳನ್ನಾಗಿ ಮಾಡುವ ಬಗೆ ಇಂಗ್ಲಿಶ್ ನುಡಿ ಬಳಸುವ ಹೊಲಬಿಗಿಂತ ತೀರ ಬೇರಾಗಿದೆ: ಅದರಲ್ಲಿ ಒಂದು ವಿಶಯವನ್ನು ಮೊದಲು ತಿಳಿಸಿ, ಅದರ ಕುರಿತಾಗಿ ಹೇಳಬೇಕಾಗಿರುವುದನ್ನು ಆಮೇಲೆ ಹೇಳಲಾಗುತ್ತದೆ; ಎತ್ತುಗೆಗಾಗಿ, ಆ ನುಡಿಯ ಒಂದು ಸೊಲ್ಲು ‘ಮನೆ, ನಾನು ಹೋಗುತ್ತೇನೆ’ ಎಂದಿರಬಲ್ಲುದು, ಮತ್ತು ಇನ್ನೊಂದು ‘ಹಣ್ಣು, ನಾನು ತಿಂದಿದ್ದೇನೆ’ ಎಂದಿರಬಲ್ಲುದು. ಇವುಗಳಲ್ಲಿ ಯಾವುದರ ಕುರಿತಾಗಿ ಮಾತನಾಡಬೇಕಾಗಿದೆ ಎಂಬುದನ್ನು (‘ಮನೆ’ ಇಲ್ಲವೇ ‘ಹಣ್ಣು’ ಎಂಬುದನ್ನು) ಮೊದಲು ತಿಳಿಸಲಾಗಿದೆ, ಮತ್ತು ಆಮೇಲೆ ಅದರ ಕುರಿತಾಗಿ ಏನು ಹೇಳಬೇಕಾಗಿದೆಯೋ ಅದನ್ನು ಹೇಳಲಾಗಿದೆ.</p>
<p>ಅಮೆರಿಕಾದ ಈ ಸನ್ನೆನುಡಿಯಲ್ಲಿ ಪದಗಳು ಸನ್ನೆರೂಪದಲ್ಲಿದ್ದು, ಅವುಗಳಿಗೆ ಸೇರಿಸಬೇಕಾಗಿರುವ ಒಟ್ಟು(ಪ್ರತ್ಯಯ)ಗಳು ಚಲನೆಗಳ ರೂಪದಲ್ಲಿರುತ್ತವೆ. ಅದರಲ್ಲಿ ಬಳಕೆಯಾಗುವ ಕಟ್ಟಲೆಗಳು ಆ ದೇಶದ ಬುಡಕಟ್ಟಿನ ಜನಾಂಗಗಳಲ್ಲಿ ಬಳಕೆಯಲ್ಲಿರುವ ಹೋಪಿ, ನವಹೋ ಮೊದಲಾದ ಕೆಲವು ಉಲಿನುಡಿಗಳ ಕಟ್ಟಲೆಗಳನ್ನು ಹೋಲುತ್ತವೆ. ಈ ಸನ್ನೆನುಡಿಯಲ್ಲಿ ಈಗಾಗಲೇ ಕತೆ, ಕವಿತೆ, ನಾಟಕ, ಪ್ರಬಂದ ಮೊದಲಾದುವನ್ನು ರಚಿಸಲಾಗಿದೆ. ಕಣ್ಣಿಗೆ ಕಾಣಿಸುವಂತಹ ಕಯ್ಸನ್ನೆ, ಕಯ್ಯ ಚಲನೆ, ಹುಬ್ಬಿನ ಕುಣಿತ, ಮೋರೆಯಲ್ಲಿ ಕಾಣಿಸುವ ಅನಿಸಿಕೆಗಳು ಮೊದಲಾದ ಉಲಿನುಡಿಗಳಿಗಿಂತ ತೀರ ಬೇರಾಗಿರುವ ಅಂಶಗಳನ್ನು ಈ ನುಡಿಗಳು ಬಳಸುವುವಾದ ಕಾರಣ, ಸಾಹಿತ್ಯ ರಚನೆಯಲ್ಲಿ ಅವುಗಳಿಗಿರುವ ಕಸುವು ಉಲಿನುಡಿಗಳ ಕಸುವಿಗಿಂತ ತೀರ ಬೇರಾದುದಾಗಿದೆ.</p>
<p>ಎಲ್ಲಾ ಸಮಾಜಗಳಲ್ಲಿರುವ ಕಿವುಡರೂ ಸನ್ನೆನುಡಿಯನ್ನು ಬಳಸಲು ಕಲಿತಿರುವುದಿಲ್ಲ. ಇದಕ್ಕೆ ಕಾರಣವೇನೆಂದರೆ, ಆ ರೀತಿ ಕಲಿಯಲು ಹಲವು ಮಂದಿ ಕಿವುಡು ಮಕ್ಕಳು ಚಿಕ್ಕಂದಿನಲ್ಲಿ ಒಟ್ಟಿಗೆ ವಾಸಿಸುತ್ತಿರುವುದು ಅವಶ್ಯ. ಬೇರೆ ಬೇರಾಗಿ ಉಲಿನುಡಿಯನ್ನು ಬಳಸುವ ತಾಯಿತಂದೆಯರೊಂದಿಗೆ ಮತ್ತು ಒಡಹುಟ್ಟಿದವರೊಂದಿಗೆ ಬೆಳೆಯುವ ಕಿವುಡು ಮಗುವಿಗೆ ಸನ್ನೆನುಡಿಯನ್ನು ಕಲಿಯಲು ಸಂದರ‍್ಬವೇ ಸಿಗುವುದಿಲ್ಲ. ಕಿವುಡರಿಗೇನೇ ಬೇರೆ ಶಾಲೆಗಳನ್ನು ತೆರೆದು ಕಿವುಡು ಮಕ್ಕಳು ಚಿಕ್ಕಂದಿನಲ್ಲೇನೇ ಒಟ್ಟಿಗೆ ಬೆಳೆಯುವಂತೆ ಮಾಡಿದಲ್ಲಿ ಅವರು ತಮ್ಮೊಳಗೆ ಸನ್ನೆನುಡಿಯನ್ನು ಬಳಸಲು ಕಲಿತುಕೊಳ್ಳಬಲ್ಲರು ಮತ್ತು ಅದರ ಮೂಲಕ ಅವರ ಜೀವನ ಹೆಚ್ಚು ಅರ‍್ತವತ್ತಾಗಬಲ್ಲುದು.</p>
<p>ಚಿಕ್ಕಂದಿನಲ್ಲೇನೇ ಈ ರೀತಿ ಕಿವುಡು ಮಕ್ಕಳು ಒಟ್ಟಿಗೆ ಬೆಳೆಯುವಂತೆ ಮಾಡಿದಲ್ಲಿ ಅವರು ತಾವಾಗಿಯೇ ತಮಗೊಂದು ಸನ್ನೆನುಡಿಯನ್ನು ಉಂಟುಮಾಡಿಕೊಳ್ಳಬಲ್ಲರು ಎಂಬುದನ್ನು ನಿಕಾರಗುವಾದ ಕಿವುಡು ಮಕ್ಕಳು ತೋರಿಸಿಕೊಟ್ಟಿದ್ದಾರೆ. ಆ ನಾಡಿನಲ್ಲಿ ಒಂದು ಕಿವುಡು ಮಕ್ಕಳ ಶಾಲೆಯನ್ನು ೧೯೮೧ರಲ್ಲಿ ಹೊಸದಾಗಿ ತೆರೆಯಲಾಗಿತ್ತು; ಅಲ್ಲಿದ್ದ ದೊಡ್ಡ ಮಕ್ಕಳು ತಮ್ಮ ನಡುವೆ ಕೆಲವು ಸನ್ನೆಗಳನ್ನು ಬಳಸುತ್ತಿದ್ದರಾದರೂ ಅವುಗಳ ಹಿಂದೆ ನಿಶ್ಚಿತವಾದ ಕಟ್ಟಲೆಗಳಿರಲಿಲ್ಲ. ಹಾಗಾಗಿ, ಅದನ್ನೊಂದು ಸನ್ನೆನುಡಿ ಎನ್ನಲು ಬರುವಂತಿರಲಿಲ್ಲ.</p>
<p>ಅದರೆ, ಅವರೊಂದಿಗೆ ಬೆಳೆಯುತ್ತಿದ್ದ ಚಿಕ್ಕ ಮಕ್ಕಳು ದೊಡ್ಡವರು ಬಳಸುತ್ತಿದ್ದ ಸನ್ನೆಗಳನ್ನೇ ಬಳಸಿ ಹೊಸದಾದ ಮತ್ತು ಸಂಪೂರ‍್ಣವಾದ ಒಂದು ಸನ್ನೆನುಡಿಯನ್ನೇ ಉಂಟುಮಾಡಿಕೊಂಡಿದ್ದರು. ಈ ಚಿಕ್ಕ ಮಕ್ಕಳ ಸನ್ನೆನುಡಿಯನ್ನು ಪರಿಶೀಲಿಸಿದ ಅರಿವಿಗರು ನಿಜಕ್ಕೂ ದಂಗಾಗಿದ್ದಾರೆ. ದೊಡ್ಡ ಮಕ್ಕಳು ಬಳಸುತ್ತಿದ್ದ ಸನ್ನೆಗಳಲ್ಲಿಲ್ಲದಿದ್ದ ನೂರಾರು ಸಿಕ್ಕಲು ಸಿಕ್ಕಲಾದ ಸೊಲ್ಲರಿಮೆಯ ಕಟ್ಟಲೆಗಳನ್ನು ಈ ಚಿಕ್ಕ ಮಕ್ಕಳು ಎಲ್ಲಿಂದ ಪಡೆದರು? ಹುಟ್ಟಿನಿಂದಲೇ ಮಕ್ಕಳು ಪಡೆದುಕೊಂಡು ಬರುವಂತಹ ‘ಮಾತು ಪಡೆಯುವ ಅಳವೇ’ ಅವರಿಗೆ ಈ ಸನ್ನೆನುಡಿಯನ್ನು ಹುಟ್ಟಿಸುವಲ್ಲಿ ನೆರವಾಗಿರಬೇಕು ಎಂಬ ತೀರ‍್ಮಾನಕ್ಕೆ ಅರಿವಿಗರು ಬರಬೇಕಾಗಿದೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25bf%25e0%25b2%25b5%25e0%25b3%2581%25e0%25b2%25a1%25e0%25b2%25b0-%25e0%25b2%25b8%25e0%25b2%25a8%25e0%25b3%258d%25e0%25b2%25a8%25e0%25b3%2586%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af%25e0%25b3%2582-%25e0%25b2%2592%25e0%25b2%2582%25e0%25b2%25a6%25e0%25b3%2581%2F&#038;t=%E0%B2%95%E0%B2%BF%E0%B2%B5%E0%B3%81%E0%B2%A1%E0%B2%B0%20%E0%B2%B8%E0%B2%A8%E0%B3%8D%E0%B2%A8%E0%B3%86%E0%B2%A8%E0%B3%81%E0%B2%A1%E0%B2%BF%E0%B2%AF%E0%B3%82%20%E0%B2%92%E0%B2%82%E0%B2%A6%E0%B3%81%20%E0%B2%A8%E0%B3%81%E0%B2%A1%E0%B2%BF%E0%B2%AF%E0%B3%87&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25bf%25e0%25b2%25b5%25e0%25b3%2581%25e0%25b2%25a1%25e0%25b2%25b0-%25e0%25b2%25b8%25e0%25b2%25a8%25e0%25b3%258d%25e0%25b2%25a8%25e0%25b3%2586%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af%25e0%25b3%2582-%25e0%25b2%2592%25e0%25b2%2582%25e0%25b2%25a6%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%BF%E0%B2%B5%E0%B3%81%E0%B2%A1%E0%B2%B0%20%E0%B2%B8%E0%B2%A8%E0%B3%8D%E0%B2%A8%E0%B3%86%E0%B2%A8%E0%B3%81%E0%B2%A1%E0%B2%BF%E0%B2%AF%E0%B3%82%20%E0%B2%92%E0%B2%82%E0%B2%A6%E0%B3%81%20%E0%B2%A8%E0%B3%81%E0%B2%A1%E0%B2%BF%E0%B2%AF%E0%B3%87" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25bf%25e0%25b2%25b5%25e0%25b3%2581%25e0%25b2%25a1%25e0%25b2%25b0-%25e0%25b2%25b8%25e0%25b2%25a8%25e0%25b3%258d%25e0%25b2%25a8%25e0%25b3%2586%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af%25e0%25b3%2582-%25e0%25b2%2592%25e0%25b2%2582%25e0%25b2%25a6%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%bf%e0%b2%b5%e0%b3%81%e0%b2%a1%e0%b2%b0-%e0%b2%b8%e0%b2%a8%e0%b3%8d%e0%b2%a8%e0%b3%86%e0%b2%a8%e0%b3%81%e0%b2%a1%e0%b2%bf%e0%b2%af%e0%b3%82-%e0%b2%92%e0%b2%82%e0%b2%a6%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಅರಿಮೆಯ ಬರಹಗಳ ತೊಡಕುಗಳು</title>
		<link>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/?utm_source=rss&#038;utm_medium=rss&#038;utm_campaign=%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581</link>
		<comments>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/#comments</comments>
		<pubDate>Mon, 14 Apr 2014 16:57:31 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[dictionary]]></category>
		<category><![CDATA[Kannada linguistics]]></category>
		<category><![CDATA[Kannada scientific words]]></category>
		<category><![CDATA[Kannada technical dictionary]]></category>
		<category><![CDATA[Kannada technical words]]></category>
		<category><![CDATA[linguistics]]></category>
		<category><![CDATA[science]]></category>
		<category><![CDATA[scientific words]]></category>
		<category><![CDATA[technical dictionary]]></category>
		<category><![CDATA[technical words]]></category>
		<category><![CDATA[ಅರಿಮೆ]]></category>
		<category><![CDATA[ಅರಿಮೆಯ]]></category>
		<category><![CDATA[ಎರವಲು]]></category>
		<category><![CDATA[ಕನ್ನಡ ವಿಜ್ನಾನ ಬರಹಗಳು]]></category>
		<category><![CDATA[ಕಲಿಕೆ]]></category>
		<category><![CDATA[ಪಾರಿಬಾಶಿಕ]]></category>
		<category><![CDATA[ಮಕ್ಕಳು]]></category>
		<category><![CDATA[ವಿಜ್ನಾನ]]></category>
		<category><![CDATA[ಸಂಸ್ಕ್ರುತ]]></category>

		<guid isPermaLink="false">http://dnshankarabhat.net/?p=105</guid>
		<description><![CDATA[ನುಡಿಯರಿಮೆಯ ಇಣುಕುನೋಟ – 22 ಅರಿಮೆಯ (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 22</strong></p>
<p><strong>ಅರಿಮೆಯ</strong> (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು ಬರುತ್ತದೆ, ಮತ್ತು ಇದಕ್ಕಾಗಿ ಮೇಲಿನ ಸೊಲ್ಲನ್ನು ರಾಜುವಿನ ಓಡುವಿಕೆ ಇಲ್ಲವೇ ರಾಜುವಿನ ಓಟ ಎಂಬ ಒಂದು ಹೆಸರುಕಂತೆಯಾಗಿ ಮಾರ‍್ಪಡಿಸಲು ಬರುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ಮಾತಿನಲ್ಲಿ ಇಲ್ಲವೇ ಸಾಮಾನ್ಯ ಬರಹಗಳಲ್ಲಿ ಕಾಣಿಸಿಕೊಳ್ಳುವುದು ತುಂಬಾ ಕಡಿಮೆ; ಆದರೆ, ಅರಿಮೆಯ ಬರಹಗಳಲ್ಲಿ ಅವನ್ನು ತುಂಬಾ ಹೆಚ್ಚು ಬಳಸಲಾಗುತ್ತದೆ. ಇದಕ್ಕೆ ಕಾರಣವೇನೆಂದರೆ, ಅವನ್ನು ಬಳಸುವ ಮೂಲಕ ಹೇಳಬೇಕೆಂದಿರುವ ಸಂಗತಿಯನ್ನು ತುಂಬಾ ಅಡಕವಾಗಿ ಹೇಳಲು ಬರುತ್ತದೆ; ಎತ್ತುಗೆಗಾಗಿ, ಮಕ್ಕಳನ್ನು ತಾಯಂದಿರು ಸಾಕುತ್ತಾರೆ ಎಂಬುದನ್ನು ಒಮ್ಮೆ ಸೂಚಿಸಿದ ಮೇಲೆ, ಅದರ ಕುರಿತಾಗಿ ಬೇರೆ ಸಂಗತಿಗಳನ್ನು ತಿಳಿಸಬೇಕಾದಾಗ ಅದನ್ನು ಅಡಕವಾಗಿ ಮಕ್ಕಳ ಸಾಕುವಿಕೆ ಇಲ್ಲವೇ ಬರೀ ಸಾಕುವಿಕೆ ಎಂಬುದಾಗಿ ಮಾರ‍್ಪಡಿಸಿ ಸೂಚಿಸಲು ಬರುತ್ತದೆ.</p>
<p>ಇದಲ್ಲದೆ, ಅರಿಮೆಯ ಬರಹಗಳ ಇಟ್ಟಳ (ರಚನೆ) ಬೇರೆ ಬರಹಗಳ ಇಟ್ಟಳಕ್ಕಿಂತ ಈ ವಿಶಯದಲ್ಲಿ ಬೇರಾಗಿದೆ; ಸಾಮಾನ್ಯ ಬರಹಗಳಲ್ಲಿ ಉದ್ದಕ್ಕೂ ಒಬ್ಬ ವ್ಯಕ್ತಿ ಇಲ್ಲವೇ ಕೆಲವು ವ್ಯಕ್ತಿಗಳು ಏನು ಮಾಡಿದ್ದಾರೆ ಎಂಬುದಾಗಿ ಹಲವು ಬಗೆಯ ಎಸಕಗಳು ಒಂದರ ಬಳಿಕ ಒಂದರಂತೆ ನಡೆದಿರುವುದನ್ನು ತಿಳಿಸಲಾಗುತ್ತದೆ; ಇದಕ್ಕೆ ಬದಲು, ಅರಿಮೆಯ ಬರಹಗಳಲ್ಲಿ ಒಂದು ಎಸಕವನ್ನು ತಿಳಿಸಿದ ಮೇಲೆ, ಆ ಎಸಕದ ಕುರಿತಾಗಿ ಹಲವಾರು ವಿಶಯಗಳನ್ನು ತಿಳಿಸಬೇಕಾಗುತ್ತದೆ, ಮತ್ತು ಇದಕ್ಕಾಗಿ ಆ ಎಸಕವನ್ನು ಮುಂದಿನ ಸೊಲ್ಲುಗಳ ನೆಲೆಯಾಗಿ ಬಳಸಬೇಕಾಗುತ್ತದೆ; ಆದರೆ, ಹೆಸರುಪದಗಳು ಇಲ್ಲವೇ ಎಸಕಪದಗಳ ಹೆಸರುರೂಪಗಳು ಮಾತ್ರ ಸೊಲ್ಲುಗಳ ನೆಲೆಗಳಾಗಬಲ್ಲುವು; ಹಾಗಾಗಿ, ಆ ಎಸಕವನ್ನು ತಿಳಿಸಲು ಒಂದು ಹೆಸರುಕಂತೆಯನ್ನು ಬಳಸಬೇಕಾಗುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ತೊಡಕಿನವಾಗಿ ಕಾಣಿಸಲು ಮುಕ್ಯ ಕಾರಣವೇನೆಂದರೆ, ಸಾಮಾನ್ಯವಾಗಿ ನಮ್ಮ ಮಾತಿನಲ್ಲಿ ಎಸಕಪದಗಳು ಎಸಕಗಳನ್ನು ಸೂಚಿಸುತ್ತವೆ ಮತ್ತು ಹೆಸರುಪದಗಳು ವ್ಯಕ್ತಿ, ವಸ್ತು ಮೊದಲಾದುವನ್ನು ಸೂಚಿಸುತ್ತವೆ; ಆದರೆ, ಈ ಮಾರ‍್ಪಡಿಸಿದ ಬಳಕೆಗಳಲ್ಲಿ ಹೆಸರುಪದಗಳ ಮೂಲಕ ಎಸಕಗಳನ್ನು ಸೂಚಿಸಲಾಗುತ್ತದೆ. ಎಂದರೆ, ಇವು ನಾವು ಜಗತ್ತನ್ನು ನೋಡುವ ಬಗೆಯನ್ನೇ ಬೇರೆ ಮಾಡುತ್ತವೆ: ಅವು ಎಸಕಗಳನ್ನು ಹೆಸರುಗಳಾಗಿ, ಎಂದರೆ ವಸ್ತು ಇಲ್ಲವೇ ವಿಶಯಗಳಾಗಿ ನೋಡುವಂತೆ ಮಾಡುತ್ತವೆ. ಅರಿಮೆಯ ಬರಹಗಳನ್ನು ಓದುವವರು ಜಗತ್ತನ್ನು ಈ ರೀತಿ ಒಂದು ಹೊಸ ಬಗೆಯಲ್ಲಿ ನೋಡಲು ಕಲಿಯಬೇಕಾಗುತ್ತದೆ. ಇದು ಸುಲಬದ ಕೆಲಸವಲ್ಲ.</p>
<p>ಕನ್ನಡದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಇನ್ನೊಂದು ತೊಡಕೂ ಕಾಣಿಸಿಕೊಳ್ಳುತ್ತದೆ: ಅರಿಮೆಯ ಬರಹಗಳನ್ನು ಬರೆಯುವವರು ಎಸಕಪದಗಳನ್ನು ಹೆಸರುಕಂತೆಗಳಾಗಿ ಮಾರ‍್ಪಡಿಸುವಲ್ಲಿ ಕನ್ನಡದ ಕಸುವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಹಾಗಾಗಿ, ಅವರು ಕನ್ನಡದವೇ ಆದ ಹೆಸರುಪದಗಳನ್ನು ಇಲ್ಲವೇ ಎಸಕಪದಗಳ ಹೆಸರುರೂಪಗಳನ್ನು ಬಳಸುವ ಬದಲು, ಸಂಸ್ಕ್ರುತದ ಪದ ಮತ್ತು ಪದರೂಪಗಳನ್ನು ಅನವಶ್ಯಕವಾಗಿ ಎರವಲು ಪಡೆದು ಬಳಸಹೋಗುತ್ತಾರೆ, ಮತ್ತು ಆ ಮೂಲಕ ತಮ್ಮ ಬರಹಗಳಲ್ಲಿ ಇನ್ನಶ್ಟು ತೊಡಕುಗಳನ್ನು ಸೇರಿಸಿಕೊಳ್ಳುತ್ತಾರೆ.</p>
<p>ಎತ್ತುಗೆಗಾಗಿ, ಈ ಮಣ್ಣಿನಲ್ಲಿ ಕ್ಶಾರ ಇದೆ ಎಂಬ ಸೊಲ್ಲನ್ನು ಕನ್ನಡದಲ್ಲೇನೇ ಕ್ಶಾರವಿರುವ (ಇಲ್ಲವೇ ಕ್ಶಾರವುಳ್ಳ) ಮಣ್ಣು ಎಂಬುದಾಗಿ ಮಾರ‍್ಪಡಿಸಬಹುದು. ಆದರೆ ಇದು ಕನ್ನಡದಲ್ಲಿ ಅರಿಮೆಯ ಬರಹಗಳನ್ನು ಬರೆಯುವವರ ಗಮನಕ್ಕೇ ಬರುವುದಿಲ್ಲ. ಅದಕ್ಕೆ ಬದಲಾಗಿ ಅವರು ಕ್ಶಾರಯುಕ್ತ ಮಣ್ಣು ಎಂಬುದಾಗಿ ಸಂಸ್ಕ್ರುತದಿಂದ ಯುಕ್ತ ಪದರೂಪವನ್ನು ಎರವಲು ಪಡೆದು ಬಳಸುತ್ತಾರೆ. ಜೀವ ಹೇಗೆ ಹುಟ್ಟಿತು? ಎಂಬ ಪ್ರಶ್ನೆಯೊಂದನ್ನು ಕೇಳಿ, ಅದರ ಮುಂದಿನ ಸೊಲ್ಲಿನಲ್ಲಿ ಜೀವದ ಹುಟ್ಟು ಎಂಬುದಾಗಿ ಅದನ್ನು ಮಾರ‍್ಪಡಿಸಿಕೊಳ್ಳುವ ಬದಲು, ಜೀವದ ಉಗಮ ಎಂಬುದಾಗಿ ಬರೆಯುತ್ತಾರೆ; ಎಂದರೆ, ಸಂಸ್ಕ್ರುತದ ಉಗಮ ಪದವನ್ನು ಅನವಶ್ಯಕವಾಗಿ ಎರವಲಾಗಿ ಪಡೆದು ಬಳಸುತ್ತಾರೆ. ಇದರಿಂದಾಗಿ, ಮೊದಲೇ ತೊಡಕಿನದಾಗಿ ಕಾಣಿಸುವ ಅರಿಮೆಯ ಬರಹ ಇನ್ನಶ್ಟು ತೊಡಕಿನದಾಗುತ್ತದೆ.</p>
<p>ಎಸಕಗಳನ್ನು ತಿಳಿಸಲು ಹೆಸರುಕಂತೆಗಳನ್ನು ಬಳಸಿರುವಲ್ಲಿ ಓದುಗರು ಎಸಕದಿಂದ ವಿಶಯಕ್ಕೆ ನೆಗೆಯಬೇಕಾಗುತ್ತದೆ. ಯಾಕೆಂದರೆ, ಮೇಲೆ ಸೂಚಿಸಿದ ಹಾಗೆ, ಎಸಕವನ್ನು ಇಲ್ಲಿ ಎಸಕಪದದ ಮೂಲಕ ಒಂದು ಎಸಕವಾಗಿ ಸೂಚಿಸದೆ, ಹೆಸರುಪದದ ಮೂಲಕ ಒಂದು ವಿಶಯವಾಗಿ ಸೂಚಿಸಲಾಗುತ್ತದೆ. ಇದಲ್ಲದೆ, ಆ ರೀತಿ ಬದಲಾವಣೆಯನ್ನು ಮಾಡಲಾಗಿದೆ ಎಂಬುದನ್ನು ಬರಹಗಳಲ್ಲಿ ಯಾವ ರೀತಿಯಲ್ಲೂ ಸೂಚಿಸಲಾಗುವುದಿಲ್ಲ. ಓದುಗರು ಈ ನೆಗೆತವನ್ನು ತಾವೇ ಮಾಡಿಕೊಳ್ಳಬಲ್ಲರು ಎಂಬುದಾಗಿ ತಿಳಿಯಲಾಗುತ್ತದೆ.</p>
<p>ಆದರೆ, ಅರಿಮೆಯ ಬರಹಗಳನ್ನು ಓದಿ ಪಳಗಿಲ್ಲದ ಓದುಗರಿಗೆ ಈ ನೆಗೆತ ತೊಂದರೆಯನ್ನು ಕೊಡುತ್ತದೆ. ಕನ್ನಡದ ಅರಿಮೆಯ ಬರಹಗಳಲ್ಲಿ ಈ ನೆಗೆತದೊಂದಿಗೆ ಇನ್ನೊಂದು ನೆಗೆತವನ್ನೂ ಓದುಗರ ಮೇಲೆ ಹೊರಿಸಲಾಗುತ್ತದೆ: ಅವರು ಎಸಕದಿಂದ ಹೆಸರಿಗೆ ನೆಗೆಯಬೇಕಾಗುತ್ತದೆ ಮಾತ್ರವಲ್ಲ, ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೂ ನೆಗೆಯಬೇಕಾಗುತ್ತದೆ. ಎತ್ತುಗೆಗಾಗಿ, ಒಂದು ಜೀವಿ ಇನ್ನೊಂದು ಜೀವಿಯನ್ನು ಹುಟ್ಟಿಸುತ್ತದೆ ಎಂಬಲ್ಲಿಂದ ಹುಟ್ಟಿಸುವಿಕೆ ಎಂಬುದಕ್ಕೆ ಹೋಗದೆ ನೇರವಾಗಿ ಪ್ರಜನನ ಕ್ರಿಯೆ ಎಂಬುದಕ್ಕೆ ನೆಗೆಯಬೇಕಾಗುತ್ತದೆ.</p>
<p>ಚಿಕ್ಕ ಮಕ್ಕಳಿಗಾಗಿ ಬರೆದ ಅರಿಮೆಯ ಬರಹಗಳಲ್ಲೂ ಇಂತಹ ಹಲವಾರು ಸಂಸ್ಕ್ರುತದ ಪದರೂಪಗಳನ್ನು ಕಾಣಬಹುದು. ಇವನ್ನು ಮಕ್ಕಳು ಕಣ್ಣು ಮುಚ್ಚಿ ಬಾಯಿಪಾಟ ಮಾಡುತ್ತಾರಲ್ಲದೆ, ಅವು ನಿಜಕ್ಕೂ ಏನು ಹೇಳುತ್ತವೆ ಎಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಿಗೆ ಇವುಗಳಲ್ಲಿ ಬರುವ ಎಸಕದಿಂದ ಹೆಸರಿಗೆ ಹಾರುವ ಮೊದಲ ನೆಗೆತವೇ ತೊಡಕಿನದಾಗಿ ಕಾಣಿಸುತ್ತದೆ; ಇನ್ನು ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೆ ಹಾರುವ ಎರಡನೆಯ ನೆಗೆತ ಅವರ ಅಳವಿಗೆ ಮೀರಿದ್ದು.</p>
<p>ಅರಿಮೆಯ ಬರಹಗಳನ್ನು ಮಂದಿ ಮೆಚ್ಚುವ (ಜನಪ್ರಿಯವಾಗುವ) ಹಾಗೆ ಇಲ್ಲವೇ ಚಿಕ್ಕ ಮಕ್ಕಳಿಗೆ ಗೊತ್ತಾಗುವ ಹಾಗೆ ಬರೆಯಬೇಕಿದ್ದಲ್ಲಿ ಬರಹಗಾರರು ಕೆಳಗೆ ಕೊಟ್ಟಿರುವ ಉಪಾಯಗಳನ್ನು ಬಳಸಿಕೊಳ್ಳಬೇಕಾಗುತ್ತದೆ: (೧) ಆದಶ್ಟು ಮಟ್ಟಿಗೆ ಅವರು ಅರಿಮೆಯ (ಪಾರಿಬಾಶಿಕ) ಪದಗಳ ಬಳಕೆಯನ್ನು ಕಡಿಮೆ ಮಾಡಬೇಕು; (೨) ಎಸಕಗಳನ್ನು ತಿಳಿಸುವ ಹೆಸರುಕಂತೆಗಳನ್ನು ಸೊಲ್ಲುಗಳಾಗಿ ಬದಲಾಯಿಸಿಕೊಳ್ಳಬೇಕು; (೩) ಸಿಕ್ಕಲು ಸೊಲ್ಲುಗಳನ್ನು ಸುಳುಸೊಲ್ಲುಗಳಾಗಿ ಬಿಡಿಸಿ ಬರೆಯಬೇಕು; ಮತ್ತು (೪) ಸಂಸ್ಕ್ರುತ (ತತ್ಸಮ) ಪದಗಳ ಬದಲು ಆದಶ್ಟು ಮಟ್ಟಿಗೆ ಕನ್ನಡದವೇ ಆದ ಪದಗಳನ್ನು ಬಳಸಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;t=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಕಲಿಕೆ ಮತ್ತು ಅರಕೆ</title>
		<link>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586</link>
		<comments>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/#comments</comments>
		<pubDate>Mon, 14 Apr 2014 16:55:06 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Education]]></category>
		<category><![CDATA[guide]]></category>
		<category><![CDATA[guiding]]></category>
		<category><![CDATA[Kannada linguisitics]]></category>
		<category><![CDATA[learning]]></category>
		<category><![CDATA[linguistics]]></category>
		<category><![CDATA[research]]></category>
		<category><![CDATA[teaching]]></category>
		<category><![CDATA[ಅರಿಗ]]></category>
		<category><![CDATA[ಅರಿಮೆ]]></category>
		<category><![CDATA[ಕಲಿಕೆ]]></category>
		<category><![CDATA[ಕಲಿಗ]]></category>
		<category><![CDATA[ಕೇಶಿರಾಜ]]></category>
		<category><![CDATA[ಡಾಕ್ಟರೇಟ್]]></category>
		<category><![CDATA[ತಿಳಿವಿಗ]]></category>
		<category><![CDATA[ದಾರಿತೋರುಗ]]></category>
		<category><![CDATA[ಪೆರ‍್ಬರಹ]]></category>
		<category><![CDATA[ವಯ್ಯಾಕರಣಿ]]></category>
		<category><![CDATA[ವಿಶ್ವವಿದ್ಯಾಲಯ]]></category>
		<category><![CDATA[ವ್ಯಾಕರಣ]]></category>
		<category><![CDATA[ಸಂಶೋದನೆ]]></category>
		<category><![CDATA[ಸೊಲ್ಲರಿಮೆ]]></category>

		<guid isPermaLink="false">http://dnshankarabhat.net/?p=99</guid>
		<description><![CDATA[ನುಡಿಯರಿಮೆಯ ಇಣುಕುನೋಟ – 19 ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು. ಅರಕೆ ಎಂಬುದು ಇದಕ್ಕಿಂತ ತೀರ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 19</strong></p>
<p>ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು.</p>
<p>ಅರಕೆ ಎಂಬುದು ಇದಕ್ಕಿಂತ ತೀರ ಬೇರಾದುದು; ಒಂದು ವಿಶಯದ ಕುರಿತು ತಮ್ಮ ಸಮಾಜದಲ್ಲಿ ಕಲೆತಿರುವ ತಿಳಿವಿನಲ್ಲಿ ತಪ್ಪುಗಳು ಏನಾದರೂ ಇವೆಯೇ, ಮತ್ತು ಆ ವಿಶಯದ ಕುರಿತಾಗಿ ಯಾರಿಗೂ ತಿಳಿಯದಿರುವಂತಹ ಹೊಸ ಸಂಗತಿಗಳೇನಾದರೂ ಇವೆಯೇ ಎಂಬುದನ್ನು ಕಂಡುಹಿಡಿಯುವುದೇ ಅರಕೆ.</p>
<p>ಈ ವ್ಯತ್ಯಾಸದಂತೆ, ಒಂದು ವಿಶಯವನ್ನು ನಮಗೆ ಕಲಿಯಬೇಕೆಂದಿದ್ದಲ್ಲಿ ಅದಕ್ಕೆ ಕಲಿಸುಗರ ನೆರವು ಬೇಕಾಗುತ್ತದೆ; ಆದರೆ, ಒಂದು ವಿಶಯದ ಕುರಿತು ಅರಕೆಯನ್ನು ನಡೆಸಬೇಕೆಂದಿದ್ದಲ್ಲಿ, ಅದಕ್ಕೆ ನಮಗೆ ‘ದಾರಿತೋರುಗರ’ ನೆರವು ಬೇಕಾಗುತ್ತಲ್ಲದೆ ಕಲಿಸುಗರ ನೆರವು ಬೇಕಾಗುವುದಿಲ್ಲ.</p>
<p>ಕಲಿಯುವವರ ಮಟ್ಟಿಗೆ ಕಲಿಸುಗರೆಂದರೆ ಎಲ್ಲವನ್ನೂ ತಿಳಿದವರು; ಕಲಿಯುವವರಲ್ಲಿ ಏಳುವ ಸಂಶಯಗಳನ್ನೆಲ್ಲ ಇಲ್ಲವಾಗಿಸುವ ಅಳವು ಅವರಿಗಿದೆ; ಹಾಗಾಗಿ, ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಕಿವಿಗೊಟ್ಟು ಕೇಳಿ, ಅದನ್ನು ಸರಿಯಾಗಿ ತಿಳಿದುಕೊಳ್ಳುವುದೇ ಕಲಿಗರು ಮಾಡಬೇಕಾಗಿರುವ ಮುಕ್ಯ ಕೆಲಸ.</p>
<p>ಆದರೆ, ಅರಕೆಯನ್ನು ನಡೆಸುವವರ ಮಟ್ಟಿಗೆ ಎಲ್ಲವನ್ನೂ ತಿಳಿದವರು ಯಾರೂ ಇಲ್ಲ; ದಾರಿತೋರುಗರು ಅವರಿಗೆ ಯಾವ ರೀತಿಯಲ್ಲಿ ಅರಕೆಯನ್ನು ನಡೆಸಬಹುದು ಎಂಬುದನ್ನು ತಿಳಿಸಬಲ್ಲರಲ್ಲದೆ, ಅರಕೆಯ ಕೊನೆಯ ತೀರ‍್ಮಾನ ಹೇಗಿರಬಹುದು, ಇಲ್ಲವೇ ಹೇಗಿರಬೇಕು ಎಂಬುದನ್ನು ತಿಳಿಸಲಾರರು. ಅದನ್ನು ತಮ್ಮ ಅರಕೆಗಳ ಮೂಲಕ ಹೊಸದಾಗಿ ಕಂಡುಹಿಡಿಯುವುದೇ ಅರಕೆಯನ್ನು ನಡೆಸುವವರ ಮುಕ್ಯ ಕೆಲಸ. ಈ ರೀತಿ, ಯಾರಿಗೂ ಗೊತ್ತಿಲ್ಲದಿರುವ ಸಂಗತಿಗಳನ್ನು ಕಂಡುಹಿಡಿಯುವ ಮೂಲಕ, ಮತ್ತು ತಪ್ಪು ತಪ್ಪಾಗಿ ತಿಳಿದುಕೊಂಡಿರುವ ಸಂಗತಿಗಳನ್ನು ಸರಿಪಡಿಸುವ ಮೂಲಕ ಸಮಾಜದಲ್ಲಿರುವ ತಿಳಿವಿನ ಬೊಕ್ಕಸವನ್ನು ಹಿರಿದಾಗಿಸುವುದೇ ಅರಕೆ ನಡೆಸುವವರ ಕೆಲಸವಾಗಿದೆ.</p>
<p>ಕಲಿಕೆಗೂ ಅರಕೆಗೂ ನಡುವೆ ವ್ಯತ್ಯಾಸವಿರುವ ಹಾಗೆ, ಕಲಿಕೆಯನ್ನು ಕೊಡಿಸುವ ಕಲಿಸುಗರಿಗೂ ಅರಕೆಯನ್ನು ನಡೆಸಲು ದಾರಿತೋರುಗರಿಗೂ ನಡುವೆ ವ್ಯತ್ಯಾಸವಿರುವುದು ಅವಶ್ಯ. ಕಲಿಸುಗನೊಬ್ಬ ತಾನು ಕಲಿಸುವ ವಿಶಯವನ್ನು ಸರಿಯಾಗಿ ತಿಳಿದಿರಬೇಕು ಮಾತ್ರವಲ್ಲ, ತಾನು ತಿಳಿದಿರುವುದೆಲ್ಲವೂ ಸರಿ ಎಂಬ ಆತ್ಮವಿಶ್ವಾಸವೂ ಆತನಲ್ಲಿರಬೇಕು. ಈ ವಿಶಯದಲ್ಲಿ ಸ್ವಲ್ಪವಾದರೂ ಸಂಶಯವಿದೆಯಾದರೆ, ಆತ ಎದೆಗಾರಿಕೆಯಿಂದ ಕಲಿಗರಿಗೆ ಕಲಿಸಿಕೊಡಲಾರ.</p>
<p>ಆದರೆ, ಅರಕೆಯನ್ನು ನಡೆಸುವವರು, ಮತ್ತು ಅರಕೆಗೆ ದಾರಿ ತೋರಿಸುವವರು ಯಾವ ಹೇಳಿಕೆಯನ್ನೂ ಪೂರ‍್ತಿಯಾಗಿ ಸರಿಯೆಂದು ತಿಳಿದುಕೊಳ್ಳಬಾರದು. ಎಲ್ಲವನ್ನೂ ಸಂಶಯದಿಂದ ನೋಡಿದಾಗ ಮಾತ್ರ ಅವರ ಅರಕೆ ಮುಂದೆ ಹೋಗಬಲ್ಲುದು. ಎಂತಹ ದೊಡ್ಡ ತಿಳಿವಿಗರು ಹೇಳಿದ್ದನ್ನೂ ಹಾಗೆಯೇ ಒಪ್ಪಿಕೊಳ್ಳದೆ ವಿಚಾರಣೆಗೆ ಒಳಪಡಿಸಲು ಅವರು ಅಣಿಯಾಗಿರಬೇಕು.</p>
<p>ಈ ಕಾರಣಕ್ಕಾಗಿ, ಪರೀಕ್ಶೆಗಳಲ್ಲಿ ರ‍್ಯಾಂಕ್ ಗಳಿಸುವ ಕಲಿಗ ಉತ್ತಮ ಅರಕೆಗಾರನಾಗಬೇಕೆಂದೇನಿಲ್ಲ. ಇದೇ ರೀತಿಯಲ್ಲಿ, ಕಲಿಗರ ಅಚ್ಚುಮೆಚ್ಚಿನ ಕಲಿಸುಗ ಅರಕೆಗಳಿಗೆ ಒಳ್ಳೆಯ ದಾರಿತೋರುಗನಾಗಬೇಕೆಂದೂ ಇಲ್ಲ. ಕಲಿಯುವುದಕ್ಕೆ ಮತ್ತು ಕಲಿಸುವುದಕ್ಕೆ ಬೇಕಾಗುವ ಮನೋಬಾವ ಅರಕೆಗೆ ಮತ್ತು ಅದರ ದಾರಿತೋರಿಕೆಗೆ ಬೇಕಾಗುವ ಮನೋಬಾವಕ್ಕಿಂತ ತೀರ ಬೇರಾಗಿರುವುದೇ ಇದಕ್ಕೆ ಕಾರಣ.</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಈ ಎರಡು ಕೆಲಸಗಳನ್ನೂ ಒಬ್ಬರೇ ಮಾಡಬೇಕಾಗುವುದರಿಂದ, ಹೆಚ್ಚಿನೆಡೆಗಳಲ್ಲೂ ಅರಕೆಯ ಹೆಸರಿನಲ್ಲಿ ಕಲಿಕೆ ಮಾತ್ರ ನಡೆಯುವುದು ಕಾಣಿಸುತ್ತದೆ. ಈ ಎರಡು ಬಗೆಯ ಕೆಲಸಗಳನ್ನು ಒಬ್ಬರಿಗೇನೇ ನಡೆಸಿಕೊಂಡು ಹೋಗಲು ಹೆಚ್ಚಿನವರಿಗೂ ಸಾದ್ಯವಾಗದಿರುವುದೇ ಇದಕ್ಕೆ ಕಾರಣ.</p>
<p>ಒಮ್ಮೆ ನನ್ನ ಮಿತ್ರರೊಬ್ಬರು ಡಾಕ್ಟರೇಟ್ ಪದವಿಗಾಗಿ ತಾವು ಬರೆದ ಪೆರ‍್ಬರಹವನ್ನು ನನಗೆ ತೋರಿಸಿದರು. ಅದನ್ನು ಓದಿದಾಗ ನನಗೆ ತುಂಬಾ ಆಶ್ಚರ‍್ಯವಾಯಿತು: ಮೂವತ್ತು ವರ‍್ಶಗಳಶ್ಟು ಹಳೆಯ ಸಿದ್ದಾಂತಗಳನ್ನು ಬಳಸಿ ಅವರು ಅದನ್ನು ಬರೆದಿದ್ದರು. ಆ ಸಿದ್ದಾಂತಗಳಲ್ಲಿ ಹೆಚ್ಚಿನವೂ ಸರಿಯಲ್ಲ ಎಂದು ಅವರಿಗೆ ಸ್ಪಶ್ಟವಾಗಿ ತಿಳಿದಿದ್ದರೂ ಅವರು ಹೀಗೆ ಮಾಡಿದ್ದರು. “ಇದು ಯಾಕೆ ಹೀಗೆ?” ಎಂದು ನಾನು ಕೇಳಿದಾಗ ಅವರು ಹೇಳಿದರು, “ನನ್ನ ದಾರಿತೋರುಗರು ತಮ್ಮ ಡಾಕ್ಟರೇಟ್ ಪೆರ‍್ಬರಹದಲ್ಲಿ ಈ ಸಿದ್ದಾಂತಗಳನ್ನು ಬಳಸಿದ್ದಾರೆ; ಈಗ ನಾನು ಹೊಸ ಸಿದ್ದಾಂತಗಳನ್ನು ಬಳಸಿದಲ್ಲಿ, ಅವರು ಹಿಂದೆ ಬರೆದಿದ್ದ ಪೆರ‍್ಬರಹ ಸರಿಯಲ್ಲ ಎಂಬುದಾಗಿ ನಾನು ಹೇಳಿದ ಹಾಗಾದೀತು. ಹಾಗೆ ಮಾಡಿದಲ್ಲಿ, ನನ್ನ ಪೆರ‍್ಬರಹಕ್ಕೆ ಅವರ ಒಪ್ಪಿಗೆ ಸಿಗಲಾರದು.”</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಜಾಗತಿಕ ಮಟ್ಟದ ಅರಕೆಗಳು ನಡೆಯದಿರುವುದಕ್ಕೆ ಒಂದು ಮುಕ್ಯವಾದ ಕಾರಣವನ್ನು ಇದು ಬಹಳ ಸ್ಪಶ್ಟವಾಗಿ ತಿಳಿಸುತ್ತದೆ. ತಮ್ಮ ದಾರಿತೋರಿಕೆಯಲ್ಲಿ ಪೆರ‍್ಬರಹಗಳನ್ನು ಬರೆಯುತ್ತಿರುವ ಅರಕೆಗಾರರು ತಾವು ಬರೆದಿರುವ ಪೆರ‍್ಬರಹಕ್ಕಿಂತ ಒಂದು ಹೆಜ್ಜೆ ಮುಂದೆ ಹೋದರೂ ಬೇಸರಪಟ್ಟುಕೊಳ್ಳುವ ತಿಳಿವಿಗರಿರುವಶ್ಟು ದಿವಸ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಅರಕೆಗಳನ್ನು ನಡೆಸುವುದು ಅಸಾದ್ಯವೆಂದೇ ಹೇಳಬಹುದು. ತನ್ನ ಕಲಿಗನಿಂದ ಸೋಲನ್ನು ಬಯಸುವ ತಿಳಿವಿಗರು ಮಾತ್ರ ನಿಜಕ್ಕೂ ಅರಕೆಗೆ ದಾರಿತೋರಿಸಬಲ್ಲರು. ಅಂತಹ ತಿಳಿವಿಗರು ನಮ್ಮಲ್ಲಿ ಬೆರಳೆಣಿಕೆಯಶ್ಟೂ ಇಲ್ಲ ಎಂಬುದು ಬೇಸರದ ಸಂಗತಿ.</p>
<p>ಈ ಮಾತು ಎಶ್ಟು ಸರಿ ಎಂಬುದನ್ನು ಕನ್ನಡದ ಸೊಲ್ಲರಿಮೆಯ (ವ್ಯಾಕರಣದ) ಕುರಿತಾಗಿ ನಡೆದಿರುವ ಅರಕೆಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗಬಹುದು. <a href="http://honalu.net/tag/%E0%B2%B6%E0%B2%AC%E0%B3%8D%E0%B2%A6%E0%B2%AE%E0%B2%A3%E0%B2%BF%E0%B2%A6%E0%B2%B0%E2%80%8D%E0%B3%8D%E0%B2%AA%E0%B2%A3/" target="_blank">ಕೇಶಿರಾಜ</a>ನೇ ಮೊದಲಾದ ಕನ್ನಡದ ಸೊಲ್ಲರಿಗರು ಏನು ಹೇಳಿದ್ದಾರೆ ಎಂಬುದನ್ನು ಚರ‍್ಚಿಸುವುದು ಸೊಲ್ಲರಿಮೆಯ ಕಲಿಕೆಯಲ್ಲದೆ ಅರಕೆಯಲ್ಲ. ಅವರು ಬರೆದಿರುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ತಪ್ಪುಗಳೇನಾದರೂ ಇವೆಯೇ? ಇದ್ದರೆ ಅವನ್ನು ಇಲ್ಲವಾಗಿಸುವುದು ಹೇಗೆ? ಅವರು ಹೇಳದೇ ಇರುವಂತಹ ಸೊಲ್ಲರಿಮೆಯ ಕಟ್ಟಲೆಗಳು ಯಾವುವಾದರೂ ಇವೆಯೇ? ಇದ್ದರೆ ಅವು ಎಂತಹವು? ಎಂಬಂತಹ ವಿಶಯಗಳ ಕುರಿತು ಚರ‍್ಚೆ ನಡೆದಲ್ಲಿ ಮಾತ್ರ ಈ ಸೊಲ್ಲರಿಮೆಗಳ ಮೇಲೆ ಅರಕೆ ನಡೆದಿದೆಯೆಂದು ಹೇಳಬಹುದು.</p>
<p>ಹಳೆಗನ್ನಡದಲ್ಲಿ ದ, ದಪ, ಮತ್ತು ವ ಎಂಬ ಮೂರು ಹೊತ್ತಿನ ಒಟ್ಟುಗಳು (ಕಾಲಪ್ರತ್ಯಯಗಳು) ಬಳಕೆಯಾಗುತ್ತವೆ, ಮತ್ತು ಇವು ಹಿಂಬೊತ್ತು (ಬೂತ), ಈಪೊತ್ತು (ವರ‍್ತಮಾನ), ಮತ್ತು ಮುಂಬೊತ್ತು (ಬವಿಶ್ಯತ್) ಎಂಬ ಮೂರು ಹೊತ್ತುಗಳನ್ನು ತಿಳಿಸುತ್ತವೆ ಎಂಬುದಾಗಿ ಕೇಶಿರಾಜನೇ ಮೊದಲಾದ ಎಲ್ಲಾ ಕನ್ನಡದ ಸೊಲ್ಲರಿಗರೂ ಹೇಳುತ್ತಾರೆ. ಆದರೆ, ನಿಜಕ್ಕೂ ಈ ಹೇಳಿಕೆ ಸರಿಯಲ್ಲ; ಎತ್ತುಗೆಗಾಗಿ, ಪಂಪಬಾರತದ “ಸೆರಗಂ ಬಗೆದೊಡೆ ಸಾವಾದಪುದು” ಎಂಬ ಸೊಲ್ಲಿಗೆ ‘ಸಹಾಯವನ್ನು ಬಯಸಿದರೆ ಸಾವಾಗುತ್ತದೆ’ ಎಂಬ ಹುರುಳಿದ್ದು, ಅದರಲ್ಲಿ ಬಂದಿರುವ ದಪ ಒಟ್ಟಿಗೆ ಮುಂದೆ ಏನಾಗಬಲ್ಲುದು ಎಂಬುದನ್ನು ತಿಳಿಸುವ ಮುಂಬೊತ್ತಿನ ಹುರುಳಿದೆಯಲ್ಲದೆ ಈಗ ಏನಾಗುತ್ತಿದೆ ಎಂಬುದನ್ನು ತಿಳಿಸುವ ಈಪೊತ್ತಿನ ಹುರುಳಿಲ್ಲ.</p>
<p>ಆದರೆ, ಹಳೆಗನ್ನಡದ ಸೊಲ್ಲರಿಮೆಯ ಕುರಿತಾಗಿ ಅರಕೆ ನಡೆಸಿದವರು ಯಾರೂ ಇದನ್ನು ಗಮನಿಸಿದ ಹಾಗೆ ಕಾಣಿಸುವುದಿಲ್ಲ. ಇಂತಹ ಇನ್ನೂ ಹಲವಾರು ತಪ್ಪುಗಳು ಕೇಶಿರಾಜನೇ ಮೊದಲಾದ ಕನ್ನಡದ ಸೊಲ್ಲರಿಗರು ತಿಳಿಸುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ಕಾಣಿಸುತ್ತವೆ; ಇದಲ್ಲದೆ, ಅವರು ಹೇಳದಿರುವಂತಹ ಬೇರೆ ಹಲವು ಕಟ್ಟಲೆಗಳೂ ಹಳೆಗನ್ನಡದ ಸೊಲ್ಲರಿಮೆಯನ್ನು ವಿವರಿಸಲು ಬೇಕಾಗುತ್ತವೆ. ಇವುಗಳಲ್ಲಿ ಕೆಲವನ್ನಾದರೂ ಪಟ್ಟಿಮಾಡಬಲ್ಲವರು ಮಾತ್ರ ನಿಜಕ್ಕೂ ಹಳೆಗನ್ನಡದ ಮೇಲೆ ಅರಕೆ ನಡೆಸಿದ್ದಾರೆಂದು ಹೇಳಲು ಬರುತ್ತದೆ.</p>
<p>ಬೇರೆ ಬಗೆಯ ತಿಳಿವುಗಳ ಕುರಿತಾಗಿಯೂ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಮತ್ತು ಬೇರೆ ಬಗೆಯ ಅರಕೆಮನೆಗಳಲ್ಲಿ ಇವತ್ತು “ಅರಕೆ”ಗಳು ನಡೆಯುತ್ತಿವೆ; ಆದರೆ, ಇವುಗಳಲ್ಲಿ ಹೆಚ್ಚಿನವೂ ಮೇಲೆ ವಿವರಿಸಿದ ಹಾಗೆ ದಾರಿತಪ್ಪಿರುವ ಅರಕೆಗಳು; ಹೊಸ ತಿಳಿವನ್ನು ಕಂಡುಹಿಡಿಯುವ ಇಲ್ಲವೇ ಹಳೇ ತಿಳಿವನ್ನು ಸಾಣೆಗೆ ಹಿಡಿಯುವ ಉದ್ದೇಶ ಅವಕ್ಕಿಲ್ಲ. ಹಾಗಾಗಿ, ಅರಕೆಗಾರರಿಗೆ ಒಂದು ಡಿಗ್ರಿಯನ್ನು ಕೊಡಿಸುವ ಕೆಲಸವನ್ನಶ್ಟೇ ಅವು ನಡೆಸಬಲ್ಲುವು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;t=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/feed/</wfw:commentRss>
		<slash:comments>0</slash:comments>
		</item>
		<item>
		<title>ಮಕ್ಕಳಿಗೆ ಓದಲು ಕಲಿಸುವ ಬಗೆ</title>
		<link>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%93%e0%b2%a6%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac%e0%b2%97%e0%b3%86/?utm_source=rss&#038;utm_medium=rss&#038;utm_campaign=%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2593%25e0%25b2%25a6%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%25e0%25b2%2597%25e0%25b3%2586</link>
		<comments>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%93%e0%b2%a6%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac%e0%b2%97%e0%b3%86/#comments</comments>
		<pubDate>Mon, 14 Apr 2014 16:51:50 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[children]]></category>
		<category><![CDATA[Education]]></category>
		<category><![CDATA[grammar]]></category>
		<category><![CDATA[Kannada linguistics]]></category>
		<category><![CDATA[linguistics]]></category>
		<category><![CDATA[Mother Tongue]]></category>
		<category><![CDATA[Mother Tongue Education]]></category>
		<category><![CDATA[primary education]]></category>
		<category><![CDATA[school]]></category>
		<category><![CDATA[teaching]]></category>
		<category><![CDATA[ಓದುವಿಕೆ]]></category>
		<category><![CDATA[ಕಲಿಕೆ]]></category>
		<category><![CDATA[ತಾಯ್ನುಡಿ]]></category>
		<category><![CDATA[ಪದಕಂತೆ]]></category>
		<category><![CDATA[ಪದಕೋಶ]]></category>
		<category><![CDATA[ಪದನೆರಕೆ]]></category>
		<category><![CDATA[ಬರಹ]]></category>
		<category><![CDATA[ಬರಿಗೆ]]></category>
		<category><![CDATA[ಮಕ್ಕಳ ಕಲಿಕೆ]]></category>
		<category><![CDATA[ವ್ಯಾಕರಣ]]></category>
		<category><![CDATA[ಶಾಲೆ]]></category>
		<category><![CDATA[ಸೊಲ್ಲರಿಮೆ]]></category>
		<category><![CDATA[ಸೊಲ್ಲು]]></category>

		<guid isPermaLink="false">http://dnshankarabhat.net/?p=93</guid>
		<description><![CDATA[ನುಡಿಯರಿಮೆಯ ಇಣುಕುನೋಟ – 16 ಎಲ್ಲಾ ಮಕ್ಕಳೂ ತಮ್ಮ ತಾಯ್ನುಡಿಯಲ್ಲಿ ಮಾತನಾಡಲು ತಾವಾಗಿಯೇ ಕಲಿತುಕೊಳ್ಳುತ್ತಾರೆ; ಕೆಲವರು ಈ ಕಲಿಕೆಯನ್ನು ಬೇಗನೆ ನಡೆಸಬಹುದು, ಮತ್ತು ಕೆಲವರು ಅದಕ್ಕಾಗಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆದರೆ ಮಿದುಳಿನ ತೊಂದರೆಯಿಲ್ಲದ ಯಾವ ಮಗುವೂ ತನ್ನ ತಾಯ್ನುಡಿಯಲ್ಲಿ ಮಾತನಾಡಲು ಕಲಿಯದಿರುವುದಿಲ್ಲ. ಹಾಗಾಗಿ, ಮಾತಿನ ಕಲಿಕೆಯನ್ನು ಮಕ್ಕಳು ಹುಟ್ಟಿನಿಂದಲೇ ಪಡೆದುಕೊಂಡು ಬಂದ ಅಳವೆಂದು ಹೇಳಲಾಗುತ್ತದೆ. ಆದರೆ, ಓದಿನ ಕಲಿಕೆ ಆ ರೀತಿಯದಲ್ಲ; ಹೆಚ್ಚಿನ ಮಕ್ಕಳಿಗೂ ಓದುವ ಬಗೆಯನ್ನು ಯಾರಾದರೂ ಕಲಿಸಿಕೊಟ್ಟಲ್ಲಿ ಮಾತ್ರ ಅವರು ಅದನ್ನು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 16</strong></p>
<p>ಎಲ್ಲಾ ಮಕ್ಕಳೂ ತಮ್ಮ ತಾಯ್ನುಡಿಯಲ್ಲಿ ಮಾತನಾಡಲು ತಾವಾಗಿಯೇ ಕಲಿತುಕೊಳ್ಳುತ್ತಾರೆ; ಕೆಲವರು ಈ ಕಲಿಕೆಯನ್ನು ಬೇಗನೆ ನಡೆಸಬಹುದು, ಮತ್ತು ಕೆಲವರು ಅದಕ್ಕಾಗಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಆದರೆ ಮಿದುಳಿನ ತೊಂದರೆಯಿಲ್ಲದ ಯಾವ ಮಗುವೂ ತನ್ನ ತಾಯ್ನುಡಿಯಲ್ಲಿ ಮಾತನಾಡಲು ಕಲಿಯದಿರುವುದಿಲ್ಲ.</p>
<p>ಹಾಗಾಗಿ, ಮಾತಿನ ಕಲಿಕೆಯನ್ನು ಮಕ್ಕಳು ಹುಟ್ಟಿನಿಂದಲೇ ಪಡೆದುಕೊಂಡು ಬಂದ ಅಳವೆಂದು ಹೇಳಲಾಗುತ್ತದೆ. ಆದರೆ, ಓದಿನ ಕಲಿಕೆ ಆ ರೀತಿಯದಲ್ಲ; ಹೆಚ್ಚಿನ ಮಕ್ಕಳಿಗೂ ಓದುವ ಬಗೆಯನ್ನು ಯಾರಾದರೂ ಕಲಿಸಿಕೊಟ್ಟಲ್ಲಿ ಮಾತ್ರ ಅವರು ಅದನ್ನು ಕಲಿಯುತ್ತಾರೆ. ಸಯ್ಕಲ್ ತುಳಿಯುವುದು, ಈಜುವುದು ಮೊದಲಾದವುಗಳ ಹಾಗೆ, ಓದು ಹುಟ್ಟಿನಿಂದ ಬರುವ ಅಳವಲ್ಲ; ಕಲಿತು ಪಡೆಯುವ ಅಳವು.</p>
<p>ಬರಹಗಳನ್ನು ಸಲೀಸಾಗಿ ಓದಲು ಕಲಿಯಬೇಕಾದರೆ, ಮಕ್ಕಳು ಕೆಲವು ಚಳಕ(ಕವ್ಶಲ್ಯ)ಗಳನ್ನು ತಮ್ಮದಾಗಿಸಿಕೊಳ್ಳಬೇಕಾಗುತ್ತದೆ: ಮಾತಿನಲ್ಲಿ ಬರುವ ಪದಗಳನ್ನೆಲ್ಲ ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗಿದೆ ಎಂಬುದನ್ನು ಅವರು ಗಮನಿಸಬೇಕು, ಮತ್ತು ಪುಟಗಳಲ್ಲಿ ಬರುವ ಗುರುತುಗಳಿಗೂ ಈ ಮಾತಿನ ಉಲಿಗಳಿಗೂ ನಡುವೆ ಎಂತಹ ಸಂಬಂದವಿದೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.</p>
<p>ಇದಲ್ಲದೆ, ಪುಟಗಳಲ್ಲಿ ಬರುವ ಈ ಗುರುತುಗಳ ಜೋಡಣೆಗಳಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಕಾಣಲು, ಮತ್ತು ಅವುಗಳಿಂದ ಬರಹಗಾರನು ಏನು ಹೇಳುತ್ತಿದ್ದಾನೆ ಎಂಬುದನ್ನು (ಎಂದರೆ ಬರಹದ ಹುರುಳನ್ನು) ತಿಳಿಯಲು ಅವರು ಕಲಿಯಬೇಕು.</p>
<p>ಮಾತಿನಲ್ಲಿ ಬರುವ ಪದಗಳು ಉಲಿಗಳ ಸೇರಿಕೆಯಿಂದ ಉಂಟಾಗುತ್ತವೆ ಎಂಬುದನ್ನು ಗಮನಿಸುವಂತೆ ಮಾಡಲು ಮಕ್ಕಳಿಗೆ ಕೆಲವು ಆಟಗಳನ್ನು ಕಲಿಸಬಹುದು: ಮನೆ, ಮಾತು, ಮೋಡ, ಮುಗಿಲು ಎಂಬಂತಹ ಪದಗಳಲ್ಲೆಲ್ಲ ಮೊದಲಿಗೆ ಮಕಾರ ಬಂದಿದೆ, ಕೆಲವು ಪದಗಳಿಂದ ಈ ಮಕಾರವನ್ನು ತೆಗೆದು ಹಾಕಿದರೆ ಬೇರೊಂದು ಪದ ಸಿಗುತ್ತದೆ (ಮತ್ತೆ-ಅತ್ತೆ, ಮಾಡು-ಆಡು, ಮಿಡಿ-ಇಡಿ), ಕೆಲವು ಪದಗಳಲ್ಲಿ ಮಕಾರದ ಬದಲು ಕಕಾರವನ್ನು ಬಳಸಿದರೆ ಬೇರೆ ಪದ ಸಿಗುತ್ತದೆ (ಮತ್ತೆ-ಕತ್ತೆ, ಮಾಡು-ಕಾಡು, ಮಿಡಿ-ಕಿಡಿ) ಎಂಬಂತಹ ವಿಶಯಗಳನ್ನು ಅವರು ಗಮನಿಸುವ ಹಾಗೆ ಮಾಡಬಹುದು, ಮತ್ತು ಪದಗಳನ್ನು ಉಲಿಗಳಾಗಿ ಒಡೆಯುವ ಬಗೆಯನ್ನು ಕಲಿಸಬಹುದು. ಇದರಿಂದ, ಪದಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಅವರು ತಿಳಿಯುವ ಹಾಗೆ ಮಾಡಬಹುದು.</p>
<p>ಕನ್ನಡ ಬರಹದ ಪುಟಗಳಲ್ಲಿ ಕಾಣಿಸುವ ಗುರುತು(ಬರಿಗೆ)ಗಳಿಗೂ ಅವನ್ನು ಓದುವಲ್ಲಿ ಬಳಕೆಯಾಗುವ ಉಲಿಗಳಿಗೂ ನಡುವೆ ನೇರವಾದ ಸಂಬಂದವಿದೆ; ಇಂಗ್ಲಿಶ್ ಬರಹದಲ್ಲಿರುವ ಹಾಗೆ ಅದು ತೊಡಕು ತೊಡಕಾಗಿಲ್ಲ. ಹಾಗಾಗಿ, ಕನ್ನಡ ಬರಹಗಳನ್ನು ಓದಲು ಕಲಿಯುವ ಮಕ್ಕಳು ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಂತೆ ಮಾಡುವುದು ಹೆಚ್ಚು ತೊಡಕಿನ ಕೆಲಸವಲ್ಲ. ಆದರೆ, ಸಂಸ್ಕ್ರುತದ ಎರವಲು ಪದಗಳಲ್ಲಿ ಬಳಕೆಯಾಗುತ್ತಿರುವ ಅಲ್ಪಪ್ರಾಣ-ಮಹಾಪ್ರಾಣ, ರು-ಋ, ಶ-ಷ ಮೊದಲಾದ ಹಲವು ವ್ಯತ್ಯಾಸಗಳು ಓದಿನಲ್ಲಿ ಕಾಣಿಸುವುದಿಲ್ಲ, ಮತ್ತು ಇವುಗಳಿಂದಾಗಿ ಉಲಿಗಳಿಗೂ ಬರಿಗೆಗಳಿಗೂ ನಡುವಿರುವ ಸಂಬಂದವನ್ನು ಗಮನಿಸುವಲ್ಲಿ ಹೆಚ್ಚಿನ ಮಕ್ಕಳೂ ಗೊಂದಲದಲ್ಲಿ ಬೀಳುತ್ತಾರೆ. ಹಾಗಾಗಿ, ಕನ್ನಡದ ಮಟ್ಟಿಗೆ ಅನವಶ್ಯಕವಾಗಿರುವ ಈ ವ್ಯತ್ಯಾಸಗಳನ್ನು ಮಕ್ಕಳ ಓದಿನಿಂದ ದೂರ ಇರಿಸುವುದು ಒಳ್ಳೆಯದು.</p>
<p>ಬರಿಗೆಗಳಿಗೂ ಉಲಿಗಳಿಗೂ ನಡುವಿರುವ ಸಂಬಂದವನ್ನು ತಿಳಿಯುವುದು ಬರಹವನ್ನು ಓದಲು ಕಲಿಯುವಲ್ಲಿ ತುಂಬಾ ಮುಕ್ಯವಾದ ಕೆಲಸ. ಈ ನಂಟನ್ನು ತಿಳಿದುಕೊಂಡವರಿಗೆ ತಮಗೆ ಗೊತ್ತಿರುವ ಪದಗಳನ್ನು ಮಾತ್ರವಲ್ಲದೆ ಗೊತ್ತಿಲ್ಲದ ಪದಗಳನ್ನೂ ಓದಲು ಬರುತ್ತದೆ. ಈ ನಂಟನ್ನು ತಿಳಿಯದ ಮಕ್ಕಳು ಪದಗಳನ್ನು ಚಿತ್ರಗಳ ಹಾಗೆ ಇಡಿ ಇಡಿಯಾಗಿ ಓದಲು ಹೋಗುತ್ತಾರೆ, ಮತ್ತು ಇದರಿಂದಾಗಿ ಬರಹದಲ್ಲಿ ಹೊಸ ಪದಗಳು ಕಾಣಿಸಿಕೊಂಡಾಗ ಅವರ ಓದು ಮುಂದೆ ಸಾಗುವುದಿಲ್ಲ.</p>
<p>ಇತ್ತೀಚೆಗೆ ನಡೆಸಿದ ಹಲವು ಮಿದುಳಿನ ಅರಕೆಗಳು ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳಿಗೂ ಹಿಂದೆ ಬೀಳುವ ಮಕ್ಕಳಿಗೂ ನಡುವೆ ಅವರು ಪದಗಳನ್ನು ಓದುವ ಬಗೆಯಲ್ಲೇ ಇಂತಹ ವ್ಯತ್ಯಾಸವಿದೆಯೆಂಬುದನ್ನು ಸ್ಪಶ್ಟವಾಗಿ ತೋರಿಸಿಕೊಟ್ಟಿವೆ. ಓದಿನಲ್ಲಿ ಬೇಗನೆ ಮುಂದೆ ಹೋಗುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಮೂರು ಜಾಗಗಳು ಮಿಂಚುತ್ತಿರುತ್ತವೆ: ಬರಿಗೆಗಳನ್ನು ಗುರುತಿಸುವ ಕಣ್ಣಿಗೆ ಸಂಬಂದಿಸಿದ ಜಾಗ, ಅವನ್ನು ಉಲಿಗಳೊಂದಿಗೆ ಜೋಡಿಸುವ ಕಿವಿಗೆ ಸಂಬಂದಿಸಿದ ಜಾಗ, ಮತ್ತು ಅವನ್ನು ಹುರುಳಿನೊಂದಿಗೆ ಸಂಬಂದಿಸುವ ಮಿದುಳಿನ ಹಿಂಬಾಗದಲ್ಲಿರುವ ಜಾಗ. ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಓದುತ್ತಿರುವಾಗ, ಅವರ ಮಿದುಳಿನಲ್ಲಿ ಕಣ್ಣಿಗೆ ಮತ್ತು ಹುರುಳಿಗೆ ಸಂಬಂದಿಸಿದ ಜಾಗಗಳು ಮಾತ್ರ ಮಿಂಚುತ್ತಿರುತ್ತವಲ್ಲದೆ, ಕಿವಿಗೆ ಸಂಬಂದಿಸಿದ ಜಾಗ ಮಿಂಚುತ್ತಿರುವುದಿಲ್ಲ. ಎಂದರೆ, ಪದಗಳನ್ನು ಬರಿಗೆಗಳಾಗಿ ಒಡೆದು, ಅವನ್ನು ಉಲಿಗಳೊಂದಿಗೆ ಸಂಬಂದಿಸಿ ಓದುವುದು ಹೇಗೆ ಎಂಬುದನ್ನು ಅವರು ಕಲಿತಿಲ್ಲ.</p>
<p>ಒಮ್ಮೆ ಪದಗಳನ್ನು ಬರಿಗೆಗಳಾಗಿ ಬಿಡಿಸಿ, ಅವನ್ನು ಉಲಿಗಳೊಂದಿಗೆ ಸಂಬಂದಿಸಲು ಕಲಿತಮೇಲೆ, ಆಗಾಗ ಬರುವ ಪದಗಳನ್ನು ಇಡಿ ಇಡಿಯಾಗಿ ಗುರುತಿಸಿ ಓದುವ ಬಗೆಯನ್ನೂ ಮಕ್ಕಳು ಕಲಿತುಕೊಳ್ಳಬೇಕಾಗುತ್ತದೆ; ಯಾಕೆಂದರೆ, ಬರಹಗಳನ್ನು ಬೇಗನೆ ಮತ್ತು ಸಲೀಸಾಗಿ ಓದಲು ಇಂತಹ ಕಲಿಕೆಯೂ ಬೇಕಾಗುತ್ತದೆ. ಆದರೆ, ಆಮೇಲೆಯೂ, ಅಪರೂಪಕ್ಕೆ ಬರುವ ಪದಗಳನ್ನು ಮತ್ತು ಹೊಸ ಪದಗಳನ್ನು ಓದಲು ಅವನ್ನು ಬರಿಗೆಗಳಾಗಿ ಒಡೆದು ಉಲಿಗಳೊಂದಿಗೆ ಸಂಬಂದಿಸುವ ಬಗೆ ಅವರಿಗೆ ಬೇಕಾಗುತ್ತದೆ.</p>
<p>ಬರಹಗಳಲ್ಲಿ ಬರುವ ಪದಗಳನ್ನು ಓದುವ ಬಗೆ ಹೇಗೆ ಎಂಬುದನ್ನು ಕಲಿತರೆ ಸಾಲದು, ಅವನ್ನು ಪದಕಂತೆಗಳಾಗಿ ಮತ್ತು ಸೊಲ್ಲುಗಳಾಗಿ ಜೋಡಿಸಿ, ಅವುಗಳಿಂದ ಹುರುಳನ್ನು ಪಡೆಯುವುದು ಹೇಗೆ ಎಂಬುದನ್ನೂ ಮಕ್ಕಳು ಕಲಿಯಬೇಕಾಗುತ್ತದೆ. ಅವರ ಓದು ಬೇಗನೆ ಮತ್ತು ಸಲೀಸಾಗಿ ನಡೆಯುತ್ತಿದೆಯಾದರೆ ಮಾತ್ರ ಅವರಿಗೆ ಈ ರೀತಿ ತಮ್ಮ ಓದಿನಿಂದ ಹುರುಳನ್ನು ಪಡೆಯಲು ಬರುತ್ತದೆ. ತುಂಬಾ ಮೆಲ್ಲಗೆ ಓದುವ ಮಕ್ಕಳಿಗೆ ಪದಗಳು ಮಾತ್ರ ಕಾಣಿಸುತ್ತವಲ್ಲದೆ ಪದಕಂತೆಗಳು ಇಲ್ಲವೇ ಸೊಲ್ಲುಗಳು ಕಾಣಿಸುವುದಿಲ್ಲ.</p>
<p>ಓದಲು ಕಲಿಯುತ್ತಿರುವ ಮಕ್ಕಳ ಮಿದುಳಿನಲ್ಲಿ ಮಾತಿನ ಪದನೆರಕೆ (ಪದಕೋಶ) ಮತ್ತು ಓದಿನ ಪದನೆರಕೆ ಎಂಬುದಾಗಿ ಎರಡು ಬಗೆಯ ಪದನೆರಕೆಗಳು ನೆಲೆಗೊಳ್ಳುತ್ತವೆ; ಇವುಗಳಲ್ಲಿ ಓದಿನ ಪದನೆರಕೆಯನ್ನು ಹಿಗ್ಗಿಸುವ ಮೂಲಕ ಮಕ್ಕಳು ಓದಿನಲ್ಲಿ ಮುಂದೆ ಬರುವಂತೆ ಮಾಡಬಹುದು. ಬಗೆ ಬಗೆಯ ಬರಹಗಳನ್ನು, ಮತ್ತು ಹೆಚ್ಚು ಹೆಚ್ಚು ಬರಹಗಳನ್ನು ಅವರು ಓದುವ ಹಾಗೆ ಮಾಡುವ ಮೂಲಕ ಅವರ ಈ ಓದಿನ ಪದನೆರಕೆಯನ್ನು ಹಿಗ್ಗಿಸಲು ಬರುತ್ತದೆ.</p>
<p>ಕೆಲವು ಮಂದಿ ತಾಯ್ತಂದೆಯರು ಪಟ್ಯಪುಸ್ತಕಗಳನ್ನು ಹೊರತುಪಡಿಸಿ ಬೇರೆ ಯಾವುದನ್ನೂ ಮಕ್ಕಳು ಓದಬಾರದೆಂದು ಕಟ್ಟಲೆ ಮಾಡುತ್ತಾರೆ; ಕತೆ ಕಾದಂಬರಿಗಳನ್ನು ಓದಿ ಸಮಯ ಹಾಳುಮಾಡಬಾರದೆಂದು ಆಗಾಗ ಮಕ್ಕಳಿಗೆ ಹೇಳುತ್ತಿರುತ್ತಾರೆ. ಆದರೆ, ಬರೇ ಪಟ್ಯಪುಸ್ತಕಗಳನ್ನು ಮಾತ್ರವೇ ಓದುತ್ತಿದ್ದರೆ ಮಕ್ಕಳ ಓದಿನ ಪದನೆರಕೆ ತುಂಬಾ ಚಿಕ್ಕದಾಗಿಯೇ ಉಳಿಯುತ್ತದೆ. ಅದನ್ನು ಹಿಗ್ಗಿಸಬೇಕಿದ್ದಲ್ಲಿ ಅವರು ಎಲ್ಲಾ ಬಗೆಯ ಬರಹಗಳನ್ನೂ ಓದುತ್ತಿರಬೇಕು. ಹಾಗಾಗಿ, ಹೆಚ್ಚು ಹೆಚ್ಚು ಪುಸ್ತಕಗಳನ್ನು ಮತ್ತು ಬೇರೆ ಬಗೆಯ ಬರಹಗಳನ್ನು ಅವರು ಓದುವಂತೆ ಮಾಡಬೇಕು.</p>
<p>ಓದಿನಲ್ಲಿ ತಮಗೆ ತಿಳಿಯದ ಪದ ಬಂದಾಗ, ಅದರ ಹುರುಳನ್ನು ಪದನೆರಕೆಯ ನೆರವಿನಿಂದ ಕಂಡುಹಿಡಿಯುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಪದನೆರಕೆಗಳಲ್ಲಿ ಪದಗಳಿಗೆ ಹಲವು ಹುರುಳುಗಳನ್ನು ಕೊಟ್ಟಿರುತ್ತಾರೆ. ಇವುಗಳಲ್ಲಿ ತಮ್ಮ ಓದಿಗೆ ಹೊಂದಿಕೆಯಾಗುವಂತಹದನ್ನು ಆರಿಸಿಕೊಳ್ಳುವುದು ಹೇಗೆ ಎಂಬುದನ್ನೂ ಅವರಿಗೆ ತೋರಿಸಿಕೊಡಬೇಕು. ಈ ರೀತಿ ತಮ್ಮ ಓದಿಗೆ ಪದನೆರಕೆಯ ನೆರವನ್ನು ಪಡೆಯಲು ಕಲಿತ ಮಕ್ಕಳ ಓದಿನ ಪದನೆರಕೆಯೂ ಬೇಗನೆ ಹಿಗ್ಗುತ್ತದೆ.</p>
<p>ಓದಿನಲ್ಲಿ ಹಿಂದೆ ಬೀಳುವ ಮಕ್ಕಳು ಬೇರೆ ವಿಶಯಗಳಲ್ಲೂ ಹಿಂದೆ ಬೀಳುತ್ತಾರೆ; ಯಾಕೆಂದರೆ, ಈ ಎಲ್ಲಾ ವಿಶಯಗಳ ಕಲಿಕೆಯನ್ನೂ ಅವರು ಓದಿನ ಮೂಲಕವೇ ನಡೆಸಬೇಕಾಗುತ್ತದೆ. ಹಾಗಾಗಿ, ಮಕ್ಕಳು ಬೇಗನೆ ಮತ್ತು ಸಲೀಸಾಗಿ ಓದಲು ಕಲಿಯುವಂತೆ ಮಾಡುವುದು, ಮತ್ತು ಇದಕ್ಕಾಗಿ ಅವರ ಓದು ಸರಿಯಾದ ಕ್ರಮದಲ್ಲಿ ಮುಂದುವರಿಯುವಂತೆ ಮಾಡುವುದು ತುಂಬಾ ಮುಕ್ಯವಾದ ಕೆಲಸವಾಗಿದೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2593%25e0%25b2%25a6%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%25e0%25b2%2597%25e0%25b3%2586%2F&#038;t=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%93%E0%B2%A6%E0%B2%B2%E0%B3%81%20%E0%B2%95%E0%B2%B2%E0%B2%BF%E0%B2%B8%E0%B3%81%E0%B2%B5%20%E0%B2%AC%E0%B2%97%E0%B3%86&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2593%25e0%25b2%25a6%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%25e0%25b2%2597%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%93%E0%B2%A6%E0%B2%B2%E0%B3%81%20%E0%B2%95%E0%B2%B2%E0%B2%BF%E0%B2%B8%E0%B3%81%E0%B2%B5%20%E0%B2%AC%E0%B2%97%E0%B3%86" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2593%25e0%25b2%25a6%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%25e0%25b2%2597%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%93%e0%b2%a6%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac%e0%b2%97%e0%b3%86/feed/</wfw:commentRss>
		<slash:comments>0</slash:comments>
		</item>
		<item>
		<title>ಬರಹಕ್ಕೆ ಮೇಲ್ಮೆ ಬಂದುದು ಹೇಗೆ?</title>
		<link>http://dnshankarabhat.net/%e0%b2%ac%e0%b2%b0%e0%b2%b9%e0%b2%95%e0%b3%8d%e0%b2%95%e0%b3%86-%e0%b2%ae%e0%b3%87%e0%b2%b2%e0%b3%8d%e0%b2%ae%e0%b3%86-%e0%b2%ac%e0%b2%82%e0%b2%a6%e0%b3%81%e0%b2%a6%e0%b3%81-%e0%b2%b9%e0%b3%87/?utm_source=rss&#038;utm_medium=rss&#038;utm_campaign=%25e0%25b2%25ac%25e0%25b2%25b0%25e0%25b2%25b9%25e0%25b2%2595%25e0%25b3%258d%25e0%25b2%2595%25e0%25b3%2586-%25e0%25b2%25ae%25e0%25b3%2587%25e0%25b2%25b2%25e0%25b3%258d%25e0%25b2%25ae%25e0%25b3%2586-%25e0%25b2%25ac%25e0%25b2%2582%25e0%25b2%25a6%25e0%25b3%2581%25e0%25b2%25a6%25e0%25b3%2581-%25e0%25b2%25b9%25e0%25b3%2587</link>
		<comments>http://dnshankarabhat.net/%e0%b2%ac%e0%b2%b0%e0%b2%b9%e0%b2%95%e0%b3%8d%e0%b2%95%e0%b3%86-%e0%b2%ae%e0%b3%87%e0%b2%b2%e0%b3%8d%e0%b2%ae%e0%b3%86-%e0%b2%ac%e0%b2%82%e0%b2%a6%e0%b3%81%e0%b2%a6%e0%b3%81-%e0%b2%b9%e0%b3%87/#comments</comments>
		<pubDate>Mon, 14 Apr 2014 16:49:47 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[democracy]]></category>
		<category><![CDATA[Kannada writing]]></category>
		<category><![CDATA[linguistics]]></category>
		<category><![CDATA[written Kannada]]></category>
		<category><![CDATA[ಅಕ್ಶರ]]></category>
		<category><![CDATA[ಓದು ಬರಹ]]></category>
		<category><![CDATA[ಕಲಿಕೆ]]></category>
		<category><![CDATA[ಕೂಡಣ]]></category>
		<category><![CDATA[ಕೂಡಣದರಿಮೆ]]></category>
		<category><![CDATA[ಪ್ರಜಾಪ್ರಬುತ್ವ]]></category>
		<category><![CDATA[ಬರಹ]]></category>
		<category><![CDATA[ಬರಹ ಕನ್ನಡ]]></category>
		<category><![CDATA[ಬರಹಗನ್ನಡ]]></category>
		<category><![CDATA[ಬರಹದರಿಮೆ]]></category>
		<category><![CDATA[ಬರಿಗೆ]]></category>
		<category><![CDATA[ಮಂದಿಯಾಳ್ವಿಕೆ]]></category>
		<category><![CDATA[ಮೇಲ್ಮೆ]]></category>

		<guid isPermaLink="false">http://dnshankarabhat.net/?p=88</guid>
		<description><![CDATA[ನುಡಿಯರಿಮೆಯ ಇಣುಕುನೋಟ – 14 ಮೊನ್ನೆ ಮೊನ್ನೆಯ ವರೆಗೂ ಸಮಾಜದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಕಲಿತರೆ ಸಾಕಿತ್ತು; ಉಳಿದವರೆಲ್ಲ ಅದರಿಂದ ದೂರವೇ ಉಳಿಯಬಹುದಿತ್ತು, ಮತ್ತು ಹೀಗೆ ಬರಹದಿಂದ ದೂರ ಉಳಿದುದರಿಂದಾಗಿ ಅವರಿಗೆ ಜೀವನದಲ್ಲಿ ಯಾವ ತೊಂದರೆಯೂ ಉಂಟಾಗುತ್ತಿರಲಿಲ್ಲ. ಆದರೆ, ಇವತ್ತು ಎಲ್ಲಾ ಜನರೂ ಬರಹವನ್ನು ಕಲಿಯಬೇಕಾಗಿದೆ, ಮತ್ತು ಕಲಿತು ಬಳಸುತ್ತಿರಬೇಕಾಗಿದೆ. ಯಾಕೆಂದರೆ, ಹಾಗೆ ಮಾಡದವರಲ್ಲಿ ಹೆಚ್ಚಿನವರೂ ಇವತ್ತು ತಮ್ಮ ಜೀವನದಲ್ಲಿ ಸೋತುಹೋಗುತ್ತಿದ್ದಾರೆ. ಒಂದು ಸಮಾಜದ ಏಳಿಗೆಯಾಗಬೇಕಿದ್ದರೂ ಅದಕ್ಕೆ ಸೇರಿದ ಜನರೆಲ್ಲ ಬರಹವನ್ನು ಕಲಿಯುವುದು ಮತ್ತು ಬಳಸುವುದು ಇವತ್ತಿನ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 14</strong></p>
<p>ಮೊನ್ನೆ ಮೊನ್ನೆಯ ವರೆಗೂ ಸಮಾಜದಲ್ಲಿ ಕೆಲವೇ ಕೆಲವು ಮಂದಿ ಮಾತ್ರ <strong>ಬರಹವನ್ನು</strong> ಕಲಿತರೆ ಸಾಕಿತ್ತು; ಉಳಿದವರೆಲ್ಲ ಅದರಿಂದ ದೂರವೇ ಉಳಿಯಬಹುದಿತ್ತು, ಮತ್ತು ಹೀಗೆ ಬರಹದಿಂದ ದೂರ ಉಳಿದುದರಿಂದಾಗಿ ಅವರಿಗೆ ಜೀವನದಲ್ಲಿ ಯಾವ ತೊಂದರೆಯೂ ಉಂಟಾಗುತ್ತಿರಲಿಲ್ಲ.</p>
<p>ಆದರೆ, ಇವತ್ತು ಎಲ್ಲಾ ಜನರೂ ಬರಹವನ್ನು ಕಲಿಯಬೇಕಾಗಿದೆ, ಮತ್ತು ಕಲಿತು ಬಳಸುತ್ತಿರಬೇಕಾಗಿದೆ. ಯಾಕೆಂದರೆ, ಹಾಗೆ ಮಾಡದವರಲ್ಲಿ ಹೆಚ್ಚಿನವರೂ ಇವತ್ತು ತಮ್ಮ ಜೀವನದಲ್ಲಿ ಸೋತುಹೋಗುತ್ತಿದ್ದಾರೆ. ಒಂದು ಸಮಾಜದ ಏಳಿಗೆಯಾಗಬೇಕಿದ್ದರೂ ಅದಕ್ಕೆ ಸೇರಿದ ಜನರೆಲ್ಲ ಬರಹವನ್ನು ಕಲಿಯುವುದು ಮತ್ತು ಬಳಸುವುದು ಇವತ್ತಿನ ಮಟ್ಟಿಗೆ ಅತ್ಯವಶ್ಯವಾಗಿದೆ.</p>
<p>ಇದುವರೆಗೂ ಇಲ್ಲದಿದ್ದ ಈ ಮೇಲ್ಮೆ ಬರಹಕ್ಕೆ ಬಂದುದು ಹೇಗೆ? ಮಿಲಿಯಗಟ್ಟಲೆ ವರ‍್ಶಗಳಿಂದಲೂ ಜನರ ನಡುವಿನ ಸಂಪರ‍್ಕಕ್ಕೆ ಕೊಂಡಿಯಾಗಿ, ಮತ್ತು ಮನಸ್ಸಿನಲ್ಲಿರುವ ಅನಿಸಿಕೆಗಳನ್ನು ಬೇರೆಯವರಿಗೆ ತಿಳಿಸಲು ಬೇಕಾಗುವ ಒಯ್ಯುಗೆಯಾಗಿ ಮಾತನ್ನೇ ಬಳಸಲಾಗುತ್ತಿತ್ತು. ಆದರೆ, ಸುಮಾರು ನಾಲ್ಕಯ್ದು ಸಾವಿರ ವರ‍್ಶಗಳಶ್ಟು ಹಿಂದೆ, ಮಾತನ್ನು ಬರಹಕ್ಕಿಳಿಸುವ ಬಗೆಯನ್ನು ಕಂಡುಹಿಡಿಯಲಾಯಿತು. ಮೊದಲಿಗೆ ಇದನ್ನು ನೆನಪಿಗೆ ನೆರವಾಗುವಂತಹ ಕೆಲಸಗಳಲ್ಲಿ ತೊಡಗಿಸಲಾಯಿತು; ಆದರೆ ಆಮೇಲೆ, ದೂರ ಇರುವವರನ್ನು ಸಂಪರ‍್ಕಿಸುವುದಕ್ಕಾಗಿಯೂ ಇದನ್ನು ಬಳಸಲು ತೊಡಗಲಾಯಿತು.</p>
<p>ಹೀಗಿದ್ದರೂ, ಬರಹವೆಂಬುದು ಮೊನ್ನೆ ಮೊನ್ನೆಯ ವರೆಗೂ ಕೆಲವೇ ಕೆಲವು ಜನರ ಸೊತ್ತಾಗಿ ಮಾತ್ರ ಉಳಿದಿತ್ತು, ಮತ್ತು ಕೆಲವೇ ಕೆಲವು ನುಡಿಗಳನ್ನು ಆಡುವವರಲ್ಲಿ ಮಾತ್ರ ಅದು ಬಳಕೆಯಲ್ಲಿತ್ತು. ಸುಮಾರು ಮುನ್ನೂರು-ನಾನ್ನೂರು ವರ‍್ಶಗಳಶ್ಟು ಹಿಂದೆ ಬರಹಗಳನ್ನು ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ವಿಶಯದಲ್ಲಿ ಒಂದು ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿತು; ಅದರಲ್ಲೂ ಬರಹದಲ್ಲಿ ಬರುವ ಒಂದೊಂದು ಬರಿಗೆಗೂ ಒಂದೊಂದು ಮೊಳೆಯನ್ನು ಬಳಸಿ ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ಕ್ರಾಂತಿ ಇನ್ನಶ್ಟು ವೇಗವಾಗಿ ಹಲವಾರು ನುಡಿಗಳನ್ನು ಆವರಿಸುವ ಹಾಗೆ ಮಾಡಿತು.</p>
<p>ಈ ಕ್ರಾಂತಿ ನಡೆಯುವ ಮೊದಲು, ಬರಹಗಳನ್ನು ಕಯ್ಯಲ್ಲಿ ನಕಲುಮಾಡಬೇಕಾಗಿತ್ತು; ಇದು ತುಂಬಾ ತೊಡಕಿನ ಮತ್ತು ತುಂಬಾ ಸಮಯ ತಗಲುವ ಕೆಲಸವಾಗಿತ್ತು; ಕೆಲವು ಮಂದಿ ಮಾತ್ರ ಈ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದರು, ಮತ್ತು ಇದರಿಂದಾಗಿ, ಬರಹವನ್ನು ಬಳಸುವವರ ಎಣಿಕೆ ತುಂಬಾ ಕಡಿಮೆಯಾಗಿಯೇ ಉಳಿದಿತ್ತು.</p>
<p>ಆದರೆ, ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಮತ್ತು ಅದಕ್ಕಾಗಿ ತೊಗಲು, ತೊಗಟೆ ಮೊದಲಾದವುಗಳನ್ನು ಬಳಸುವ ಬದಲು ಕಾಗದವನ್ನು ಬಳಸಲು ತೊಡಗಿದುದರಿಂದಾಗಿ, ಅವನ್ನು ತುಂಬಾ ಕಡಿಮೆ ಬೆಲೆಗೆ ಉಂಟುಮಾಡಲು, ಮತ್ತು ತುಂಬಾ ಸುಲಬವಾಗಿ ಉಂಟುಮಾಡಲು ಸಾದ್ಯವಾಯಿತು. ಇದರಿಂದಾಗಿ, ಅವುಗಳ ಪ್ರತಿಗಳನ್ನು ಒಮ್ಮೆಗೇನೇ ಸಾವಿರಾರು ಜನರಿಗೆ ತಲುಪಿಸಲು ಸಾದ್ಯವಾಯಿತು. ಇದಲ್ಲದೆ, ಅವನ್ನು ಬಳಸುವ ಕೆಲಸವೂ ತುಂಬಾ ಸುಲಬವಾಯಿತು.</p>
<p>ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಬರಹಗಳಲ್ಲಿ ಬಳಕೆಯಾಗುವ ಬರಿಗೆ(ಅಕ್ಶರ)ಗಳು, ಪದಗಳು, ಸೊಲ್ಲುಗಳು ಮೊದಲಾದುವೆಲ್ಲ ಎಲ್ಲಾ ಕಡೆಗಳಲ್ಲೂ ಹೆಚ್ಚುಕಡಿಮೆ ಒಂದೇ ರೂಪದಲ್ಲಿ ಉಳಿಯುವಂತಾಯಿತು, ಮತ್ತು ಇದರಿಂದಾಗಿ, ನಾಡಿನ ಒಂದು ಮೂಲೆಯಲ್ಲಿ ಉಂಟುಮಾಡಿದ ಬರಹವನ್ನು ಎಲ್ಲಾ ಕಡೆಗಳಲ್ಲಿರುವ ಜನರೂ ಸುಲಬವಾಗಿ ಓದಿ ತಿಳಿದುಕೊಳ್ಳುವಂತೆ ಮಾಡಲು ಸಾದ್ಯವಾಯಿತು.</p>
<p>ಹಿಂದಿನ ಕಾಲದಲ್ಲಿ ಬರಹಗಳನ್ನು ಯಾರಾದರೂ ಒಬ್ಬರು ದೊಡ್ಡದಾಗಿ ಓದುತ್ತಿದ್ದರು, ಮತ್ತು ಉಳಿದವರು ಅವರ ಸುತ್ತಲೂ ಕುಳಿತು ಅದನ್ನು ಕೇಳುತ್ತಿದ್ದರು; ಎಲ್ಲರಿಗೂ ತಮ್ಮವೇ ಆದ ಬರಹಗಳ ಪ್ರತಿಗಳು ದೊರೆಯತೊಡಗಿದ ಮೇಲೆ, ಅವನ್ನು ಗಟ್ಟಿಯಾಗಿ ಓದುವ ಬದಲು ಮನಸ್ಸಿನಲ್ಲೇನೇ ಓದುವ ಬಗೆ ಬಳಕೆಗೆ ಬಂತು. ಇದಕ್ಕನುಗುಣವಾಗಿ, ಬರಹಗಳ ಬಗೆಗಳಲ್ಲೂ ಹಲವು ಮಾರ‍್ಪಾಡುಗಳು ನಡೆದುವು.</p>
<p>ದಿನಪತ್ರಿಕೆ, ವಾರಪತ್ರಿಕೆ ಮೊದಲಾದುವನ್ನು ಅಚ್ಚುಹಾಕಿಸಿ, ಅವು ಒಮ್ಮೆಗೇನೇ ಲಕ್ಶಾಂತರ ಜನರನ್ನು ತಲಪುವ ಹಾಗೆ ಮಾಡಲಾಯಿತು, ಮತ್ತು ಬರಹವನ್ನು ಕಲಿಯುವವರಿಗೆಲ್ಲ ಅವರದೇ ಆದ ಕಲಿಕೆಯ ಪುಸ್ತಕಗಳು ಸಿಗುವಂತೆ ಮಾಡಲಾಯಿತು. ಬರಹದ ಬಳಕೆಯಲ್ಲಿ ಮತ್ತು ಕಲಿಕೆಯಲ್ಲಿ ಇಂತಹ ಹಲವಾರು ಮಾರ‍್ಪಾಡುಗಳು ಅವನ್ನು ಕಾಗದದಲ್ಲಿ ಅಚ್ಚುಹಾಕಲು ತೊಡಗಿದ ಮೇಲೆ ನಡೆದುಹೋಗಿವೆ. ಹಲವಾರು ಒಳನುಡಿಗಳನ್ನಾಡುವ ಜನರ ನಡುವೆ ಒಂದೇ ಬಗೆಯ ಬರಹದ ನುಡಿ ಬಳಕೆಗೆ ಬಂದಿರುವುದಕ್ಕೂ ಈ ರೀತಿ ಬರಹಗಳನ್ನು ಅಚ್ಚುಹಾಕಲು ತೊಡಗಿದುದೇ ಕಾರಣವಾಗಿದೆ.</p>
<p>ಬರಹಕ್ಕೆ ಈ ರೀತಿ ಹೆಚ್ಚು ಹೆಚ್ಚು ಮೇಲ್ಮೆ ಸಿಗುತ್ತಿದ್ದಂತೆ, ಜನರ ನಡವಳಿಕೆಗಳಲ್ಲೂ ಹಲವು ಬಗೆಯ ಮಾರ‍್ಪಾಡುಗಳು ಉಂಟಾಗತೊಡಗಿದುವು: ಜನರು ತಿಳಿವನ್ನು ಕೂಡಿಡುವ ಬಗೆ ಬೇರಾಯಿತು; ಮೊದಲಿಗೆ ಎಲ್ಲವನ್ನೂ ನೆನಪಿನಲ್ಲಿಯೇ ಉಳಿಸಿಕೊಳ್ಳಬೇಕಾಗಿತ್ತು; ಆದರೆ ಬರಹ ಹೆಚ್ಚು ಹೆಚ್ಚು ಬಳಕೆಗೆ ಬಂದಂತೆ, ತಿಳಿವನ್ನು ಹಲವು ಬಗೆಯ ಬರಹಗಳಲ್ಲಿ ಮತ್ತು ಪುಸ್ತಕಗಳಲ್ಲಿ ಕೂಡಿಡಲಾಯಿತು.</p>
<p>ಗಾದೆಗಳು, ಹಾಡುಗಳು, ಸೂತ್ರಗಳು, ನೀತಿಕತೆಗಳು ಮೊದಲಾದುವೆಲ್ಲ ತಿಳಿವನ್ನು ನೆನಪಿನಲ್ಲಿ ಕೂಡಿಡಲು ಬೇಕಾಗುವಂತಹ ಬಗೆಗಳು; ಬರಹಗಳಲ್ಲಿ ಕೂಡಿಡುವುದಕ್ಕೆ ಇಂತಹ ನೆನಪಿಸಲು ನೆರವಾಗುವ ಬಗೆಗಳು ಬೇಕಾಗುವುದಿಲ್ಲ. ಇದಕ್ಕೆ ಬದಲು, ಪುಸ್ತಕಗಳಲ್ಲಿ ಕಾಣಿಸುವಂತಹ ತಲೆಬರಹಗಳು, ಪಸುಗೆಗಳು, ದಪ್ಪಬರಿಗೆ, ತೆಳುಬರಿಗೆ ಮೊದಲಾದ ಬರಿಗೆರೂಪಗಳು, ಪಟ್ಟಿಗಳು, ಸುಟ್ಟಗೆಗಳು ಮೊದಲಾದ ಓದುವಲ್ಲಿ ನೆರವಾಗುವ ಬೇರೆಯೇ ಹಲವು ಬಗೆಗಳನ್ನು ಬಳಕೆಗೆ ತರಬೇಕಾಯಿತು.</p>
<p>ತಿಳಿವನ್ನು ಕೂಡಿಡುವ ಬಗೆಯಲ್ಲಿ ಮಾರ‍್ಪಾಡಾದುದರಿಂದಾಗಿ, ತಿಳಿವಿಗೂ ವಯಸ್ಸಿಗೂ ನಡುವಿದ್ದ ಸಂಬಂದ ಇಲ್ಲವಾಯಿತು; ಯಾವ ವಿಶಯದಲ್ಲಿ ಬೇಕಿದ್ದರೂ ಪುಸ್ತಕಗಳನ್ನು ಓದುವ ಮೂಲಕ, ದೊಡ್ಡವರಿಗಿಂತ ಹೆಚ್ಚು ತಿಳಿವನ್ನು ಚಿಕ್ಕವರು ಪಡೆಯಬಲ್ಲವರಾದರು. ಇದಲ್ಲದೆ, ಎಶ್ಟು ತಿಳಿವನ್ನು ಮತ್ತು ಎಶ್ಟು ಬಗೆಯ ತಿಳಿವನ್ನು ಪುಸ್ತಕಗಳಲ್ಲಿ ಕೂಡಿಡಬಲ್ಲೆವು ಎಂಬುದಕ್ಕೆ ಒಂದು ಮಿತಿಯೇ ಇಲ್ಲದಿರುವ ಹಾಗಾಯಿತು. ಹೊಸ ಹೊಸ ತಿಳಿವುಗಳನ್ನು ಪಡೆಯುತ್ತಿರುವಾಗಲೂ ಹಳೆಯವನ್ನು ಕಳೆದುಕೊಳ್ಳದೆ ಉಳಿಸಿಕೊಳ್ಳಲು ಸಾದ್ಯವಾಯಿತು.</p>
<p>ತಿಳಿವನ್ನು ಬರಹರೂಪದಲ್ಲಿ ಉಳಿಸಿಕೊಳ್ಳಲು ತೊಡಗಿದುದರಿಂದಾಗಿ ಜನರು ಅದನ್ನೊಂದು ವಸ್ತುವಿನ ಹಾಗೆ ಕಾಣಲು ತೊಡಗಿದರು, ಮತ್ತು ಅದನ್ನು ಕಂಡುಹಿಡಿದವರು ಅದರ ಮೇಲೆ ತಮ್ಮ ಒಡೆತನವನ್ನು ಹೇರಲು ತೊಡಗಿದರು. ತಾವು ಕಂಡುಹಿಡಿದ ತಿಳಿವನ್ನು ಒಂದು ಪುಸ್ತಕದ ರೂಪದಲ್ಲಿ ಅಚ್ಚುಹಾಕಿಸಿ, ಅದನ್ನು ಸಾವಿರಾರು ಜನರಿಗೆ ತಲಪಿಸುವ ಮೂಲಕ, ಕೆಲವರು ಸಾಕಶ್ಟು ಹಣವನ್ನೂ ಕಲೆಹಾಕಿದರು.</p>
<p>ತಿಳಿವು ಎಂಬುದು ಬರಹವನ್ನು ಬಳಸಲು ತಿಳಿಯದವರಲ್ಲಿ ಅವರು ಮಾಡುವ ಕೆಲಸದ ಅಂಗವಾಗಿರುತ್ತದೆ; ಕೆಲಸ ಮಾಡಿದ ಅನುಬವವೇ ಅವರಲ್ಲಿ ತಿಳಿವಿನ ರೂಪದಲ್ಲಿರುತ್ತದೆ; ಅದನ್ನು ಅವರು ಆ ಕೆಲಸದಿಂದ ಬೇರ‍್ಪಡಿಸಿ ಪರಿಶೀಲಿಸಲಾರರು; ಅದರ ಕುರಿತಾಗಿ ಅವರು ಆಡಬಲ್ಲ ಮಾತುಗಳೂ ಅದನ್ನು ಬಳಸಿ ನಡೆಸಬಲ್ಲ ಕೆಲಸದೊಂದಿಗೆ ಹೆಣೆದುಕೊಂಡಿರುತ್ತವೆ.</p>
<p>ಇದಕ್ಕೆ ಬದಲು, ಕಾಗದದಲ್ಲಿ ಬರೆದ ಇಲ್ಲವೇ ಅಚ್ಚುಹಾಕಿದ ತಿಳಿವು ಅದನ್ನು ಬಳಸಿ ನಡೆಸುವ ಕೆಲಸಕ್ಕಿಂತ ಬೇರಾಗಿ ಉಳಿಯುತ್ತದೆ; ಅದನ್ನು ತಿರುತಿರುಗಿ ಓದಿ, ಆ ತಿಳಿವು ಸರಿಯೋ ತಪ್ಪೋ ಎಂದು ವಿಮರ‍್ಶಿಸಲು ಬರುತ್ತದೆ. ಹಾಗಾಗಿ, ಬರಹವನ್ನು ಬಳಸುವವರಿಗೂ ಅವನ್ನು ಬಳಸದವರಿಗೂ ನಡುವೆ ಅವರು ಆಲೋಚಿಸುವ ಬಗೆಯಲ್ಲೇ ಹಲವು ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ.</p>
<p>ನಿಜಕ್ಕೂ ಬರಹ ಬಾರದವರು ಬರಹ ಬಲ್ಲವರಿಗಿಂತ ಜಾಣ್ಮೆಯಲ್ಲಾಗಲಿ, ಬುದ್ದಿವಂತಿಕೆಯಲ್ಲಾಗಲಿ ಕಡಿಮೆಯೇನಲ್ಲ; ಬರಹ ಬಲ್ಲವರಶ್ಟೇ ಜಾಣ್ಮೆಯಿಂದ ಮತ್ತು ಅವರಶ್ಟೇ ಚನ್ನಾಗಿ ಬರಹ ಬಾರದವರೂ ತಮ್ಮ ಜೀವನವನ್ನು ನಡೆಸಬಲ್ಲರು. ಆದರೆ, ಈ ಎರಡು ಬಗೆಯ ಜನರೂ ಒಂದೇ ನಾಡಿನಲ್ಲಿ ನೆಲೆಸಿದ್ದು, ಆ ನಾಡಿನ ಆಡಳಿತವನ್ನು ನಡೆಸುವ ಮತ್ತು ಅದರ ಕುರಿತಾಗಿ ತೀರ‍್ಮಾನಗಳನ್ನು ಕಯ್ಗೊಳ್ಳುವ ಮಂದಿಯೆಲ್ಲ ಬರಹಬಲ್ಲವರಾಗಿದ್ದಲ್ಲಿ, ಆ ನಾಡಿನಲ್ಲಿರುವ ಬರಹ ಬಾರದ ಜನರಲ್ಲಿ ಹೆಚ್ಚಿನವರೂ ತಮ್ಮ ಜೀವನದಲ್ಲಿ ಸೋತುಹೋಗುತ್ತಲೇ ಇರಬೇಕಾಗುತ್ತದೆ.</p>
<p>ಅದರಲ್ಲೂ ನಮ್ಮ ನಾಡಿನಲ್ಲಿರುವ ಹಾಗೆ ಆಡಳಿತವು ಮಂದಿಯಾಳ್ವಿಕೆಯದಾಗಿದ್ದಲ್ಲಿ, ಎಲ್ಲಾ ಮಂದಿಯೂ ಅದರಲ್ಲಿ ಸರಿಯಾಗಿ ತಮ್ಮ ಹೊಣೆಯನ್ನರಿತು ಪಾಲ್ಗೊಳ್ಳಬೇಕಾಗುತ್ತದೆ; ಹಾಗಾಗಿ, ಒಂದು ನಾಡಿನ ಮಂದಿಯಾಳ್ವಿಕೆ (ಪ್ರಜಾಪ್ರಬುತ್ವ) ಚನ್ನಾಗಿ ನಡೆಯಬೇಕಿದ್ದಲ್ಲಿ, ಎಲ್ಲರಿಗೂ ಬರಹದ ತಿಳಿವಿರುವುದು ಅತ್ಯವಶ್ಯ. ಇಲ್ಲವಾದರೆ, ಆ ನಾಡಿನಲ್ಲಿರುವ ಬರಹ ಬಾರದವರು ತಮ್ಮ ಏಳಿಗೆಗೆ ಮಾತ್ರವಲ್ಲದೆ ಇಡೀ ನಾಡಿನ ಏಳಿಗೆಗೂ ತೊಡಕಾಗುತ್ತಾರೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%2595%25e0%25b3%258d%25e0%25b2%2595%25e0%25b3%2586-%25e0%25b2%25ae%25e0%25b3%2587%25e0%25b2%25b2%25e0%25b3%258d%25e0%25b2%25ae%25e0%25b3%2586-%25e0%25b2%25ac%25e0%25b2%2582%25e0%25b2%25a6%25e0%25b3%2581%25e0%25b2%25a6%25e0%25b3%2581-%25e0%25b2%25b9%25e0%25b3%2587%2F&#038;t=%E0%B2%AC%E0%B2%B0%E0%B2%B9%E0%B2%95%E0%B3%8D%E0%B2%95%E0%B3%86%20%E0%B2%AE%E0%B3%87%E0%B2%B2%E0%B3%8D%E0%B2%AE%E0%B3%86%20%E0%B2%AC%E0%B2%82%E0%B2%A6%E0%B3%81%E0%B2%A6%E0%B3%81%20%E0%B2%B9%E0%B3%87%E0%B2%97%E0%B3%86%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%2595%25e0%25b3%258d%25e0%25b2%2595%25e0%25b3%2586-%25e0%25b2%25ae%25e0%25b3%2587%25e0%25b2%25b2%25e0%25b3%258d%25e0%25b2%25ae%25e0%25b3%2586-%25e0%25b2%25ac%25e0%25b2%2582%25e0%25b2%25a6%25e0%25b3%2581%25e0%25b2%25a6%25e0%25b3%2581-%25e0%25b2%25b9%25e0%25b3%2587%2F&#038;p&#091;images&#093;&#091;0&#093;=&#038;p&#091;title&#093;=%E0%B2%AC%E0%B2%B0%E0%B2%B9%E0%B2%95%E0%B3%8D%E0%B2%95%E0%B3%86%20%E0%B2%AE%E0%B3%87%E0%B2%B2%E0%B3%8D%E0%B2%AE%E0%B3%86%20%E0%B2%AC%E0%B2%82%E0%B2%A6%E0%B3%81%E0%B2%A6%E0%B3%81%20%E0%B2%B9%E0%B3%87%E0%B2%97%E0%B3%86%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%2595%25e0%25b3%258d%25e0%25b2%2595%25e0%25b3%2586-%25e0%25b2%25ae%25e0%25b3%2587%25e0%25b2%25b2%25e0%25b3%258d%25e0%25b2%25ae%25e0%25b3%2586-%25e0%25b2%25ac%25e0%25b2%2582%25e0%25b2%25a6%25e0%25b3%2581%25e0%25b2%25a6%25e0%25b3%2581-%25e0%25b2%25b9%25e0%25b3%2587%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ac%e0%b2%b0%e0%b2%b9%e0%b2%95%e0%b3%8d%e0%b2%95%e0%b3%86-%e0%b2%ae%e0%b3%87%e0%b2%b2%e0%b3%8d%e0%b2%ae%e0%b3%86-%e0%b2%ac%e0%b2%82%e0%b2%a6%e0%b3%81%e0%b2%a6%e0%b3%81-%e0%b2%b9%e0%b3%87/feed/</wfw:commentRss>
		<slash:comments>0</slash:comments>
		</item>
		<item>
		<title>ನುಡಿಯ ಕಲಿಕೆ ಮತ್ತು ಕಲಿಕೆನುಡಿ</title>
		<link>http://dnshankarabhat.net/%e0%b2%a8%e0%b3%81%e0%b2%a1%e0%b2%bf%e0%b2%af-%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%95%e0%b2%b2%e0%b2%bf%e0%b2%95%e0%b3%86%e0%b2%a8/?utm_source=rss&#038;utm_medium=rss&#038;utm_campaign=%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586%25e0%25b2%25a8</link>
		<comments>http://dnshankarabhat.net/%e0%b2%a8%e0%b3%81%e0%b2%a1%e0%b2%bf%e0%b2%af-%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%95%e0%b2%b2%e0%b2%bf%e0%b2%95%e0%b3%86%e0%b2%a8/#comments</comments>
		<pubDate>Mon, 14 Apr 2014 16:43:23 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[linguistics]]></category>
		<category><![CDATA[medium of instruction]]></category>
		<category><![CDATA[ಇಂಗ್ಲಿಶ್]]></category>
		<category><![CDATA[ಕಲಿಕೆ]]></category>
		<category><![CDATA[ಕಲಿಕೆನುಡಿ]]></category>
		<category><![CDATA[ಕೆಳವರ‍್ಗ]]></category>
		<category><![CDATA[ಮಕ್ಕಳು]]></category>
		<category><![CDATA[ಮಾದ್ಯಮ]]></category>
		<category><![CDATA[ಮೇಲ್ವರ‍್ಗ]]></category>
		<category><![CDATA[ಶಾಲೆ]]></category>

		<guid isPermaLink="false">http://dnshankarabhat.net/?p=78</guid>
		<description><![CDATA[ನುಡಿಯರಿಮೆಯ ಇಣುಕುನೋಟ – 9 ಇಂಗ್ಲಿಶ್‌ನಂತಹ ಒಂದು ನುಡಿಯನ್ನು ಮಕ್ಕಳಿಗೆ ಕಲಿಸುವುದಕ್ಕೂ ಅದನ್ನೇ ಗಣಿತ, ವಿಜ್ನಾನ, ಚರಿತ್ರೆ ಮೊದಲಾದ ವಿಶಯಗಳನ್ನು ಕಲಿಸುವಲ್ಲಿ ಕಲಿಕೆನುಡಿಯಾಗಿ ಬಳಸುವುದಕ್ಕೂ ನಡುವೆ ತುಂಬಾ ವ್ಯತ್ಯಾಸವಿದೆ. ನಿಜಕ್ಕೂ ಇವತ್ತು ಹೆಚ್ಚಿನ ಜನರಿಗೂ ಬೇಕಾಗಿರುವುದು ಇಂಗ್ಲಿಶ್ ನುಡಿಯ ಕಲಿಕೆಯಲ್ಲದೆ, ಅದನ್ನು ಕಲಿಕೆನುಡಿಯಾಗಿ ಬಳಸಬೇಕೆಂಬುದಲ್ಲ. ಆದರೆ, ಈ ವ್ಯತ್ಯಾಸವನ್ನು ತಿಳಿದುಕೊಳ್ಳಲಾರದ ಜನರು ತಮ್ಮ ಮಕ್ಕಳನ್ನು ಎಶ್ಟೇ ಕಶ್ಟವಾದರೂ ಹೆದರದೆ ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ‘ಇಂಗ್ಲಿಶ್ ಶಾಲೆ’ಗಳಿಗೆ ಕಳಿಸುತ್ತಿದ್ದಾರೆ. ಆದರೆ, ಹೀಗೆ ಮಾಡುವುದರಿಂದ ಅವರಲ್ಲಿ ಹೆಚ್ಚಿನವರ ಆಸೆಯೂ ಕಯ್ಗೂಡುವುದಿಲ್ಲ. ಮೇಲ್ವರ‍್ಗದ ಮಕ್ಕಳು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 9</strong></p>
<p><strong>ಇಂಗ್ಲಿಶ್‌ನಂತಹ</strong> ಒಂದು ನುಡಿಯನ್ನು ಮಕ್ಕಳಿಗೆ ಕಲಿಸುವುದಕ್ಕೂ ಅದನ್ನೇ ಗಣಿತ, ವಿಜ್ನಾನ, ಚರಿತ್ರೆ ಮೊದಲಾದ ವಿಶಯಗಳನ್ನು ಕಲಿಸುವಲ್ಲಿ <strong>ಕಲಿಕೆನುಡಿಯಾಗಿ</strong> ಬಳಸುವುದಕ್ಕೂ ನಡುವೆ ತುಂಬಾ ವ್ಯತ್ಯಾಸವಿದೆ. ನಿಜಕ್ಕೂ ಇವತ್ತು ಹೆಚ್ಚಿನ ಜನರಿಗೂ ಬೇಕಾಗಿರುವುದು ಇಂಗ್ಲಿಶ್ ನುಡಿಯ ಕಲಿಕೆಯಲ್ಲದೆ, ಅದನ್ನು ಕಲಿಕೆನುಡಿಯಾಗಿ ಬಳಸಬೇಕೆಂಬುದಲ್ಲ. ಆದರೆ, ಈ ವ್ಯತ್ಯಾಸವನ್ನು ತಿಳಿದುಕೊಳ್ಳಲಾರದ ಜನರು ತಮ್ಮ ಮಕ್ಕಳನ್ನು ಎಶ್ಟೇ ಕಶ್ಟವಾದರೂ ಹೆದರದೆ ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ‘ಇಂಗ್ಲಿಶ್ ಶಾಲೆ’ಗಳಿಗೆ ಕಳಿಸುತ್ತಿದ್ದಾರೆ.</p>
<p>ಆದರೆ, ಹೀಗೆ ಮಾಡುವುದರಿಂದ ಅವರಲ್ಲಿ ಹೆಚ್ಚಿನವರ ಆಸೆಯೂ ಕಯ್ಗೂಡುವುದಿಲ್ಲ. ಮೇಲ್ವರ‍್ಗದ ಮಕ್ಕಳು ಇಂತಹ ಶಾಲೆಗಳಿಗೆ ಹೋಗಿ ದೊಡ್ಡ ದೊಡ್ಡ ಕೆಲಸಗಳನ್ನು ಹಿಡಿದು ಲಕ್ಶ ಲಕ್ಶ ಸಂಪಾದಿಸುವುದನ್ನು ನೋಡಿ, ತಮ್ಮ ಮಕ್ಕಳೂ ಹಾಗೆಯೇ ಮುಂದೆ ಬರಬೇಕೆಂದು ಅವರು ಬಯಸುವುದು ಸಹಜ. ಆದರೆ, ಇಂಗ್ಲಿಶ್ ಶಾಲೆಗಳು ಅವರ ಈ ಬಯಕೆಯನ್ನು ಪೂರಯ್ಸಲಾರವು.</p>
<p>ಇದಕ್ಕೆ ಹಲವು ಕಾರಣಗಳಿವೆ: ಮೊದಲನೆಯದಾಗಿ, ಇಂಗ್ಲಿಶ್ ಶಾಲೆಗಳಲ್ಲೂ ಹಲವು ಬಗೆಗಳಿವೆ; ಇಂಗ್ಲಿಶ್ ನುಡಿಯನ್ನು ಮತ್ತು ಬೇರೆ ವಿಶಯಗಳನ್ನು ತುಂಬಾ ಚನ್ನಾಗಿ ಕಲಿಸಬಲ್ಲ ಶಾಲೆಗಳು ಕೆಲವಾದರೆ, ಯಾವುದನ್ನೂ ಸರಿಯಾಗಿ ಕಲಿಸಲಾಗದ ಶಾಲೆಗಳು ಹಲವು; ಕೆಳವರ‍್ಗದ ಮಕ್ಕಳಲ್ಲಿ ಹೆಚ್ಚಿನವರೂ ಇಂತಹ ಎರಡನೇ ಬಗೆಯ ಶಾಲೆಗಳಿಗೆ ಮಾತ್ರವೇ ಹೋಗಬಲ್ಲರಾದ ಕಾರಣ, ಅವರ ಕಲಿಕೆ ಅಲ್ಲಿಯೂ ಕುಂಟುತ್ತಲೇ ನಡೆಯುತ್ತದೆ.</p>
<p>ತಮಗೆ ಮಾತನಾಡಲು ತಿಳಿದಿರುವ ನುಡಿಯನ್ನು ಕಲಿಕೆನುಡಿಯಾಗಿ ಪಡೆದಿರುವ ಮಕ್ಕಳು ತಮಗೆ ಸ್ವಲ್ಪವೂ ತಿಳಿಯದಿರುವ ಇಂಗ್ಲಿಶ್‌ನಂತಹ ನುಡಿಯನ್ನು ಕಲಿಕೆನುಡಿಯಾಗಿ ಪಡೆದಿರುವ ಮಕ್ಕಳಿಗಿಂತ ಬೇಗನೆ ತಮ್ಮ ಕಲಿಕೆಯಲ್ಲಿ ಮುಂದೆ ಹೋಗಬಲ್ಲರೆಂಬುದನ್ನು ಎಲ್ಲಾ ಬಗೆಯ ಅರಕೆಗಳೂ ತೋರಿಸಿಕೊಟ್ಟಿವೆ; ಇಂಗ್ಲಿಶ್ ನುಡಿಯನ್ನು ಕಲಿಯುವಲ್ಲಿಯೂ ಅವರು ಇಂಗ್ಲಿಶ್ ಕಲಿಕೆನುಡಿಯಾಗಿರುವ ಶಾಲೆಗಳ ಮಕ್ಕಳಿಗಿಂತ ಬೇಗನೆ ಮುಂದೆ ಹೋಗಬಲ್ಲರು.</p>
<p><strong>ದಕ್ಶಿಣ ಆಪ್ರಿಕಾದಲ್ಲಿ</strong> ಎಂಟನೇ ತರಗತಿಯ ವರೆಗೂ ಕಲಿಕೆನುಡಿಯಾಗಿ ತಾಯ್ನುಡಿಯನ್ನು ಬಳಸುತ್ತಿದ್ದ ಶಾಲೆಗಳಲ್ಲಿ ಮಕ್ಕಳು ಹನ್ನೆರಡನೇ ತರಗತಿಯಲ್ಲಿ ನೂರಕ್ಕೆ ೮೪ರಂತೆ ಪಾಸಾಗುತ್ತಿದ್ದರು. ತಾಯ್ತಂದೆಯವರ ಒತ್ತಾಯದ ಮೇಲೆ, ಅಯ್ದನೇ ತರಗತಿಯಿಂದಲೇ ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸಲು 1976ರಲ್ಲಿ ತೊಡಗಲಾಯಿತು. 1992ರಲ್ಲಿ ಈ ಮಕ್ಕಳ ಕಲಿಕೆಯನ್ನು ಪರೀಕ್ಶಿಸಿದಾಗ, ಹನ್ನೆರಡನೇ ತರಗತಿಯ ಮಕ್ಕಳು ನೂರಕ್ಕೆ 44ರಂತೆ ಪಾಸಾಗುವ ಮಟ್ಟಕ್ಕೆ ಇಳಿದಿದ್ದುದು ಕಂಡುಬಂತು. ಇಂಗ್ಲಿಶ್ ನುಡಿಯ ಕಲಿಕೆಯಲ್ಲೂ ಪಾಸಾಗುವವರ ಎಣಿಕೆ ಅಶ್ಟೇ ಕೆಳಗೆ ಇಳಿದಿತ್ತು.</p>
<p>ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸಿಯೂ ಮೇಲ್ವರ‍್ಗದ ಮಕ್ಕಳು ಇವತ್ತು ಮುಂದೆ ಬರುತ್ತಿರುವುದಕ್ಕೆ ಕಾರಣ ಬೇರೆಯೇ ಇದೆ. ಅವರಿಗೆ ಶಾಲೆಯ ಕಲಿಕೆ ಮಾತ್ರವಲ್ಲದೆ ಬೇರೆಯೂ ಹಲವು ಬಗೆಯ ಕಲಿಕೆಗಳು ನೆರವು ನೀಡುತ್ತಿವೆ. ಇಂತಹ ನೆರವು ಕೆಳವರ‍್ಗದ ಮಕ್ಕಳಿಗೆ ಸಿಗುವುದಿಲ್ಲ. ಮಕ್ಕಳಿಗೆ ಎಶ್ಟು ಪದಗಳ ಮೇಲೆ ಹತೋಟಿಯಿದೆ ಎಂಬುದರ ಮೇಲೆ ಅವರು ತಮ್ಮ ಕಲಿಕೆಯಲ್ಲಿ ಎಶ್ಟು ಮುಂದೆ ಹೋಗಬಲ್ಲರು ಎಂಬುದು ಅವಲಂಬಿಸಿರುತ್ತದೆ, ಮತ್ತು ಸಾಮಾನ್ಯವಾಗಿ, ಮಕ್ಕಳ ಹತೋಟಿಯಲ್ಲಿರುವ ಪದಗಳ ಎಣಿಕೆ ಅವರ ತಾಯ್ತಂದೆಯರು ಬರಹಬಲ್ಲವರೋ ಇಲ್ಲವೇ ಬರಹಬಾರದವರೋ ಎಂಬುದರ ಮೇಲೆಯೂ ಅವಲಂಬಿಸಿರುತ್ತದೆ.</p>
<p>ಹೆಚ್ಚು ಪದಗಳ ಮೇಲೆ ಹತೋಟಿಯಿರುವ ಮಕ್ಕಳು ಹೆಚ್ಚು ಬರಹಗಳನ್ನು ಓದಿ ತಿಳಿದುಕೊಳ್ಳಬಲ್ಲರು, ಮತ್ತು ಇದರಿಂದಾಗಿ ಅವರ ಹತೋಟಿಯಲ್ಲಿರುವ ಪದಗಳ ಎಣಿಕೆ ಬಹಳ ಬೇಗನೆ ಹೆಚ್ಚುತ್ತಾ ಹೋಗುತ್ತದೆ; ಇದಕ್ಕೆ ಬದಲು, ಕಡಿಮೆ ಪದಗಳ ಮೇಲೆ ಹತೊಟಿಯಿರುವ ಮಕ್ಕಳು ಪಟ್ಯಪುಸ್ತಕಗಳನ್ನು ಬಿಟ್ಟು ಬೇರೆ ಬರಹಗಳನ್ನು ಓದಲು ಹೋಗುವುದಿಲ್ಲ, ಮತ್ತು ಇದರಿಂದಾಗಿ ಅವರ ಹತೋಟಿಯಲ್ಲಿರುವ ಪದಗಳ ಎಣಿಕೆ ತುಂಬಾ ಮೆಲ್ಲಗೆ ಹೆಚ್ಚುತ್ತಿರುತ್ತದೆ. ಇಂಗ್ಲಿಶ್ ಕಲಿಕೆನುಡಿಯಾಗಿರುವ ಶಾಲೆಗಳಲ್ಲಿ ಕಲಿಯುವ ಮೇಲ್ವರ‍್ಗದವರ ಮಕ್ಕಳಿಗೆ ತಮ್ಮ ಹತೋಟಿಯಲ್ಲಿರುವ ಇಂಗ್ಲಿಶ್ ಪದಗಳನ್ನು ಹೆಚ್ಚಿಸಲು ಮನೆಯಲ್ಲಿಯೂ ನೆರವು ಸಿಗುತ್ತದೆ; ಆದರೆ, ಕೆಳವರ‍್ಗದ ಮಕ್ಕಳಿಗೆ ಇಂತಹ ಮನೆಯ ನೆರವು ಸಿಗುವುದಿಲ್ಲ. ಇದರಿಂದಾಗಿಯೂ ಅವರು ಇಂತಹ ಶಾಲೆಗಳಲ್ಲಿ ಹಿಂದೆ ಬೀಳುತ್ತಾರೆ.</p>
<p>ಇನ್ನೊಂದು ವಿಶಯವೇನೆಂದರೆ, ಎರಡು ಇಲ್ಲವೇ ಮೂರನೇ ತರಗತಿಯ ವರೆಗೆ ಮಕ್ಕಳು ಕಲಿಯುವುದು ಓದುವುದು ಮತ್ತು ಬರೆಯುವುದು ಹೇಗೆ ಎಂಬುದನ್ನು. ತಮಗೆ ತಿಳಿಯದಿರುವ ಇಂಗ್ಲಿಶ್ ನುಡಿಯಲ್ಲಿ ಇದನ್ನು ನಡೆಸುವುದು ಅವರಿಗೆ ಅಶ್ಟೊಂದು ತೊಡಕಿನದಾಗಿರುವುದಿಲ್ಲ. ಆದರೆ, ಮೂರು ಇಲ್ಲವೇ ನಾಲ್ಕನೇ ತರಗತಿಯಿಂದ ಅವರು ತಮ್ಮ ಓದಿನ ಮೂಲಕ ಗಣಿತ, ವಿಜ್ನಾನ ಮೊದಲಾದ ಹಲವು ಬಗೆಯ ವಿಶಯಗಳನ್ನು ತಿಳಿದುಕೊಳ್ಳಲು ತೊಡಗಬೇಕಾಗುತ್ತದೆ; ಕಣ್ಣಿಗೆ ಕಾಣದ ಮತ್ತು ಕಿವಿಗೆ ಕೇಳಿಸದ ಪರಿಕಲ್ಪನೆಗಳನ್ನು ಅರಿತುಕೊಳ್ಳಬೇಕಾಗುತ್ತದೆ.</p>
<p>ಇಂತಹ ಕೆಲಸಗಳನ್ನು ನಡೆಸಲು ಇಂಗ್ಲಿಶ್ ನುಡಿಯನ್ನು ತುಂಬಾ ಚನ್ನಾಗಿ ಕಲಿಸುವ ಶಾಲೆಗಳಲ್ಲೂ ಮಕ್ಕಳಿಗೆ ಆರೇಳು ವರ‍್ಶಗಳ ಕಲಿಕೆ ಬೇಕಾಗುತ್ತದೆಯೆಂದು ಕಂಡುಹಿಡಿಯಲಾಗಿದೆ. ಇಂಗ್ಲಿಶ್ ಕಲಿಕೆನುಡಿಯಾಗಿರುವಲ್ಲಿ ಈ ಕೆಲಸಗಳನ್ನು ನಾಲ್ಕನೇ ತರಗತಿಯಿಂದಲೇ ನಡೆಸಬೇಕಾಗುತ್ತದೆಯಾದ ಕಾರಣ, ಹೆಚ್ಚಿನ ಮಕ್ಕಳೂ ಇದರಲ್ಲಿ ಸೋಲುತ್ತಾರೆ, ಮತ್ತು ಹಲವು ಮಂದಿ ಮಕ್ಕಳು ಈ ತೊಡಕನ್ನು ಎದುರಿಸಲಾಗದೆ ಶಾಲೆಯಿಂದ ಹೊರಬೀಳುತ್ತಾರೆ. ಇಲ್ಲಿಯೂ ಮೇಲ್ವರ‍್ಗದವರ ಮತ್ತು ಬಲ್ಲಿದರ ಮಕ್ಕಳಿಗಿಂತ ಕೆಳವರ‍್ಗದವರ ಮತ್ತು ಬಡವರ ಮಕ್ಕಳೇ ಹೆಚ್ಚು ಸೋಲುತ್ತಾರೆ.</p>
<p>ಇಂಗ್ಲಿಶ್ ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ಮಕ್ಕಳಿಗೆ ತಮ್ಮ ತಾಯ್ನುಡಿಯ ಮೇಲೆ, ಮತ್ತು ಅದನ್ನು ಬಳಸುವ ತಾಯ್ತಂದೆಯರು, ನೆಂಟರು, ನೆರೆಹೊರೆಯವರು ಮೊದಲಾದವರ ಮೇಲೆ ಕೀಳರಿಮೆ ಬೆಳೆಯುತ್ತದೆ; ತಮ್ಮ ಕಲಿಕೆ ಮುಂದುವರಿದಂತೆಲ್ಲ ಮಕ್ಕಳು ಇವರಿಂದ ದೂರವಾಗುತ್ತಾ ಹೋಗುತ್ತಾರೆ. ಈ ತೊಡಕು ಮೇಲ್ವರ‍್ಗದವರ ಮಕ್ಕಳಿಗಿಂತಲೂ ಕೆಳವರ‍್ಗದ ಮಕ್ಕಳನ್ನು ಹೆಚ್ಚು ಕಾಡುತ್ತದೆ. ಯಾಕೆಂದರೆ, ಮೇಲ್ವರ‍್ಗದ ಮಕ್ಕಳ ತಾಯ್ತಂದೆಯರು, ನೆಂಟರು ಮತ್ತು ನೆರೆಹೊರೆಯವರು ಸಾಮಾನ್ಯವಾಗಿ ಇಂಗ್ಲಿಶ್ ತಿಳಿದಿರುತ್ತಾರೆ.</p>
<p>ಇಂತಹ ಹಲವು ಸಮಸ್ಯೆಗಳಿರುವುದರಿಂದಾಗಿ, ಕೆಳವರ‍್ಗದ ಮಕ್ಕಳು ಮೇಲೆ ಬರಬೇಕಿದ್ದಲ್ಲಿ, ಮತ್ತು ತಮ್ಮೊಂದಿಗೆ ತಮ್ಮ ಸಮಾಜವನ್ನೂ ಮೇಲೆ ತರಬೇಕಿದ್ದಲ್ಲಿ, ಅವರಿಗೆ ಕಲಿಕೆನುಡಿಯಾಗಿ ಕನ್ನಡವನ್ನೇ ಬಳಸುತ್ತಿರಬೇಕು. ಇದರೊಂದಿಗೆ ಇಂಗ್ಲಿಶ್ ನುಡಿಯನ್ನೂ ಒಂದು ವಿಶಯವಾಗಿ ಮಾತ್ರ ಕಲಿಸುತ್ತಿರಬೇಕಲ್ಲದೆ ಕಲಿಕೆನುಡಿಯಾಗಿ ಬಳಸಲು ಹೋಗಬಾರದು.</p>
<p>ಇಂಗ್ಲಿಶ್ ನುಡಿಯ ಕಲಿಕೆಯಲ್ಲಿ ಅವರು ಹಿಂದೆ ಬೀಳುತ್ತಿರುವುದಕ್ಕೆ ಅವರ ಕಲಿಕೆನುಡಿಯಾಗಿ ಕನ್ನಡವನ್ನು ಬಳಸುತ್ತಿರುವುದು ಕಾರಣವಲ್ಲ; ಇಂಗ್ಲಿಶ್ ನುಡಿಯನ್ನು ಅವರಿಗೆ ಶಾಲೆಯಲ್ಲಿ ಸರಿಯಾಗಿ ಕಲಿಸದಿರುವುದೇ ಕಾರಣ. ಹಾಗಾಗಿ, ಕಲಿಕೆನುಡಿಯನ್ನು ಬದಲಾಯಿಸುವುದರಿಂದ ಅವರು ಇಂಗ್ಲಿಶ್ ಕಲಿಕೆಯಲ್ಲಿ ಮುಂದೆ ಹೋಗುವ ಬದಲು, ಬೇರೆ ವಿಶಯಗಳ ಕಲಿಕೆಯಲ್ಲೂ ಹಿಂದೆ ಬೀಳಲು ತೊಡಗುತ್ತಾರೆ.</p>
<p>ಇವತ್ತು ಮುಂದೆ ಬಂದಿರುವ ಎಲ್ಲಾ ನಾಡುಗಳಲ್ಲೂ ಮಕ್ಕಳ ಕಲಿಕೆನುಡಿ ಅವರ ತಾಯ್ನುಡಿಯಾಗಿದೆ; ಇಂಗ್ಲಿಶ್‌ನಂತಹ ಬೇರೊಂದು ನುಡಿಯನ್ನು ಕಲಿಕೆನುಡಿಯಾಗಿ ಬಳಸುವ ಯಾವ ನಾಡೂ ಇದುವರೆಗೆ ಮುಂದೆ ಬಂದಿಲ್ಲ. ಇದಕ್ಕೆ ಕಾರಣವೇನೆಂದರೆ, ತಮ್ಮ ನಾಡಿನದಲ್ಲದ ಕಲಿಕೆನುಡಿಯಲ್ಲಿ ಕಲಿತವರು ನಾಡಿನ ಸಾಮಾನ್ಯ ಜನರಿಂದ ಬೇರಾಗಿಯೇ ಉಳಿಯುತ್ತಾರೆ, ಮತ್ತು ಅವರ ಕಲಿಕೆಯಿಂದ ಸಾಮಾನ್ಯ ಜನರಿಗೆ ಯಾವ ಪ್ರಯೋಜನವೂ ದೊರಕುವುದಿಲ್ಲ.</p>
<p>ಹಾಗಾಗಿ, ಕಲಿಯುವ ಮಕ್ಕಳ ವಯ್ಯಕ್ತಿಕ ಏಳಿಗೆಗೆ ಮಾತ್ರವಲ್ಲದೆ, ಅವರ ಸಮಾಜದ ಮತ್ತು ನಾಡಿನ ಏಳಿಗೆಗಾಗಿಯೂ ಕಲಿಕೆನುಡಿಯಾಗಿ ಅವರ ತಾಯ್ನುಡಿ ಇಲ್ಲವೇ ಪರಿಸರದ ನುಡಿಯನ್ನು ಬಳಸುವುದೇ ಸರಿಯಾದ ದಾರಿ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586%25e0%25b2%25a8%2F&#038;t=%E0%B2%A8%E0%B3%81%E0%B2%A1%E0%B2%BF%E0%B2%AF%20%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%95%E0%B2%B2%E0%B2%BF%E0%B2%95%E0%B3%86%E0%B2%A8%E0%B3%81%E0%B2%A1%E0%B2%BF&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586%25e0%25b2%25a8%2F&#038;p&#091;images&#093;&#091;0&#093;=&#038;p&#091;title&#093;=%E0%B2%A8%E0%B3%81%E0%B2%A1%E0%B2%BF%E0%B2%AF%20%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%95%E0%B2%B2%E0%B2%BF%E0%B2%95%E0%B3%86%E0%B2%A8%E0%B3%81%E0%B2%A1%E0%B2%BF" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586%25e0%25b2%25a8%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%a8%e0%b3%81%e0%b2%a1%e0%b2%bf%e0%b2%af-%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%95%e0%b2%b2%e0%b2%bf%e0%b2%95%e0%b3%86%e0%b2%a8/feed/</wfw:commentRss>
		<slash:comments>0</slash:comments>
		</item>
		<item>
		<title>ನಿಮ್ಮ ಮಗುವಿಗೆ ಇಂಗ್ಲಿಶ್ ನುಡಿ ಮಾತ್ರ ಸಾಕೇ?</title>
		<link>http://dnshankarabhat.net/%e0%b2%a8%e0%b2%bf%e0%b2%ae%e0%b3%8d%e0%b2%ae-%e0%b2%ae%e0%b2%97%e0%b3%81%e0%b2%b5%e0%b2%bf%e0%b2%97%e0%b3%86-%e0%b2%87%e0%b2%82%e0%b2%97%e0%b3%8d%e0%b2%b2%e0%b2%bf%e0%b2%b6%e0%b3%8d-%e0%b2%a8/?utm_source=rss&#038;utm_medium=rss&#038;utm_campaign=%25e0%25b2%25a8%25e0%25b2%25bf%25e0%25b2%25ae%25e0%25b3%258d%25e0%25b2%25ae-%25e0%25b2%25ae%25e0%25b2%2597%25e0%25b3%2581%25e0%25b2%25b5%25e0%25b2%25bf%25e0%25b2%2597%25e0%25b3%2586-%25e0%25b2%2587%25e0%25b2%2582%25e0%25b2%2597%25e0%25b3%258d%25e0%25b2%25b2%25e0%25b2%25bf%25e0%25b2%25b6%25e0%25b3%258d-%25e0%25b2%25a8</link>
		<comments>http://dnshankarabhat.net/%e0%b2%a8%e0%b2%bf%e0%b2%ae%e0%b3%8d%e0%b2%ae-%e0%b2%ae%e0%b2%97%e0%b3%81%e0%b2%b5%e0%b2%bf%e0%b2%97%e0%b3%86-%e0%b2%87%e0%b2%82%e0%b2%97%e0%b3%8d%e0%b2%b2%e0%b2%bf%e0%b2%b6%e0%b3%8d-%e0%b2%a8/#comments</comments>
		<pubDate>Mon, 14 Apr 2014 16:40:28 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[English]]></category>
		<category><![CDATA[medium of instruction]]></category>
		<category><![CDATA[ಇಂಗ್ಲಿಶ್]]></category>
		<category><![CDATA[ಎರಡನೇ ನುಡಿ]]></category>
		<category><![CDATA[ಕನ್ನಡ ನುಡಿ]]></category>
		<category><![CDATA[ಕಲಿಕೆ]]></category>
		<category><![CDATA[ಮಕ್ಕಳು]]></category>
		<category><![CDATA[ಮಗು]]></category>
		<category><![CDATA[ಮೊದಲನೇ ನುಡಿ]]></category>
		<category><![CDATA[ಶಾಲೆ]]></category>

		<guid isPermaLink="false">http://dnshankarabhat.net/?p=72</guid>
		<description><![CDATA[ನುಡಿಯರಿಮೆಯ ಇಣುಕುನೋಟ – 6 ಇವತ್ತು ಹಲವು ಜನರು ತಮ್ಮ ಮಕ್ಕಳನ್ನು ಇಂಗ್ಲಿಶ್ಕಲಿಕೆನುಡಿಯ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ; ಇಂತಹ ಹಲವು ಶಾಲೆಗಳಲ್ಲಿ ಮಕ್ಕಳು ಇಂಗ್ಲಿಶ್ ನುಡಿಯನ್ನು ಮಾತ್ರ ಬಳಸಬೇಕು, ಕನ್ನಡವನ್ನು ಬಳಸಲೇ ಕೂಡದು ಎಂಬ ಒಂದು ಕಟ್ಟಲೆಯನ್ನು ಮಾಡಿರುತ್ತಾರೆ. ಮಕ್ಕಳು ಶಾಲೆಯಲ್ಲಿ ಇಂಗ್ಲಿಶ್ ನುಡಿಯನ್ನು ಮಾತ್ರವೇ ಬಳಸುತ್ತಿದ್ದಲ್ಲಿ ಅವರಿಗೆ ಅದನ್ನು ಬೇಗನೆ ಮತ್ತು ತಪ್ಪಿಲ್ಲದೆ ಬಳಸಲು ಬರಬಹುದೆಂಬ ತಪ್ಪು ಅನಿಸಿಕೆಯೇ ಈ ಕಟ್ಟಲೆಗೆ ಕಾರಣ. ಕೆಲವು ಮನೆಗಳಲ್ಲಿಯೂ ಇದೇ ಕಾರಣಕ್ಕಾಗಿ ಮಕ್ಕಳೊಂದಿಗೆ ಅವರ ತಾಯ್ತಂದೆಯರು ಇಂಗ್ಲಿಶ್ ನುಡಿಯನ್ನೇ ಬಳಸತೊಡಗುತ್ತಾರೆ. ಆದರೆ, ಹೀಗೆ ಮಾಡುವುದರಿಂದ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 6</strong></p>
<p>ಇವತ್ತು ಹಲವು ಜನರು ತಮ್ಮ ಮಕ್ಕಳನ್ನು <strong>ಇಂಗ್ಲಿಶ್</strong>ಕಲಿಕೆನುಡಿಯ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ; ಇಂತಹ ಹಲವು ಶಾಲೆಗಳಲ್ಲಿ ಮಕ್ಕಳು ಇಂಗ್ಲಿಶ್ ನುಡಿಯನ್ನು ಮಾತ್ರ ಬಳಸಬೇಕು, ಕನ್ನಡವನ್ನು ಬಳಸಲೇ ಕೂಡದು ಎಂಬ ಒಂದು ಕಟ್ಟಲೆಯನ್ನು ಮಾಡಿರುತ್ತಾರೆ. ಮಕ್ಕಳು <strong>ಶಾಲೆಯಲ್ಲಿ</strong> ಇಂಗ್ಲಿಶ್ ನುಡಿಯನ್ನು ಮಾತ್ರವೇ ಬಳಸುತ್ತಿದ್ದಲ್ಲಿ ಅವರಿಗೆ ಅದನ್ನು ಬೇಗನೆ ಮತ್ತು ತಪ್ಪಿಲ್ಲದೆ ಬಳಸಲು ಬರಬಹುದೆಂಬ ತಪ್ಪು ಅನಿಸಿಕೆಯೇ ಈ ಕಟ್ಟಲೆಗೆ ಕಾರಣ.</p>
<p>ಕೆಲವು ಮನೆಗಳಲ್ಲಿಯೂ ಇದೇ ಕಾರಣಕ್ಕಾಗಿ ಮಕ್ಕಳೊಂದಿಗೆ ಅವರ ತಾಯ್ತಂದೆಯರು ಇಂಗ್ಲಿಶ್ ನುಡಿಯನ್ನೇ ಬಳಸತೊಡಗುತ್ತಾರೆ. ಆದರೆ, ಹೀಗೆ ಮಾಡುವುದರಿಂದ ಮಕ್ಕಳು ಚಿಕ್ಕಂದಿನಲ್ಲಿ ಕಲಿತಿದ್ದ ಕನ್ನಡ ನುಡಿಯನ್ನು ಮರೆಯುತ್ತಾ ಹೋಗುತ್ತಾರೆ, ಮತ್ತು ಕೊನೆಗೆ ಅವರಿಗೆ ಅದರಲ್ಲಿ ಮಾತನಾಡಲು ಬರುವುದಿಲ್ಲವೆಂದೇ ಆಗುತ್ತದೆ.</p>
<p>ಮಕ್ಕಳ ಬೆಳವಣಿಗೆಯ ಮಟ್ಟಿಗೆ ಇದು ಸರಿಯೇ ಎಂಬುದನ್ನು ಈ ಶಾಲೆಗಳನ್ನು ನಡೆಸುವವರಾಗಲಿ, ಇಲ್ಲವೇ ಮಕ್ಕಳ ತಾಯಿತಂದೆಯರಾಗಲಿ ಪರಿಶೀಲಿಸಿದ ಹಾಗಿಲ್ಲ. ಇಂಗ್ಲಿಶ್ ಕಲಿಯುವ ಮಕ್ಕಳು ಅದರೊಂದಿಗೆ ತರಗತಿಯಲ್ಲಿ ತಮ್ಮ ತಾಯ್ನುಡಿಯನ್ನೂ ಬಳಸುತ್ತಿದ್ದರೆ ಅವರಿಗೆ ಸರಿಯಾಗಿ ಇಂಗ್ಲಿಶ್ ಕಲಿಯಲು ಬರುವುದಿಲ್ಲ ಎಂಬ ಅನಿಸಿಕೆ ಹಿಂದಿನ ಕಾಲದಲ್ಲಿತ್ತು; ಆದರೆ, ಕಳೆದ ಕೆಲವು ವರ‍್ಶಗಳಲ್ಲಿ, ಅದರಲ್ಲೂ ಕಳೆದ ಹತ್ತು-ಹದಿನಯ್ದು ವರ‍್ಶಗಳಲ್ಲಿ ನಡೆಸಿದ ಅರಕೆಗಳೆಲ್ಲವೂ ಇದು ತಪ್ಪು ಅನಿಸಿಕೆಯೆಂಬುದನ್ನು ತೋರಿಸಿಕೊಟ್ಟಿವೆ.</p>
<p>ಒಂದು ನುಡಿಯನ್ನು ಶಾಲೆಗೆ ಬರುವ ಮೊದಲೇ ಕಲಿತಿರುವ ಮಕ್ಕಳು ಎರಡನೇ ನುಡಿಯನ್ನು ಆ ನುಡಿಯ ಮೂಲಕವೇನೇ ಕಲಿಯಬೇಕಾಗುತ್ತದೆ; ಮೊದಲಿಗೆ ಅವರು ತಮ್ಮ ತಾಯ್ನುಡಿಯ ಪದಗಳನ್ನು ಮತ್ತು ಕಟ್ಟಲೆಗಳನ್ನು ಎರಡನೇ ನುಡಿಯ ಮಾತುಗಳಲ್ಲಿ ಸೇರಿಸಿ ಹೇಳಬಹುದು; ಆದರೆ, ಇದು ಅವರ ಕಲಿಕೆಯ ಒಂದು ಹಂತವನ್ನು ಸೂಚಿಸುತ್ತದೆಯಲ್ಲದೆ, ಅವರು ಕಲಿಕೆಯಲ್ಲಿ ಗೊಂದಲಗೊಂಡಿರುವುದನ್ನಾಗಲಿ, ತಪ್ಪು ದಾರಿ ಹಿಡಿದಿರುವುದನ್ನಾಗಲಿ ಸೂಚಿಸುವುದಿಲ್ಲ. ಕಲಿಕೆ ಮುಂದುವರಿದಂತೆಲ್ಲ ಅವರು ಈ ಎರಡು ನುಡಿಗಳ ಪದಗಳನ್ನು ಮತ್ತು ಕಟ್ಟಲೆಗಳನ್ನು ಬೇರೆ ಬೇರಾಗಿ ಇರಿಸಿಕೊಳ್ಳಲು ಕಲಿಯುತ್ತಾರೆ.</p>
<p>ಮೊದಲನೇ ನುಡಿಯನ್ನು ಅವರು ಶಾಲೆಯಲ್ಲಿ ಬಳಸಲೇಬಾರದೆಂಬುದಾಗಿ ಅವರ ಮೇಲೆ ಒತ್ತಾಯ ಹೇರಿದರೆ, ಅವರಿಗೆ ಅದರ ಮೇಲೆ ಕೀಳರಿಮೆಯುಂಟಾಗುತ್ತದೆ ಮಾತ್ರವಲ್ಲ, ಅವರ ಎರಡನೇ ನುಡಿಯ ಕಲಿಕೆಯೂ ತೊಡಕಿನದಾಗುತ್ತದೆ. ಮಕ್ಕಳಿಗೆ ಚನ್ನಾಗಿ ತಿಳಿದಿರುವ ನುಡಿಯನ್ನು ಉಳಿಸಿ, ಅದರ ಮೂಲಕ ಎರಡನೆಯ ನುಡಿಯನ್ನು ಕಲಿಸುವುದೇ ಸರಿಯಾದ ದಾರಿ.</p>
<p>ಇದಲ್ಲದೆ, ಈ ಎರಡು ನುಡಿಗಳ ಬಳಕೆಯಲ್ಲೂ ಮಕ್ಕಳು ಒಂದೇ ರೀತಿಯಲ್ಲಿ ಪಳಗುವಂತೆ ಮಾಡುವ ಮೂಲಕ, ಅವರು ಒಂದು ನುಡಿಯನ್ನು ಮಾತ್ರವೇ ಬಳಸಬಲ್ಲ ಮಕ್ಕಳಿಗಿಂತ ಜಾಣತನದಲ್ಲಿ, ಬುದ್ದಿವಂತಿಕೆಯಲ್ಲಿ, ಮತ್ತು ನುಡಿಯನ್ನು ಬಳಸಲು ಬೇಕಾಗುವ ಹಲವು ಬಗೆಯ ಚಳಕಗಳಲ್ಲಿ ಮುಂದೆ ಹೋಗುತ್ತಾರೆ ಎಂಬುದನ್ನು ಇತ್ತೀಚೆಗೆ ನಡೆಸಿದ ಹಲವು ಅರಕೆಗಳು ತೋರಿಸಿಕೊಟ್ಟಿವೆ.</p>
<p>ಎರಡು ನುಡಿಗಳನ್ನು ಬಳಸುವವರು ಎರಡು ಬಗೆಯ ಪದಗಳನ್ನು ಮತ್ತು ಕಟ್ಟಲೆಗಳನ್ನು ತಿಳಿದುಕೊಳ್ಳಬೇಕಾಗುತ್ತದೆ, ಮತ್ತು ಅವುಗಳಲ್ಲಿ ಒಂದು ನುಡಿಯನ್ನು ಬಳಸುವಾಗ ಆ ನುಡಿಗೆ ಸಂಬಂದಿಸಿದ ಪದಗಳು ಮತ್ತು ಕಟ್ಟಲೆಗಳು ಮಾತ್ರ ಬಳಕೆಯಾಗುವಂತೆ, ಮತ್ತು ಇನ್ನೊಂದು ನುಡಿಗೆ ಸಂಬಂದಿಸಿದ ಪದಗಳು ಮತ್ತು ಕಟ್ಟಲೆಗಳು ಬಳಕೆಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಹೀಗೆ ಮಾಡುವಲ್ಲಿ ಪಳಗಿರುವ ಮಕ್ಕಳು ತಾವು ಕಲಿತ ಈ ಚಳಕವನ್ನು ಬೇರೆ ಕೆಲಸಗಳಲ್ಲೂ ಬಳಸಬಲ್ಲರು.</p>
<p>ಎತ್ತುಗೆಗಾಗಿ, ಯಾವುದಾದರೊಂದು ತೊಡಕನ್ನು ಬಗೆಹರಿಸಬೇಕಾದಾಗ, ಈ ಮಕ್ಕಳು ಅದಕ್ಕೆ ಸಂಬಂದಿಸಿದ ವಿಶಯಗಳನ್ನು ಮಾತ್ರವೇ ಗಮನದಲ್ಲಿರಿಸಿಕೊಂಡು, ಅದಕ್ಕೆ ಸಂಬಂದಿಸದ ವಿಶಯಗಳನ್ನು ದೂರ ಇರಿಸಬಲ್ಲರು. ಹಾಗಾಗಿ, ತೊಡಕುಗಳನ್ನು ಬಗೆಹರಿಸುವಲ್ಲಿ ಅವರು ಒಂದು ನುಡಿಯಲ್ಲಿ ಮಾತ್ರವೇ ಪಳಗಿರುವ ಮಕ್ಕಳಿಗಿಂತ ಮುಂದಿರುತ್ತಾರೆ.</p>
<p>ಎರಡು ನುಡಿಗಳಲ್ಲಿ ಪಳಗಿರುವ ಮಕ್ಕಳು ಸಂದರ‍್ಬಕ್ಕನುಸಾರವಾಗಿ ಒಂದು ನುಡಿಯಿಂದ ಇನ್ನೊಂದು ನುಡಿಗೆ ನೆಗೆಯುತ್ತಿರಬಲ್ಲರು; ಒಂದು ಮಾತನ್ನು ಒಂದು ನುಡಿಯಲ್ಲಿ ಹೇಳಿ, ಒಡನೆಯೇ ಇನ್ನೊಂದು ಮಾತನ್ನು ಇನ್ನೊಂದು ನುಡಿಯಲ್ಲಿ ಹೇಳಬಲ್ಲರು; ಎಂದರೆ, ಒಂದು ನುಡಿಯ ಪದ ಮತ್ತು ಕಟ್ಟಲೆಗಳನ್ನು ಬಳಸುತ್ತಿರುವವರು ಒಡನೆಯೇ ಇನ್ನೊಂದು ನುಡಿಯ ಪದ ಮತ್ತು ಕಟ್ಟಲೆಗಳನ್ನು ಬಳಸಲು ತೊಡಗಬಲ್ಲರು. ಯಾವ ಸಂದರ‍್ಬದಲ್ಲಿ ಯಾವ ನುಡಿಯನ್ನು ಬಳಸಬೇಕು ಎಂಬುದೂ ಅವರಿಗೆ ತಿಳಿದಿರುತ್ತದೆ.</p>
<p>ಎರಡು ನುಡಿಗಳಲ್ಲಿ ಪಳಗುತ್ತಿರುವಾಗ ಪಡೆದ ಈ ಚಳಕವನ್ನೂ ಅವರು ಬೇರೆ ಕೆಲಸಗಳನ್ನು ನಡೆಸುವಲ್ಲಿ ಬಳಸಿಕೊಳ್ಳಬಲ್ಲರು. ಹಾಗಾಗಿ, ಒಂದು ನುಡಿಯನ್ನು ಮಾತ್ರವೇ ತಿಳಿದಿರುವ ಮಕ್ಕಳ ಮನಸ್ಸಿಗಿಂತ ಅವರ ಮನಸ್ಸು ಹೊಸ ಹೊಸ ಸಂದರ‍್ಬಗಳಿಗೆ ಹೊಂದಿಕೊಳ್ಳುವಂತಹ ಗುಣವನ್ನು ಹೆಚ್ಚು ಪಡೆದಿರುತ್ತದೆ, ಮತ್ತು ಈ ಕಾರಣಕ್ಕಾಗಿ ಅವರಿಗೆ ಹೆಚ್ಚು ತಾಳ್ಮೆಯಿರುತ್ತದೆ.</p>
<p>ಬೇರ‍್ಪಡಿಸುವುದು ಮತ್ತು ಒಂದೆಡೆ ಸೇರಿಸುವುದು ಎಂಬುದಾಗಿ ಎರಡು ಬಗೆಯ ಬಗೆತಗಳಿವೆ: ಒಂದು ವಸ್ತುವಿಗೆ ಎಶ್ಟೆಲ್ಲಾ ಬಳಕೆಗಳಿವೆ ಎಂಬುದನ್ನು ಕಂಡುಕೊಳ್ಳುವುದು ಬೇರ‍್ಪಡಿಸುವ ಬಗೆತ, ಮತ್ತು ಒಂದು ತೊಡಕಿಗೆ ಸಂಬಂದಿಸಿದ ಹಲವಾರು ವಿಶಯಗಳನ್ನು ಒಟ್ಟು ಸೇರಿಸಿ ಅದನ್ನು ಬಗೆಹರಿಸುವುದು ಹೇಗೆ ಎಂಬುದನ್ನು ಕಂಡುಕೊಳ್ಳುವುದು ಒಂದೆಡೆ ಸೇರಿಸುವ ಬಗೆತ. ಈ ಎರಡು ಬಗೆಯ ಬಗೆತಗಳನ್ನೂ ಎರಡು ನುಡಿಗಳನ್ನು ತಿಳಿದಿರುವ ಮಕ್ಕಳು ಒಂದೇ ನುಡಿಯನ್ನು ತಿಳಿದಿರುವ ಮಕ್ಕಳಿಗಿಂತ ಹೆಚ್ಚು ಚನ್ನಾಗಿ ನಡೆಸಬಲ್ಲರು.</p>
<p>ಒಂದೇ ನುಡಿಯನ್ನು ತಿಳಿದಿರುವ ಮಕ್ಕಳು ಓದುತ್ತಿರುವಾಗ, ಅವರ ಗಮನ ಪದಗಳ ಉಲಿಗಳ ಮೇಲಿರುತ್ತದೆ;  ಇದಕ್ಕೆ ಬದಲು, ಎರಡು ನುಡಿಗಳನ್ನು ಚನ್ನಾಗಿ ತಿಳಿದಿರುವ ಮಕ್ಕಳ ಗಮನ ಪದಗಳ ಹುರುಳಿನ ಮೇಲಿರುತ್ತದೆ. ಹಾಗಾಗಿ, ಈ ಮಕ್ಕಳು ಬರಹಗಳ ಹುರುಳನ್ನು ತಿಳಿದುಕೊಳ್ಳುವಲ್ಲಿ ಒಂದೇ ನುಡಿಯನ್ನು ತಿಳಿದಿರುವ ಮಕ್ಕಳಿಗಿಂತ ಎರಡು-ಮೂರು ತರಗತಿಗಳಶ್ಟು ಮುಂದಿರುತ್ತಾರೆ.</p>
<p>ಎರಡು ನುಡಿಗಳ ತಿಳಿವು ಮಕ್ಕಳ ಮುಂದೆ ಎರಡು ಸಂಸ್ಕ್ರುತಿಗಳನ್ನು ತೆರೆದಿಡುತ್ತದೆ; ಆ ಎರಡು ನುಡಿಗಳ ಬರಹಗಳನ್ನೂ ಓದಲು ಕಲಿತಲ್ಲಿ, ಎರಡು ಬಗೆಯ ಬರಹ ಸಂಸ್ಕ್ರುತಿಗಳೂ ಅವರದಾಗುತ್ತವೆ. ಈ ತಿಳಿವು ಮುಂದೆ ಜೀವನದುದ್ದಕ್ಕೂ ಅವರ ನೆರವಿಗೆ ಬರುತ್ತದೆ.</p>
<p>ತಮಗೆ ತಿಳಿದಿರುವ ನುಡಿಯಲ್ಲಿ ಮಕ್ಕಳು ಹೆಚ್ಚು ಸುಲಬವಾಗಿ ಓದಲು ಮತ್ತು ಬರೆಯಲು ಕಲಿಯಬಲ್ಲರು. ಹಾಗಾಗಿ, ಮಕ್ಕಳಿಗೆ ಮೊದಲು ಅವರಿಗೆ ತಿಳಿದಿರುವ ನುಡಿಯಲ್ಲಿ ಓದಲು ಮತ್ತು ಬರೆಯಲು ಕಲಿಸಿ, ಆಮೇಲೆ ಇಂಗ್ಲಿಶ್‌ನಲ್ಲಿ ಕಲಿಸುವುದೇ ಸರಿಯಾದ ದಾರಿ. ಯಾಕೆಂದರೆ, ಮೊದಲನೇ ನುಡಿಯಲ್ಲಿ ಓದಲು ಮತ್ತು ಬರೆಯಲು ಕಲಿಯುವಾಗ ಪಡೆದ ಚಳಕಗಳನ್ನು ಅವರು ಸುಲಬವಾಗಿ ತಮ್ಮ ಎರಡನೇ ನುಡಿಯ ಕಲಿಕೆಯಲ್ಲೂ ಬಳಸಿಕೊಳ್ಳಬಲ್ಲರು.</p>
<p>ಇಂಗ್ಲಿಶ್‌ನಲ್ಲಿರುವ ಸ್ಪೆಲ್ಲಿಂಗ್ ಸಮಸ್ಯೆಯಿಂದಾಗಿ, ಅದರ ಪದಗಳ ಬರವಣಿಗೆಯಲ್ಲಿ ಬರುವ ಬರಿಗೆಗಳಿಗೂ ಅವುಗಳ ಓದಿನಲ್ಲಿ ಬರುವ ಉಲಿಗಳಿಗೂ ನಡುವೆ ಸಂಬಂದವಿದೆಯೆಂಬುದು ಅದನ್ನು ಓದಲು ಕಲಿಯುವವರಲ್ಲಿ ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ. ಆದರೆ, ಇದನ್ನು ಗಮನಿಸಲು ಬಾರದಿರುವ ಮಕ್ಕಳಿಗೆ ಬರಹಗಳನ್ನು ಸಲೀಸಾಗಿ ಓದಲು ಬರುವುದಿಲ್ಲ.</p>
<p>ಕನ್ನಡ ಬರಹದಲ್ಲಿ ಬರಿಗೆಗಳಿಗೂ ಉಲಿಗಳಿಗೂ ನಡುವೆ ನೇರವಾದ ಸಂಬಂದವಿದೆ. ಸಂಸ್ಕ್ರುತದ ಎರವಲು ಪದಗಳು ಮಾತ್ರ ಇದಕ್ಕೆ ಹೊರಪಡಿಕೆಗಳಾಗಿವೆ. ಹಾಗಾಗಿ, ಮಕ್ಕಳಿಗೆ ಮೊದಲು ಕನ್ನಡದವೇ ಆದ ಪದಗಳು ಮಾತ್ರ ಇರುವ ಬರಹಗಳನ್ನು ಓದಲು ಕಲಿಸಿದಲ್ಲಿ, ಅವರು ಬಹಳ ಬೇಗನೆ ಅವನ್ನು ಸಲೀಸಾಗಿ ಓದುವುದು ಹೇಗೆಂಬುದನ್ನು ತಿಳಿದುಕೊಳ್ಳಬಲ್ಲರು.</p>
<p>ಅವರಿಗೆ ಇಂಗ್ಲಿಶ್ ಬರಹಗಳನ್ನು ಓದಲು ಆಮೇಲೆ ಕಲಿಸಿದಲ್ಲಿ, ಕನ್ನಡದ ಓದಿನಲ್ಲಿ ತಾವು ಪಡೆದ ಚಳಕವನ್ನು ಅವರು ಅಲ್ಲಿಯೂ ಬಳಸಿ ಹೆಚ್ಚು ಬೇಗನೆ ಅವನ್ನು ಸರಿಯಾಗಿ ಓದಲು ಕಲಿಯಬಲ್ಲರು.</p>
<p>ಬರೆಯುವ ಕೆಲಸವನ್ನೂ ಮಕ್ಕಳು ತಮಗೆ ಚನ್ನಾಗಿ ತಿಳಿದಿರುವ ಕನ್ನಡದಲ್ಲಿ ಹೆಚ್ಚು ಬೇಗನೆ ನಡೆಸಲು ಕಲಿಯಬಲ್ಲರು, ಮತ್ತು ಆಮೇಲೆ ಇಂಗ್ಲಿಶ್‌ನಲ್ಲಿ ಬರೆಯಬೇಕಾದಾಗ, ಆ ಚಳಕವನ್ನೇ ಅಲ್ಲಿಯೂ ಬಳಸಿಕೊಳ್ಳಬಲ್ಲರು.</p>
<p>ಇಂಗ್ಲಿಶ್ ನುಡಿಯ ಮೇಲಿರುವ ವ್ಯಾಮೋಹದಿಂದಾಗಿ, ಕನ್ನಡ ನುಡಿ ಕೊಡಬಲ್ಲ ಈ ಎಲ್ಲಾ ಪ್ರಯೋಜನಗಳನ್ನೂ ಮಕ್ಕಳು ಕಳೆದುಕೊಳ್ಳುವಂತೆ ಮಾಡುವುದು ಹೆಡ್ಡತನವಲ್ಲವೇ?</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25a8%25e0%25b2%25bf%25e0%25b2%25ae%25e0%25b3%258d%25e0%25b2%25ae-%25e0%25b2%25ae%25e0%25b2%2597%25e0%25b3%2581%25e0%25b2%25b5%25e0%25b2%25bf%25e0%25b2%2597%25e0%25b3%2586-%25e0%25b2%2587%25e0%25b2%2582%25e0%25b2%2597%25e0%25b3%258d%25e0%25b2%25b2%25e0%25b2%25bf%25e0%25b2%25b6%25e0%25b3%258d-%25e0%25b2%25a8%2F&#038;t=%E0%B2%A8%E0%B2%BF%E0%B2%AE%E0%B3%8D%E0%B2%AE%20%E0%B2%AE%E0%B2%97%E0%B3%81%E0%B2%B5%E0%B2%BF%E0%B2%97%E0%B3%86%20%E0%B2%87%E0%B2%82%E0%B2%97%E0%B3%8D%E0%B2%B2%E0%B2%BF%E0%B2%B6%E0%B3%8D%20%E0%B2%A8%E0%B3%81%E0%B2%A1%E0%B2%BF%20%E0%B2%AE%E0%B2%BE%E0%B2%A4%E0%B3%8D%E0%B2%B0%20%E0%B2%B8%E0%B2%BE%E0%B2%95%E0%B3%87%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25a8%25e0%25b2%25bf%25e0%25b2%25ae%25e0%25b3%258d%25e0%25b2%25ae-%25e0%25b2%25ae%25e0%25b2%2597%25e0%25b3%2581%25e0%25b2%25b5%25e0%25b2%25bf%25e0%25b2%2597%25e0%25b3%2586-%25e0%25b2%2587%25e0%25b2%2582%25e0%25b2%2597%25e0%25b3%258d%25e0%25b2%25b2%25e0%25b2%25bf%25e0%25b2%25b6%25e0%25b3%258d-%25e0%25b2%25a8%2F&#038;p&#091;images&#093;&#091;0&#093;=&#038;p&#091;title&#093;=%E0%B2%A8%E0%B2%BF%E0%B2%AE%E0%B3%8D%E0%B2%AE%20%E0%B2%AE%E0%B2%97%E0%B3%81%E0%B2%B5%E0%B2%BF%E0%B2%97%E0%B3%86%20%E0%B2%87%E0%B2%82%E0%B2%97%E0%B3%8D%E0%B2%B2%E0%B2%BF%E0%B2%B6%E0%B3%8D%20%E0%B2%A8%E0%B3%81%E0%B2%A1%E0%B2%BF%20%E0%B2%AE%E0%B2%BE%E0%B2%A4%E0%B3%8D%E0%B2%B0%20%E0%B2%B8%E0%B2%BE%E0%B2%95%E0%B3%87%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25a8%25e0%25b2%25bf%25e0%25b2%25ae%25e0%25b3%258d%25e0%25b2%25ae-%25e0%25b2%25ae%25e0%25b2%2597%25e0%25b3%2581%25e0%25b2%25b5%25e0%25b2%25bf%25e0%25b2%2597%25e0%25b3%2586-%25e0%25b2%2587%25e0%25b2%2582%25e0%25b2%2597%25e0%25b3%258d%25e0%25b2%25b2%25e0%25b2%25bf%25e0%25b2%25b6%25e0%25b3%258d-%25e0%25b2%25a8%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%a8%e0%b2%bf%e0%b2%ae%e0%b3%8d%e0%b2%ae-%e0%b2%ae%e0%b2%97%e0%b3%81%e0%b2%b5%e0%b2%bf%e0%b2%97%e0%b3%86-%e0%b2%87%e0%b2%82%e0%b2%97%e0%b3%8d%e0%b2%b2%e0%b2%bf%e0%b2%b6%e0%b3%8d-%e0%b2%a8/feed/</wfw:commentRss>
		<slash:comments>0</slash:comments>
		</item>
		<item>
		<title>ಪದಗಳನ್ನು ಓದುವ ಹಾಗೆಯೇ ಬರೆಯಬೇಕು</title>
		<link>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/?utm_source=rss&#038;utm_medium=rss&#038;utm_campaign=%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586</link>
		<comments>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/#comments</comments>
		<pubDate>Mon, 14 Apr 2014 16:36:48 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಆಂಡಯ್ಯ]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಎರವಲು ಪದಗಳು]]></category>
		<category><![CDATA[ಕಬ್ಬಿಗರ ಕಾವ]]></category>
		<category><![CDATA[ಕಲಿಕೆ]]></category>
		<category><![CDATA[ಕೀಳರಿಮೆ]]></category>
		<category><![CDATA[ಕೆಳವರ‍್ಗ]]></category>
		<category><![CDATA[ತದ್ಬವ]]></category>
		<category><![CDATA[ಬರಹ]]></category>
		<category><![CDATA[ಬರಹದ ಸಂಪ್ರದಾಯ]]></category>
		<category><![CDATA[ಬರಿಗೆ]]></category>
		<category><![CDATA[ಮಕ್ಕಳು]]></category>
		<category><![CDATA[ಮಹಾಪ್ರಾಣ]]></category>
		<category><![CDATA[ಮಹಾಪ್ರಾಣಾಕ್ಶರ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಹೊಸಗನ್ನಡ]]></category>

		<guid isPermaLink="false">http://dnshankarabhat.net/?p=66</guid>
		<description><![CDATA[ನುಡಿಯರಿಮೆಯ ಇಣುಕುನೋಟ – 3 ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ. ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 3</strong></p>
<p>ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ.</p>
<p>ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು ವಯ್ರಸ್ ಪದಗಳ ಮೊದಲ ಬರೆಗೆಗಳು ಇಂಗ್ಲಿಶ್‌ನಲ್ಲಿ ಬೇರಾಗಿವೆ, ಆದರೆ ಕನ್ನಡದಲ್ಲಿ ವ ಎಂಬ ಒಂದೇ ಬರಿಗೆಯನ್ನು ಬಳಸಲಾಗುತ್ತದೆ. ಅವೆರಡನ್ನೂ ಒಂದೇ ರೀತಿ ಓದುತ್ತಿರುವುದೇ ಇದಕ್ಕೆ ಕಾರಣ.</p>
<p>ಒಂದು ಬರಹದಲ್ಲಿ ಪದಗಳನ್ನು ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಬರೆಯಬೇಕಾಗಿದೆಯಾದರೆ, ಅದು ಅಂತಹ ಬರಹವನ್ನು ಕಲಿಯುವವರಿಗೆ ಮತ್ತು ಬಳಸುವವರಿಗೆ ಹಲವು ಬಗೆಯ ತೊಡಕುಗಳನ್ನು ತಂದೊಡ್ಡುತ್ತದೆ; ಕನ್ನಡ ಬರಹದ ಈ ಸಂಪ್ರದಾಯ ಮುಕ್ಯವಾಗಿ ಕೆಳಗೆ ಕೊಟ್ಟಿರುವಂತಹ ತೊಡಕುಗಳನ್ನು ಕೊಡುತ್ತಿದೆ:</p>
<p>(೧) ಓದಲು ಮತ್ತು ಬರೆಯಲು ಕಲಿಯಹೊರಡುವ ಮಕ್ಕಳು ಅನವಶ್ಯಕವಾಗಿ ಹದಿನೇಳು ಹೆಚ್ಚಿನ ಬರಿಗೆ(ಅಕ್ಶರ)ಗಳನ್ನು ಕಲಿಯಬೇಕಾಗುತ್ತದೆ.</p>
<p>(೨) ಸರಿಯಾಗಿ ಮತ್ತು ಸಲೀಸಾಗಿ ಓದಲು ಕಲಿಯಬೇಕಿದ್ದಲ್ಲಿ, ಪದಗಳನ್ನು ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ (ಎತ್ತುಗೆಗೆ, ಮನೆ ಎಂಬುದನ್ನು ಮ್, ಅ, ನ್ ಮತ್ತು ಎ ಎಂಬ ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ) ಎಂಬುದನ್ನು ಗಮನಿಸಬೇಕು, ಮತ್ತು ಈ ಉಲಿಗಳನ್ನು ಸೂಚಿಸುವುದಕ್ಕಾಗಿ ಬರಹದಲ್ಲಿ ಬರಿಗೆಗಳನ್ನು ಬಳಸಲಾಗುತ್ತದೆ ಎಂಬುದನ್ನೂ ಗಮನಿಸಬೇಕು. ಇವೆರಡನ್ನು ಗಮನಿಸಿದವರು ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗಲೂ ಅವನ್ನು ಸುಲಬವಾಗಿ ಓದಬಲ್ಲವರಾಗುತ್ತಾರೆ.</p>
<p>ಪದಗಳನ್ನು ಓದುವ ಹಾಗೆಯೇ ಬರೆದಿದೆಯಾದರೆ ಮಾತ್ರ, ಈ ರೀತಿ ಓದುವಾಗ ಬಳಸುವ ಉಲಿಗೂ ಬರಹದಲ್ಲಿ ಕಾಣಿಸುವ ಬರಿಗೆಗಳಿಗೂ ನಡುವೆ ಸಂಬಂದವಿದೆ ಎಂಬುದು ಓದಲು ಕಲಿಯುವವರ ಗಮನಕ್ಕೆ ಸುಲಬವಾಗಿ ಬರುತ್ತದೆ.</p>
<p>ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಪದಗಳನ್ನು ಬರೆದಿದೆಯಾದರೆ, ಅವುಗಳಲ್ಲಿ ಬರುವ ಬರಿಗೆಗಳಿಗೂ ಉಲಿಗಳಿಗೂ ನಡುವೆ ಇಂತಹದೊಂದು ಸಂಬಂದವಿದೆಯೆಂಬುದು ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ, ಮತ್ತು ಇದರಿಂದಾಗಿ ಎಶ್ಟು ಕಲಿತರೂ ಅವರಿಗೆ ಸಲೀಸಾಗಿ ಓದಲು ಬರುವುದೇ ಇಲ್ಲ. ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗ ಅವನ್ನು ಹೇಗೆ ಓದಬೇಕೆಂಬುದು ಅವರಿಗೆ ಗೊತ್ತಾಗುವುದೂ ಇಲ್ಲ.</p>
<p>(೩) ಓದುವ ಹಾಗೆ ಬರೆಯುವ ಪದಗಳನ್ನು ಬರಹಗಳಲ್ಲಿ ಬಳಸುವುದು ಸುಲಬ; ಬೇರೆ ಬಗೆಯಲ್ಲಿ ಬರೆಯುವ ಒಂದೊಂದು ಪದವನ್ನೂ ಅದನ್ನು ಬರೆಯುವುದು ಹೇಗೆ ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಮನೆ ಎಂಬ ಪದವನ್ನು ಓದುವ ಹಾಗೆಯೇ ಬರೆಯುವ ಕಾರಣ, ಅದನ್ನು ಹೇಗೆ ಬರೆಯುವುದೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿಲ್ಲ.<br />
ಆದರೆ, ವಿಶೇಷ ಎಂಬ ಪದವನ್ನು ಬರೆಯುವಾಗ ಎರಡನೆಯ ಮುಚ್ಚುಲಿಯನ್ನು ಶ್ ಎಂಬುದಾಗಿ, ಮತ್ತು ಮೂರನೆಯ ಮುಚ್ಚುಲಿಯನ್ನು ಷ್ ಎಂಬುದಾಗಿ ಬರೆಯಬೇಕೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಯಾಕೆಂದರೆ, ಅವೆರಡನ್ನೂ ಒಂದೇ ರೀತಿಯಲ್ಲಿ ಓದಲಾಗುತ್ತದೆ.ಇದನ್ನು ನೆನಪಿನಲ್ಲಿಟ್ಟುಕೊಳ್ಳಲಾರದವರು ಬರವಣಿಗೆಯಲ್ಲಿ ತಪ್ಪು ಮಾಡುತ್ತಾರೆ.</p>
<p>ಇವತ್ತು ದಿನಪತ್ರಿಕೆಗಳಲ್ಲಿ, ಕತೆ-ಕಾದಂಬರಿಗಳಲ್ಲಿ, ಮತ್ತು ಬೇರೆ ಬಗೆಯ ಬರಹಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸುವುದು ಓದುವ ಹಾಗೆ ಬರೆಯದಿರುವ ಮಹಾಪ್ರಾಣಾಕ್ಶರ, ಷಕಾರ, ಋಕಾರ ಮೊದಲಾದ ಬರಿಗೆಗಳಿರುವ ಸಂಸ್ಕ್ರುತ ಪದಗಳ ಬಳಕೆಯಲ್ಲಿ ಎಂಬುದನ್ನು ಗಮನಿಸಬಹುದು.</p>
<p>(೪) ಸಾಮಾನ್ಯವಾಗಿ ಜನರು ಪದಕೋಶಗಳನ್ನು ನೋಡಲು ಹೋಗುವುದು ಹೊಸದಾಗಿ ಅವರ ಓದಿನಲ್ಲಿ ಕಾಣಿಸಿಕೊಳ್ಳುವ ಪದಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಾಗಿ; ಆದರೆ, ಓದುವ ಹಾಗೆ ಬರೆಯದಿರುವ ವಿಶೇಷ, ಅಧಿಕಾರಿ ಮೊದಲಾದ ಪದಗಳನ್ನು ಅವುಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಿಂತಲೂ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯುವುದಕ್ಕಾಗಿ ಪದಕೋಶಗಳನ್ನು ನೋಡಬೇಕಾಗುತ್ತದೆ. ಓದುವ ಹಾಗೆಯೇ ಬರೆಯುವ ಯಾವ ಪದವನ್ನೂ ಈ ರೀತಿ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯಲು ಪದಕೋಶವನ್ನು ನೋಡಬೇಕಾಗುವುದಿಲ್ಲ.</p>
<p>(೫) ಕೆಳವರ‍್ಗದ ಮಕ್ಕಳಲ್ಲಿ ಇಂತಹ ಪದಗಳ ಕಲಿಕೆ ಕೀಳರಿಮೆಯನ್ನು ಉಂಟುಮಾಡುತ್ತದೆ; ಅವು ಕೊಡುವ ತೊಂದರೆಯಿಂದಾಗಿ ಕೆಲವರು ಬರಹದ ಕಲಿಕೆಯನ್ನು ನಡುವಿನಲ್ಲೇ ನಿಲ್ಲಿಸಿಬಿಡುತ್ತಾರೆ. ಓದಲು ಕಲಿತವರೂ ಅದನ್ನು ತುಂಬಾ ಅಪರೂಪವಾಗಿ ಮಾತ್ರ ಬಳಸುತ್ತಾರೆ. ಯಾಕೆಂದರೆ, ಅವರಿಗೆ ಸಲೀಸಾಗಿ ಓದುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.<br />
ಸಮಾಜಗಳಲ್ಲಿ ಹಲವಾರು ಬಗೆಯ ಸಂಪ್ರದಾಯಗಳು ಬೇರೆ ಬೇರೆ ಕಾರಣಗಳಿಗಾಗಿ ಬಳಕೆಗೆ ಬರುತ್ತವೆ, ಮತ್ತು ಅವುಗಳಿಂದ ಸಮಾಜಕ್ಕೆ ಪ್ರಯೋಜನಗಳೇನೂ ಇಲ್ಲದಿದ್ದರೂ, ಹೆಚ್ಚಿನ ತೊಂದರೆಯಿಲ್ಲವಾದಲ್ಲಿ ಅವು ಹಾಗೆಯೇ ವರ‍್ಶಗಟ್ಟಲೆ ಸಮಯ ಮುಂದುವರಿಯುತ್ತಿರುತ್ತವೆ.</p>
<p>ಸಂಸ್ಕ್ರುತದ ಎರವಲು ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬುದೂ ಇಂತಹದೇ ಒಂದು ಸಂಪ್ರದಾಯ. ಅದರಿಂದ ಕನ್ನಡ ಬರಹದ ಮಟ್ಟಿಗೆ ಯಾವ ಪ್ರಯೋಜನವೂ ಇಲ್ಲ. ಹಳೆಗನ್ನಡದ ಸಮಯದಲ್ಲಿ ಇಂತಹ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬಹುದಿತ್ತು, ಇಲ್ಲವೇ ಕನ್ನಡದ ಸೊಗಡನ್ನು ಕೆಡಿಸದಂತೆ ಅವನ್ನು ಮಾರ‍್ಪಡಿಸಿ ತದ್ಬವಗಳನ್ನಾಗಿ ಮಾಡಿಯೂ ಬಳಸಬಹುದಿತ್ತು. ಆಂಡಯ್ಯನ ಕಬ್ಬಿಗರ ಕಾವದಲ್ಲಿ ಅಂತಹ ತದ್ಬವ ಪದಗಳನ್ನು ಮಾತ್ರ ಬಳಸಲಾಗಿದೆ.</p>
<p>ಆದರೆ, ಇವತ್ತು ಹೊಸಗನ್ನಡದಲ್ಲಿ ಬರಹಗಾರರು ಈ ಆಯ್ಕೆಯನ್ನು ಕಳೆದುಕೊಂಡಿದ್ದಾರೆ. ಬಳಕೆಯಲ್ಲಿರುವ ಕೆಲವೇ ಕೆಲವು ತದ್ಬವ ಪದಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಂಸ್ಕ್ರುತ ಪದಗಳನ್ನೂ ಇವತ್ತು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕಾಗಿದೆ. ಅವುಗಳಲ್ಲಿ ಯಾವುದೇ ಬಗೆಯ ಮಾರ‍್ಪಾಡನ್ನು ನಡೆಸಿದರೂ ಅದನ್ನು ತಪ್ಪೆಂದು ತಿಳಿಯಲಾಗುತ್ತದೆ.<br />
ಮೊನ್ನೆ ಮೊನ್ನೆಯ ವರೆಗೂ ಈ ಸಂಪ್ರದಾಯ ಹೆಚ್ಚಿನ ತೊಂದರೆಯನ್ನೇನೂ ಕೊಡುತ್ತಿರಲಿಲ್ಲ. ಯಾಕೆಂದರೆ, ಸಮಾಜದಲ್ಲಿ ಮೇಲ್ವರ‍್ಗಕ್ಕೆ ಸೇರಿದ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಬಳಸಬೇಕಾಗಿತ್ತು, ಮತ್ತು ಅವರಲ್ಲಿ ಹೆಚ್ಚಿನವರೂ ಕನ್ನಡದೊಂದಿಗೆ ಸಂಸ್ಕ್ರುತವನ್ನೂ ಕಲಿಯುತ್ತಿದ್ದರು; ಹಾಗಾಗಿ, ಈ ಸಂಪ್ರದಾಯವನ್ನು ಮುಂದುವರಿಸಿಕೊಂಡುಹೋಗುವುದು ಅವರಿಗೆ ತೊಡಕಿನದಾಗಿರಲಿಲ್ಲ.</p>
<p>ಆದರೆ, ಇವತ್ತು ಎಲ್ಲಾ ವರ‍್ಗದ ಜನರು ಮತ್ತು ಎಲ್ಲರೂ ಬರಹವನ್ನು ಬಳಸಬೇಕಾಗಿದೆ. ಯಾಕೆಂದರೆ, ಇವತ್ತು ಸಮಾಜದಲ್ಲಿ ಬರಹಕ್ಕೆ ಅಂತಹದೊಂದು ಪ್ರಾಮುಕ್ಯತೆ ಬಂದಿದೆ. ಬರಹವನ್ನು ಬಳಸಲು ತಿಳಿಯದವರು ಮುಂದೆ ಬರಲು ಸಾದ್ಯವೇ ಇಲ್ಲ, ಮತ್ತು ಅಂತಹ ಹಲವು ಮಂದಿ ಜನರಿರುವ ಸಮಾಜ ಏಳಿಗೆಯಾಗಲೂ ಸಾದ್ಯವೇ ಇಲ್ಲ ಎಂಬ ಪರಿಸ್ತಿತಿ ಇವತ್ತಿನದಾಗಿದೆ.</p>
<p>ಈ ರೀತಿ ಕನ್ನಡ ಬರಹವನ್ನು ಬಳಸಲು ಕಲಿಯಲೇ ಬೇಕಾಗಿರುವ ಜನರಲ್ಲಿ ಹೆಚ್ಚಿನವರಿಗೂ ಸಂಸ್ಕ್ರುತದ ಅರಿವು ಬೇಕಾಗಿಲ್ಲ; ಅದಕ್ಕಿಂತಲೂ ಅವರಿಗೆ ಇಂಗ್ಲಿಶ್ ನುಡಿಯ ಅರಿವು ಹೆಚ್ಚಿನ ನೆರವು ನೀಡಬಲ್ಲುದು. ಹಾಗಾಗಿ, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬ ಮೇಲಿನ ಸಂಪ್ರದಾಯ ಒಂದು ಹೆಚ್ಚಿನ ತೊಡಕನ್ನು ಮಾತ್ರ ತಂದೊಡ್ಡುತ್ತದಲ್ಲದೆ, ಅದರಿಂದ ಅವರು ಪಡೆಯಬಹುದಾದ ಪ್ರಯೋಜನ ಯಾವುದೂ ಇಲ್ಲ.</p>
<p>ಈ ರೀತಿ ಕನ್ನಡದ ಮಟ್ಟಿಗೆ ಯಾವ ಪ್ರಯೋಜನವನ್ನೂ ನೀಡದ, ಹಲವು ಮಂದಿ ಕನ್ನಡಿಗರಿಗೆ ತೊಡಕನ್ನು ಮಾತ್ರವೇ ಕೊಡುವ, ಮತ್ತು ನಮ್ಮ ಸಮಾಜದ ಏಳಿಗೆಗೂ ತೊಡಕಾಗಿರುವ ಈ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಜಾಣತನ. ಇದು ಒಂದೂವರೆ-ಎರಡು ಸಾವಿರ ವರ‍್ಶದ ಹಿಂದಿನ ಸಮಾಜಕ್ಕಾಗಿ ಮಾಡಿಕೊಂಡಿದ್ದ ಸಂಪ್ರದಾಯ. ಇಂದಿನ ಸಮಾಜ ಆಗಿನದಕ್ಕಿಂತ ತೀರ ಬೇರೆಯಾಗಿದೆ. ಹೀಗಿರುವಾಗಲೂ ಆ ಹಳೆಯ ಸಂಪ್ರದಾಯವನ್ನು ತೊರೆಯಲು ಹಿಂಜರಿಯುವುದೆಂದರೆ, ಅಪ್ಪ ನೆಟ್ಟ ಆಲದ ಮರವೆಂದು ನೇಣು ಹಾಕಿಕೊಳ್ಳುವ ಹಾಗೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;t=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/feed/</wfw:commentRss>
		<slash:comments>0</slash:comments>
		</item>
	</channel>
</rss>
