<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ಕೀಳರಿಮೆ</title>
	<atom:link href="http://dnshankarabhat.net/tag/%e0%b2%95%e0%b3%80%e0%b2%b3%e0%b2%b0%e0%b2%bf%e0%b2%ae%e0%b3%86/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ತಮಿಳರ ದಾರಿ ಮತ್ತು ನಮ್ಮ ದಾರಿ</title>
		<link>http://dnshankarabhat.net/%e0%b2%a4%e0%b2%ae%e0%b2%bf%e0%b2%b3%e0%b2%b0-%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%a8%e0%b2%ae%e0%b3%8d%e0%b2%ae-%e0%b2%a6%e0%b2%be%e0%b2%b0/?utm_source=rss&#038;utm_medium=rss&#038;utm_campaign=%25e0%25b2%25a4%25e0%25b2%25ae%25e0%25b2%25bf%25e0%25b2%25b3%25e0%25b2%25b0-%25e0%25b2%25a6%25e0%25b2%25be%25e0%25b2%25b0%25e0%25b2%25bf-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%25a8%25e0%25b2%25ae%25e0%25b3%258d%25e0%25b2%25ae-%25e0%25b2%25a6%25e0%25b2%25be%25e0%25b2%25b0</link>
		<comments>http://dnshankarabhat.net/%e0%b2%a4%e0%b2%ae%e0%b2%bf%e0%b2%b3%e0%b2%b0-%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%a8%e0%b2%ae%e0%b3%8d%e0%b2%ae-%e0%b2%a6%e0%b2%be%e0%b2%b0/#comments</comments>
		<pubDate>Mon, 14 Apr 2014 16:41:24 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಆರ‍್ಯ]]></category>
		<category><![CDATA[ಇಂಗ್ಲಿಶ್]]></category>
		<category><![CDATA[ಕನ್ನಡ]]></category>
		<category><![CDATA[ಕವಿರಾಜಮಾರ‍್ಗ]]></category>
		<category><![CDATA[ಕವಿರಾಜಮಾರ‍್ಗಕಾರ]]></category>
		<category><![CDATA[ಕೀಳರಿಮೆ]]></category>
		<category><![CDATA[ಕೆಳವರ‍್ಗ]]></category>
		<category><![CDATA[ಚಳವಳಿ]]></category>
		<category><![CDATA[ತಮಿಳು]]></category>
		<category><![CDATA[ತಿಳಿವಿಗರು]]></category>
		<category><![CDATA[ದ್ರಾವಿಡ ಕಳಗಂ]]></category>
		<category><![CDATA[ಪದನೆರಕೆ]]></category>
		<category><![CDATA[ಬರಹ]]></category>
		<category><![CDATA[ಬರಿಗೆ]]></category>
		<category><![CDATA[ಬಿಎಂಶ್ರೀ]]></category>
		<category><![CDATA[ಬ್ರಾಹ್ಮಣ]]></category>
		<category><![CDATA[ಮಹಾಪ್ರಾಣ]]></category>
		<category><![CDATA[ವಿಜ್ನಾನ]]></category>
		<category><![CDATA[ಸಂಸ್ಕ್ರ್ರುತ]]></category>
		<category><![CDATA[ಹಳೆತಮಿಳು]]></category>
		<category><![CDATA[ಹೊಸತಮಿಳು]]></category>

		<guid isPermaLink="false">http://dnshankarabhat.net/?p=74</guid>
		<description><![CDATA[ನುಡಿಯರಿಮೆಯ ಇಣುಕುನೋಟ – 7 ಎಲ್ಲರೂ ಬಳಸಬೇಕಿರುವ ಕನ್ನಡ ಬರಹದಲ್ಲಿ ಮಹಾಪ್ರಾಣ, ಋಕಾರ, ಷಕಾರ ಮೊದಲಾದ ಕೆಲವು ಕನ್ನಡಕ್ಕೆ ಬೇಡದ ಬರಿಗೆಗಳನ್ನು ಬಿಟ್ಟುಕೊಡುವುದು ಒಳ್ಳೆಯದು ಎಂಬುದಾಗಿ, ಇಲ್ಲವೇ ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಒಂದು ಮಿತಿಯಲ್ಲಿ ಇರಿಸಿಕೊಳ್ಳುವುದು ಒಳ್ಳೆಯದು ಎಂಬುದಾಗಿ ಹೇಳಿದಾಗ, ಇದು ತಮಿಳಿನ ದ್ರಾವಿಡ ಕಳಗಂ ಹಿಡಿದ ದಾರಿ ಎಂಬ ಮರುನುಡಿ ಕೇಳಿಬರುತ್ತದೆ. ಆದರೆ, ಈ ಮರುನುಡಿ ಸರಿಯಲ್ಲ. ನಾವು ತಮಿಳರಿಂದಕಲಿಯಬಹುದಾದ ವಿಶಯಗಳೂ ಕೆಲವಿವೆ; ಆದರೆ ಹಾಗೆಂದು, ಎಲ್ಲಾ ವಿಶಯಗಳಲ್ಲೂ ಅವರನ್ನು ಕಣ್ಣುಮುಚ್ಚಿ ಹಿಂಬಾಲಿಸಬೇಕೆಂದೇನಿಲ್ಲ. ನಮಗೆ ಸರಿಯೆಂದು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 7</strong></p>
<p>ಎಲ್ಲರೂ ಬಳಸಬೇಕಿರುವ ಕನ್ನಡ ಬರಹದಲ್ಲಿ <strong>ಮಹಾಪ್ರಾಣ</strong>, ಋಕಾರ, ಷಕಾರ ಮೊದಲಾದ ಕೆಲವು ಕನ್ನಡಕ್ಕೆ ಬೇಡದ ಬರಿಗೆಗಳನ್ನು ಬಿಟ್ಟುಕೊಡುವುದು ಒಳ್ಳೆಯದು ಎಂಬುದಾಗಿ, ಇಲ್ಲವೇ ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಒಂದು ಮಿತಿಯಲ್ಲಿ ಇರಿಸಿಕೊಳ್ಳುವುದು ಒಳ್ಳೆಯದು ಎಂಬುದಾಗಿ ಹೇಳಿದಾಗ, ಇದು ತಮಿಳಿನ ದ್ರಾವಿಡ ಕಳಗಂ ಹಿಡಿದ ದಾರಿ ಎಂಬ ಮರುನುಡಿ ಕೇಳಿಬರುತ್ತದೆ.</p>
<p>ಆದರೆ, ಈ ಮರುನುಡಿ ಸರಿಯಲ್ಲ. ನಾವು<strong> ತಮಿಳರಿಂದ</strong>ಕಲಿಯಬಹುದಾದ ವಿಶಯಗಳೂ ಕೆಲವಿವೆ; ಆದರೆ ಹಾಗೆಂದು, ಎಲ್ಲಾ ವಿಶಯಗಳಲ್ಲೂ ಅವರನ್ನು ಕಣ್ಣುಮುಚ್ಚಿ ಹಿಂಬಾಲಿಸಬೇಕೆಂದೇನಿಲ್ಲ. ನಮಗೆ ಸರಿಯೆಂದು ಕಂಡುದನ್ನು ಅವರಿಂದ ಕಲಿಯೋಣ, ಮತ್ತು ಬೇರೆ ವಿಶಯಗಳಲ್ಲಿ ನಮ್ಮದೇ ಆದ ದಾರಿಯನ್ನೂ ಕಂಡುಕೊಳ್ಳೋಣ.</p>
<p>ತಮ್ಮ ನುಡಿಯ ಕುರಿತಾಗಿ ತಮಿಳರಿಗೆ ಎಲ್ಲೆಯಿಲ್ಲದ ಹೆಮ್ಮೆ ಮತ್ತು ಒಲುಮೆಗಳಿವೆ; ಆದರೆ, ಕನ್ನಡದ ತಿಳಿವಿಗರಿಗೆ ತಮ್ಮ ನುಡಿಯ ಕುರಿತು ಕೀಳರಿಮೆಯಿದೆ. ಎಂತಹ ಹೊಸ ಪದವನ್ನು ಬೇಕಿದ್ದರೂ ತಮ್ಮ ನುಡಿಯಲ್ಲಿ ಉಂಟುಮಾಡಲು ಬರುತ್ತದೆ ಎಂಬುದನ್ನು ತಮಿಳರು ಕಂಡುಕೊಂಡಿದ್ದಾರೆ, ಮತ್ತು ಅದನ್ನು ಬಳಕೆಗೂ ತಂದಿದ್ದಾರೆ; ಆದರೆ, ಕನ್ನಡದ ತಿಳಿವಿಗರು ಹೊಸ ಪದಗಳನ್ನುಂಟುಮಾಡಲು ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬುದಾಗಿ ಕಯ್ಚೆಲ್ಲಿ ಕುಳಿತಿದ್ದಾರೆ.</p>
<p>ತಮಿಳಿನ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ತೊಂಬತ್ತಯ್ದರಶ್ಟು ತಮಿಳು ಪದಗಳಿವೆ; ಆದರೆ, ಕನ್ನಡದ ಅರಿಮೆಯ ಪದನೆರಕೆಗಳಲ್ಲಿ ನೂರಕ್ಕೆ ಹತ್ತರಶ್ಟೂ ಕನ್ನಡದ ಪದಗಳಿಲ್ಲ! ಇಂತಹ ಕೆಲವು ವಿಶಯಗಳಲ್ಲಿ ನಾವು ತಮಿಳರನ್ನು ಹಿಂಬಾಲಿಸಿದಲ್ಲಿ, ಅದು ನಮ್ಮ ನುಡಿಯ ಮತ್ತು ಸಮಾಜದ ಏಳಿಗೆಗೆ ನೆರವಾಗಬಲ್ಲುದು.</p>
<p>ಆದರೆ, ಬೇರೆ ಕೆಲವು ವಿಶಯಗಳಲ್ಲಿ ಅವರು ಹಿಡಿದ ದಾರಿ ನಮಗೆ ಬೇಕಿಲ್ಲ. ದ್ರಾವಿಡ ಕಳಗಗಳು ನಡೆಸಿದ ಚಳವಳಿಯಿಂದಾಗಿ, ತಮಿಳು ಬರಹದಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳು ತುಂಬಾ ಕಡಿಮೆಯಾದುವೇನೋ ನಿಜ; ಆದರೆ, ಇದರಿಂದ ಬರಹದ ತಮಿಳಿಗೂ ತಮಿಳಿನ ಆಡುನುಡಿಗಳಿಗೂ ನಡುವಿದ್ದ ಅಂತರ ಕಡಿಮೆಯಾಗುವ ಬದಲು ಹೆಚ್ಚಾಗಿದೆ.</p>
<p>ಯಾಕೆಂದರೆ, ಬರಹದಿಂದ ತೆಗೆದು ಹಾಕಿದ ಸಂಸ್ಕ್ರುತ ಪದಗಳಿಗೆ ಬದಲಾಗಿ ಇವರು ಹಳೆತಮಿಳಿನ ಪದಗಳನ್ನೇ ಬಳಕೆಗೆ ತಂದಿದ್ದಾರೆ; ಇವು ಹೊಸತಮಿಳಿನ ಪದಗಳಿಗಿಂತ ಹಲವು ವಿಶಯಗಳಲ್ಲಿ ಬೇರಾಗಿವೆ. ಇದಲ್ಲದೆ, ಹೆಚ್ಚುಕಡಿಮೆ ಹದಿಮೂರನೇ ಶತಮಾನದ ತಮಿಳನ್ನೇ ಬರಹಗಳಲ್ಲಿ ಬಳಸಲು ತೊಡಗಿದ್ದಾರೆ. ಇದು ಕನ್ನಡ ಬರಹಗಳಲ್ಲಿ ಇವತ್ತು ಹೊಸಗನ್ನಡದ ಬದಲು ಹಳೆಗನ್ನಡವನ್ನು ಬಳಸಲು ಹೊರಡುವ ಹಾಗೆ ಎನ್ನಬಹುದು.</p>
<p>ಇಂತಹ ತಮಿಳರ ದಾರಿ ನಮಗೆ ಬೇಕಾಗಿಲ್ಲ. ಕನ್ನಡ ಬರಹದಲ್ಲಿ ಯಾವ ಮಾರ‍್ಪಾಡನ್ನು ಮಾಡುವುದಿದ್ದರೂ ಅದಕ್ಕೆ ಕನ್ನಡ ಬರಹಕ್ಕೂ ಕನ್ನಡದ ಆಡುನುಡಿಗಳಿಗೂ ನಡುವಿರುವ ವ್ಯತ್ಯಾಸವನ್ನು ಕಡಿಮೆಮಾಡುವುದೇ ಮುಕ್ಯ ಗುರಿಯಾಗಿರಬೇಕು. ಕನ್ನಡಕ್ಕೆ ಬೇಕಿಲ್ಲದ ಮಹಾಪ್ರಾಣ, ಋಕಾರ, ಷಕಾರಗಳನ್ನು ಬರಹದಲ್ಲಿ ಬಳಸದಿರುವುದು, ಮತ್ತು ಹೆಚ್ಚು ಹೆಚ್ಚು ಕನ್ನಡದವೇ ಆದ ಪದಗಳನ್ನು ಬಳಸುವುದು ಎಂಬ ಈ ಎರಡು ಮಾರ‍್ಪಾಡುಗಳಿಗೂ ಇದೇ ಮುಕ್ಯ ಗುರಿಯಾಗಿದೆ.</p>
<p>ಇನ್ನು ತಮಿಳು ಬರಹದಲ್ಲಿ ಮಹಾಪ್ರಾಣ, ಋಕಾರ, ಗಜಡದಬ ಮೊದಲಾದ ಕೆಲವು ಬರಿಗೆಗಳು ಬಳಕೆಯಾಗದಿರುವುದಕ್ಕೆ ದ್ರಾವಿಡ ಕಳಗಗಳು ಕಾರಣವಲ್ಲ. ಇತ್ತೀಚೆಗೆ ನಡೆಸಿದ ಯಾವ ಮಾರ‍್ಪಾಡೂ ಅದಕ್ಕೆ ಕಾರಣವಲ್ಲ. ಬ್ರಾಹ್ಮೀಲಿಪಿಯನ್ನು ತಮಿಳಿಗೆ ಅಳವಡಿಸುವ ಸಮಯದಲ್ಲೇನೇ, ಎಂದರೆ ಸುಮಾರು ಎರಡು ಸಾವಿರ ವರ‍್ಶಗಳಶ್ಟು ಹಿಂದೆಯೇ ತಮಿಳು ಬರಹದಲ್ಲಿ ಈ ಬರಿಗೆಗಳನ್ನು ಬಳಸದಿರಲು ತೀರ‍್ಮಾನಿಸಲಾಗಿತ್ತು.</p>
<p>ಆವತ್ತಿನ ತಮಿಳು ಓದಿಗೆ ಈ ಬರವಣಿಗೆ ಸರಿಯಾಗಿಯೂ ಇದ್ದಿರಬೇಕು; ಆದರೆ, ಆಮೇಲೆ ತಮಿಳು ನುಡಿಯಲ್ಲಿ ಹಲವಾರು ಮಾರ‍್ಪಾಡುಗಳು ನಡೆದಿದ್ದು, ಇದರಿಂದಾಗಿ ಇವತ್ತಿನ ಓದಿಗೂ ಬರಹಕ್ಕೂ ನಡುವೆ ಹಲವು ವ್ಯತ್ಯಾಸಗಳು ಮೂಡಿಬಂದಿವೆ. ಈ ವ್ಯತ್ಯಾಸಗಳನ್ನನುಸರಿಸಿ ತಮಿಳು ಬರಹದಲ್ಲಿ ಹೆಚ್ಚಿನ ಮಾರ‍್ಪಾಡನ್ನೇನೂ ನಡೆಸಿಲ್ಲವಾದ ಕಾರಣ, ಅದರ ಬಳಕೆಯಲ್ಲಿ ಇವತ್ತು ಕೆಲವು ತೊಡಕುಗಳು ಕಾಣಿಸಿಕೊಳ್ಳುತ್ತಿವೆ.</p>
<p>ಸಂಸ್ಕ್ರುತ ಕಾವ್ಯಗಳನ್ನು ಇಲ್ಲವೇ ಬೇರೆ ಸಂಸ್ಕ್ರುತ ಬರಹಗಳನ್ನು ಬರೆಯಲು ಬೇಕಾಗುವ ಹಲವು ಹೆಚ್ಚಿನ ಬರಿಗೆಗಳನ್ನು ತಮಿಳು ಬರಹದಲ್ಲೇನೇ ಉಳಿಸಿಕೊಳ್ಳುವ ಬದಲು, ಅವರು ಗ್ರಂತ ಲಿಪಿಯೆಂಬ ಬೇರೆಯೇ ಒಂದು ಬಗೆಯ ಬರಹವನ್ನು ಬಳಕೆಗೆ ತಂದಿದ್ದರು. ಹಾಗಾಗಿ, ಈ ಬರಿಗೆಗಳ ತೊಡಕು ಅವರ ಬರಹವನ್ನು ತಟ್ಟಿಲ್ಲ.</p>
<p>ಕನ್ನಡ ಬರಹ ಉತ್ತರದಿಂದ ವಲಸೆಬಂದ ಬ್ರಾಹ್ಮಣರ ಕೊಡುಗೆಯಾಗಿದೆ; ಈ ಬ್ರಾಹ್ಮಣರು ಆರ‍್ಯರಾಗಿದ್ದು, ಸಂಸ್ಕ್ರುತದ ಮೇಲೆ ಅವರಿಗೆ ಹೆಚ್ಚಿನ ಮಮತೆ ಮತ್ತು ಪೂಜ್ಯಬಾವವಿತ್ತು. ಹಾಗಾಗಿ, ಅವರು ಕನ್ನಡದ ಬರಹದಲ್ಲಿ ಸಂಸ್ಕ್ರುತ ಬರಹಕ್ಕೆ ಬೇಕಾಗುವ ಎಲ್ಲಾ ಬರಿಗೆಗಳನ್ನೂ, ಅವು ಕನ್ನಡಕ್ಕೆ ಬೇಡವಾಗಿದ್ದರೂ, ಉಳಿಸಿಕೊಂಡಿದ್ದರು, ಮತ್ತು ಕನ್ನಡಕ್ಕೆ ಬೇಕಾಗುವ ಎ, ಒ, ಱ, ೞದಂತಹ ಕೆಲವು ಹೆಚ್ಚಿನ ಬರಿಗೆಗಳನ್ನೂ ಹೊಸದಾಗಿ ಸೇರಿಸಿಕೊಂಡಿದ್ದರು.</p>
<p>ಮೊನ್ನೆ ಮೊನ್ನೆವರೆಗೂ ಕನ್ನಡ ಬರಹ ಮುಕ್ಯವಾಗಿ ಬ್ರಾಹ್ಮಣರ ಬಳಕೆಯಲ್ಲೇ ಉಳಿದುಕೊಂಡಿತ್ತು; ಕೆಳವರ‍್ಗದ ಜನರು ಅದರಿಂದ ದೂರವೇ ಉಳಿದಿದ್ದರು. ತುಂಬಾ ಸಂಸ್ಕ್ರುತ ಪದಗಳನ್ನು ಬಳಸುವ, ಮತ್ತು ಕನ್ನಡಕ್ಕೆ ಬೇಕಿಲ್ಲದ ಹಲವು ಬರಿಗೆಗಳನ್ನು ಬಳಸುವ ಈ ಬರಹವೂ ಅವರು ಈ ರೀತಿ ಅದರಿಂದ ದೂರ ಉಳಿಯಲು ಒಂದು ಕಾರಣವಾಗಿತ್ತು.</p>
<p>ಆದರೆ, ಇವತ್ತು ಬರಹಕ್ಕೆ ಕಳೆದ ಎರಡು ಸಾವಿರ ವರ‍್ಶಗಳಲ್ಲೂ ಇಲ್ಲದಿದ್ದಂತಹ ಮೇಲ್ಮೆ ದೊರೆತಿದೆ; ಇವತ್ತಿನ ಸಮಾಜದಲ್ಲಿ ಬರಹದ ಅರಿವಿಲ್ಲದವರು ಯಾರೂ ಮುಂದೆ ಬರಲು ಸಾದ್ಯವೇ ಇಲ್ಲ ಎಂಬಂತಹ ಪರಿಸ್ತಿತಿಯುಂಟಾಗಿದೆ; ಇದಲ್ಲದೆ, ಎಲ್ಲಾ ಜನರೂ ಬರಹಬಲ್ಲವರಾಗದೆ ಇವತ್ತು ಯಾವ ಸಮಾಜವೂ ಏಳಿಗೆಹೊಂದಲಾರದು. ಹಾಗಾಗಿ, ಕನ್ನಡಿಗರ, ಅವರ ಸಮಾಜದ, ಮತ್ತು ಅವರ ಬರಹದ ಏಳಿಗೆಗಾಗಿ, ಇವತ್ತು ಕನ್ನಡ ಬರಹ ಎಲ್ಲರನ್ನೂ ತಲಪುವಂತೆ ಮಾಡಬೇಕಾಗಿದೆ, ಮತ್ತು ಇದಕ್ಕಾಗಿ ಕನ್ನಡಕ್ಕೆ ಬೇಕಿಲ್ಲದ ಹಲವು ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡಬೇಕಾಗಿದೆ.</p>
<p>ಇಲ್ಲಿ ಇನ್ನೊಂದು ವಿಶಯವನ್ನೂ ಗಮನಿಸಬೇಕಾಗಿದೆ: ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳನ್ನು ಕಡಿಮೆಮಾಡಬೇಕು ಎಂದು ಹೇಳಿದರೆ, ದ್ರಾವಿಡ ಕಳಗಂನವರು ಹೇಳುತ್ತಿದ್ದ ಹಾಗೆ, ಸಂಸ್ಕ್ರುತ ಪದಗಳನ್ನು ಬರಹಗಳಲ್ಲಿ ಬಳಸಲೇ ಕೂಡದು ಎಂದು ಹೇಳಿದ ಹಾಗಾಗುವುದಿಲ್ಲ. ನಿಜಕ್ಕೂ ಹಾಗೆ ಹೇಳಲಾಗಿದೆಯಾದರೆ, ಸಂಸ್ಕ್ರುತ ಎರವಲುಗಳನ್ನು ಕನ್ನಡದಲ್ಲಿ ಬರೆಯುವಾಗ ಮಹಾಪ್ರಾಣ, ಋಕಾರ ಮೊದಲಾದವುಗಳನ್ನು ಬಳಸಬೇಕಾಗಿಲ್ಲ ಎಂಬ ಇನ್ನೊಂದು ಹೇಳಿಕೆ ಬೇಕಾಗುವುದೇ ಇಲ್ಲ!</p>
<p>ಕನ್ನಡ ಬರಹಗಳಲ್ಲಿ ಬಳಕೆಯಾಗುವ ಸಂಸ್ಕ್ರುತ ಎರವಲುಗಳ ಎಣಿಕೆ ಹೆಚ್ಚಾದಾಗಲೆಲ್ಲ, ಅದನ್ನು ಕಡಿಮೆ ಮಾಡಬೇಕೆಂಬುದಾಗಿ ಹಿಂದಿನಿಂದಲೂ ಕನ್ನಡದ ಬರಹಗಾರರು ಹೇಳುತ್ತಾ ಬಂದಿದ್ದಾರೆ. ಕವಿರಾಜಮಾರ‍್ಗಕಾರನಿಂದ ಹಿಡಿದು ಬಿಎಂಶ್ರೀಯವರ ವರೆಗೂ ಹಲವು ಮಂದಿ ಈ ವಿಶಯದಲ್ಲಿ ತಮ್ಮ ಬೇಸರವನ್ನು ಹೊರಗೆಡಹಿದ್ದಾರೆ.</p>
<p>ಇವತ್ತು ಅರಿಮೆಯ (ವಿಜ್ನಾನದ) ಬರಹಗಳಿಗೆ ಬೇಕಾಗುವ ಹೊಸ ಪದಗಳನ್ನೆಲ್ಲ ಸಂಸ್ಕ್ರುತದ ಪದ ಮತ್ತು ಒಟ್ಟುಗಳನ್ನು ಬಳಸಿ ಹೊಸದಾಗಿ ಉಂಟುಮಾಡಿಕೊಳ್ಳಲಾಗುತ್ತಿದೆ; ಕನ್ನಡದ ಪದ ಮತ್ತು ಒಟ್ಟುಗಳನ್ನು ತುಂಬಾ ಅಪರೂಪವಾಗಿ ಮಾತ್ರವೇ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ, ಅರಿಮೆಯ ಪದನೆರಕೆಗಳಲ್ಲಿ ಕನ್ನಡದವೇ ಆದ ಪದಗಳಿರುವುದು ತೀರಾ ಕಡಿಮೆ.</p>
<p>ಇಂತಹ ಪದನೆರಕೆಗಳನ್ನು ‘ಕನ್ನಡ’ದವೆಂದು ಹೇಳುವುದೇ ವಿಚಿತ್ರವಾಗಿ ಕಾಣಿಸುತ್ತದೆ. ನಿಜಕ್ಕೂ ಈ ರೀತಿ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಬದಲು, ಇಂಗ್ಲಿಶ್ ಪದಗಳನ್ನು ಹಾಗೆಯೇ ಎರವಲು ಪಡೆಯುವುದೇ ಕನ್ನಡಿಗರ ಮಟ್ಟಿಗೆ ಹೆಚ್ಚು ನೆರವಾಗಬಲ್ಲುದು; ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಲು ಅವರು ಇಂಗ್ಲಿಶ್ ಬರಹಗಳನ್ನು ಓದಬೇಕಾಗುತ್ತದೆಯಲ್ಲದೆ, ಸಂಸ್ಕ್ರುತದಲ್ಲಿ ಅವರಿಗೆ ಇವತ್ತಿನ ಅರಿಮೆಗಳ ಕುರಿತಾಗಿ ಎಂತಹ ಓದೂ ದೊರಕಲಾರದು.</p>
<p>ಆದರೆ, ಈ ವಿಶಯಗಳ ಕುರಿತಾಗಿ ಮಕ್ಕಳಿಗೆ ಅಡಿಕಲಿಕೆ ದೊರೆಯುವಂತೆ ಮಾಡಲು, ಮತ್ತು ಆಳವಾದ ತಿಳಿವು ದೊರೆಯುವಂತೆ ಮಾಡಲು, ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸುವ ಬದಲು ನಮ್ಮವೇ ಆದ ಕನ್ನಡ ಪದಗಳನ್ನು ಬಳಸುವುದೇ ಸರಿಯಾದ ದಾರಿ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25a4%25e0%25b2%25ae%25e0%25b2%25bf%25e0%25b2%25b3%25e0%25b2%25b0-%25e0%25b2%25a6%25e0%25b2%25be%25e0%25b2%25b0%25e0%25b2%25bf-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%25a8%25e0%25b2%25ae%25e0%25b3%258d%25e0%25b2%25ae-%25e0%25b2%25a6%25e0%25b2%25be%25e0%25b2%25b0%2F&#038;t=%E0%B2%A4%E0%B2%AE%E0%B2%BF%E0%B2%B3%E0%B2%B0%20%E0%B2%A6%E0%B2%BE%E0%B2%B0%E0%B2%BF%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%A8%E0%B2%AE%E0%B3%8D%E0%B2%AE%20%E0%B2%A6%E0%B2%BE%E0%B2%B0%E0%B2%BF&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25a4%25e0%25b2%25ae%25e0%25b2%25bf%25e0%25b2%25b3%25e0%25b2%25b0-%25e0%25b2%25a6%25e0%25b2%25be%25e0%25b2%25b0%25e0%25b2%25bf-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%25a8%25e0%25b2%25ae%25e0%25b3%258d%25e0%25b2%25ae-%25e0%25b2%25a6%25e0%25b2%25be%25e0%25b2%25b0%2F&#038;p&#091;images&#093;&#091;0&#093;=&#038;p&#091;title&#093;=%E0%B2%A4%E0%B2%AE%E0%B2%BF%E0%B2%B3%E0%B2%B0%20%E0%B2%A6%E0%B2%BE%E0%B2%B0%E0%B2%BF%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%A8%E0%B2%AE%E0%B3%8D%E0%B2%AE%20%E0%B2%A6%E0%B2%BE%E0%B2%B0%E0%B2%BF" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25a4%25e0%25b2%25ae%25e0%25b2%25bf%25e0%25b2%25b3%25e0%25b2%25b0-%25e0%25b2%25a6%25e0%25b2%25be%25e0%25b2%25b0%25e0%25b2%25bf-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%25a8%25e0%25b2%25ae%25e0%25b3%258d%25e0%25b2%25ae-%25e0%25b2%25a6%25e0%25b2%25be%25e0%25b2%25b0%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%a4%e0%b2%ae%e0%b2%bf%e0%b2%b3%e0%b2%b0-%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%a8%e0%b2%ae%e0%b3%8d%e0%b2%ae-%e0%b2%a6%e0%b2%be%e0%b2%b0/feed/</wfw:commentRss>
		<slash:comments>0</slash:comments>
		</item>
		<item>
		<title>ಪದಗಳನ್ನು ಓದುವ ಹಾಗೆಯೇ ಬರೆಯಬೇಕು</title>
		<link>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/?utm_source=rss&#038;utm_medium=rss&#038;utm_campaign=%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586</link>
		<comments>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/#comments</comments>
		<pubDate>Mon, 14 Apr 2014 16:36:48 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಆಂಡಯ್ಯ]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಎರವಲು ಪದಗಳು]]></category>
		<category><![CDATA[ಕಬ್ಬಿಗರ ಕಾವ]]></category>
		<category><![CDATA[ಕಲಿಕೆ]]></category>
		<category><![CDATA[ಕೀಳರಿಮೆ]]></category>
		<category><![CDATA[ಕೆಳವರ‍್ಗ]]></category>
		<category><![CDATA[ತದ್ಬವ]]></category>
		<category><![CDATA[ಬರಹ]]></category>
		<category><![CDATA[ಬರಹದ ಸಂಪ್ರದಾಯ]]></category>
		<category><![CDATA[ಬರಿಗೆ]]></category>
		<category><![CDATA[ಮಕ್ಕಳು]]></category>
		<category><![CDATA[ಮಹಾಪ್ರಾಣ]]></category>
		<category><![CDATA[ಮಹಾಪ್ರಾಣಾಕ್ಶರ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಹೊಸಗನ್ನಡ]]></category>

		<guid isPermaLink="false">http://dnshankarabhat.net/?p=66</guid>
		<description><![CDATA[ನುಡಿಯರಿಮೆಯ ಇಣುಕುನೋಟ – 3 ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ. ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 3</strong></p>
<p>ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ.</p>
<p>ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು ವಯ್ರಸ್ ಪದಗಳ ಮೊದಲ ಬರೆಗೆಗಳು ಇಂಗ್ಲಿಶ್‌ನಲ್ಲಿ ಬೇರಾಗಿವೆ, ಆದರೆ ಕನ್ನಡದಲ್ಲಿ ವ ಎಂಬ ಒಂದೇ ಬರಿಗೆಯನ್ನು ಬಳಸಲಾಗುತ್ತದೆ. ಅವೆರಡನ್ನೂ ಒಂದೇ ರೀತಿ ಓದುತ್ತಿರುವುದೇ ಇದಕ್ಕೆ ಕಾರಣ.</p>
<p>ಒಂದು ಬರಹದಲ್ಲಿ ಪದಗಳನ್ನು ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಬರೆಯಬೇಕಾಗಿದೆಯಾದರೆ, ಅದು ಅಂತಹ ಬರಹವನ್ನು ಕಲಿಯುವವರಿಗೆ ಮತ್ತು ಬಳಸುವವರಿಗೆ ಹಲವು ಬಗೆಯ ತೊಡಕುಗಳನ್ನು ತಂದೊಡ್ಡುತ್ತದೆ; ಕನ್ನಡ ಬರಹದ ಈ ಸಂಪ್ರದಾಯ ಮುಕ್ಯವಾಗಿ ಕೆಳಗೆ ಕೊಟ್ಟಿರುವಂತಹ ತೊಡಕುಗಳನ್ನು ಕೊಡುತ್ತಿದೆ:</p>
<p>(೧) ಓದಲು ಮತ್ತು ಬರೆಯಲು ಕಲಿಯಹೊರಡುವ ಮಕ್ಕಳು ಅನವಶ್ಯಕವಾಗಿ ಹದಿನೇಳು ಹೆಚ್ಚಿನ ಬರಿಗೆ(ಅಕ್ಶರ)ಗಳನ್ನು ಕಲಿಯಬೇಕಾಗುತ್ತದೆ.</p>
<p>(೨) ಸರಿಯಾಗಿ ಮತ್ತು ಸಲೀಸಾಗಿ ಓದಲು ಕಲಿಯಬೇಕಿದ್ದಲ್ಲಿ, ಪದಗಳನ್ನು ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ (ಎತ್ತುಗೆಗೆ, ಮನೆ ಎಂಬುದನ್ನು ಮ್, ಅ, ನ್ ಮತ್ತು ಎ ಎಂಬ ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ) ಎಂಬುದನ್ನು ಗಮನಿಸಬೇಕು, ಮತ್ತು ಈ ಉಲಿಗಳನ್ನು ಸೂಚಿಸುವುದಕ್ಕಾಗಿ ಬರಹದಲ್ಲಿ ಬರಿಗೆಗಳನ್ನು ಬಳಸಲಾಗುತ್ತದೆ ಎಂಬುದನ್ನೂ ಗಮನಿಸಬೇಕು. ಇವೆರಡನ್ನು ಗಮನಿಸಿದವರು ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗಲೂ ಅವನ್ನು ಸುಲಬವಾಗಿ ಓದಬಲ್ಲವರಾಗುತ್ತಾರೆ.</p>
<p>ಪದಗಳನ್ನು ಓದುವ ಹಾಗೆಯೇ ಬರೆದಿದೆಯಾದರೆ ಮಾತ್ರ, ಈ ರೀತಿ ಓದುವಾಗ ಬಳಸುವ ಉಲಿಗೂ ಬರಹದಲ್ಲಿ ಕಾಣಿಸುವ ಬರಿಗೆಗಳಿಗೂ ನಡುವೆ ಸಂಬಂದವಿದೆ ಎಂಬುದು ಓದಲು ಕಲಿಯುವವರ ಗಮನಕ್ಕೆ ಸುಲಬವಾಗಿ ಬರುತ್ತದೆ.</p>
<p>ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಪದಗಳನ್ನು ಬರೆದಿದೆಯಾದರೆ, ಅವುಗಳಲ್ಲಿ ಬರುವ ಬರಿಗೆಗಳಿಗೂ ಉಲಿಗಳಿಗೂ ನಡುವೆ ಇಂತಹದೊಂದು ಸಂಬಂದವಿದೆಯೆಂಬುದು ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ, ಮತ್ತು ಇದರಿಂದಾಗಿ ಎಶ್ಟು ಕಲಿತರೂ ಅವರಿಗೆ ಸಲೀಸಾಗಿ ಓದಲು ಬರುವುದೇ ಇಲ್ಲ. ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗ ಅವನ್ನು ಹೇಗೆ ಓದಬೇಕೆಂಬುದು ಅವರಿಗೆ ಗೊತ್ತಾಗುವುದೂ ಇಲ್ಲ.</p>
<p>(೩) ಓದುವ ಹಾಗೆ ಬರೆಯುವ ಪದಗಳನ್ನು ಬರಹಗಳಲ್ಲಿ ಬಳಸುವುದು ಸುಲಬ; ಬೇರೆ ಬಗೆಯಲ್ಲಿ ಬರೆಯುವ ಒಂದೊಂದು ಪದವನ್ನೂ ಅದನ್ನು ಬರೆಯುವುದು ಹೇಗೆ ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಮನೆ ಎಂಬ ಪದವನ್ನು ಓದುವ ಹಾಗೆಯೇ ಬರೆಯುವ ಕಾರಣ, ಅದನ್ನು ಹೇಗೆ ಬರೆಯುವುದೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿಲ್ಲ.<br />
ಆದರೆ, ವಿಶೇಷ ಎಂಬ ಪದವನ್ನು ಬರೆಯುವಾಗ ಎರಡನೆಯ ಮುಚ್ಚುಲಿಯನ್ನು ಶ್ ಎಂಬುದಾಗಿ, ಮತ್ತು ಮೂರನೆಯ ಮುಚ್ಚುಲಿಯನ್ನು ಷ್ ಎಂಬುದಾಗಿ ಬರೆಯಬೇಕೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಯಾಕೆಂದರೆ, ಅವೆರಡನ್ನೂ ಒಂದೇ ರೀತಿಯಲ್ಲಿ ಓದಲಾಗುತ್ತದೆ.ಇದನ್ನು ನೆನಪಿನಲ್ಲಿಟ್ಟುಕೊಳ್ಳಲಾರದವರು ಬರವಣಿಗೆಯಲ್ಲಿ ತಪ್ಪು ಮಾಡುತ್ತಾರೆ.</p>
<p>ಇವತ್ತು ದಿನಪತ್ರಿಕೆಗಳಲ್ಲಿ, ಕತೆ-ಕಾದಂಬರಿಗಳಲ್ಲಿ, ಮತ್ತು ಬೇರೆ ಬಗೆಯ ಬರಹಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸುವುದು ಓದುವ ಹಾಗೆ ಬರೆಯದಿರುವ ಮಹಾಪ್ರಾಣಾಕ್ಶರ, ಷಕಾರ, ಋಕಾರ ಮೊದಲಾದ ಬರಿಗೆಗಳಿರುವ ಸಂಸ್ಕ್ರುತ ಪದಗಳ ಬಳಕೆಯಲ್ಲಿ ಎಂಬುದನ್ನು ಗಮನಿಸಬಹುದು.</p>
<p>(೪) ಸಾಮಾನ್ಯವಾಗಿ ಜನರು ಪದಕೋಶಗಳನ್ನು ನೋಡಲು ಹೋಗುವುದು ಹೊಸದಾಗಿ ಅವರ ಓದಿನಲ್ಲಿ ಕಾಣಿಸಿಕೊಳ್ಳುವ ಪದಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಾಗಿ; ಆದರೆ, ಓದುವ ಹಾಗೆ ಬರೆಯದಿರುವ ವಿಶೇಷ, ಅಧಿಕಾರಿ ಮೊದಲಾದ ಪದಗಳನ್ನು ಅವುಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಿಂತಲೂ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯುವುದಕ್ಕಾಗಿ ಪದಕೋಶಗಳನ್ನು ನೋಡಬೇಕಾಗುತ್ತದೆ. ಓದುವ ಹಾಗೆಯೇ ಬರೆಯುವ ಯಾವ ಪದವನ್ನೂ ಈ ರೀತಿ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯಲು ಪದಕೋಶವನ್ನು ನೋಡಬೇಕಾಗುವುದಿಲ್ಲ.</p>
<p>(೫) ಕೆಳವರ‍್ಗದ ಮಕ್ಕಳಲ್ಲಿ ಇಂತಹ ಪದಗಳ ಕಲಿಕೆ ಕೀಳರಿಮೆಯನ್ನು ಉಂಟುಮಾಡುತ್ತದೆ; ಅವು ಕೊಡುವ ತೊಂದರೆಯಿಂದಾಗಿ ಕೆಲವರು ಬರಹದ ಕಲಿಕೆಯನ್ನು ನಡುವಿನಲ್ಲೇ ನಿಲ್ಲಿಸಿಬಿಡುತ್ತಾರೆ. ಓದಲು ಕಲಿತವರೂ ಅದನ್ನು ತುಂಬಾ ಅಪರೂಪವಾಗಿ ಮಾತ್ರ ಬಳಸುತ್ತಾರೆ. ಯಾಕೆಂದರೆ, ಅವರಿಗೆ ಸಲೀಸಾಗಿ ಓದುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.<br />
ಸಮಾಜಗಳಲ್ಲಿ ಹಲವಾರು ಬಗೆಯ ಸಂಪ್ರದಾಯಗಳು ಬೇರೆ ಬೇರೆ ಕಾರಣಗಳಿಗಾಗಿ ಬಳಕೆಗೆ ಬರುತ್ತವೆ, ಮತ್ತು ಅವುಗಳಿಂದ ಸಮಾಜಕ್ಕೆ ಪ್ರಯೋಜನಗಳೇನೂ ಇಲ್ಲದಿದ್ದರೂ, ಹೆಚ್ಚಿನ ತೊಂದರೆಯಿಲ್ಲವಾದಲ್ಲಿ ಅವು ಹಾಗೆಯೇ ವರ‍್ಶಗಟ್ಟಲೆ ಸಮಯ ಮುಂದುವರಿಯುತ್ತಿರುತ್ತವೆ.</p>
<p>ಸಂಸ್ಕ್ರುತದ ಎರವಲು ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬುದೂ ಇಂತಹದೇ ಒಂದು ಸಂಪ್ರದಾಯ. ಅದರಿಂದ ಕನ್ನಡ ಬರಹದ ಮಟ್ಟಿಗೆ ಯಾವ ಪ್ರಯೋಜನವೂ ಇಲ್ಲ. ಹಳೆಗನ್ನಡದ ಸಮಯದಲ್ಲಿ ಇಂತಹ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬಹುದಿತ್ತು, ಇಲ್ಲವೇ ಕನ್ನಡದ ಸೊಗಡನ್ನು ಕೆಡಿಸದಂತೆ ಅವನ್ನು ಮಾರ‍್ಪಡಿಸಿ ತದ್ಬವಗಳನ್ನಾಗಿ ಮಾಡಿಯೂ ಬಳಸಬಹುದಿತ್ತು. ಆಂಡಯ್ಯನ ಕಬ್ಬಿಗರ ಕಾವದಲ್ಲಿ ಅಂತಹ ತದ್ಬವ ಪದಗಳನ್ನು ಮಾತ್ರ ಬಳಸಲಾಗಿದೆ.</p>
<p>ಆದರೆ, ಇವತ್ತು ಹೊಸಗನ್ನಡದಲ್ಲಿ ಬರಹಗಾರರು ಈ ಆಯ್ಕೆಯನ್ನು ಕಳೆದುಕೊಂಡಿದ್ದಾರೆ. ಬಳಕೆಯಲ್ಲಿರುವ ಕೆಲವೇ ಕೆಲವು ತದ್ಬವ ಪದಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಂಸ್ಕ್ರುತ ಪದಗಳನ್ನೂ ಇವತ್ತು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕಾಗಿದೆ. ಅವುಗಳಲ್ಲಿ ಯಾವುದೇ ಬಗೆಯ ಮಾರ‍್ಪಾಡನ್ನು ನಡೆಸಿದರೂ ಅದನ್ನು ತಪ್ಪೆಂದು ತಿಳಿಯಲಾಗುತ್ತದೆ.<br />
ಮೊನ್ನೆ ಮೊನ್ನೆಯ ವರೆಗೂ ಈ ಸಂಪ್ರದಾಯ ಹೆಚ್ಚಿನ ತೊಂದರೆಯನ್ನೇನೂ ಕೊಡುತ್ತಿರಲಿಲ್ಲ. ಯಾಕೆಂದರೆ, ಸಮಾಜದಲ್ಲಿ ಮೇಲ್ವರ‍್ಗಕ್ಕೆ ಸೇರಿದ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಬಳಸಬೇಕಾಗಿತ್ತು, ಮತ್ತು ಅವರಲ್ಲಿ ಹೆಚ್ಚಿನವರೂ ಕನ್ನಡದೊಂದಿಗೆ ಸಂಸ್ಕ್ರುತವನ್ನೂ ಕಲಿಯುತ್ತಿದ್ದರು; ಹಾಗಾಗಿ, ಈ ಸಂಪ್ರದಾಯವನ್ನು ಮುಂದುವರಿಸಿಕೊಂಡುಹೋಗುವುದು ಅವರಿಗೆ ತೊಡಕಿನದಾಗಿರಲಿಲ್ಲ.</p>
<p>ಆದರೆ, ಇವತ್ತು ಎಲ್ಲಾ ವರ‍್ಗದ ಜನರು ಮತ್ತು ಎಲ್ಲರೂ ಬರಹವನ್ನು ಬಳಸಬೇಕಾಗಿದೆ. ಯಾಕೆಂದರೆ, ಇವತ್ತು ಸಮಾಜದಲ್ಲಿ ಬರಹಕ್ಕೆ ಅಂತಹದೊಂದು ಪ್ರಾಮುಕ್ಯತೆ ಬಂದಿದೆ. ಬರಹವನ್ನು ಬಳಸಲು ತಿಳಿಯದವರು ಮುಂದೆ ಬರಲು ಸಾದ್ಯವೇ ಇಲ್ಲ, ಮತ್ತು ಅಂತಹ ಹಲವು ಮಂದಿ ಜನರಿರುವ ಸಮಾಜ ಏಳಿಗೆಯಾಗಲೂ ಸಾದ್ಯವೇ ಇಲ್ಲ ಎಂಬ ಪರಿಸ್ತಿತಿ ಇವತ್ತಿನದಾಗಿದೆ.</p>
<p>ಈ ರೀತಿ ಕನ್ನಡ ಬರಹವನ್ನು ಬಳಸಲು ಕಲಿಯಲೇ ಬೇಕಾಗಿರುವ ಜನರಲ್ಲಿ ಹೆಚ್ಚಿನವರಿಗೂ ಸಂಸ್ಕ್ರುತದ ಅರಿವು ಬೇಕಾಗಿಲ್ಲ; ಅದಕ್ಕಿಂತಲೂ ಅವರಿಗೆ ಇಂಗ್ಲಿಶ್ ನುಡಿಯ ಅರಿವು ಹೆಚ್ಚಿನ ನೆರವು ನೀಡಬಲ್ಲುದು. ಹಾಗಾಗಿ, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬ ಮೇಲಿನ ಸಂಪ್ರದಾಯ ಒಂದು ಹೆಚ್ಚಿನ ತೊಡಕನ್ನು ಮಾತ್ರ ತಂದೊಡ್ಡುತ್ತದಲ್ಲದೆ, ಅದರಿಂದ ಅವರು ಪಡೆಯಬಹುದಾದ ಪ್ರಯೋಜನ ಯಾವುದೂ ಇಲ್ಲ.</p>
<p>ಈ ರೀತಿ ಕನ್ನಡದ ಮಟ್ಟಿಗೆ ಯಾವ ಪ್ರಯೋಜನವನ್ನೂ ನೀಡದ, ಹಲವು ಮಂದಿ ಕನ್ನಡಿಗರಿಗೆ ತೊಡಕನ್ನು ಮಾತ್ರವೇ ಕೊಡುವ, ಮತ್ತು ನಮ್ಮ ಸಮಾಜದ ಏಳಿಗೆಗೂ ತೊಡಕಾಗಿರುವ ಈ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಜಾಣತನ. ಇದು ಒಂದೂವರೆ-ಎರಡು ಸಾವಿರ ವರ‍್ಶದ ಹಿಂದಿನ ಸಮಾಜಕ್ಕಾಗಿ ಮಾಡಿಕೊಂಡಿದ್ದ ಸಂಪ್ರದಾಯ. ಇಂದಿನ ಸಮಾಜ ಆಗಿನದಕ್ಕಿಂತ ತೀರ ಬೇರೆಯಾಗಿದೆ. ಹೀಗಿರುವಾಗಲೂ ಆ ಹಳೆಯ ಸಂಪ್ರದಾಯವನ್ನು ತೊರೆಯಲು ಹಿಂಜರಿಯುವುದೆಂದರೆ, ಅಪ್ಪ ನೆಟ್ಟ ಆಲದ ಮರವೆಂದು ನೇಣು ಹಾಕಿಕೊಳ್ಳುವ ಹಾಗೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;t=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/feed/</wfw:commentRss>
		<slash:comments>0</slash:comments>
		</item>
		<item>
		<title>ಮನೆಯ ಹೊರಗಡೆ ಅಡಿಗೆಮನೆ ಪಾಕಶಾಲೆಯಾಗಬೇಕೇ?</title>
		<link>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/?utm_source=rss&#038;utm_medium=rss&#038;utm_campaign=%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595</link>
		<comments>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/#comments</comments>
		<pubDate>Mon, 14 Apr 2014 16:35:24 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಅಳವು]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಎರವಲು ಪದಗಳು]]></category>
		<category><![CDATA[ಒಟ್ಟು]]></category>
		<category><![CDATA[ಕನ್ನಡ ಪದಗಳು]]></category>
		<category><![CDATA[ಕೀಳರಿಮೆ]]></category>
		<category><![CDATA[ಪದಗಳ ಸೊಗಡು]]></category>
		<category><![CDATA[ಪಾರಿಬಾಶಿಕ]]></category>
		<category><![CDATA[ಪ್ರತ್ಯಯ]]></category>
		<category><![CDATA[ಬರವಣಿಗೆ]]></category>
		<category><![CDATA[ಬರಹ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಸಂಸ್ಕ್ರುತ ಪದಗಳು]]></category>
		<category><![CDATA[ಸ್ವತಂತ್ರವಾದ ನುಡಿ]]></category>

		<guid isPermaLink="false">http://dnshankarabhat.net/?p=64</guid>
		<description><![CDATA[ನುಡಿಯರಿಮೆಯ ಇಣುಕುನೋಟ – 2 ಕನ್ನಡಿಗರ ಪದಬಳಕೆಯ ವಿಶಯದಲ್ಲಿ ಒಂದು ಸೋಜಿಗದ ಸಂಗತಿಯಿದೆ. ಅದೇನೆಂದು ತಿಳಿಯಲು ಕೆಲವು ಎತ್ತುಗೆಗಳನ್ನು ತೆಗೆದುಕೊಳ್ಳೋಣ: ಮನೆಯಲ್ಲಿ ಅಡಿಗೆಮನೆ, ಊಟದಕೋಣೆ ಎನ್ನುವ ನಾವು ಸಮ್ಮೇಳನಗಳಂತಹ ಸಂದರ‍್ಬಗಳಲ್ಲಿ ಅವುಗಳ ಬದಲಾಗಿ ಪಾಕಶಾಲೆ, ಬೋಜನಶಾಲೆ ಎನ್ನುತ್ತೇವೆ. ಬಟ್ಟೆಯಂಗಡಿಗೆ ಹೋಗುತ್ತೇನೆ ಎನ್ನುತ್ತೇವೆ; ಆದರೆ, ಅಂತಹ ಅಂಗಡಿಗಳಿಗೆ ಹೆಸರು ಕೊಡಬೇಕಾದಾಗ, ವಸ್ತ್ರಾಲಯ ಇಲ್ಲವೇ ವಸ್ತ್ರಬಂಡಾರ ಎಂಬ ಹೆಸರುಗಳಶ್ಟೇ ಹೊಳೆಯುತ್ತವೆ. ತಿಂಡಿಗಳನ್ನು ಮಾರುವ ಅಂಗಡಿ ತಿಂಡಿಮನೆಯಾಗಿಬಿಟ್ಟರೆ ಅದೇನೋ ಮುಜುಗರ, ಉಪಹಾರಗ್ರುಹವೇ ಆಗಬೇಕು. ನಾಯಿಯ ಕುರಿತು ಬರೆದ ಬರಹದಲ್ಲಿ ಉದ್ದಕ್ಕೂ ನಾಯಿ ಎಂಬ ಪದವೇ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 2</strong></p>
<p>ಕನ್ನಡಿಗರ <strong>ಪದಬಳಕೆಯ</strong> ವಿಶಯದಲ್ಲಿ ಒಂದು ಸೋಜಿಗದ ಸಂಗತಿಯಿದೆ. ಅದೇನೆಂದು ತಿಳಿಯಲು ಕೆಲವು ಎತ್ತುಗೆಗಳನ್ನು ತೆಗೆದುಕೊಳ್ಳೋಣ:</p>
<p>ಮನೆಯಲ್ಲಿ ಅಡಿಗೆಮನೆ, ಊಟದಕೋಣೆ ಎನ್ನುವ ನಾವು ಸಮ್ಮೇಳನಗಳಂತಹ ಸಂದರ‍್ಬಗಳಲ್ಲಿ ಅವುಗಳ ಬದಲಾಗಿ ಪಾಕಶಾಲೆ, ಬೋಜನಶಾಲೆ ಎನ್ನುತ್ತೇವೆ. ಬಟ್ಟೆಯಂಗಡಿಗೆ ಹೋಗುತ್ತೇನೆ ಎನ್ನುತ್ತೇವೆ; ಆದರೆ, ಅಂತಹ ಅಂಗಡಿಗಳಿಗೆ ಹೆಸರು ಕೊಡಬೇಕಾದಾಗ, ವಸ್ತ್ರಾಲಯ ಇಲ್ಲವೇ ವಸ್ತ್ರಬಂಡಾರ ಎಂಬ ಹೆಸರುಗಳಶ್ಟೇ ಹೊಳೆಯುತ್ತವೆ. ತಿಂಡಿಗಳನ್ನು ಮಾರುವ ಅಂಗಡಿ ತಿಂಡಿಮನೆಯಾಗಿಬಿಟ್ಟರೆ ಅದೇನೋ ಮುಜುಗರ, ಉಪಹಾರಗ್ರುಹವೇ ಆಗಬೇಕು.</p>
<p>ನಾಯಿಯ ಕುರಿತು ಬರೆದ ಬರಹದಲ್ಲಿ ಉದ್ದಕ್ಕೂ ನಾಯಿ ಎಂಬ ಪದವೇ ಬಳಕೆಯಾಗಿದೆಯಾದರೂ, ತಲೆಬರಹದಲ್ಲಿ ಮಾತ್ರ ಶ್ವಾನವಿದ್ದರಶ್ಟೇ ನೆಮ್ಮದಿ. ಮದುವೆಯ ಕರೆಯೋಲೆ ಕಳುಹಿಸುವ ಬದಲು ವಿವಾಹ ಆಮಂತ್ರಣ ಕಳಿಸಿದರೆ ಮಾತ್ರ ಮದುವೆಗೆ ಬರುತ್ತಾರೇನೋ ಎಂಬ ಅನಿಸಿಕೆ ನಮ್ಮಲ್ಲಿ ಹಲವರಲ್ಲಿದ್ದಂತಿದೆ.</p>
<p>ಹಾಗೆಯೇ, ಪುಸ್ತಕಗಳಿಗೆ ಹೆಸರು ಕೊಡುವಲ್ಲೂ ಬಳಕೆಯಲ್ಲಿರುವ ಪದಗಳಿಗಿಂತ ಬಳಕೆಯಲ್ಲಿಲ್ಲದ ಮತ್ತು ಹೆಚ್ಚು ಮಂದಿಗೆ ತಿಳಿಯದ ಪದಗಳೇ ಚಂದವೆಂದು ಹಲವು ಬರಹಗಾರರಿಗೆ ಅನಿಸುತ್ತದೆ. ಮನೆಗಳಿಗೆ, ಅಂಗಡಿಗಳಿಗೆ, ಕೂಟಗಳಿಗೆ, ಇಲ್ಲವೇ ಹಲವು ಬಗೆಯ ಹಮ್ಮುಗೆಗಳಿಗೆ ಹೆಸರು ಕೊಡಬೇಕಾಗಿರುವಲ್ಲೂ ನಮ್ಮ ಒಡಲಿನಿಂದ ನೇರವಾಗಿ ಬರುವ ಪದಗಳು ತಕ್ಕವೆಂದು ತೋರುವುದೇ ಇಲ್ಲ; ದೂರದರ‍್ಶನ, ದಿನಪತ್ರಿಕೆ, ಉಚ್ಚಶಿಕ್ಶಣ, ನಿರುದ್ಯೋಗ ಸಮಸ್ಯೆ, ಜನಗಣನೆ, ಲೋಕಾಯುಕ್ತ, ಪಟ್ಯಪುಸ್ತಕ ಮೊದಲಾದ ಹಲವು ಬಗೆಯ ಪದಗಳನ್ನು ಉಂಟುಮಾಡುವಲ್ಲಿ ಕೂಡ ಇದೇ ಸೋಜಿಗವನ್ನು ಕಾಣಬಹುದು.</p>
<p>ಇಂತಹ ಹಲವಾರು ‘ಮೇಲ್ಮಟ್ಟದ’ ಸನ್ನಿವೇಶಗಳಲ್ಲಿ ನಮ್ಮ ನಾಲಿಗೆಗಳಿಗೆ ತಂತಾನೇ ಬರುವ ಪದಗಳು – ಎಂದರೆ ಕನ್ನಡದವೇ ಆದ ಪದಗಳು – ಬಳಕೆಗೆ ತಕ್ಕವಲ್ಲ, ಮೇಲೆ ಕಾಣಿಸಿದಂತೆ ಸಂಸ್ಕ್ರುತದಿಂದ ಎರವಲು ಪಡೆದ ಪದಗಳೇ ತಕ್ಕವು ಎಂಬ ಕೀಳರಿಮೆ ನಮ್ಮಲ್ಲಿ ಹೆಚ್ಚಿನವರಲ್ಲಿದೆ. ಇದೊಂದು ಸೋಜಿಗವಲ್ಲದೆ ಮತ್ತೇನು?</p>
<p>ಹಿಂದಿನ ಕಾಲದಲ್ಲಿ ಕನ್ನಡ ನುಡಿ <strong>ಸಂಸ್ಕ್ರುತದ</strong> ಕಳೆಗೆಟ್ಟ ರೂಪ ಎಂಬ ಅನಿಸಿಕೆ ಹಲವು ಕನ್ನಡ ಪಂಡಿತರಲ್ಲಿತ್ತು; ಕನ್ನಡ ಪದಗಳಿಗಿಂತ ಸಂಸ್ಕ್ರುತ ಪದಗಳು ಮೇಲ್ಮಟ್ಟದವು ಎಂಬುದಾಗಿ ಅವರು ತಿಳಿಯುತ್ತಿದ್ದುದಕ್ಕೆ ಈ ತಪ್ಪು ಅನಿಸಿಕೆ ಕಾರಣವಾಗಿತ್ತು; ಆದರೆ, ನಿಜಕ್ಕೂ ಕನ್ನಡ ಸಂಸ್ಕ್ರುತದ ಕಳೆಗೆಟ್ಟ ರೂಪ ಅಲ್ಲ, ಅದಕ್ಕಿಂತ ತೀರ ಬೇರಾಗಿರುವ ಒಂದು ಸ್ವತಂತ್ರವಾದ ನುಡಿ ಎಂಬುದನ್ನು ಇವತ್ತು ನಾವು ಕಂಡುಕೊಂಡಿದ್ದೇವೆ. ಹಾಗಾಗಿ, ಇವತ್ತಿಗೂ ಸಂಸ್ಕ್ರುತ ಪದಗಳು ಕನ್ನಡ ಪದಗಳಿಂದ ಮೇಲ್ಮಟ್ಟದವು ಎಂದು ಬಾವಿಸುವುದಕ್ಕೆ ಯಾವ ಆದಾರವೂ ಇಲ್ಲ.</p>
<p>ಈ ರೀತಿ ಹೊಸಪದಗಳನ್ನು ಉಂಟುಮಾಡಬೇಕಾಗಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸದಿರುವುದಕ್ಕೆ ಅವುಗಳ ಕುರಿತಾಗಿ ಕೀಳರಿಮೆ ಇರುವುದು ಒಂದು ಕಾರಣವಾದರೆ, ತಮಗೆ ಬೇಕಾಗಿರುವ ಹೊಸ ಪದಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿಲ್ಲ ಎಂಬ ತಪ್ಪು ಕಲ್ಪನೆ ಇನ್ನೊಂದು ಕಾರಣ. ಸಂಸ್ಕ್ರುತದಲ್ಲಿರುವಶ್ಟು ಒಟ್ಟು(ಪ್ರತ್ಯಯ)ಗಳು ಮತ್ತು ಪದಗಳು ಕನ್ನಡದಲ್ಲಿಲ್ಲ; ಹಾಗಾಗಿ, ಹಲವು ಬಗೆಯ ಪದಗಳನ್ನು ಹೊಸದಾಗಿ ಉಂಟುಮಾಡುವಲ್ಲಿ ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬ ಅನಿಸಿಕೆ ಹಲವರಲ್ಲಿದೆ.</p>
<p>ಆದರೆ, ಇದು ತಪ್ಪು ಅನಿಸಿಕೆ. ಎಂತಹ ವಿಶಯವನ್ನು ಬೇಕಿದ್ದರೂ ತಿಳಿಸಲು ಬೇಕಾಗುವಂತಹ ಪದಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿದೆ. ಎಲ್ಲಾ ಸ್ವಾಬಾವಿಕವಾಗಿ ಬೆಳೆದುಬಂದ ನುಡಿಗಳಿಗೂ ಇಂತಹ ಅಳವು ಇರುತ್ತದೆ. ಕನ್ನಡದ ಈ ಅಳವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡು, ಅದನ್ನು ಬಳಸಿ, ಕನ್ನಡಕ್ಕೆ ಬೇಕಾಗಿರುವ ಹೊಸ ಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಅಂತಹ ಹೊಸ ಪದಗಳಿರುವ ಬರವಣಿಗೆಯನ್ನು ಹೆಚ್ಚು ಹೆಚ್ಚು ಕನ್ನಡಿಗರು ಸುಲಬವಾಗಿ ಓದಿ ತಿಳಿದುಕೊಳ್ಳಬಲ್ಲರು, ಮತ್ತು ಬರವಣಿಗೆಯ ಮೂಲಕ ನಡೆಯುವ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲೂ ಬಲ್ಲರು. ಬರವಣಿಗೆಯ ಗುರಿಯೇ ಇದಲ್ಲವೆ?</p>
<p>ಎಲ್ಲಾ ನುಡಿಗಳಿಗೂ ಅವುಗಳದೇ ಆದ ಪದಗಳ ಸೊಗಡು ಎಂಬುದಿರುತ್ತದೆ; ಕನ್ನಡ ಪದಗಳ ಸೊಗಡು ಸಂಸ್ಕ್ರುತ ಪದಗಳ ಸೊಗಡಿಗಿಂತ ತೀರ ಬೇರಾಗಿದೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಬಳಸಿದಂತೆಲ್ಲ, ಅದರ ಪದಗಳ ಸೊಗಡು ಮರೆಯಾಗುತ್ತಾ ಹೋಗುತ್ತದೆ, ಮತ್ತು ಅದನ್ನು ಓದಿ ತಿಳಿಯುವ ಕೆಲಸ ಕನ್ನಡಿಗರಿಗೆ ಹೆಚ್ಚು ಹೆಚ್ಚು ತೊಡಕಿನದಾಗುತ್ತಾ ಹೋಗುತ್ತದೆ.</p>
<p>ಹಾಗಾಗಿ, ಕನ್ನಡ ಬರಹಗಳಲ್ಲಿ ಹೆಚ್ಚು ಹೆಚ್ಚು ಎರವಲು ಪದಗಳನ್ನು ಬಳಸಹೋಗದೆ, ಅದರ ಪದಗಳ ಸೊಗಡನ್ನು ಉಳಿಸಿಕೊಳ್ಳಬೇಕು ಎನ್ನುವುದು ಬರಿಯ ಅಬಿಮಾನದ ಪ್ರಶ್ನೆ ಮಾತ್ರ ಅಲ್ಲ; ಕನ್ನಡ ಬರಹ ಎಲ್ಲಾ ಕನ್ನಡಿಗರನ್ನೂ ತಲಪಬೇಕು ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಬರಬೇಕೆಂಬ ಮುಕ್ಯವಾದ ಗುರಿಯನ್ನು ಮುಟ್ಟುವ ಪ್ರಶ್ನೆಯೂ ಹೌದು.</p>
<p>ಇತ್ತೀಚೆಗೆ ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವವರು ಈ ವಿಶಯವನ್ನು ಪೂರ‍್ತಿ ಮರೆತಿರುವಂತೆ ಕಾಣುತ್ತದೆ. ಕನ್ನಡದವೇ ಆದ ಪದಗಳು ಅವರ ಕಣ್ಣಿಗೆ ಕಾಣಿಸದೆ ಹೋಗುತ್ತಿವೆ. ಅವರು ಉಂಟುಮಾಡಿರುವ ಪದಕೋಶಗಳಲ್ಲಿ ನೂರಕ್ಕೆ ತೊಂಬತ್ತರಶ್ಟು ಸಂಸ್ಕ್ರುತದಿಂದ ಎರವಲು ಪಡೆದ, ಇಲ್ಲವೇ ಸಂಸ್ಕ್ರುತದಲ್ಲಿ ಹೊಸದಾಗಿ ಉಂಟುಮಾಡಿ ಕನ್ನಡಕ್ಕೆ ಎರವಲು ತಂದ ಪದಗಳೇ ಕಾಣಿಸಿಕೊಳ್ಳುತ್ತವೆ; ಇಂತಹ ಪದಕೋಶಗಳನ್ನು ಕನ್ನಡ ಪದಕೋಶಗಳೆಂದು ಕರೆಯುತ್ತಿರುವುದು ನಿಜಕ್ಕೂ ಅಚ್ಚರಿಯ ವಿಶಯವಾಗಿದೆ!</p>
<p>ಇಂಗ್ಲಿಶ್‌ನಲ್ಲಿರುವ ಹಲವು ಅರಿಮೆಯ ಪದಗಳು ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿ ಕಾಣಿಸಿಕೊಳ್ಳುತ್ತವೆ, ಮತ್ತು ಅವನ್ನು ಓದಿ ತಿಳಿದುಕೊಳ್ಳುವ ಕೆಲಸ ಕನ್ನಡಿಗರಿಗೆ ತುಂಬಾ ತೊಡಕಿನದಾಗುತ್ತದೆ. ಹಾಗಾಗಿ, ನಾವು ಅವುಗಳ ಬದಲು ಬೇರೆ ಕನ್ನಡದವೇ ಆದ ಅರಿಮೆಯ ಪದಗಳನ್ನು ಉಂಟುಮಾಡಲು ಹೋಗುತ್ತೇವೆ.</p>
<p>ಆದರೆ, ಹಾಗೆ ಪದಗಳನ್ನು ಉಂಟುಮಾಡಬೇಕಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತ ಪದಗಳನ್ನು ಬಳಸಿದೆವಾದರೆ, ನಮ್ಮವೇ ಆದ ಪದಗಳನ್ನು ಉಂಟುಮಾಡುವುದರ ಹಿಂದಿರುವ ಮುಕ್ಯವಾದ ಗುರಿಯನ್ನು ನಾವು ತಲಪುವುದೇ ಇಲ್ಲ. ಯಾಕೆಂದರೆ, ಇಂಗ್ಲಿಶ್ ಎರವಲುಗಳ ಹಾಗೆ ಹಲವು ಸಂಸ್ಕ್ರುತ ಎರವಲುಗಳೂ ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಮತ್ತು ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿಯೇ ಉಳಿಯುತ್ತವೆ. ಅವನ್ನು ಓದಿ, ಅವು ತಿಳಿಸುವ ವಿಶಯಗಳನ್ನು ತಿಳಿದುಕೊಳ್ಳುವ ಕೆಲಸವೂ ತುಂಬಾ ತೊಡಕಿನದಾಗಿಯೇ ಉಳಿಯುತ್ತದೆ.</p>
<p>ಸಂಸ್ಕ್ರುತ ಪದಗಳನ್ನು ಬಳಸಿ ಪಳಗಿರುವ ಕನ್ನಡ ಬರಹಗಾರರಿಗೆ ಮತ್ತು ಓದುಗರಿಗೆ ತುಂಬಾ ಸಂಸ್ಕ್ರುತ ಪದಗಳನ್ನು ಬಳಸಿರುವ ಬರಹಗಳೂ ಅಶ್ಟೊಂದು ತೊಡಕಿನವೆಂದು ಅನಿಸದಿರಬಹುದು. ಇದಕ್ಕೆ ಕಾರಣವೇನೆಂದರೆ, ಅವರು ಕನ್ನಡ ಪದಗಳ ಸೊಗಡನ್ನು ಮಾತ್ರವಲ್ಲದೆ ಸಂಸ್ಕ್ರುತ ಪದಗಳ ಸೊಗಡನ್ನೂ ತಮ್ಮದಾಗಿಸಿಕೊಂಡಿರುತ್ತಾರೆ.</p>
<p>ಆದರೆ, ಹೆಚ್ಚಿನ ಕನ್ನಡಿಗರಿಗೂ ಅಂತಹ ಬರಹಗಳು ತೊಡಕಿನವಾಗಿ ಕಾಣಿಸುತ್ತವೆ; ಅವರ ಆಡುನುಡಿಗಳಲ್ಲಿ ತುಂಬಾ ಕಡಿಮೆ ಸಂಸ್ಕ್ರುತ ಎರವಲುಗಳು ಬಳಕೆಯಾಗುತ್ತಿರುವುದು, ಮತ್ತು ಹಾಗೆ ಬಳಕೆಯಾಗುತ್ತಿರುವವೂ ಕನ್ನಡ ಪದಗಳ ಸೊಗಡಿಗೆ ಹೊಂದಿಕೆಯಾಗುವಂತೆ ಮಾರ‍್ಪಟ್ಟಿರುವುದು ಇದಕ್ಕೆ ಕಾರಣ.</p>
<p>ಹಾಗಾಗಿ, ಕನ್ನಡ ಬರಹಗಳು ಎಲ್ಲಾ ಕನ್ನಡಿಗರನ್ನೂ ತಲಪಬೇಕಿದ್ದಲ್ಲಿ, ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಹೊಮ್ಮಬೇಕಿದ್ದಲ್ಲಿ, ಅವುಗಳಲ್ಲಿ ಬಳಕೆಯಾಗುವ ಎರವಲು ಪದಗಳನ್ನು, ಅವು ಸಂಸ್ಕ್ರುತದವಿರಲಿ ಇಲ್ಲವೇ ಇಂಗ್ಲಿಶಿನವಿರಲಿ, ಆದಶ್ಟು ಕಡಿಮೆ ಮಾಡಲು ಪ್ರಯತ್ನಿಸಬೇಕು, ಮತ್ತು ಬಳಸಲೇಬೇಕೆಂದಿರುವವು ಕನ್ನಡದ ಸೊಗಡನ್ನು ಕೆಡಿಸದಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಿಕೊಳ್ಳಬೇಕು.</p>
<p>ಎಲ್ಲಾ ಮಟ್ಟದ ಬಳಕೆಗಳಿಗೂ ಕನ್ನಡ ಪದಗಳು ತಕ್ಕುದಾದುವು ಎಂಬುದನ್ನು ಕನ್ನಡದ ಬರಹಗಾರರು ಮತ್ತು ಕನ್ನಡದಲ್ಲಿ ಹೊಸ ಪದಗಳನ್ನು ಉಂಟುಮಾಡುವವರು ಮನಗಾಣಬೇಕು, ಮತ್ತು ಮೇಲ್ಮಟ್ಟದ ಬಳಕೆಗಳಿಗೆ ಕನ್ನಡದವೇ ಆದ ಪದಗಳನ್ನು ಬಳಸುವುದು ಹೆಮ್ಮೆಯ ವಿಶಯವಶ್ಟೇ ಅಲ್ಲ, ಬರವಣಿಗೆಯ ಮುಕ್ಯ ಗುರಿಯನ್ನು ಮುಟ್ಟುವ ಬಗೆಯೂ ಹೌದೆಂಬ ಅನಿಸಿಕೆ ಅವರಲ್ಲಿ ಬೆಳೆದುಬರಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;t=%E0%B2%AE%E0%B2%A8%E0%B3%86%E0%B2%AF%20%E0%B2%B9%E0%B3%8A%E0%B2%B0%E0%B2%97%E0%B2%A1%E0%B3%86%20%E0%B2%85%E0%B2%A1%E0%B2%BF%E0%B2%97%E0%B3%86%E0%B2%AE%E0%B2%A8%E0%B3%86%20%E0%B2%AA%E0%B2%BE%E0%B2%95%E0%B2%B6%E0%B2%BE%E0%B2%B2%E0%B3%86%E0%B2%AF%E0%B2%BE%E0%B2%97%E0%B2%AC%E0%B3%87%E0%B2%95%E0%B3%87%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;p&#091;images&#093;&#091;0&#093;=&#038;p&#091;title&#093;=%E0%B2%AE%E0%B2%A8%E0%B3%86%E0%B2%AF%20%E0%B2%B9%E0%B3%8A%E0%B2%B0%E0%B2%97%E0%B2%A1%E0%B3%86%20%E0%B2%85%E0%B2%A1%E0%B2%BF%E0%B2%97%E0%B3%86%E0%B2%AE%E0%B2%A8%E0%B3%86%20%E0%B2%AA%E0%B2%BE%E0%B2%95%E0%B2%B6%E0%B2%BE%E0%B2%B2%E0%B3%86%E0%B2%AF%E0%B2%BE%E0%B2%97%E0%B2%AC%E0%B3%87%E0%B2%95%E0%B3%87%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/feed/</wfw:commentRss>
		<slash:comments>0</slash:comments>
		</item>
	</channel>
</rss>
