<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ತದ್ಬವ</title>
	<atom:link href="http://dnshankarabhat.net/tag/%e0%b2%a4%e0%b2%a6%e0%b3%8d%e0%b2%ac%e0%b2%b5/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಯಾವುದು ಕನ್ನಡದ ಸೊಗಡು?</title>
		<link>http://dnshankarabhat.net/%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%a6-%e0%b2%b8%e0%b3%8a%e0%b2%97%e0%b2%a1%e0%b3%81/?utm_source=rss&#038;utm_medium=rss&#038;utm_campaign=%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25a6-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581</link>
		<comments>http://dnshankarabhat.net/%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%a6-%e0%b2%b8%e0%b3%8a%e0%b2%97%e0%b2%a1%e0%b3%81/#comments</comments>
		<pubDate>Mon, 14 Apr 2014 16:39:19 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಆಡುಗನ್ನಡ]]></category>
		<category><![CDATA[ಎರವಲು]]></category>
		<category><![CDATA[ಕನ್ನಡ ಕಾವ್ಯ]]></category>
		<category><![CDATA[ಕನ್ನಡ ನುಡಿ]]></category>
		<category><![CDATA[ಕನ್ನಡ ಬರಹ]]></category>
		<category><![CDATA[ಕನ್ನಡಿಗರು]]></category>
		<category><![CDATA[ಗುಲ್ಬರ‍್ಗ]]></category>
		<category><![CDATA[ತತ್ಸಮ]]></category>
		<category><![CDATA[ತದ್ಬವ]]></category>
		<category><![CDATA[ದಕ್ಶಿಣ ಕನ್ನಡ]]></category>
		<category><![CDATA[ಬರಹಗನ್ನಡ]]></category>
		<category><![CDATA[ಮಹಾಪ್ರಾಣ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಸಂಸ್ಕ್ರುತ ಪಂಡಿತರು]]></category>
		<category><![CDATA[ಸಂಸ್ಕ್ರುತಿ]]></category>
		<category><![CDATA[ಸೊಗಡು]]></category>

		<guid isPermaLink="false">http://dnshankarabhat.net/?p=70</guid>
		<description><![CDATA[ನುಡಿಯರಿಮೆಯ ಇಣುಕುನೋಟ – 5 ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳನ್ನು ಕನ್ನಡ ಬರಹದಿಂದ ತೆಗೆದುಹಾಕಿದರೆ ಕನ್ನಡದಸೊಗಡು (ಎಂದರೆ ಸಂಸ್ಕ್ರುತಿ) ಅಳಿದುಹೋಗುತ್ತದೆಯೆಂದು ಕೆಲವರಿಗೆ ಅನಿಸುತ್ತದೆ. ಆದರೆ, ನಿಜಕ್ಕೂ ಈ ಮಾರ‍್ಪಾಡು ಕನ್ನಡದ ಸೊಗಡನ್ನು ಉಳಿಸುತ್ತದೆಯಲ್ಲದೆ ಅಳಿಸುವುದಿಲ್ಲ. ಕನ್ನಡ ಕಾವ್ಯಗಳಲ್ಲಿ ತುಂಬಾ ಸಂಸ್ಕ್ರುತ (ತತ್ಸಮ) ಪದಗಳನ್ನು ಬಳಸಿದೆವಾದರೆ ಅವು ಕಕ್ಕಸ(ಕರ‍್ಕಶ)ವಾಗುತ್ತವೆಯೆಂದು ಕವಿರಾಜಮಾರ‍್ಗದಲ್ಲಿ ಹೇಳಲಾಗಿದೆ; ಆ ರೀತಿ ಕಕ್ಕಸವಾಗದಂತೆ ತನ್ನ ಕಾವ್ಯಗಳಲ್ಲಿ ತದ್ಬವ ಪದಗಳನ್ನು ಮಾತ್ರವೇ ಬಳಸಿರುವ ಆಂಡಯ್ಯನಿಗೆ ‘ಕನ್ನಡದ ಕಾವ’ ಎಂದರೆ, ಕನ್ನಡದ ಸೊಗಡನ್ನು (ಸಂಸ್ಕ್ರುತಿಯನ್ನು) ಕಾಪಾಡಿದವನು ಎಂಬ ಬಿರುದನ್ನು ಕೊಡಲಾಗಿದೆ. [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 5</strong></p>
<p>ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳನ್ನು ಕನ್ನಡ <strong>ಬರಹದಿಂದ</strong> ತೆಗೆದುಹಾಕಿದರೆ ಕನ್ನಡದ<strong>ಸೊಗಡು</strong> (ಎಂದರೆ ಸಂಸ್ಕ್ರುತಿ) ಅಳಿದುಹೋಗುತ್ತದೆಯೆಂದು ಕೆಲವರಿಗೆ ಅನಿಸುತ್ತದೆ. ಆದರೆ, ನಿಜಕ್ಕೂ ಈ ಮಾರ‍್ಪಾಡು ಕನ್ನಡದ ಸೊಗಡನ್ನು ಉಳಿಸುತ್ತದೆಯಲ್ಲದೆ ಅಳಿಸುವುದಿಲ್ಲ.</p>
<p>ಕನ್ನಡ ಕಾವ್ಯಗಳಲ್ಲಿ ತುಂಬಾ ಸಂಸ್ಕ್ರುತ (ತತ್ಸಮ) ಪದಗಳನ್ನು ಬಳಸಿದೆವಾದರೆ ಅವು ಕಕ್ಕಸ(ಕರ‍್ಕಶ)ವಾಗುತ್ತವೆಯೆಂದು ಕವಿರಾಜಮಾರ‍್ಗದಲ್ಲಿ ಹೇಳಲಾಗಿದೆ; ಆ ರೀತಿ ಕಕ್ಕಸವಾಗದಂತೆ ತನ್ನ ಕಾವ್ಯಗಳಲ್ಲಿ ತದ್ಬವ ಪದಗಳನ್ನು ಮಾತ್ರವೇ ಬಳಸಿರುವ ಆಂಡಯ್ಯನಿಗೆ ‘ಕನ್ನಡದ ಕಾವ’ ಎಂದರೆ, ಕನ್ನಡದ ಸೊಗಡನ್ನು (ಸಂಸ್ಕ್ರುತಿಯನ್ನು) ಕಾಪಾಡಿದವನು ಎಂಬ ಬಿರುದನ್ನು ಕೊಡಲಾಗಿದೆ. ತತ್ಸಮ ಪದಗಳನ್ನು ಬಳಸದುದರಿಂದಾಗಿ ಆತನು ಕನ್ನಡದ ಸೊಗಡನ್ನು ಕಳೆದಿದ್ದಾನೆಂದು ಯಾರೂ ಆತನನ್ನು ದೂರಿಲ್ಲ.</p>
<p>ಸಂಸ್ಕ್ರುತ ಎರವಲುಗಳನ್ನು ಕನ್ನಡಿಗರು ಹೇಗೆ ಓದುತ್ತಾರೋ ಹಾಗೆಯೇ ಬರೆಯೋಣ ಎನ್ನುವುದೂ ಇದೇ ರೀತಿಯಲ್ಲಿ ಕನ್ನಡದ ಸೊಗಡನ್ನು ಉಳಿಸುವ ಪ್ರಯತ್ನವಲ್ಲದೆ ಅಳಿಸುವ ಪ್ರಯತ್ನವಲ್ಲ. ಯಾಕೆಂದರೆ, ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆದಲ್ಲಿ, ಅವು ತದ್ಬವ ಪದಗಳ ಹಾಗೆ ಕನ್ನಡದ ಸೊಗಡನ್ನು ಕಾಪಾಡುತ್ತವೆ.</p>
<p>ಸಂಸ್ಕ್ರುತ ಎರವಲುಗಳನ್ನು ತದ್ಬವರೂಪದಲ್ಲಿ ಬರೆಯುವಾಗ, ಅವುಗಳಲ್ಲಿರುವ ಶ-ಷಗಳ ನಡುವಿನ ವ್ಯತ್ಯಾಸ, ರು-ಋಗಳ ನಡುವಿನ ವ್ಯತ್ಯಾಸ, ಮತ್ತು ಅಲ್ಪಪ್ರಾಣ-ಮಹಾಪ್ರಾಣಗಳ ನಡುವಿನ ವ್ಯತ್ಯಾಸಗಳು ಇಲ್ಲವಾಗುತ್ತವೆ; ಸಂಸ್ಕ್ರುತ ಎರವಲುಗಳನ್ನು ಹೆಚ್ಚಿನ ಕನ್ನಡಿಗರೂ ಓದುವ ಹಾಗೆ ಬರೆಯುವಾಗಲೂ ಇಂತಹವೇ ವ್ಯತ್ಯಾಸಗಳು ಇಲ್ಲವಾಗುತ್ತವೆ. ಹಾಗಾಗಿ, ತದ್ಬವ ಪದಗಳ ಬಳಕೆಯಿಂದ ಹೇಗೆ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲವೋ ಹಾಗೆಯೇ ಸಂಸ್ಕ್ರುತ ಎರವಲುಗಳನ್ನು ಓದುವ ಹಾಗೆ ಬರೆಯುವುದರಿಂದಲೂ ಕನ್ನಡ ನುಡಿಯ ಸಂಸ್ಕ್ರುತಿ ನಾಶವಾಗುವುದಿಲ್ಲ.</p>
<p>ಹೆಚ್ಚಿನ ಕನ್ನಡಿಗರೂ ಮಹಾಪ್ರಾಣ, ಷಕಾರ, ಋಕಾರ ಮೊದಲಾದುವನ್ನು ಮಾತನಾಡುವಾಗ ಇಲ್ಲವೇ ಓದುವಾಗ ಬಳಸುವುದಿಲ್ಲ ಎಂಬುದಾಗಿ ನಾನು ಹೇಳಿರುವುದು ಬರಿಯ ಊಹೆಯ ಮೇಲಲ್ಲ. ಅದಕ್ಕೆ ಸಾಕಶ್ಟು ಅರಕೆಯ ಆದಾರವಿದೆ: ಸುಮಾರು ಒಂದೂವರೆ ತಿಂಗಳು ಮಯ್ಸೂರು ಜಿಲ್ಲೆಯಲ್ಲೆಲ್ಲ ಸುತ್ತಾಡಿ, ಅಲ್ಲಿನ ಬೇರೆ ಬೇರೆ ಜಾತಿ ಮತ್ತು ಪಂಗಡಗಳ ಜನರ ಮಾತನ್ನು ಗಮನಿಸಿದ್ದೇನೆ. ಆಮೇಲೆ, ಅಂತಹದೇ ಅರಕೆಯನ್ನು ದಕ್ಶಿಣ ಕನ್ನಡ ಮತ್ತು ಗುಲ್ಬರ‍್ಗ ಜಿಲ್ಲೆಗಳಲ್ಲೂ ನಡೆಸಿದ್ದೇನೆ.</p>
<p>ಇದಲ್ಲದೆ, ಹಲವು ಮಂದಿ ಸಂಸ್ಕ್ರುತ ಪಂಡಿತರ ಕನ್ನಡ ಮಾತನ್ನೂ ನಾನು ಗಮನಿಸಿದ್ದೇನೆ. ಬರಿಯ ಪದಗಳನ್ನು ಉಲಿದು ತೋರಿಸುವಾಗ ಅವರು ಈ ವ್ಯತ್ಯಾಸಗಳನ್ನು ಹೆಚ್ಚುಕಡಿಮೆ ಸರಿಯಾಗಿಯೇ ಉಳಿಸಿಕೊಳ್ಳುತ್ತಾರೆ; ಆದರೆ, ಅವನ್ನೇ ಮಾತಿನಲ್ಲಿ ಬಳಸುವಾಗ ಈ ಎಲ್ಲಾ ವ್ಯತ್ಯಾಸಗಳೂ ಇಲ್ಲವಾಗುತ್ತವೆ.</p>
<p>ನಿಜಕ್ಕೂ ಶ-ಷಗಳ ನಡುವೆ, ಇಲ್ಲವೇ ಮಹಾಪ್ರಾಣ-ಅಲ್ಪಪ್ರಾಣಗಳ ನಡುವೆ ಕನ್ನಡಿಗರ ಮಾತಿನಲ್ಲಿ ಯಾವ ವ್ಯತ್ಯಾಸವೂ ಇಲ್ಲ; ಯಾರಾದರೂ ಈ ವ್ಯತ್ಯಾಸ ಕೇಳಿಸುವ ಹಾಗೆ ಮಾತನಾಡಿದರೆ, ಕೇಳುವವರಿಗೆ ಅದು ಅಸ್ವಾಬಾವಿಕವೆಂದು ಅನಿಸುತ್ತದೆ.</p>
<p>ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿಲ್ಲದ ಈ ಸಂಸ್ಕ್ರುತ ಪದಗಳ ವ್ಯತ್ಯಾಸವನ್ನು ಕನ್ನಡ ಬರಹದಲ್ಲಿ ಸುಮಾರು ಒಂದೂವರೆ ಸಾವಿರ ವರ‍್ಶಗಳಿಂದಲೂ ಉಳಿಸಿಕೊಂಡು ಬರಲಾಗಿದೆ. ಮೊನ್ನೆ ಮೊನ್ನೆಯ ವರೆಗೂ ಕನ್ನಡ ಬರಹವನ್ನು ಮೇಲ್ವರ‍್ಗದ ಕೆಲವೇ ಕೆಲವು ಮಂದಿ ಮಾತ್ರ ಬಳಸುತ್ತಿದ್ದರಾದ ಕಾರಣ, ಇದು ಅಂತಹ ತೊಡಕಿನ ಸಂಗತಿಯೆಂದು ಯಾರಿಗೂ ಅನಿಸಿರಲಿಲ್ಲ.</p>
<p>ಆದರೆ, ಇವತ್ತು ಎಲ್ಲಾ ವರ‍್ಗದ ಜನರೂ ಕನ್ನಡ ಬರಹವನ್ನು ಕಲಿತು ಬಳಸಲು ತೊಡಗಬೇಕಾಗಿದೆ; ಯಾಕೆಂದರೆ, ಬರಹವನ್ನು ಬಳಸಲಾರದವರು ತಮ್ಮ ಜೀವನದಲ್ಲಿ ಒಂದು ಅತ್ಯಮೂಲ್ಯವಾದ ಸಾದನದಿಂದ ವಂಚಿತರಾಗುತ್ತಾರೆ. ಒಂದು ನಾಡಿನಲ್ಲಿ ಅಂತಹ ಜನ ಹೆಚ್ಚು ಇದ್ದಶ್ಟೂ ಆ ನಾಡು ಹಿಂದೆಯೇ ಉಳಿದಿರುತ್ತದೆ. ಇವತ್ತು ಬರಹಕ್ಕೆ ಅಂತಹ ಪ್ರಾಮುಕ್ಯತೆ ಬಂದಿದೆ.</p>
<p>ಹಾಗಾಗಿ, ಕನ್ನಡ ಬರಹವನ್ನು ಕಲಿಯುವಲ್ಲಿ ಮತ್ತು ಬಳಸುವಲ್ಲಿ ಒಂದು ದೊಡ್ಡ ತೊಡಕಾಗಿರುವ ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಡುವುದೇ ಇವತ್ತು ನಮ್ಮ ಮುಂದಿರುವ ಸರಿಯಾದ ದಾರಿ. ಹಾಗೆ ಮಾಡುವುದರಿಂದ ಕನ್ನಡ ಬರಹದ ಸೊಗಡು ಇಲ್ಲವೇ ಸಂಸ್ಕ್ರುತಿ ಉಳಿಯುತ್ತದೆಯಲ್ಲದೆ ಅಳಿಯುವುದಿಲ್ಲ; ಅದರ ಮೇಲೆ ಹೊರಿಸಲಾಗಿರುವ ಬೇರೊಂದು ಸಂಸ್ಕ್ರುತಿಯ ಹೊರೆ ಮಾತ್ರ ಇಲ್ಲವಾಗುತ್ತದೆ.</p>
<p>ಈ ಹೆಚ್ಚಿನ ಬರಿಗೆಗಳನ್ನು ಬಿಟ್ಟುಕೊಟ್ಟಲ್ಲಿ ಮದ್ಯ-ಮಧ್ಯ, ದನ-ಧನ ಎಂಬಂತಹ ಹಲವು ಪದಗಳ ನಡುವಿನ ವ್ಯತ್ಯಾಸ ಇಲ್ಲವಾಗಿ, ಗೊಂದಲವುಂಟಾಗಬಲ್ಲುದು ಎಂಬುದಾಗಿ ಕೆಲವರು ವಾದಿಸುತ್ತಾರೆ; ಆದರೆ, ಈ ವಾದದಲ್ಲಿ ನಿಜಕ್ಕೂ ತಿರುಳಿಲ್ಲ. ಯಾಕೆಂದರೆ, ಕನ್ನಡಿಗರ ಮಾತಿನಲ್ಲಿ ಇಲ್ಲವೇ ಓದಿನಲ್ಲಿ, ಮೇಲೆ ವಿವರಿಸಿದ ಹಾಗೆ, ಈ ವ್ಯತ್ಯಾಸ ಹೇಗಿದ್ದರೂ ಇಲ್ಲ, ಮತ್ತು ಇದರಿಂದಾಗಿ ಯಾವ ಗೊಂದಲವೂ ಆಗುತ್ತಾ ಇಲ್ಲ.</p>
<p>ಇದಲ್ಲದೆ, ಯಾವುದೇ ಒಂದು ನುಡಿಯ ಪದನೆರಕೆಯನ್ನು ಬಿಡಿಸಿ ನೋಡಿದರೂ ಅದರಲ್ಲಿ ಒಂದಕ್ಕಿಂತ ಹೆಚ್ಚು ಹುರುಳಿರುವ ನೂರಾರು ಪದಗಳು ಕಾಣಲು ಸಿಗುತ್ತವೆ. ಸಂಸ್ಕ್ರುತದಲ್ಲಂತೂ ಇದು ಇನ್ನೂ ಹೆಚ್ಚು; ಅದರ ಹೆಚ್ಚಿನ ಪದಗಳಿಗೂ ಅಯ್ದು ಇಲ್ಲವೇ ಹೆಚ್ಚು ಹುರುಳುಗಳಿವೆಯೆಂದು ಹೇಳಲಾಗುತ್ತದೆ.</p>
<p>ಸಂಸ್ಕ್ರುತದ ಅರ್ಥ ಪದಕ್ಕೆ ‘ಹುರುಳು’ ಮತ್ತು ‘ಹಣ’ ಎಂಬವುಗಳು ಮಾತ್ರವಲ್ಲದೆ, ‘ಉದ್ದೇಶ’, ‘ಕಾರಣ’, ‘ವಸ್ತು’ ಮೊದಲಾದ ಬೇರೆಯೂ ಹಲವು ಹುರುಳುಗಳಿವೆ; ವಿಷ ಪದಕ್ಕೆ ‘ನಂಜು’ ಎಂಬ ಹುರುಳು ಮಾತ್ರವಲ್ಲದೆ, ‘ನೀರು’ ಮತ್ತು ‘ಸೇವಕ’ ಎಂಬ ಹುರುಳುಗಳೂ ಇವೆ (ಮೋನಿಯರ್ ವಿಲ್ಲಿಯಂಸ್ ಅವರ ಸಂಸ್ಕ್ರುತ-ಇಂಗ್ಲಿಶ್ ಡಿಕ್ಶ್‌ನರಿ ನೋಡಿ). ಆದರೆ, ಈ ರೀತಿ ಒಂದೇ ಪದಕ್ಕೆ ಹಲವು ಹುರುಳುಗಳಿರುವುದನ್ನು ಯಾರೂ ಸಂಸ್ಕ್ರುತದ ಕೊರತೆಯೆಂದು ಹೇಳುವುದಿಲ್ಲ; ಅದಕ್ಕೆ ಬದಲಾಗಿ, ಅದು ಸಂಸ್ಕ್ರುತದ ಶ್ರೀಮಂತಿಕೆಯೆಂದು ಹೇಳುತ್ತಾರೆ.</p>
<p>ಸಾಮಾನ್ಯವಾಗಿ ಪದಗಳನ್ನು ಬಳಸಿರುವ ಸಂದರ‍್ಬವೇ ಅವುಗಳನ್ನು ಯಾವ ಹುರುಳಿನಲ್ಲಿ ಬಳಸಲಾಗಿದೆ ಎಂಬುದನ್ನು ತಿಳಿಸುತ್ತದೆ; ‘ಹುಡುಗ ಮಾರ‍್ಗದ ಮದ್ಯದಲ್ಲಿ ನಿಂತಿದ್ದಾನೆ’ ಎಂದು ಬರೆದರೆ, ಅದರಲ್ಲಿ ಮದ್ಯದಲ್ಲಿ ಎಂಬುದನ್ನು ‘ನಡುವೆ’ ಎಂಬ ಹುರುಳಿನಲ್ಲಿ ಬಳಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ; ಇಲ್ಲಿ ಮದ್ಯ ಎಂಬುದಕ್ಕೆ ‘ಸಾರಾಯಿ’ ಎಂಬ ಹುರುಳಿರಬಹುದೆಂದು ಯಾರಿಗೂ ಅನಿಸುವುದಿಲ್ಲ. ಇದನ್ನು ಮಧ್ಯದಲ್ಲಿ ಎಂಬುದಾಗಿ ನೋಡಿ ಬಳಕೆಯಾದವರಿಗೆ ಮಾತ್ರ ಇದು ತಪ್ಪೆಂದು ಅನಿಸುತ್ತದೆ, ಅಶ್ಟೆ. ಹುರುಳಿನ ಗೊಂದಲವೇನೂ ಉಂಟಾಗುವುದಿಲ್ಲ.</p>
<p>ಎರಡು ಹುರುಳುಗಳಿರುವ ಪದಗಳನ್ನು ಅವುಗಳ ಎರಡು ಹುರುಳೂ ಒಟ್ಟಿಗೆ ಬರುವ ಹಾಗೆ ಬರೆಯುವುದು ಕವಿಗಳು, ಮತ್ತು ಬೇಕೆಂದೇ ತಮ್ಮ ಓದುಗರನ್ನು ಗೊಂದಲದಲ್ಲಿ ಸಿಲುಕಿಸಲು ಬಯಸುವವರು ಮಾತ್ರ. ಬಾಕಿ ಉಳಿದವರೆಲ್ಲ ಓದುಗರ ಗಮನಕ್ಕೆ ತಮ್ಮ ಮನಸ್ಸಿನಲ್ಲಿರುವ ಒಂದು ಹುರುಳು ಮಾತ್ರ ಬರುವ ಹಾಗೆ ಬರೆಯುತ್ತಾರೆ; ಈ ವಿಶಯದಲ್ಲಿ ಗೊಂದಲವೇನಾದರೂ ಉಂಟಾಗಬಹುದೆಂಬ ಸಂಶಯ ಅವರಿಗೆ ಇದೆಯಾದಲ್ಲಿ, ಅವರು ಬೇರೆಯೇ ಪದವನ್ನು ಬಳಸುತ್ತಾರೆ, ಇಲ್ಲವೇ ಗೊಂದಲವಾಗದಂತೆ ಸೊಲ್ಲನ್ನು ಮಾರ‍್ಪಡಿಸಿ ಬರೆಯುತ್ತಾರೆ.</p>
<p>ಇದಲ್ಲದೆ, ಸಾಮಾನ್ಯವಾಗಿ ಅಂತಹ ಪದಗಳಿಗಿರುವ ಎರಡು (ಇಲ್ಲವೇ ಹೆಚ್ಚು) ಹುರುಳುಗಳಲ್ಲಿ ಸಂದರ‍್ಬಕ್ಕೆ ಹೊಂದಿಕೆಯಾಗುವಂತಹ ಒಂದು ಹುರುಳು ಮಾತ್ರ ಓದುಗರ ಗಮನಕ್ಕೆ ಬರುತ್ತದೆ. ಅವಕ್ಕೆ ಇನ್ನೊಂದು ಹುರುಳೂ ಇದೆಯೆಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಕೆಲವೊಮ್ಮೆ ಈ ವಿಶಯವನ್ನು ಅವರ ಗಮನಕ್ಕೆ ತರಬೇಕಿದ್ದಲ್ಲಿ, ಆ ಪದಗಳನ್ನು ಅವುಗಳ ಇನ್ನೊಂದು ಹುರುಳಿಗೆ ಹೊಂದಿಕೆಯಾಗುವಂತಹ ಬೇರೊಂದು ಸೊಲ್ಲಿನಲ್ಲಿ ಬಳಸಿ ತೋರಿಸಬೇಕಾಗುತ್ತದೆ.</p>
<p>ಮಹಾಪ್ರಾಣ, ಷಕಾರ, ಋಕಾರ ಮೊದಲಾದವುಗಳನ್ನು ಬಳಸದಿದ್ದರೆ ಹುರುಳಿನ ಮಟ್ಟಿಗೆ ಯಾವ ಗೊಂದಲವೂ ಉಂಟಾಗುವುದಿಲ್ಲ ಎಂಬ ಈ ಮಾತನ್ನು ಬೆಂಬಲಿಸುವ ಇನ್ನೊಂದು ವಿಶಯವೇನೆಂದರೆ, 2006 ರ ಬಳಿಕ ನಾನು ಬರೆದ ಎಲ್ಲಾ ಒಂಬತ್ತು ಪುಸ್ತಕಗಳಲ್ಲೂ (ಒಟ್ಟು 2600 ಪುಟಗಳು) ಈ ಬರಿಗೆಗಳನ್ನು ಬಳಸಿಲ್ಲ; ಹಾಗಿದ್ದರೂ, ಇದುವರೆಗೆ ಅವನ್ನು ಓದಿದವರಲ್ಲಿ ಯಾರೊಬ್ಬರೂ ಅದರಿಂದಾಗಿ ವಿಶಯವನ್ನು ತಿಳಿದುಕೊಳ್ಳುವಲ್ಲಿ ತಮಗೆ ತೊಂದರೆಯಾಗಿದೆಯೆಂದು ಹೇಳಿಲ್ಲ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25a6-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;t=%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%20%E0%B2%B8%E0%B3%8A%E0%B2%97%E0%B2%A1%E0%B3%81%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25a6-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%95%E0%B2%A8%E0%B3%8D%E0%B2%A8%E0%B2%A1%E0%B2%A6%20%E0%B2%B8%E0%B3%8A%E0%B2%97%E0%B2%A1%E0%B3%81%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25a6-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%a6-%e0%b2%b8%e0%b3%8a%e0%b2%97%e0%b2%a1%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಪದಗಳನ್ನು ಓದುವ ಹಾಗೆಯೇ ಬರೆಯಬೇಕು</title>
		<link>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/?utm_source=rss&#038;utm_medium=rss&#038;utm_campaign=%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586</link>
		<comments>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/#comments</comments>
		<pubDate>Mon, 14 Apr 2014 16:36:48 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಆಂಡಯ್ಯ]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಎರವಲು ಪದಗಳು]]></category>
		<category><![CDATA[ಕಬ್ಬಿಗರ ಕಾವ]]></category>
		<category><![CDATA[ಕಲಿಕೆ]]></category>
		<category><![CDATA[ಕೀಳರಿಮೆ]]></category>
		<category><![CDATA[ಕೆಳವರ‍್ಗ]]></category>
		<category><![CDATA[ತದ್ಬವ]]></category>
		<category><![CDATA[ಬರಹ]]></category>
		<category><![CDATA[ಬರಹದ ಸಂಪ್ರದಾಯ]]></category>
		<category><![CDATA[ಬರಿಗೆ]]></category>
		<category><![CDATA[ಮಕ್ಕಳು]]></category>
		<category><![CDATA[ಮಹಾಪ್ರಾಣ]]></category>
		<category><![CDATA[ಮಹಾಪ್ರಾಣಾಕ್ಶರ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಹೊಸಗನ್ನಡ]]></category>

		<guid isPermaLink="false">http://dnshankarabhat.net/?p=66</guid>
		<description><![CDATA[ನುಡಿಯರಿಮೆಯ ಇಣುಕುನೋಟ – 3 ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ. ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 3</strong></p>
<p>ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ.</p>
<p>ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು ವಯ್ರಸ್ ಪದಗಳ ಮೊದಲ ಬರೆಗೆಗಳು ಇಂಗ್ಲಿಶ್‌ನಲ್ಲಿ ಬೇರಾಗಿವೆ, ಆದರೆ ಕನ್ನಡದಲ್ಲಿ ವ ಎಂಬ ಒಂದೇ ಬರಿಗೆಯನ್ನು ಬಳಸಲಾಗುತ್ತದೆ. ಅವೆರಡನ್ನೂ ಒಂದೇ ರೀತಿ ಓದುತ್ತಿರುವುದೇ ಇದಕ್ಕೆ ಕಾರಣ.</p>
<p>ಒಂದು ಬರಹದಲ್ಲಿ ಪದಗಳನ್ನು ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಬರೆಯಬೇಕಾಗಿದೆಯಾದರೆ, ಅದು ಅಂತಹ ಬರಹವನ್ನು ಕಲಿಯುವವರಿಗೆ ಮತ್ತು ಬಳಸುವವರಿಗೆ ಹಲವು ಬಗೆಯ ತೊಡಕುಗಳನ್ನು ತಂದೊಡ್ಡುತ್ತದೆ; ಕನ್ನಡ ಬರಹದ ಈ ಸಂಪ್ರದಾಯ ಮುಕ್ಯವಾಗಿ ಕೆಳಗೆ ಕೊಟ್ಟಿರುವಂತಹ ತೊಡಕುಗಳನ್ನು ಕೊಡುತ್ತಿದೆ:</p>
<p>(೧) ಓದಲು ಮತ್ತು ಬರೆಯಲು ಕಲಿಯಹೊರಡುವ ಮಕ್ಕಳು ಅನವಶ್ಯಕವಾಗಿ ಹದಿನೇಳು ಹೆಚ್ಚಿನ ಬರಿಗೆ(ಅಕ್ಶರ)ಗಳನ್ನು ಕಲಿಯಬೇಕಾಗುತ್ತದೆ.</p>
<p>(೨) ಸರಿಯಾಗಿ ಮತ್ತು ಸಲೀಸಾಗಿ ಓದಲು ಕಲಿಯಬೇಕಿದ್ದಲ್ಲಿ, ಪದಗಳನ್ನು ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ (ಎತ್ತುಗೆಗೆ, ಮನೆ ಎಂಬುದನ್ನು ಮ್, ಅ, ನ್ ಮತ್ತು ಎ ಎಂಬ ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ) ಎಂಬುದನ್ನು ಗಮನಿಸಬೇಕು, ಮತ್ತು ಈ ಉಲಿಗಳನ್ನು ಸೂಚಿಸುವುದಕ್ಕಾಗಿ ಬರಹದಲ್ಲಿ ಬರಿಗೆಗಳನ್ನು ಬಳಸಲಾಗುತ್ತದೆ ಎಂಬುದನ್ನೂ ಗಮನಿಸಬೇಕು. ಇವೆರಡನ್ನು ಗಮನಿಸಿದವರು ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗಲೂ ಅವನ್ನು ಸುಲಬವಾಗಿ ಓದಬಲ್ಲವರಾಗುತ್ತಾರೆ.</p>
<p>ಪದಗಳನ್ನು ಓದುವ ಹಾಗೆಯೇ ಬರೆದಿದೆಯಾದರೆ ಮಾತ್ರ, ಈ ರೀತಿ ಓದುವಾಗ ಬಳಸುವ ಉಲಿಗೂ ಬರಹದಲ್ಲಿ ಕಾಣಿಸುವ ಬರಿಗೆಗಳಿಗೂ ನಡುವೆ ಸಂಬಂದವಿದೆ ಎಂಬುದು ಓದಲು ಕಲಿಯುವವರ ಗಮನಕ್ಕೆ ಸುಲಬವಾಗಿ ಬರುತ್ತದೆ.</p>
<p>ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಪದಗಳನ್ನು ಬರೆದಿದೆಯಾದರೆ, ಅವುಗಳಲ್ಲಿ ಬರುವ ಬರಿಗೆಗಳಿಗೂ ಉಲಿಗಳಿಗೂ ನಡುವೆ ಇಂತಹದೊಂದು ಸಂಬಂದವಿದೆಯೆಂಬುದು ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ, ಮತ್ತು ಇದರಿಂದಾಗಿ ಎಶ್ಟು ಕಲಿತರೂ ಅವರಿಗೆ ಸಲೀಸಾಗಿ ಓದಲು ಬರುವುದೇ ಇಲ್ಲ. ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗ ಅವನ್ನು ಹೇಗೆ ಓದಬೇಕೆಂಬುದು ಅವರಿಗೆ ಗೊತ್ತಾಗುವುದೂ ಇಲ್ಲ.</p>
<p>(೩) ಓದುವ ಹಾಗೆ ಬರೆಯುವ ಪದಗಳನ್ನು ಬರಹಗಳಲ್ಲಿ ಬಳಸುವುದು ಸುಲಬ; ಬೇರೆ ಬಗೆಯಲ್ಲಿ ಬರೆಯುವ ಒಂದೊಂದು ಪದವನ್ನೂ ಅದನ್ನು ಬರೆಯುವುದು ಹೇಗೆ ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಮನೆ ಎಂಬ ಪದವನ್ನು ಓದುವ ಹಾಗೆಯೇ ಬರೆಯುವ ಕಾರಣ, ಅದನ್ನು ಹೇಗೆ ಬರೆಯುವುದೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿಲ್ಲ.<br />
ಆದರೆ, ವಿಶೇಷ ಎಂಬ ಪದವನ್ನು ಬರೆಯುವಾಗ ಎರಡನೆಯ ಮುಚ್ಚುಲಿಯನ್ನು ಶ್ ಎಂಬುದಾಗಿ, ಮತ್ತು ಮೂರನೆಯ ಮುಚ್ಚುಲಿಯನ್ನು ಷ್ ಎಂಬುದಾಗಿ ಬರೆಯಬೇಕೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಯಾಕೆಂದರೆ, ಅವೆರಡನ್ನೂ ಒಂದೇ ರೀತಿಯಲ್ಲಿ ಓದಲಾಗುತ್ತದೆ.ಇದನ್ನು ನೆನಪಿನಲ್ಲಿಟ್ಟುಕೊಳ್ಳಲಾರದವರು ಬರವಣಿಗೆಯಲ್ಲಿ ತಪ್ಪು ಮಾಡುತ್ತಾರೆ.</p>
<p>ಇವತ್ತು ದಿನಪತ್ರಿಕೆಗಳಲ್ಲಿ, ಕತೆ-ಕಾದಂಬರಿಗಳಲ್ಲಿ, ಮತ್ತು ಬೇರೆ ಬಗೆಯ ಬರಹಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸುವುದು ಓದುವ ಹಾಗೆ ಬರೆಯದಿರುವ ಮಹಾಪ್ರಾಣಾಕ್ಶರ, ಷಕಾರ, ಋಕಾರ ಮೊದಲಾದ ಬರಿಗೆಗಳಿರುವ ಸಂಸ್ಕ್ರುತ ಪದಗಳ ಬಳಕೆಯಲ್ಲಿ ಎಂಬುದನ್ನು ಗಮನಿಸಬಹುದು.</p>
<p>(೪) ಸಾಮಾನ್ಯವಾಗಿ ಜನರು ಪದಕೋಶಗಳನ್ನು ನೋಡಲು ಹೋಗುವುದು ಹೊಸದಾಗಿ ಅವರ ಓದಿನಲ್ಲಿ ಕಾಣಿಸಿಕೊಳ್ಳುವ ಪದಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಾಗಿ; ಆದರೆ, ಓದುವ ಹಾಗೆ ಬರೆಯದಿರುವ ವಿಶೇಷ, ಅಧಿಕಾರಿ ಮೊದಲಾದ ಪದಗಳನ್ನು ಅವುಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಿಂತಲೂ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯುವುದಕ್ಕಾಗಿ ಪದಕೋಶಗಳನ್ನು ನೋಡಬೇಕಾಗುತ್ತದೆ. ಓದುವ ಹಾಗೆಯೇ ಬರೆಯುವ ಯಾವ ಪದವನ್ನೂ ಈ ರೀತಿ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯಲು ಪದಕೋಶವನ್ನು ನೋಡಬೇಕಾಗುವುದಿಲ್ಲ.</p>
<p>(೫) ಕೆಳವರ‍್ಗದ ಮಕ್ಕಳಲ್ಲಿ ಇಂತಹ ಪದಗಳ ಕಲಿಕೆ ಕೀಳರಿಮೆಯನ್ನು ಉಂಟುಮಾಡುತ್ತದೆ; ಅವು ಕೊಡುವ ತೊಂದರೆಯಿಂದಾಗಿ ಕೆಲವರು ಬರಹದ ಕಲಿಕೆಯನ್ನು ನಡುವಿನಲ್ಲೇ ನಿಲ್ಲಿಸಿಬಿಡುತ್ತಾರೆ. ಓದಲು ಕಲಿತವರೂ ಅದನ್ನು ತುಂಬಾ ಅಪರೂಪವಾಗಿ ಮಾತ್ರ ಬಳಸುತ್ತಾರೆ. ಯಾಕೆಂದರೆ, ಅವರಿಗೆ ಸಲೀಸಾಗಿ ಓದುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.<br />
ಸಮಾಜಗಳಲ್ಲಿ ಹಲವಾರು ಬಗೆಯ ಸಂಪ್ರದಾಯಗಳು ಬೇರೆ ಬೇರೆ ಕಾರಣಗಳಿಗಾಗಿ ಬಳಕೆಗೆ ಬರುತ್ತವೆ, ಮತ್ತು ಅವುಗಳಿಂದ ಸಮಾಜಕ್ಕೆ ಪ್ರಯೋಜನಗಳೇನೂ ಇಲ್ಲದಿದ್ದರೂ, ಹೆಚ್ಚಿನ ತೊಂದರೆಯಿಲ್ಲವಾದಲ್ಲಿ ಅವು ಹಾಗೆಯೇ ವರ‍್ಶಗಟ್ಟಲೆ ಸಮಯ ಮುಂದುವರಿಯುತ್ತಿರುತ್ತವೆ.</p>
<p>ಸಂಸ್ಕ್ರುತದ ಎರವಲು ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬುದೂ ಇಂತಹದೇ ಒಂದು ಸಂಪ್ರದಾಯ. ಅದರಿಂದ ಕನ್ನಡ ಬರಹದ ಮಟ್ಟಿಗೆ ಯಾವ ಪ್ರಯೋಜನವೂ ಇಲ್ಲ. ಹಳೆಗನ್ನಡದ ಸಮಯದಲ್ಲಿ ಇಂತಹ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬಹುದಿತ್ತು, ಇಲ್ಲವೇ ಕನ್ನಡದ ಸೊಗಡನ್ನು ಕೆಡಿಸದಂತೆ ಅವನ್ನು ಮಾರ‍್ಪಡಿಸಿ ತದ್ಬವಗಳನ್ನಾಗಿ ಮಾಡಿಯೂ ಬಳಸಬಹುದಿತ್ತು. ಆಂಡಯ್ಯನ ಕಬ್ಬಿಗರ ಕಾವದಲ್ಲಿ ಅಂತಹ ತದ್ಬವ ಪದಗಳನ್ನು ಮಾತ್ರ ಬಳಸಲಾಗಿದೆ.</p>
<p>ಆದರೆ, ಇವತ್ತು ಹೊಸಗನ್ನಡದಲ್ಲಿ ಬರಹಗಾರರು ಈ ಆಯ್ಕೆಯನ್ನು ಕಳೆದುಕೊಂಡಿದ್ದಾರೆ. ಬಳಕೆಯಲ್ಲಿರುವ ಕೆಲವೇ ಕೆಲವು ತದ್ಬವ ಪದಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಂಸ್ಕ್ರುತ ಪದಗಳನ್ನೂ ಇವತ್ತು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕಾಗಿದೆ. ಅವುಗಳಲ್ಲಿ ಯಾವುದೇ ಬಗೆಯ ಮಾರ‍್ಪಾಡನ್ನು ನಡೆಸಿದರೂ ಅದನ್ನು ತಪ್ಪೆಂದು ತಿಳಿಯಲಾಗುತ್ತದೆ.<br />
ಮೊನ್ನೆ ಮೊನ್ನೆಯ ವರೆಗೂ ಈ ಸಂಪ್ರದಾಯ ಹೆಚ್ಚಿನ ತೊಂದರೆಯನ್ನೇನೂ ಕೊಡುತ್ತಿರಲಿಲ್ಲ. ಯಾಕೆಂದರೆ, ಸಮಾಜದಲ್ಲಿ ಮೇಲ್ವರ‍್ಗಕ್ಕೆ ಸೇರಿದ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಬಳಸಬೇಕಾಗಿತ್ತು, ಮತ್ತು ಅವರಲ್ಲಿ ಹೆಚ್ಚಿನವರೂ ಕನ್ನಡದೊಂದಿಗೆ ಸಂಸ್ಕ್ರುತವನ್ನೂ ಕಲಿಯುತ್ತಿದ್ದರು; ಹಾಗಾಗಿ, ಈ ಸಂಪ್ರದಾಯವನ್ನು ಮುಂದುವರಿಸಿಕೊಂಡುಹೋಗುವುದು ಅವರಿಗೆ ತೊಡಕಿನದಾಗಿರಲಿಲ್ಲ.</p>
<p>ಆದರೆ, ಇವತ್ತು ಎಲ್ಲಾ ವರ‍್ಗದ ಜನರು ಮತ್ತು ಎಲ್ಲರೂ ಬರಹವನ್ನು ಬಳಸಬೇಕಾಗಿದೆ. ಯಾಕೆಂದರೆ, ಇವತ್ತು ಸಮಾಜದಲ್ಲಿ ಬರಹಕ್ಕೆ ಅಂತಹದೊಂದು ಪ್ರಾಮುಕ್ಯತೆ ಬಂದಿದೆ. ಬರಹವನ್ನು ಬಳಸಲು ತಿಳಿಯದವರು ಮುಂದೆ ಬರಲು ಸಾದ್ಯವೇ ಇಲ್ಲ, ಮತ್ತು ಅಂತಹ ಹಲವು ಮಂದಿ ಜನರಿರುವ ಸಮಾಜ ಏಳಿಗೆಯಾಗಲೂ ಸಾದ್ಯವೇ ಇಲ್ಲ ಎಂಬ ಪರಿಸ್ತಿತಿ ಇವತ್ತಿನದಾಗಿದೆ.</p>
<p>ಈ ರೀತಿ ಕನ್ನಡ ಬರಹವನ್ನು ಬಳಸಲು ಕಲಿಯಲೇ ಬೇಕಾಗಿರುವ ಜನರಲ್ಲಿ ಹೆಚ್ಚಿನವರಿಗೂ ಸಂಸ್ಕ್ರುತದ ಅರಿವು ಬೇಕಾಗಿಲ್ಲ; ಅದಕ್ಕಿಂತಲೂ ಅವರಿಗೆ ಇಂಗ್ಲಿಶ್ ನುಡಿಯ ಅರಿವು ಹೆಚ್ಚಿನ ನೆರವು ನೀಡಬಲ್ಲುದು. ಹಾಗಾಗಿ, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬ ಮೇಲಿನ ಸಂಪ್ರದಾಯ ಒಂದು ಹೆಚ್ಚಿನ ತೊಡಕನ್ನು ಮಾತ್ರ ತಂದೊಡ್ಡುತ್ತದಲ್ಲದೆ, ಅದರಿಂದ ಅವರು ಪಡೆಯಬಹುದಾದ ಪ್ರಯೋಜನ ಯಾವುದೂ ಇಲ್ಲ.</p>
<p>ಈ ರೀತಿ ಕನ್ನಡದ ಮಟ್ಟಿಗೆ ಯಾವ ಪ್ರಯೋಜನವನ್ನೂ ನೀಡದ, ಹಲವು ಮಂದಿ ಕನ್ನಡಿಗರಿಗೆ ತೊಡಕನ್ನು ಮಾತ್ರವೇ ಕೊಡುವ, ಮತ್ತು ನಮ್ಮ ಸಮಾಜದ ಏಳಿಗೆಗೂ ತೊಡಕಾಗಿರುವ ಈ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಜಾಣತನ. ಇದು ಒಂದೂವರೆ-ಎರಡು ಸಾವಿರ ವರ‍್ಶದ ಹಿಂದಿನ ಸಮಾಜಕ್ಕಾಗಿ ಮಾಡಿಕೊಂಡಿದ್ದ ಸಂಪ್ರದಾಯ. ಇಂದಿನ ಸಮಾಜ ಆಗಿನದಕ್ಕಿಂತ ತೀರ ಬೇರೆಯಾಗಿದೆ. ಹೀಗಿರುವಾಗಲೂ ಆ ಹಳೆಯ ಸಂಪ್ರದಾಯವನ್ನು ತೊರೆಯಲು ಹಿಂಜರಿಯುವುದೆಂದರೆ, ಅಪ್ಪ ನೆಟ್ಟ ಆಲದ ಮರವೆಂದು ನೇಣು ಹಾಕಿಕೊಳ್ಳುವ ಹಾಗೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;t=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%AA%E0%B2%A6%E0%B2%97%E0%B2%B3%E0%B2%A8%E0%B3%8D%E0%B2%A8%E0%B3%81%20%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B2%AC%E0%B3%87%E0%B2%95%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25a8%25e0%25b3%258d%25e0%25b2%25a8%25e0%25b3%2581-%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/feed/</wfw:commentRss>
		<slash:comments>0</slash:comments>
		</item>
	</channel>
</rss>
