<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ತಿಳಿವಿಗ</title>
	<atom:link href="http://dnshankarabhat.net/tag/%e0%b2%a4%e0%b2%bf%e0%b2%b3%e0%b2%bf%e0%b2%b5%e0%b2%bf%e0%b2%97/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಕಲಿಕೆ ಮತ್ತು ಅರಕೆ</title>
		<link>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586</link>
		<comments>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/#comments</comments>
		<pubDate>Mon, 14 Apr 2014 16:55:06 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Education]]></category>
		<category><![CDATA[guide]]></category>
		<category><![CDATA[guiding]]></category>
		<category><![CDATA[Kannada linguisitics]]></category>
		<category><![CDATA[learning]]></category>
		<category><![CDATA[linguistics]]></category>
		<category><![CDATA[research]]></category>
		<category><![CDATA[teaching]]></category>
		<category><![CDATA[ಅರಿಗ]]></category>
		<category><![CDATA[ಅರಿಮೆ]]></category>
		<category><![CDATA[ಕಲಿಕೆ]]></category>
		<category><![CDATA[ಕಲಿಗ]]></category>
		<category><![CDATA[ಕೇಶಿರಾಜ]]></category>
		<category><![CDATA[ಡಾಕ್ಟರೇಟ್]]></category>
		<category><![CDATA[ತಿಳಿವಿಗ]]></category>
		<category><![CDATA[ದಾರಿತೋರುಗ]]></category>
		<category><![CDATA[ಪೆರ‍್ಬರಹ]]></category>
		<category><![CDATA[ವಯ್ಯಾಕರಣಿ]]></category>
		<category><![CDATA[ವಿಶ್ವವಿದ್ಯಾಲಯ]]></category>
		<category><![CDATA[ವ್ಯಾಕರಣ]]></category>
		<category><![CDATA[ಸಂಶೋದನೆ]]></category>
		<category><![CDATA[ಸೊಲ್ಲರಿಮೆ]]></category>

		<guid isPermaLink="false">http://dnshankarabhat.net/?p=99</guid>
		<description><![CDATA[ನುಡಿಯರಿಮೆಯ ಇಣುಕುನೋಟ – 19 ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು. ಅರಕೆ ಎಂಬುದು ಇದಕ್ಕಿಂತ ತೀರ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 19</strong></p>
<p>ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು.</p>
<p>ಅರಕೆ ಎಂಬುದು ಇದಕ್ಕಿಂತ ತೀರ ಬೇರಾದುದು; ಒಂದು ವಿಶಯದ ಕುರಿತು ತಮ್ಮ ಸಮಾಜದಲ್ಲಿ ಕಲೆತಿರುವ ತಿಳಿವಿನಲ್ಲಿ ತಪ್ಪುಗಳು ಏನಾದರೂ ಇವೆಯೇ, ಮತ್ತು ಆ ವಿಶಯದ ಕುರಿತಾಗಿ ಯಾರಿಗೂ ತಿಳಿಯದಿರುವಂತಹ ಹೊಸ ಸಂಗತಿಗಳೇನಾದರೂ ಇವೆಯೇ ಎಂಬುದನ್ನು ಕಂಡುಹಿಡಿಯುವುದೇ ಅರಕೆ.</p>
<p>ಈ ವ್ಯತ್ಯಾಸದಂತೆ, ಒಂದು ವಿಶಯವನ್ನು ನಮಗೆ ಕಲಿಯಬೇಕೆಂದಿದ್ದಲ್ಲಿ ಅದಕ್ಕೆ ಕಲಿಸುಗರ ನೆರವು ಬೇಕಾಗುತ್ತದೆ; ಆದರೆ, ಒಂದು ವಿಶಯದ ಕುರಿತು ಅರಕೆಯನ್ನು ನಡೆಸಬೇಕೆಂದಿದ್ದಲ್ಲಿ, ಅದಕ್ಕೆ ನಮಗೆ ‘ದಾರಿತೋರುಗರ’ ನೆರವು ಬೇಕಾಗುತ್ತಲ್ಲದೆ ಕಲಿಸುಗರ ನೆರವು ಬೇಕಾಗುವುದಿಲ್ಲ.</p>
<p>ಕಲಿಯುವವರ ಮಟ್ಟಿಗೆ ಕಲಿಸುಗರೆಂದರೆ ಎಲ್ಲವನ್ನೂ ತಿಳಿದವರು; ಕಲಿಯುವವರಲ್ಲಿ ಏಳುವ ಸಂಶಯಗಳನ್ನೆಲ್ಲ ಇಲ್ಲವಾಗಿಸುವ ಅಳವು ಅವರಿಗಿದೆ; ಹಾಗಾಗಿ, ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಕಿವಿಗೊಟ್ಟು ಕೇಳಿ, ಅದನ್ನು ಸರಿಯಾಗಿ ತಿಳಿದುಕೊಳ್ಳುವುದೇ ಕಲಿಗರು ಮಾಡಬೇಕಾಗಿರುವ ಮುಕ್ಯ ಕೆಲಸ.</p>
<p>ಆದರೆ, ಅರಕೆಯನ್ನು ನಡೆಸುವವರ ಮಟ್ಟಿಗೆ ಎಲ್ಲವನ್ನೂ ತಿಳಿದವರು ಯಾರೂ ಇಲ್ಲ; ದಾರಿತೋರುಗರು ಅವರಿಗೆ ಯಾವ ರೀತಿಯಲ್ಲಿ ಅರಕೆಯನ್ನು ನಡೆಸಬಹುದು ಎಂಬುದನ್ನು ತಿಳಿಸಬಲ್ಲರಲ್ಲದೆ, ಅರಕೆಯ ಕೊನೆಯ ತೀರ‍್ಮಾನ ಹೇಗಿರಬಹುದು, ಇಲ್ಲವೇ ಹೇಗಿರಬೇಕು ಎಂಬುದನ್ನು ತಿಳಿಸಲಾರರು. ಅದನ್ನು ತಮ್ಮ ಅರಕೆಗಳ ಮೂಲಕ ಹೊಸದಾಗಿ ಕಂಡುಹಿಡಿಯುವುದೇ ಅರಕೆಯನ್ನು ನಡೆಸುವವರ ಮುಕ್ಯ ಕೆಲಸ. ಈ ರೀತಿ, ಯಾರಿಗೂ ಗೊತ್ತಿಲ್ಲದಿರುವ ಸಂಗತಿಗಳನ್ನು ಕಂಡುಹಿಡಿಯುವ ಮೂಲಕ, ಮತ್ತು ತಪ್ಪು ತಪ್ಪಾಗಿ ತಿಳಿದುಕೊಂಡಿರುವ ಸಂಗತಿಗಳನ್ನು ಸರಿಪಡಿಸುವ ಮೂಲಕ ಸಮಾಜದಲ್ಲಿರುವ ತಿಳಿವಿನ ಬೊಕ್ಕಸವನ್ನು ಹಿರಿದಾಗಿಸುವುದೇ ಅರಕೆ ನಡೆಸುವವರ ಕೆಲಸವಾಗಿದೆ.</p>
<p>ಕಲಿಕೆಗೂ ಅರಕೆಗೂ ನಡುವೆ ವ್ಯತ್ಯಾಸವಿರುವ ಹಾಗೆ, ಕಲಿಕೆಯನ್ನು ಕೊಡಿಸುವ ಕಲಿಸುಗರಿಗೂ ಅರಕೆಯನ್ನು ನಡೆಸಲು ದಾರಿತೋರುಗರಿಗೂ ನಡುವೆ ವ್ಯತ್ಯಾಸವಿರುವುದು ಅವಶ್ಯ. ಕಲಿಸುಗನೊಬ್ಬ ತಾನು ಕಲಿಸುವ ವಿಶಯವನ್ನು ಸರಿಯಾಗಿ ತಿಳಿದಿರಬೇಕು ಮಾತ್ರವಲ್ಲ, ತಾನು ತಿಳಿದಿರುವುದೆಲ್ಲವೂ ಸರಿ ಎಂಬ ಆತ್ಮವಿಶ್ವಾಸವೂ ಆತನಲ್ಲಿರಬೇಕು. ಈ ವಿಶಯದಲ್ಲಿ ಸ್ವಲ್ಪವಾದರೂ ಸಂಶಯವಿದೆಯಾದರೆ, ಆತ ಎದೆಗಾರಿಕೆಯಿಂದ ಕಲಿಗರಿಗೆ ಕಲಿಸಿಕೊಡಲಾರ.</p>
<p>ಆದರೆ, ಅರಕೆಯನ್ನು ನಡೆಸುವವರು, ಮತ್ತು ಅರಕೆಗೆ ದಾರಿ ತೋರಿಸುವವರು ಯಾವ ಹೇಳಿಕೆಯನ್ನೂ ಪೂರ‍್ತಿಯಾಗಿ ಸರಿಯೆಂದು ತಿಳಿದುಕೊಳ್ಳಬಾರದು. ಎಲ್ಲವನ್ನೂ ಸಂಶಯದಿಂದ ನೋಡಿದಾಗ ಮಾತ್ರ ಅವರ ಅರಕೆ ಮುಂದೆ ಹೋಗಬಲ್ಲುದು. ಎಂತಹ ದೊಡ್ಡ ತಿಳಿವಿಗರು ಹೇಳಿದ್ದನ್ನೂ ಹಾಗೆಯೇ ಒಪ್ಪಿಕೊಳ್ಳದೆ ವಿಚಾರಣೆಗೆ ಒಳಪಡಿಸಲು ಅವರು ಅಣಿಯಾಗಿರಬೇಕು.</p>
<p>ಈ ಕಾರಣಕ್ಕಾಗಿ, ಪರೀಕ್ಶೆಗಳಲ್ಲಿ ರ‍್ಯಾಂಕ್ ಗಳಿಸುವ ಕಲಿಗ ಉತ್ತಮ ಅರಕೆಗಾರನಾಗಬೇಕೆಂದೇನಿಲ್ಲ. ಇದೇ ರೀತಿಯಲ್ಲಿ, ಕಲಿಗರ ಅಚ್ಚುಮೆಚ್ಚಿನ ಕಲಿಸುಗ ಅರಕೆಗಳಿಗೆ ಒಳ್ಳೆಯ ದಾರಿತೋರುಗನಾಗಬೇಕೆಂದೂ ಇಲ್ಲ. ಕಲಿಯುವುದಕ್ಕೆ ಮತ್ತು ಕಲಿಸುವುದಕ್ಕೆ ಬೇಕಾಗುವ ಮನೋಬಾವ ಅರಕೆಗೆ ಮತ್ತು ಅದರ ದಾರಿತೋರಿಕೆಗೆ ಬೇಕಾಗುವ ಮನೋಬಾವಕ್ಕಿಂತ ತೀರ ಬೇರಾಗಿರುವುದೇ ಇದಕ್ಕೆ ಕಾರಣ.</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಈ ಎರಡು ಕೆಲಸಗಳನ್ನೂ ಒಬ್ಬರೇ ಮಾಡಬೇಕಾಗುವುದರಿಂದ, ಹೆಚ್ಚಿನೆಡೆಗಳಲ್ಲೂ ಅರಕೆಯ ಹೆಸರಿನಲ್ಲಿ ಕಲಿಕೆ ಮಾತ್ರ ನಡೆಯುವುದು ಕಾಣಿಸುತ್ತದೆ. ಈ ಎರಡು ಬಗೆಯ ಕೆಲಸಗಳನ್ನು ಒಬ್ಬರಿಗೇನೇ ನಡೆಸಿಕೊಂಡು ಹೋಗಲು ಹೆಚ್ಚಿನವರಿಗೂ ಸಾದ್ಯವಾಗದಿರುವುದೇ ಇದಕ್ಕೆ ಕಾರಣ.</p>
<p>ಒಮ್ಮೆ ನನ್ನ ಮಿತ್ರರೊಬ್ಬರು ಡಾಕ್ಟರೇಟ್ ಪದವಿಗಾಗಿ ತಾವು ಬರೆದ ಪೆರ‍್ಬರಹವನ್ನು ನನಗೆ ತೋರಿಸಿದರು. ಅದನ್ನು ಓದಿದಾಗ ನನಗೆ ತುಂಬಾ ಆಶ್ಚರ‍್ಯವಾಯಿತು: ಮೂವತ್ತು ವರ‍್ಶಗಳಶ್ಟು ಹಳೆಯ ಸಿದ್ದಾಂತಗಳನ್ನು ಬಳಸಿ ಅವರು ಅದನ್ನು ಬರೆದಿದ್ದರು. ಆ ಸಿದ್ದಾಂತಗಳಲ್ಲಿ ಹೆಚ್ಚಿನವೂ ಸರಿಯಲ್ಲ ಎಂದು ಅವರಿಗೆ ಸ್ಪಶ್ಟವಾಗಿ ತಿಳಿದಿದ್ದರೂ ಅವರು ಹೀಗೆ ಮಾಡಿದ್ದರು. “ಇದು ಯಾಕೆ ಹೀಗೆ?” ಎಂದು ನಾನು ಕೇಳಿದಾಗ ಅವರು ಹೇಳಿದರು, “ನನ್ನ ದಾರಿತೋರುಗರು ತಮ್ಮ ಡಾಕ್ಟರೇಟ್ ಪೆರ‍್ಬರಹದಲ್ಲಿ ಈ ಸಿದ್ದಾಂತಗಳನ್ನು ಬಳಸಿದ್ದಾರೆ; ಈಗ ನಾನು ಹೊಸ ಸಿದ್ದಾಂತಗಳನ್ನು ಬಳಸಿದಲ್ಲಿ, ಅವರು ಹಿಂದೆ ಬರೆದಿದ್ದ ಪೆರ‍್ಬರಹ ಸರಿಯಲ್ಲ ಎಂಬುದಾಗಿ ನಾನು ಹೇಳಿದ ಹಾಗಾದೀತು. ಹಾಗೆ ಮಾಡಿದಲ್ಲಿ, ನನ್ನ ಪೆರ‍್ಬರಹಕ್ಕೆ ಅವರ ಒಪ್ಪಿಗೆ ಸಿಗಲಾರದು.”</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಜಾಗತಿಕ ಮಟ್ಟದ ಅರಕೆಗಳು ನಡೆಯದಿರುವುದಕ್ಕೆ ಒಂದು ಮುಕ್ಯವಾದ ಕಾರಣವನ್ನು ಇದು ಬಹಳ ಸ್ಪಶ್ಟವಾಗಿ ತಿಳಿಸುತ್ತದೆ. ತಮ್ಮ ದಾರಿತೋರಿಕೆಯಲ್ಲಿ ಪೆರ‍್ಬರಹಗಳನ್ನು ಬರೆಯುತ್ತಿರುವ ಅರಕೆಗಾರರು ತಾವು ಬರೆದಿರುವ ಪೆರ‍್ಬರಹಕ್ಕಿಂತ ಒಂದು ಹೆಜ್ಜೆ ಮುಂದೆ ಹೋದರೂ ಬೇಸರಪಟ್ಟುಕೊಳ್ಳುವ ತಿಳಿವಿಗರಿರುವಶ್ಟು ದಿವಸ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಅರಕೆಗಳನ್ನು ನಡೆಸುವುದು ಅಸಾದ್ಯವೆಂದೇ ಹೇಳಬಹುದು. ತನ್ನ ಕಲಿಗನಿಂದ ಸೋಲನ್ನು ಬಯಸುವ ತಿಳಿವಿಗರು ಮಾತ್ರ ನಿಜಕ್ಕೂ ಅರಕೆಗೆ ದಾರಿತೋರಿಸಬಲ್ಲರು. ಅಂತಹ ತಿಳಿವಿಗರು ನಮ್ಮಲ್ಲಿ ಬೆರಳೆಣಿಕೆಯಶ್ಟೂ ಇಲ್ಲ ಎಂಬುದು ಬೇಸರದ ಸಂಗತಿ.</p>
<p>ಈ ಮಾತು ಎಶ್ಟು ಸರಿ ಎಂಬುದನ್ನು ಕನ್ನಡದ ಸೊಲ್ಲರಿಮೆಯ (ವ್ಯಾಕರಣದ) ಕುರಿತಾಗಿ ನಡೆದಿರುವ ಅರಕೆಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗಬಹುದು. <a href="http://honalu.net/tag/%E0%B2%B6%E0%B2%AC%E0%B3%8D%E0%B2%A6%E0%B2%AE%E0%B2%A3%E0%B2%BF%E0%B2%A6%E0%B2%B0%E2%80%8D%E0%B3%8D%E0%B2%AA%E0%B2%A3/" target="_blank">ಕೇಶಿರಾಜ</a>ನೇ ಮೊದಲಾದ ಕನ್ನಡದ ಸೊಲ್ಲರಿಗರು ಏನು ಹೇಳಿದ್ದಾರೆ ಎಂಬುದನ್ನು ಚರ‍್ಚಿಸುವುದು ಸೊಲ್ಲರಿಮೆಯ ಕಲಿಕೆಯಲ್ಲದೆ ಅರಕೆಯಲ್ಲ. ಅವರು ಬರೆದಿರುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ತಪ್ಪುಗಳೇನಾದರೂ ಇವೆಯೇ? ಇದ್ದರೆ ಅವನ್ನು ಇಲ್ಲವಾಗಿಸುವುದು ಹೇಗೆ? ಅವರು ಹೇಳದೇ ಇರುವಂತಹ ಸೊಲ್ಲರಿಮೆಯ ಕಟ್ಟಲೆಗಳು ಯಾವುವಾದರೂ ಇವೆಯೇ? ಇದ್ದರೆ ಅವು ಎಂತಹವು? ಎಂಬಂತಹ ವಿಶಯಗಳ ಕುರಿತು ಚರ‍್ಚೆ ನಡೆದಲ್ಲಿ ಮಾತ್ರ ಈ ಸೊಲ್ಲರಿಮೆಗಳ ಮೇಲೆ ಅರಕೆ ನಡೆದಿದೆಯೆಂದು ಹೇಳಬಹುದು.</p>
<p>ಹಳೆಗನ್ನಡದಲ್ಲಿ ದ, ದಪ, ಮತ್ತು ವ ಎಂಬ ಮೂರು ಹೊತ್ತಿನ ಒಟ್ಟುಗಳು (ಕಾಲಪ್ರತ್ಯಯಗಳು) ಬಳಕೆಯಾಗುತ್ತವೆ, ಮತ್ತು ಇವು ಹಿಂಬೊತ್ತು (ಬೂತ), ಈಪೊತ್ತು (ವರ‍್ತಮಾನ), ಮತ್ತು ಮುಂಬೊತ್ತು (ಬವಿಶ್ಯತ್) ಎಂಬ ಮೂರು ಹೊತ್ತುಗಳನ್ನು ತಿಳಿಸುತ್ತವೆ ಎಂಬುದಾಗಿ ಕೇಶಿರಾಜನೇ ಮೊದಲಾದ ಎಲ್ಲಾ ಕನ್ನಡದ ಸೊಲ್ಲರಿಗರೂ ಹೇಳುತ್ತಾರೆ. ಆದರೆ, ನಿಜಕ್ಕೂ ಈ ಹೇಳಿಕೆ ಸರಿಯಲ್ಲ; ಎತ್ತುಗೆಗಾಗಿ, ಪಂಪಬಾರತದ “ಸೆರಗಂ ಬಗೆದೊಡೆ ಸಾವಾದಪುದು” ಎಂಬ ಸೊಲ್ಲಿಗೆ ‘ಸಹಾಯವನ್ನು ಬಯಸಿದರೆ ಸಾವಾಗುತ್ತದೆ’ ಎಂಬ ಹುರುಳಿದ್ದು, ಅದರಲ್ಲಿ ಬಂದಿರುವ ದಪ ಒಟ್ಟಿಗೆ ಮುಂದೆ ಏನಾಗಬಲ್ಲುದು ಎಂಬುದನ್ನು ತಿಳಿಸುವ ಮುಂಬೊತ್ತಿನ ಹುರುಳಿದೆಯಲ್ಲದೆ ಈಗ ಏನಾಗುತ್ತಿದೆ ಎಂಬುದನ್ನು ತಿಳಿಸುವ ಈಪೊತ್ತಿನ ಹುರುಳಿಲ್ಲ.</p>
<p>ಆದರೆ, ಹಳೆಗನ್ನಡದ ಸೊಲ್ಲರಿಮೆಯ ಕುರಿತಾಗಿ ಅರಕೆ ನಡೆಸಿದವರು ಯಾರೂ ಇದನ್ನು ಗಮನಿಸಿದ ಹಾಗೆ ಕಾಣಿಸುವುದಿಲ್ಲ. ಇಂತಹ ಇನ್ನೂ ಹಲವಾರು ತಪ್ಪುಗಳು ಕೇಶಿರಾಜನೇ ಮೊದಲಾದ ಕನ್ನಡದ ಸೊಲ್ಲರಿಗರು ತಿಳಿಸುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ಕಾಣಿಸುತ್ತವೆ; ಇದಲ್ಲದೆ, ಅವರು ಹೇಳದಿರುವಂತಹ ಬೇರೆ ಹಲವು ಕಟ್ಟಲೆಗಳೂ ಹಳೆಗನ್ನಡದ ಸೊಲ್ಲರಿಮೆಯನ್ನು ವಿವರಿಸಲು ಬೇಕಾಗುತ್ತವೆ. ಇವುಗಳಲ್ಲಿ ಕೆಲವನ್ನಾದರೂ ಪಟ್ಟಿಮಾಡಬಲ್ಲವರು ಮಾತ್ರ ನಿಜಕ್ಕೂ ಹಳೆಗನ್ನಡದ ಮೇಲೆ ಅರಕೆ ನಡೆಸಿದ್ದಾರೆಂದು ಹೇಳಲು ಬರುತ್ತದೆ.</p>
<p>ಬೇರೆ ಬಗೆಯ ತಿಳಿವುಗಳ ಕುರಿತಾಗಿಯೂ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಮತ್ತು ಬೇರೆ ಬಗೆಯ ಅರಕೆಮನೆಗಳಲ್ಲಿ ಇವತ್ತು “ಅರಕೆ”ಗಳು ನಡೆಯುತ್ತಿವೆ; ಆದರೆ, ಇವುಗಳಲ್ಲಿ ಹೆಚ್ಚಿನವೂ ಮೇಲೆ ವಿವರಿಸಿದ ಹಾಗೆ ದಾರಿತಪ್ಪಿರುವ ಅರಕೆಗಳು; ಹೊಸ ತಿಳಿವನ್ನು ಕಂಡುಹಿಡಿಯುವ ಇಲ್ಲವೇ ಹಳೇ ತಿಳಿವನ್ನು ಸಾಣೆಗೆ ಹಿಡಿಯುವ ಉದ್ದೇಶ ಅವಕ್ಕಿಲ್ಲ. ಹಾಗಾಗಿ, ಅರಕೆಗಾರರಿಗೆ ಒಂದು ಡಿಗ್ರಿಯನ್ನು ಕೊಡಿಸುವ ಕೆಲಸವನ್ನಶ್ಟೇ ಅವು ನಡೆಸಬಲ್ಲುವು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;t=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/feed/</wfw:commentRss>
		<slash:comments>0</slash:comments>
		</item>
		<item>
		<title>ಮಕ್ಕಳಿಗೆ ವ್ಯಾಕರಣ ಕಲಿಸಬೇಕೇ?</title>
		<link>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b3%8d%e0%b2%af%e0%b2%be%e0%b2%95%e0%b2%b0%e0%b2%a3-%e0%b2%95%e0%b2%b2%e0%b2%bf%e0%b2%b8%e0%b2%ac%e0%b3%87%e0%b2%95/?utm_source=rss&#038;utm_medium=rss&#038;utm_campaign=%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25b5%25e0%25b3%258d%25e0%25b2%25af%25e0%25b2%25be%25e0%25b2%2595%25e0%25b2%25b0%25e0%25b2%25a3-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b2%25ac%25e0%25b3%2587%25e0%25b2%2595</link>
		<comments>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b3%8d%e0%b2%af%e0%b2%be%e0%b2%95%e0%b2%b0%e0%b2%a3-%e0%b2%95%e0%b2%b2%e0%b2%bf%e0%b2%b8%e0%b2%ac%e0%b3%87%e0%b2%95/#comments</comments>
		<pubDate>Mon, 14 Apr 2014 16:51:03 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[grammar]]></category>
		<category><![CDATA[Kannada grammar]]></category>
		<category><![CDATA[Kannada linguistics]]></category>
		<category><![CDATA[linguistics]]></category>
		<category><![CDATA[Sanskrit grammar]]></category>
		<category><![CDATA[ತಿಳಿವಿಗ]]></category>
		<category><![CDATA[ಮಕ್ಕಳ ಕಲಿಕೆ]]></category>
		<category><![CDATA[ವಾಕ್ಯ]]></category>
		<category><![CDATA[ವ್ಯಾಕರಣ]]></category>
		<category><![CDATA[ಶಾಲೆ]]></category>
		<category><![CDATA[ಸೊಲ್ಲರಿಮೆ]]></category>
		<category><![CDATA[ಸೊಲ್ಲು]]></category>

		<guid isPermaLink="false">http://dnshankarabhat.net/?p=91</guid>
		<description><![CDATA[ನುಡಿಯರಿಮೆಯ ಇಣುಕುನೋಟ – 15 ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, ವ್ಯಾಕರಣವನ್ನು ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ. ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 15</strong></p>
<p>ಬೇಕು ಎನ್ನುತ್ತಿದ್ದಾರೆ ಇತ್ತೀಚೆಗೆ ಹಲವು ಮಂದಿ ತಿಳಿವಿಗರು; ಆದರೆ, <strong>ವ್ಯಾಕರಣವನ್ನು</strong> ಹಿಂದಿನ ಹಾಗೆ ಒಂದು ವಿಶಯವಾಗಿ ಕಲಿಸುವ ಬದಲು, ಮಕ್ಕಳ ಓದು ಮತ್ತು ಬರಹಗಳ ಕಲಿಕೆಗೆ ನೆರವಾಗುವ ಹಾಗೆ ನೇರವಲ್ಲದ ಬಗೆಯಲ್ಲಿ ಅದನ್ನು ಕಲಿಸಬೇಕು ಎಂಬುದು ಹೆಚ್ಚಿನ ತಿಳಿವಿಗರ ತೀರ‍್ಮಾನವಾಗಿದೆ.</p>
<p>ನಿಜಕ್ಕೂ ವ್ಯಾಕರಣದ ಕಟ್ಟಲೆಗಳನ್ನು ಮಕ್ಕಳಿಗೆ ಕಲಿಸುವುದು ತುಂಬಾ ತೊಡಕಿನ ಕೆಲಸ. ಯಾಕೆಂದರೆ, ಮೊದಲನೆಯದಾಗಿ, ಈ ಕಟ್ಟಲೆಗಳೆಲ್ಲ ತೊಡಕು ತೊಡಕಾದವುಗಳು; ಅವನ್ನು ವಿವರಿಸಲು ಬೇರೆಯೇ ಆದ ಅರಿಮೆಯ ಪದಗಳು ಬೇಕಾಗುತ್ತವೆ. ಇದಲ್ಲದೆ, ಅವುಗಳಲ್ಲಿ ಯಾವ ಕಟ್ಟಲೆಯೂ ಬೇರೆಯಾಗಿ ನಿಲ್ಲುವುದಿಲ್ಲ; ಎಲ್ಲವೂ ಒಂದರೊಡನೊಂದು ಹೆಣೆದಿರುತ್ತವೆ. ಹಾಗಾಗಿ, ವ್ಯಾಕರಣದ ಯಾವ ಕಟ್ಟಲೆಯನ್ನು ಕಲಿಸಬೇಕಿದ್ದರೂ, ಅದಕ್ಕೆ ಬೇರೆ ಕಟ್ಟಲೆಗಳೊಂದಿಗಿರುವ ಕೊಂಡಿಗಳನ್ನೂ ಕಲಿಸಿಕೊಡಬೇಕಾಗುತ್ತದೆ.</p>
<p>ಎರಡನೆಯದಾಗಿ, ವ್ಯಾಕರಣದ ಕಟ್ಟಲೆಗಳು ಓದಿಗೆ ಇಲ್ಲವೇ ಬರಹಕ್ಕೆ ಯಾವ ರೀತಿಯಲ್ಲಿ ನೆರವಿಗೆ ಬರಬಲ್ಲುವು ಎಂಬುದು ಅವನ್ನು ಕಲಿಯುವವರಿಗೆ ಸುಲಬವಾಗಿ ಗೊತ್ತಾಗುವುದಿಲ್ಲ, ಮತ್ತು ಅವು ಯಾಕೆ ಬೇಕಾಗುತ್ತವೆ ಎಂಬುದನ್ನು ತಿಳಿಯದವರಿಗೆ ಅವನ್ನು ಕಲಿಯುವಲ್ಲಿ ಯಾವ ಹುರುಪೂ ಇರುವುದಿಲ್ಲ. ಅವುಗಳ ಕಲಿಕೆ ಬರಿಯ ಒಂದು ಯಾಂತ್ರಿಕ ಕೆಲಸವಾಗಿಬಿಡುತ್ತದೆ.</p>
<p>ಹಿಂದಿನ ಕಾಲದ ಶಾಲೆಗಳಲ್ಲಿ ವ್ಯಾಕರಣವನ್ನು ಬೇರೆಯೇ ಒಂದು ವಿಶಯವಾಗಿ ಕಲಿಸಲಾಗುತ್ತಿತ್ತು, ಮತ್ತು ಈ ಕಾರಣದಿಂದಾಗಿ, ಅದೊಂದು ತುಂಬಾ ತೊಡಕು ತೊಡಕಾದ, ಮತ್ತು ತೀರಾ ಅನವಶ್ಯಕವಾದ ವಿಶಯವೆಂಬುದಾಗಿ ಅದನ್ನು ಕಲಿಯುವವರಿಗೆ ಮಾತ್ರವಲ್ಲ, ಅದನ್ನು ಕಲಿಸುವವರಿಗೂ ಅನಿಸುತ್ತಿತ್ತು. ಅಯ್ದಾರು ವರ‍್ಶ ಅದನ್ನು ಕಲಿಸಿದರೂ ಮಕ್ಕಳ ಓದಿನಲ್ಲಿ ಇಲ್ಲವೇ ಬರವಣಿಗೆಯಲ್ಲಿ ಅದರಿಂದಾಗಿ ಯಾವ ಮಾರ‍್ಪಾಡೂ ಉಂಟಾಗುವುದಿಲ್ಲ ಎಂಬುದನ್ನು ಸಂಶೋದನೆಗಳು ತೋರಿಸಿಕೊಟ್ಟುವು. ಇದನ್ನು ಗಮನಿಸಿದ ಹಲವು ತಿಳಿವಿಗರು ನುಡಿಯ ಕಲಿಕೆಗೆ ವ್ಯಾಕರಣದ ತಿಳಿವು ಬೇಕಾಗಿಲ್ಲ, ಮತ್ತು ಅದನ್ನು ಶಾಲೆಗಳಲ್ಲಿ ಕಲಿಸಬೇಕಾಗಿಲ್ಲ ಎಂಬ ತೀರ‍್ಮಾನಕ್ಕೆ ಬಂದಿದ್ದರು.</p>
<p>ಆದರೆ, ನಿಜಕ್ಕೂ ಇದೊಂದು ತಪ್ಪಾದ ತೀರ‍್ಮಾನವಾಗಿತ್ತು; ಯಾಕೆಂದರೆ, ಯಾವ ಕೆಲಸವೇ ಆಗಲಿ, ಅದನ್ನು ಜಾಣ್ಮೆಯಿಂದ ನಡೆಸಬೇಕೆಂದಿರುವವರಿಗೆ ಅದರ ಒಳಗುಟ್ಟಿನ ತಿಳಿವು ನೆರವಿಗೆ ಬಂದೇ ಬರುತ್ತದೆ. ಎತ್ತುಗೆಗಾಗಿ, ಕಾರನ್ನು ಓಡಿಸುವವರು ಅದರ ಬೇರೆ ಬೇರೆ ಅಂಗಗಳ ಗುರಿ, ಅವುಗಳ ಅಳವು-ನಲುವುಗಳು, ಅವುಗಳ ಕೆಲಸದ ಮೇಲೆ ಗಾಳಿ, ಮಳೆ, ಬಿಸಿಲು, ಮತ್ತು ದಾರಿಂii ಗೊತ್ತುಪಾಡುಗಳಿಂದ ಉಂಟಾಗಬಹುದಾದ ಅಡಚಣೆಗಳು ಮೊದಲಾದುವನ್ನು ಸರಿಯಾಗಿ ತಿಳಿದುಕೊಂಡಿರುವರಾದರೆ, ಆ ಕೆಲಸವನ್ನು ಅವರು ಹೆಚ್ಚು ಜಾಣ್ಮೆಯಿಂದ ನಡೆಸಬಲ್ಲರು.</p>
<p>ಓದುವ ಮತ್ತು ಬರೆಯುವ ಕೆಲಸಗಳೂ ಹೀಗೆಯೇ. ಅವುಗಳ ಒಳಗುಟ್ಟನ್ನು ತಿಳಿದುಕೊಂಡವರಿಗೆ ಅವನ್ನು ಹೆಚ್ಚು ಸುಳುವಾಗಿ ಮತ್ತು ಹೆಚ್ಚು ಚನ್ನಾಗಿ ನಡೆಸಲು ಬರುತ್ತದೆ. ಬರಹಗಳಲ್ಲಿ ಹಲವು ಬಗೆಗಳಿದ್ದು, ಅವನ್ನು ಓದಿ ತಿಳಿದುಕೊಳ್ಳುವಲ್ಲಿ ಇಲ್ಲವೇ ಅಂತಹವೇ ಬರಹಗಳನ್ನು ಹೊಸದಾಗಿ ಬರೆಯುವಲ್ಲಿ ಹಲವಾರು ಬಗೆಯ ವ್ಯಾಕರಣದ ಕಟ್ಟಲೆಗಳನ್ನು ಬಳಸಬೇಕಾಗುತ್ತದೆ; ಹಾಗಾಗಿ, ಅಂತಹ ಕಟ್ಟಲೆಗಳ ತಿಳಿವು ಈ ಕೆಲಸಗಳನ್ನು ಜಾಣ್ಮೆಯಿಂದ ನಡೆಸುವಲ್ಲಿ ನೆರವಾಗದಿರದು.</p>
<p>ಆದರೆ, ಮೇಲೆ ಸೂಚಿಸಿದ ಹಾಗೆ, ವ್ಯಾಕರಣದ ಕಟ್ಟಲೆಗಳನ್ನು ನೇರವಾಗಿ ಕಲಿಸಹೋಗದೆ, ಓದುವ ಮತ್ತು ಬರೆಯುವ ಕೆಲಸಗಳಲ್ಲಿ ಅವು ಹೇಗೆ ನೆರವಾಗುತ್ತವೆ ಎಂಬುದನ್ನು ತೋರಿಸಿಕೊಡುವ ಮೂಲಕ ಕಲಿಸಿದಲ್ಲಿ ಮಾತ್ರ ಅವು ಮಕ್ಕಳ ಓದು-ಬರಹದ ಕಲಿಕೆಯ ಮೇಲೆ ಪರಿಣಾಮವನ್ನು ಬೀರಬಲ್ಲುವು.</p>
<p>ಎತ್ತುಗೆಗಾಗಿ, ಕೆಲವು ಸೊಲ್ಲು(ವಾಕ್ಯ)ಗಳ ಹುರುಳೇನೆಂಬುದನ್ನು ತಿಳಿದುಕೊಳ್ಳುವಲ್ಲಿ ಮಕ್ಕಳಿಗೆ ತೊಂದರೆಯಾಗುತ್ತಿರಬಹುದು; ಅಂತಹ ಸೊಲ್ಲುಗಳಲ್ಲಿ ಮುಕ್ಯ ಅಂಶಗಳನ್ನು ಮುಕ್ಯವಲ್ಲದ ಅಂಶಗಳಿಂದ ಬೇರ‍್ಪಡಿಸುವುದು ಹೇಗೆ ಎಂಬುದನ್ನು ಮಕ್ಕಳಿಗೆ ತೋರಿಸಿಕೊಟ್ಟಲ್ಲಿ, ಅವರು ಅವುಗಳ ಹುರುಳನ್ನು ಸುಲಬವಾಗಿ ತಿಳಿದುಕೊಳ್ಳಬಲ್ಲರು. ಆದರೆ, ಸೊಲ್ಲುಗಳಲ್ಲಿ ಮುಕ್ಯ ಅಂಶ ಯಾವುದು ಮತ್ತು ಮುಕ್ಯವಲ್ಲದ ಅಂಶ ಯಾವುದು ಎಂಬುದನ್ನು ತೋರಿಸಿಕೊಡಬೇಕಾದರೆ, ಅವನ್ನು ಹೇಗೆ ಕಟ್ಟಲಾಗಿದೆ, ಅವುಗಳ ಒಳರಚನೆಯೆಂತಹದು ಎಂಬಂತಹ ವ್ಯಾಕರಣಕ್ಕೆ ಸಂಬಂದಿಸಿರುವ ಕಟ್ಟಲೆಗಳನ್ನು ಕಲಿಸಬೇಕಾಗುತ್ತದೆ.</p>
<p>ಇತ್ತೀಚೆಗೆ ಹೆಚ್ಚು ಹೆಚ್ಚು ಮಂದಿ ತಿಳಿವಿಗರು ಓದು-ಬರಹದ ಕಲಿಕೆಯಲ್ಲಿ ವ್ಯಾಕರಣದ ಕೊಡುಗೆ ನಿಜಕ್ಕೂ ತುಂಬ ದೊಡ್ಡದು ಎಂಬುದನ್ನು ಕಂಡುಕೊಳ್ಳುತ್ತಿದ್ದಾರೆ. ಮಕ್ಕಳು ತಾವು ಓದಿ ತಿಳಿದುಕೊಳ್ಳಬೇಕಾಗಿರುವ ಇಲ್ಲವೇ ಬರೆಯಬೇಕಾಗಿರುವ ಸೊಲ್ಲುಗಳ ಒಳರಚನೆಯೆಂತಹದು ಎಂಬುದನ್ನು ಗಮನಿಸುವ ಹಾಗೆ ಮಾಡಿದಲ್ಲಿ ಅವರಿಗೆ ಆ ಕೆಲಸವನ್ನು ನಡೆಸಲು ಹೆಚ್ಚು ಸುಲಬವಾಗುತ್ತದೆ ಎಂಬುದನ್ನೂ ಅವರು ಕಂಡುಕೊಳ್ಳುತ್ತಿದ್ದಾರೆ.</p>
<p>ಇಂತಹ ತಿಳುವಳಿಕೆ ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗಿಂತಲೂ ಹಿಂದೆ ಬೀಳುವ ಮಕ್ಕಳಿಗೆ ಹೆಚ್ಚು ನೆರವಾಗುತ್ತದೆ ಎಂಬುದನ್ನೂ ಕಂಡುಕೊಳ್ಳಲಾಗಿದೆ. ಎತ್ತುಗೆಗಾಗಿ, ಮಾತಿನಲ್ಲಿ ಬರುವ ಹಾಗೆ ತುಂಡು ತುಂಡಾಗಿರುವ ಸೊಲ್ಲುಗಳು ಬರಹದಲ್ಲಿ ಬರಬಾರದು; ಅವೆಲ್ಲ ಇಡಿ ಇಡಿಯಾಗಿರಬೇಕು; ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳನ್ನಾಗಿ ಮಾತ್ರ ಬಳಸಬಹುದು ಎಂದು ಹೇಳಿಕೊಟ್ಟಾಗ, ತರಗತಿಯಲ್ಲಿ ಮುಂದೆ ಇರುವ ಮಕ್ಕಳಿಗೆ ತಾವೇನು ಮಾಡಬೇಕು ಎಂಬುದು ಒಡನೆಯೇ ಗೊತ್ತಾಗುತ್ತದೆ.</p>
<p>ಆದರೆ, ತರಗತಿಯಲ್ಲಿ ಹಿಂದೆ ಬೀಳುವ ಮಕ್ಕಳಿಗೆ ಅದು ಗೊತ್ತಾಗುವುದಿಲ್ಲ. ಅವರಿಗೆ ಅದು ಗೊತ್ತಾಗುವ ಹಾಗೆ ಮಾಡಬೇಕಿದ್ದಲ್ಲಿ, ತುಂಡು ಸೊಲ್ಲುಗಳಿಗೂ ಇಡೀ ಸೊಲ್ಲುಗಳಿಗೂ ನಡುವಿರುವ ವ್ಯತ್ಯಾಸ ಎಂತಹದು ಎಂಬುದನ್ನು, ಮತ್ತು ತುಂಡು ಸೊಲ್ಲುಗಳನ್ನು ಇಡೀ ಸೊಲ್ಲುಗಳ ಅಂಗಗಳಾಗಿ ಮಾಡಿ ಬಳಸುವುದು ಹೇಗೆ ಎಂಬುದನ್ನು ತೋರಿಸಿಕೊಡಬೇಕಾಗುತ್ತದೆ. ಎಂದರೆ, ಇಡಿಯಾಗಿರುವ ಸೊಲ್ಲುಗಳ ಒಳರಚನೆಯ ಹಿಂದಿರುವ ವ್ಯಾಕರಣದ ಕಟ್ಟಲೆಗಳನ್ನು ಅವರಿಗೆ ವಿವರಿಸಬೇಕಾಗುತ್ತದೆ.</p>
<p>ಕನ್ನಡದ ಮಟ್ಟಿಗೆ ಹೇಳುವುದಾದರೆ, ಇನ್ನೊಂದು ಸಮಸ್ಯೆಯೂ ವ್ಯಾಕರಣದ ಕಲಿಕೆಯನ್ನು ಕಾಡುತ್ತಿದೆ; ಅದೇನೆಂದರೆ, ಇವತ್ತು ಕನ್ನಡ ವ್ಯಾಕರಣದ ಹೊತ್ತಗೆಗಳಲ್ಲಿ ಕಾಣಿಸಿಕೊಳ್ಳುವ ಕಟ್ಟಲೆಗಳಲ್ಲಿ ಹೆಚ್ಚಿನವನ್ನೂ ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಯಾರಿಗೂ ಸಾದ್ಯವಾಗಲಾರದು. ಯಾಕೆಂದರೆ, ಈ ವ್ಯಾಕರಣಗಳನ್ನು ಬರೆದವರು ಸಂಸ್ಕ್ರುತ ವ್ಯಾಕರಣದಲ್ಲಿದ್ದ ಕಟ್ಟಲೆಗಳನ್ನು ಹಾಗೆಯೇ ಕನ್ನಡಕ್ಕೆ ತಂದುಹಾಕಿದ್ದಾರಲ್ಲದೆ, ನಿಜಕ್ಕೂ ಕನ್ನಡ ಪದಗಳ ಇಲ್ಲವೇ ಸೊಲ್ಲುಗಳ ಬಳಕೆಯ ಹಿಂದೆ ಎಂತಹ ಕಟ್ಟಲೆಗಳು ಅಡಗಿವೆ ಎಂಬುದನ್ನು ಕಂಡುಹಿಡಿಯುವ ಮೂಲಕ ಅವನ್ನು ಬರೆದಿಲ್ಲ.</p>
<p>ಹಾಗಾಗಿ, ಈ ಕಟ್ಟಲೆಗಳನ್ನು ಸಂಸ್ಕ್ರುತ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಬಹುದಲ್ಲದೆ, ಕನ್ನಡ ಬರಹಗಳನ್ನು ಓದುವಲ್ಲಿ ಮತ್ತು ಬರೆಯುವಲ್ಲಿ ನೆರವಾಗುವ ಹಾಗೆ ಕಲಿಸಲು ಸಾದ್ಯವಾಗಲಾರದು. ಕನ್ನಡ ಬರಹಗಳಲ್ಲಿ ಕನ್ನಡದವೇ ಆದ ಬೇರೆಯೇ ಕಟ್ಟಲೆಗಳು ಬಳಕೆಯಾಗುತ್ತವೆ; ಈ ಕಟ್ಟಲೆಗಳು ಎಂತಹವು ಎಂಬುದನ್ನು ಇವತ್ತು ಕಂಡುಹಿಡಿಯಬೇಕಾಗಿದೆ, ಮತ್ತು ಮಕ್ಕಳ ಓದು-ಬರಹದ ಕಲಿಕೆಗೆ ಅವು ಹೇಗೆ ನೆರವಾಗಬಲ್ಲುವು ಎಂಬುದನ್ನೂ ಕಂಡುಹಿಡಿಯಬೇಕಾಗಿದೆ. ಈ ಎರಡು ಕೆಲಸಗಳನ್ನು ನಡೆಸಿದ ಮೇಲಶ್ಟೇ ಮಕ್ಕಳಿಗೆ ಅವರ ಓದಿನ ಮತ್ತು ಬರಹದ ಕಲಿಕೆಯಲ್ಲಿ ನೆರವಾಗುವ ಹಾಗೆ ಕನ್ನಡ ವ್ಯಾಕರಣದ ಕಟ್ಟಲೆಗಳನ್ನು ಕಲಿಸಲು ಸಾದ್ಯವಾಗಬಲ್ಲುದು.</p>
<p>ಮಾತಿನ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಮತ್ತು ಅನುಬವಗಳನ್ನು ಇನ್ನೊಬ್ಬರಿಗೆ ಹೇಗೆ ತಿಳಿಸುತ್ತೇವೆ, ಮತ್ತು ಇನ್ನೊಬ್ಬರು ಬಳಸಿದ ಮಾತುಗಳಿಂದ ಅವರ ಅನಿಸಿಕೆ ಮತ್ತು ಅನುಬವಗಳು ಎಂತಹವು ಎಂಬುದು ನಮಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ವ್ಯಾಕರಣ ತಿಳಿಸುತ್ತದೆ. ಮನುಶ್ಯನಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ಒಂದು ವಿಶಿಶ್ಟವಾದ ಅಳವಿನ ಕುರಿತಾಗಿ ಏನು ಹೇಳಬೇಕಿದ್ದರೂ ವ್ಯಾಕರಣದಲ್ಲಿ ಬಳಕೆಯಾಗುವ ಅರಿಮೆಯ ಪದಗಳನ್ನು ಬಳಸಲೇಬೇಕಾಗುತ್ತದೆ. ಹಾಗಾಗಿ, ಮಕ್ಕಳಿಗೆ ಈ ಅರಿಮೆಯ ತಿಳಿವು ದೊರಕುವಂತೆ ಮಾಡುವುದು ಬೇರೆಲ್ಲಾ ಬಗೆಯ ಅರಿಮೆ(ವಿಜ್ನಾನ)ಗಳ ತಿಳಿವು ದೊರಕುವಂತೆ ಮಾಡುವಶ್ಟೇ ಮುಕ್ಯವಾದುದು.</p>
<p>ಹಾಗಾಗಿ, ಅದರ ತಿಳಿವನ್ನು ಮಕ್ಕಳಿಗೆ ಯಾವಾಗ ಮತ್ತು ಹೇಗೆ ಕೊಡಿಸಬಹುದು ಎಂಬ ವಿಶಯದಲ್ಲಿ ಚರ‍್ಚೆ ನಡೆಸಬಹುದಲ್ಲದೆ, ಅದು ಬೇಕೇ ಬೇಡವೇ ಎಂಬ ವಿಶಯದಲ್ಲಲ್ಲ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25b5%25e0%25b3%258d%25e0%25b2%25af%25e0%25b2%25be%25e0%25b2%2595%25e0%25b2%25b0%25e0%25b2%25a3-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b2%25ac%25e0%25b3%2587%25e0%25b2%2595%2F&#038;t=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%B5%E0%B3%8D%E0%B2%AF%E0%B2%BE%E0%B2%95%E0%B2%B0%E0%B2%A3%20%E0%B2%95%E0%B2%B2%E0%B2%BF%E0%B2%B8%E0%B2%AC%E0%B3%87%E0%B2%95%E0%B3%87%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25b5%25e0%25b3%258d%25e0%25b2%25af%25e0%25b2%25be%25e0%25b2%2595%25e0%25b2%25b0%25e0%25b2%25a3-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b2%25ac%25e0%25b3%2587%25e0%25b2%2595%2F&#038;p&#091;images&#093;&#091;0&#093;=&#038;p&#091;title&#093;=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%B5%E0%B3%8D%E0%B2%AF%E0%B2%BE%E0%B2%95%E0%B2%B0%E0%B2%A3%20%E0%B2%95%E0%B2%B2%E0%B2%BF%E0%B2%B8%E0%B2%AC%E0%B3%87%E0%B2%95%E0%B3%87%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25b5%25e0%25b3%258d%25e0%25b2%25af%25e0%25b2%25be%25e0%25b2%2595%25e0%25b2%25b0%25e0%25b2%25a3-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b2%25ac%25e0%25b3%2587%25e0%25b2%2595%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b3%8d%e0%b2%af%e0%b2%be%e0%b2%95%e0%b2%b0%e0%b2%a3-%e0%b2%95%e0%b2%b2%e0%b2%bf%e0%b2%b8%e0%b2%ac%e0%b3%87%e0%b2%95/feed/</wfw:commentRss>
		<slash:comments>0</slash:comments>
		</item>
	</channel>
</rss>
