<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ಪಾರಿಬಾಶಿಕ</title>
	<atom:link href="http://dnshankarabhat.net/tag/%e0%b2%aa%e0%b2%be%e0%b2%b0%e0%b2%bf%e0%b2%ac%e0%b2%be%e0%b2%b6%e0%b2%bf%e0%b2%95/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಅರಿಮೆಯ ಬರಹಗಳ ತೊಡಕುಗಳು</title>
		<link>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/?utm_source=rss&#038;utm_medium=rss&#038;utm_campaign=%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581</link>
		<comments>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/#comments</comments>
		<pubDate>Mon, 14 Apr 2014 16:57:31 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[dictionary]]></category>
		<category><![CDATA[Kannada linguistics]]></category>
		<category><![CDATA[Kannada scientific words]]></category>
		<category><![CDATA[Kannada technical dictionary]]></category>
		<category><![CDATA[Kannada technical words]]></category>
		<category><![CDATA[linguistics]]></category>
		<category><![CDATA[science]]></category>
		<category><![CDATA[scientific words]]></category>
		<category><![CDATA[technical dictionary]]></category>
		<category><![CDATA[technical words]]></category>
		<category><![CDATA[ಅರಿಮೆ]]></category>
		<category><![CDATA[ಅರಿಮೆಯ]]></category>
		<category><![CDATA[ಎರವಲು]]></category>
		<category><![CDATA[ಕನ್ನಡ ವಿಜ್ನಾನ ಬರಹಗಳು]]></category>
		<category><![CDATA[ಕಲಿಕೆ]]></category>
		<category><![CDATA[ಪಾರಿಬಾಶಿಕ]]></category>
		<category><![CDATA[ಮಕ್ಕಳು]]></category>
		<category><![CDATA[ವಿಜ್ನಾನ]]></category>
		<category><![CDATA[ಸಂಸ್ಕ್ರುತ]]></category>

		<guid isPermaLink="false">http://dnshankarabhat.net/?p=105</guid>
		<description><![CDATA[ನುಡಿಯರಿಮೆಯ ಇಣುಕುನೋಟ – 22 ಅರಿಮೆಯ (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 22</strong></p>
<p><strong>ಅರಿಮೆಯ</strong> (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು ಬರುತ್ತದೆ, ಮತ್ತು ಇದಕ್ಕಾಗಿ ಮೇಲಿನ ಸೊಲ್ಲನ್ನು ರಾಜುವಿನ ಓಡುವಿಕೆ ಇಲ್ಲವೇ ರಾಜುವಿನ ಓಟ ಎಂಬ ಒಂದು ಹೆಸರುಕಂತೆಯಾಗಿ ಮಾರ‍್ಪಡಿಸಲು ಬರುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ಮಾತಿನಲ್ಲಿ ಇಲ್ಲವೇ ಸಾಮಾನ್ಯ ಬರಹಗಳಲ್ಲಿ ಕಾಣಿಸಿಕೊಳ್ಳುವುದು ತುಂಬಾ ಕಡಿಮೆ; ಆದರೆ, ಅರಿಮೆಯ ಬರಹಗಳಲ್ಲಿ ಅವನ್ನು ತುಂಬಾ ಹೆಚ್ಚು ಬಳಸಲಾಗುತ್ತದೆ. ಇದಕ್ಕೆ ಕಾರಣವೇನೆಂದರೆ, ಅವನ್ನು ಬಳಸುವ ಮೂಲಕ ಹೇಳಬೇಕೆಂದಿರುವ ಸಂಗತಿಯನ್ನು ತುಂಬಾ ಅಡಕವಾಗಿ ಹೇಳಲು ಬರುತ್ತದೆ; ಎತ್ತುಗೆಗಾಗಿ, ಮಕ್ಕಳನ್ನು ತಾಯಂದಿರು ಸಾಕುತ್ತಾರೆ ಎಂಬುದನ್ನು ಒಮ್ಮೆ ಸೂಚಿಸಿದ ಮೇಲೆ, ಅದರ ಕುರಿತಾಗಿ ಬೇರೆ ಸಂಗತಿಗಳನ್ನು ತಿಳಿಸಬೇಕಾದಾಗ ಅದನ್ನು ಅಡಕವಾಗಿ ಮಕ್ಕಳ ಸಾಕುವಿಕೆ ಇಲ್ಲವೇ ಬರೀ ಸಾಕುವಿಕೆ ಎಂಬುದಾಗಿ ಮಾರ‍್ಪಡಿಸಿ ಸೂಚಿಸಲು ಬರುತ್ತದೆ.</p>
<p>ಇದಲ್ಲದೆ, ಅರಿಮೆಯ ಬರಹಗಳ ಇಟ್ಟಳ (ರಚನೆ) ಬೇರೆ ಬರಹಗಳ ಇಟ್ಟಳಕ್ಕಿಂತ ಈ ವಿಶಯದಲ್ಲಿ ಬೇರಾಗಿದೆ; ಸಾಮಾನ್ಯ ಬರಹಗಳಲ್ಲಿ ಉದ್ದಕ್ಕೂ ಒಬ್ಬ ವ್ಯಕ್ತಿ ಇಲ್ಲವೇ ಕೆಲವು ವ್ಯಕ್ತಿಗಳು ಏನು ಮಾಡಿದ್ದಾರೆ ಎಂಬುದಾಗಿ ಹಲವು ಬಗೆಯ ಎಸಕಗಳು ಒಂದರ ಬಳಿಕ ಒಂದರಂತೆ ನಡೆದಿರುವುದನ್ನು ತಿಳಿಸಲಾಗುತ್ತದೆ; ಇದಕ್ಕೆ ಬದಲು, ಅರಿಮೆಯ ಬರಹಗಳಲ್ಲಿ ಒಂದು ಎಸಕವನ್ನು ತಿಳಿಸಿದ ಮೇಲೆ, ಆ ಎಸಕದ ಕುರಿತಾಗಿ ಹಲವಾರು ವಿಶಯಗಳನ್ನು ತಿಳಿಸಬೇಕಾಗುತ್ತದೆ, ಮತ್ತು ಇದಕ್ಕಾಗಿ ಆ ಎಸಕವನ್ನು ಮುಂದಿನ ಸೊಲ್ಲುಗಳ ನೆಲೆಯಾಗಿ ಬಳಸಬೇಕಾಗುತ್ತದೆ; ಆದರೆ, ಹೆಸರುಪದಗಳು ಇಲ್ಲವೇ ಎಸಕಪದಗಳ ಹೆಸರುರೂಪಗಳು ಮಾತ್ರ ಸೊಲ್ಲುಗಳ ನೆಲೆಗಳಾಗಬಲ್ಲುವು; ಹಾಗಾಗಿ, ಆ ಎಸಕವನ್ನು ತಿಳಿಸಲು ಒಂದು ಹೆಸರುಕಂತೆಯನ್ನು ಬಳಸಬೇಕಾಗುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ತೊಡಕಿನವಾಗಿ ಕಾಣಿಸಲು ಮುಕ್ಯ ಕಾರಣವೇನೆಂದರೆ, ಸಾಮಾನ್ಯವಾಗಿ ನಮ್ಮ ಮಾತಿನಲ್ಲಿ ಎಸಕಪದಗಳು ಎಸಕಗಳನ್ನು ಸೂಚಿಸುತ್ತವೆ ಮತ್ತು ಹೆಸರುಪದಗಳು ವ್ಯಕ್ತಿ, ವಸ್ತು ಮೊದಲಾದುವನ್ನು ಸೂಚಿಸುತ್ತವೆ; ಆದರೆ, ಈ ಮಾರ‍್ಪಡಿಸಿದ ಬಳಕೆಗಳಲ್ಲಿ ಹೆಸರುಪದಗಳ ಮೂಲಕ ಎಸಕಗಳನ್ನು ಸೂಚಿಸಲಾಗುತ್ತದೆ. ಎಂದರೆ, ಇವು ನಾವು ಜಗತ್ತನ್ನು ನೋಡುವ ಬಗೆಯನ್ನೇ ಬೇರೆ ಮಾಡುತ್ತವೆ: ಅವು ಎಸಕಗಳನ್ನು ಹೆಸರುಗಳಾಗಿ, ಎಂದರೆ ವಸ್ತು ಇಲ್ಲವೇ ವಿಶಯಗಳಾಗಿ ನೋಡುವಂತೆ ಮಾಡುತ್ತವೆ. ಅರಿಮೆಯ ಬರಹಗಳನ್ನು ಓದುವವರು ಜಗತ್ತನ್ನು ಈ ರೀತಿ ಒಂದು ಹೊಸ ಬಗೆಯಲ್ಲಿ ನೋಡಲು ಕಲಿಯಬೇಕಾಗುತ್ತದೆ. ಇದು ಸುಲಬದ ಕೆಲಸವಲ್ಲ.</p>
<p>ಕನ್ನಡದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಇನ್ನೊಂದು ತೊಡಕೂ ಕಾಣಿಸಿಕೊಳ್ಳುತ್ತದೆ: ಅರಿಮೆಯ ಬರಹಗಳನ್ನು ಬರೆಯುವವರು ಎಸಕಪದಗಳನ್ನು ಹೆಸರುಕಂತೆಗಳಾಗಿ ಮಾರ‍್ಪಡಿಸುವಲ್ಲಿ ಕನ್ನಡದ ಕಸುವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಹಾಗಾಗಿ, ಅವರು ಕನ್ನಡದವೇ ಆದ ಹೆಸರುಪದಗಳನ್ನು ಇಲ್ಲವೇ ಎಸಕಪದಗಳ ಹೆಸರುರೂಪಗಳನ್ನು ಬಳಸುವ ಬದಲು, ಸಂಸ್ಕ್ರುತದ ಪದ ಮತ್ತು ಪದರೂಪಗಳನ್ನು ಅನವಶ್ಯಕವಾಗಿ ಎರವಲು ಪಡೆದು ಬಳಸಹೋಗುತ್ತಾರೆ, ಮತ್ತು ಆ ಮೂಲಕ ತಮ್ಮ ಬರಹಗಳಲ್ಲಿ ಇನ್ನಶ್ಟು ತೊಡಕುಗಳನ್ನು ಸೇರಿಸಿಕೊಳ್ಳುತ್ತಾರೆ.</p>
<p>ಎತ್ತುಗೆಗಾಗಿ, ಈ ಮಣ್ಣಿನಲ್ಲಿ ಕ್ಶಾರ ಇದೆ ಎಂಬ ಸೊಲ್ಲನ್ನು ಕನ್ನಡದಲ್ಲೇನೇ ಕ್ಶಾರವಿರುವ (ಇಲ್ಲವೇ ಕ್ಶಾರವುಳ್ಳ) ಮಣ್ಣು ಎಂಬುದಾಗಿ ಮಾರ‍್ಪಡಿಸಬಹುದು. ಆದರೆ ಇದು ಕನ್ನಡದಲ್ಲಿ ಅರಿಮೆಯ ಬರಹಗಳನ್ನು ಬರೆಯುವವರ ಗಮನಕ್ಕೇ ಬರುವುದಿಲ್ಲ. ಅದಕ್ಕೆ ಬದಲಾಗಿ ಅವರು ಕ್ಶಾರಯುಕ್ತ ಮಣ್ಣು ಎಂಬುದಾಗಿ ಸಂಸ್ಕ್ರುತದಿಂದ ಯುಕ್ತ ಪದರೂಪವನ್ನು ಎರವಲು ಪಡೆದು ಬಳಸುತ್ತಾರೆ. ಜೀವ ಹೇಗೆ ಹುಟ್ಟಿತು? ಎಂಬ ಪ್ರಶ್ನೆಯೊಂದನ್ನು ಕೇಳಿ, ಅದರ ಮುಂದಿನ ಸೊಲ್ಲಿನಲ್ಲಿ ಜೀವದ ಹುಟ್ಟು ಎಂಬುದಾಗಿ ಅದನ್ನು ಮಾರ‍್ಪಡಿಸಿಕೊಳ್ಳುವ ಬದಲು, ಜೀವದ ಉಗಮ ಎಂಬುದಾಗಿ ಬರೆಯುತ್ತಾರೆ; ಎಂದರೆ, ಸಂಸ್ಕ್ರುತದ ಉಗಮ ಪದವನ್ನು ಅನವಶ್ಯಕವಾಗಿ ಎರವಲಾಗಿ ಪಡೆದು ಬಳಸುತ್ತಾರೆ. ಇದರಿಂದಾಗಿ, ಮೊದಲೇ ತೊಡಕಿನದಾಗಿ ಕಾಣಿಸುವ ಅರಿಮೆಯ ಬರಹ ಇನ್ನಶ್ಟು ತೊಡಕಿನದಾಗುತ್ತದೆ.</p>
<p>ಎಸಕಗಳನ್ನು ತಿಳಿಸಲು ಹೆಸರುಕಂತೆಗಳನ್ನು ಬಳಸಿರುವಲ್ಲಿ ಓದುಗರು ಎಸಕದಿಂದ ವಿಶಯಕ್ಕೆ ನೆಗೆಯಬೇಕಾಗುತ್ತದೆ. ಯಾಕೆಂದರೆ, ಮೇಲೆ ಸೂಚಿಸಿದ ಹಾಗೆ, ಎಸಕವನ್ನು ಇಲ್ಲಿ ಎಸಕಪದದ ಮೂಲಕ ಒಂದು ಎಸಕವಾಗಿ ಸೂಚಿಸದೆ, ಹೆಸರುಪದದ ಮೂಲಕ ಒಂದು ವಿಶಯವಾಗಿ ಸೂಚಿಸಲಾಗುತ್ತದೆ. ಇದಲ್ಲದೆ, ಆ ರೀತಿ ಬದಲಾವಣೆಯನ್ನು ಮಾಡಲಾಗಿದೆ ಎಂಬುದನ್ನು ಬರಹಗಳಲ್ಲಿ ಯಾವ ರೀತಿಯಲ್ಲೂ ಸೂಚಿಸಲಾಗುವುದಿಲ್ಲ. ಓದುಗರು ಈ ನೆಗೆತವನ್ನು ತಾವೇ ಮಾಡಿಕೊಳ್ಳಬಲ್ಲರು ಎಂಬುದಾಗಿ ತಿಳಿಯಲಾಗುತ್ತದೆ.</p>
<p>ಆದರೆ, ಅರಿಮೆಯ ಬರಹಗಳನ್ನು ಓದಿ ಪಳಗಿಲ್ಲದ ಓದುಗರಿಗೆ ಈ ನೆಗೆತ ತೊಂದರೆಯನ್ನು ಕೊಡುತ್ತದೆ. ಕನ್ನಡದ ಅರಿಮೆಯ ಬರಹಗಳಲ್ಲಿ ಈ ನೆಗೆತದೊಂದಿಗೆ ಇನ್ನೊಂದು ನೆಗೆತವನ್ನೂ ಓದುಗರ ಮೇಲೆ ಹೊರಿಸಲಾಗುತ್ತದೆ: ಅವರು ಎಸಕದಿಂದ ಹೆಸರಿಗೆ ನೆಗೆಯಬೇಕಾಗುತ್ತದೆ ಮಾತ್ರವಲ್ಲ, ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೂ ನೆಗೆಯಬೇಕಾಗುತ್ತದೆ. ಎತ್ತುಗೆಗಾಗಿ, ಒಂದು ಜೀವಿ ಇನ್ನೊಂದು ಜೀವಿಯನ್ನು ಹುಟ್ಟಿಸುತ್ತದೆ ಎಂಬಲ್ಲಿಂದ ಹುಟ್ಟಿಸುವಿಕೆ ಎಂಬುದಕ್ಕೆ ಹೋಗದೆ ನೇರವಾಗಿ ಪ್ರಜನನ ಕ್ರಿಯೆ ಎಂಬುದಕ್ಕೆ ನೆಗೆಯಬೇಕಾಗುತ್ತದೆ.</p>
<p>ಚಿಕ್ಕ ಮಕ್ಕಳಿಗಾಗಿ ಬರೆದ ಅರಿಮೆಯ ಬರಹಗಳಲ್ಲೂ ಇಂತಹ ಹಲವಾರು ಸಂಸ್ಕ್ರುತದ ಪದರೂಪಗಳನ್ನು ಕಾಣಬಹುದು. ಇವನ್ನು ಮಕ್ಕಳು ಕಣ್ಣು ಮುಚ್ಚಿ ಬಾಯಿಪಾಟ ಮಾಡುತ್ತಾರಲ್ಲದೆ, ಅವು ನಿಜಕ್ಕೂ ಏನು ಹೇಳುತ್ತವೆ ಎಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಿಗೆ ಇವುಗಳಲ್ಲಿ ಬರುವ ಎಸಕದಿಂದ ಹೆಸರಿಗೆ ಹಾರುವ ಮೊದಲ ನೆಗೆತವೇ ತೊಡಕಿನದಾಗಿ ಕಾಣಿಸುತ್ತದೆ; ಇನ್ನು ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೆ ಹಾರುವ ಎರಡನೆಯ ನೆಗೆತ ಅವರ ಅಳವಿಗೆ ಮೀರಿದ್ದು.</p>
<p>ಅರಿಮೆಯ ಬರಹಗಳನ್ನು ಮಂದಿ ಮೆಚ್ಚುವ (ಜನಪ್ರಿಯವಾಗುವ) ಹಾಗೆ ಇಲ್ಲವೇ ಚಿಕ್ಕ ಮಕ್ಕಳಿಗೆ ಗೊತ್ತಾಗುವ ಹಾಗೆ ಬರೆಯಬೇಕಿದ್ದಲ್ಲಿ ಬರಹಗಾರರು ಕೆಳಗೆ ಕೊಟ್ಟಿರುವ ಉಪಾಯಗಳನ್ನು ಬಳಸಿಕೊಳ್ಳಬೇಕಾಗುತ್ತದೆ: (೧) ಆದಶ್ಟು ಮಟ್ಟಿಗೆ ಅವರು ಅರಿಮೆಯ (ಪಾರಿಬಾಶಿಕ) ಪದಗಳ ಬಳಕೆಯನ್ನು ಕಡಿಮೆ ಮಾಡಬೇಕು; (೨) ಎಸಕಗಳನ್ನು ತಿಳಿಸುವ ಹೆಸರುಕಂತೆಗಳನ್ನು ಸೊಲ್ಲುಗಳಾಗಿ ಬದಲಾಯಿಸಿಕೊಳ್ಳಬೇಕು; (೩) ಸಿಕ್ಕಲು ಸೊಲ್ಲುಗಳನ್ನು ಸುಳುಸೊಲ್ಲುಗಳಾಗಿ ಬಿಡಿಸಿ ಬರೆಯಬೇಕು; ಮತ್ತು (೪) ಸಂಸ್ಕ್ರುತ (ತತ್ಸಮ) ಪದಗಳ ಬದಲು ಆದಶ್ಟು ಮಟ್ಟಿಗೆ ಕನ್ನಡದವೇ ಆದ ಪದಗಳನ್ನು ಬಳಸಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;t=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಮನೆಯ ಹೊರಗಡೆ ಅಡಿಗೆಮನೆ ಪಾಕಶಾಲೆಯಾಗಬೇಕೇ?</title>
		<link>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/?utm_source=rss&#038;utm_medium=rss&#038;utm_campaign=%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595</link>
		<comments>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/#comments</comments>
		<pubDate>Mon, 14 Apr 2014 16:35:24 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[ಅಳವು]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಎರವಲು ಪದಗಳು]]></category>
		<category><![CDATA[ಒಟ್ಟು]]></category>
		<category><![CDATA[ಕನ್ನಡ ಪದಗಳು]]></category>
		<category><![CDATA[ಕೀಳರಿಮೆ]]></category>
		<category><![CDATA[ಪದಗಳ ಸೊಗಡು]]></category>
		<category><![CDATA[ಪಾರಿಬಾಶಿಕ]]></category>
		<category><![CDATA[ಪ್ರತ್ಯಯ]]></category>
		<category><![CDATA[ಬರವಣಿಗೆ]]></category>
		<category><![CDATA[ಬರಹ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಸಂಸ್ಕ್ರುತ ಪದಗಳು]]></category>
		<category><![CDATA[ಸ್ವತಂತ್ರವಾದ ನುಡಿ]]></category>

		<guid isPermaLink="false">http://dnshankarabhat.net/?p=64</guid>
		<description><![CDATA[ನುಡಿಯರಿಮೆಯ ಇಣುಕುನೋಟ – 2 ಕನ್ನಡಿಗರ ಪದಬಳಕೆಯ ವಿಶಯದಲ್ಲಿ ಒಂದು ಸೋಜಿಗದ ಸಂಗತಿಯಿದೆ. ಅದೇನೆಂದು ತಿಳಿಯಲು ಕೆಲವು ಎತ್ತುಗೆಗಳನ್ನು ತೆಗೆದುಕೊಳ್ಳೋಣ: ಮನೆಯಲ್ಲಿ ಅಡಿಗೆಮನೆ, ಊಟದಕೋಣೆ ಎನ್ನುವ ನಾವು ಸಮ್ಮೇಳನಗಳಂತಹ ಸಂದರ‍್ಬಗಳಲ್ಲಿ ಅವುಗಳ ಬದಲಾಗಿ ಪಾಕಶಾಲೆ, ಬೋಜನಶಾಲೆ ಎನ್ನುತ್ತೇವೆ. ಬಟ್ಟೆಯಂಗಡಿಗೆ ಹೋಗುತ್ತೇನೆ ಎನ್ನುತ್ತೇವೆ; ಆದರೆ, ಅಂತಹ ಅಂಗಡಿಗಳಿಗೆ ಹೆಸರು ಕೊಡಬೇಕಾದಾಗ, ವಸ್ತ್ರಾಲಯ ಇಲ್ಲವೇ ವಸ್ತ್ರಬಂಡಾರ ಎಂಬ ಹೆಸರುಗಳಶ್ಟೇ ಹೊಳೆಯುತ್ತವೆ. ತಿಂಡಿಗಳನ್ನು ಮಾರುವ ಅಂಗಡಿ ತಿಂಡಿಮನೆಯಾಗಿಬಿಟ್ಟರೆ ಅದೇನೋ ಮುಜುಗರ, ಉಪಹಾರಗ್ರುಹವೇ ಆಗಬೇಕು. ನಾಯಿಯ ಕುರಿತು ಬರೆದ ಬರಹದಲ್ಲಿ ಉದ್ದಕ್ಕೂ ನಾಯಿ ಎಂಬ ಪದವೇ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 2</strong></p>
<p>ಕನ್ನಡಿಗರ <strong>ಪದಬಳಕೆಯ</strong> ವಿಶಯದಲ್ಲಿ ಒಂದು ಸೋಜಿಗದ ಸಂಗತಿಯಿದೆ. ಅದೇನೆಂದು ತಿಳಿಯಲು ಕೆಲವು ಎತ್ತುಗೆಗಳನ್ನು ತೆಗೆದುಕೊಳ್ಳೋಣ:</p>
<p>ಮನೆಯಲ್ಲಿ ಅಡಿಗೆಮನೆ, ಊಟದಕೋಣೆ ಎನ್ನುವ ನಾವು ಸಮ್ಮೇಳನಗಳಂತಹ ಸಂದರ‍್ಬಗಳಲ್ಲಿ ಅವುಗಳ ಬದಲಾಗಿ ಪಾಕಶಾಲೆ, ಬೋಜನಶಾಲೆ ಎನ್ನುತ್ತೇವೆ. ಬಟ್ಟೆಯಂಗಡಿಗೆ ಹೋಗುತ್ತೇನೆ ಎನ್ನುತ್ತೇವೆ; ಆದರೆ, ಅಂತಹ ಅಂಗಡಿಗಳಿಗೆ ಹೆಸರು ಕೊಡಬೇಕಾದಾಗ, ವಸ್ತ್ರಾಲಯ ಇಲ್ಲವೇ ವಸ್ತ್ರಬಂಡಾರ ಎಂಬ ಹೆಸರುಗಳಶ್ಟೇ ಹೊಳೆಯುತ್ತವೆ. ತಿಂಡಿಗಳನ್ನು ಮಾರುವ ಅಂಗಡಿ ತಿಂಡಿಮನೆಯಾಗಿಬಿಟ್ಟರೆ ಅದೇನೋ ಮುಜುಗರ, ಉಪಹಾರಗ್ರುಹವೇ ಆಗಬೇಕು.</p>
<p>ನಾಯಿಯ ಕುರಿತು ಬರೆದ ಬರಹದಲ್ಲಿ ಉದ್ದಕ್ಕೂ ನಾಯಿ ಎಂಬ ಪದವೇ ಬಳಕೆಯಾಗಿದೆಯಾದರೂ, ತಲೆಬರಹದಲ್ಲಿ ಮಾತ್ರ ಶ್ವಾನವಿದ್ದರಶ್ಟೇ ನೆಮ್ಮದಿ. ಮದುವೆಯ ಕರೆಯೋಲೆ ಕಳುಹಿಸುವ ಬದಲು ವಿವಾಹ ಆಮಂತ್ರಣ ಕಳಿಸಿದರೆ ಮಾತ್ರ ಮದುವೆಗೆ ಬರುತ್ತಾರೇನೋ ಎಂಬ ಅನಿಸಿಕೆ ನಮ್ಮಲ್ಲಿ ಹಲವರಲ್ಲಿದ್ದಂತಿದೆ.</p>
<p>ಹಾಗೆಯೇ, ಪುಸ್ತಕಗಳಿಗೆ ಹೆಸರು ಕೊಡುವಲ್ಲೂ ಬಳಕೆಯಲ್ಲಿರುವ ಪದಗಳಿಗಿಂತ ಬಳಕೆಯಲ್ಲಿಲ್ಲದ ಮತ್ತು ಹೆಚ್ಚು ಮಂದಿಗೆ ತಿಳಿಯದ ಪದಗಳೇ ಚಂದವೆಂದು ಹಲವು ಬರಹಗಾರರಿಗೆ ಅನಿಸುತ್ತದೆ. ಮನೆಗಳಿಗೆ, ಅಂಗಡಿಗಳಿಗೆ, ಕೂಟಗಳಿಗೆ, ಇಲ್ಲವೇ ಹಲವು ಬಗೆಯ ಹಮ್ಮುಗೆಗಳಿಗೆ ಹೆಸರು ಕೊಡಬೇಕಾಗಿರುವಲ್ಲೂ ನಮ್ಮ ಒಡಲಿನಿಂದ ನೇರವಾಗಿ ಬರುವ ಪದಗಳು ತಕ್ಕವೆಂದು ತೋರುವುದೇ ಇಲ್ಲ; ದೂರದರ‍್ಶನ, ದಿನಪತ್ರಿಕೆ, ಉಚ್ಚಶಿಕ್ಶಣ, ನಿರುದ್ಯೋಗ ಸಮಸ್ಯೆ, ಜನಗಣನೆ, ಲೋಕಾಯುಕ್ತ, ಪಟ್ಯಪುಸ್ತಕ ಮೊದಲಾದ ಹಲವು ಬಗೆಯ ಪದಗಳನ್ನು ಉಂಟುಮಾಡುವಲ್ಲಿ ಕೂಡ ಇದೇ ಸೋಜಿಗವನ್ನು ಕಾಣಬಹುದು.</p>
<p>ಇಂತಹ ಹಲವಾರು ‘ಮೇಲ್ಮಟ್ಟದ’ ಸನ್ನಿವೇಶಗಳಲ್ಲಿ ನಮ್ಮ ನಾಲಿಗೆಗಳಿಗೆ ತಂತಾನೇ ಬರುವ ಪದಗಳು – ಎಂದರೆ ಕನ್ನಡದವೇ ಆದ ಪದಗಳು – ಬಳಕೆಗೆ ತಕ್ಕವಲ್ಲ, ಮೇಲೆ ಕಾಣಿಸಿದಂತೆ ಸಂಸ್ಕ್ರುತದಿಂದ ಎರವಲು ಪಡೆದ ಪದಗಳೇ ತಕ್ಕವು ಎಂಬ ಕೀಳರಿಮೆ ನಮ್ಮಲ್ಲಿ ಹೆಚ್ಚಿನವರಲ್ಲಿದೆ. ಇದೊಂದು ಸೋಜಿಗವಲ್ಲದೆ ಮತ್ತೇನು?</p>
<p>ಹಿಂದಿನ ಕಾಲದಲ್ಲಿ ಕನ್ನಡ ನುಡಿ <strong>ಸಂಸ್ಕ್ರುತದ</strong> ಕಳೆಗೆಟ್ಟ ರೂಪ ಎಂಬ ಅನಿಸಿಕೆ ಹಲವು ಕನ್ನಡ ಪಂಡಿತರಲ್ಲಿತ್ತು; ಕನ್ನಡ ಪದಗಳಿಗಿಂತ ಸಂಸ್ಕ್ರುತ ಪದಗಳು ಮೇಲ್ಮಟ್ಟದವು ಎಂಬುದಾಗಿ ಅವರು ತಿಳಿಯುತ್ತಿದ್ದುದಕ್ಕೆ ಈ ತಪ್ಪು ಅನಿಸಿಕೆ ಕಾರಣವಾಗಿತ್ತು; ಆದರೆ, ನಿಜಕ್ಕೂ ಕನ್ನಡ ಸಂಸ್ಕ್ರುತದ ಕಳೆಗೆಟ್ಟ ರೂಪ ಅಲ್ಲ, ಅದಕ್ಕಿಂತ ತೀರ ಬೇರಾಗಿರುವ ಒಂದು ಸ್ವತಂತ್ರವಾದ ನುಡಿ ಎಂಬುದನ್ನು ಇವತ್ತು ನಾವು ಕಂಡುಕೊಂಡಿದ್ದೇವೆ. ಹಾಗಾಗಿ, ಇವತ್ತಿಗೂ ಸಂಸ್ಕ್ರುತ ಪದಗಳು ಕನ್ನಡ ಪದಗಳಿಂದ ಮೇಲ್ಮಟ್ಟದವು ಎಂದು ಬಾವಿಸುವುದಕ್ಕೆ ಯಾವ ಆದಾರವೂ ಇಲ್ಲ.</p>
<p>ಈ ರೀತಿ ಹೊಸಪದಗಳನ್ನು ಉಂಟುಮಾಡಬೇಕಾಗಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸದಿರುವುದಕ್ಕೆ ಅವುಗಳ ಕುರಿತಾಗಿ ಕೀಳರಿಮೆ ಇರುವುದು ಒಂದು ಕಾರಣವಾದರೆ, ತಮಗೆ ಬೇಕಾಗಿರುವ ಹೊಸ ಪದಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿಲ್ಲ ಎಂಬ ತಪ್ಪು ಕಲ್ಪನೆ ಇನ್ನೊಂದು ಕಾರಣ. ಸಂಸ್ಕ್ರುತದಲ್ಲಿರುವಶ್ಟು ಒಟ್ಟು(ಪ್ರತ್ಯಯ)ಗಳು ಮತ್ತು ಪದಗಳು ಕನ್ನಡದಲ್ಲಿಲ್ಲ; ಹಾಗಾಗಿ, ಹಲವು ಬಗೆಯ ಪದಗಳನ್ನು ಹೊಸದಾಗಿ ಉಂಟುಮಾಡುವಲ್ಲಿ ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬ ಅನಿಸಿಕೆ ಹಲವರಲ್ಲಿದೆ.</p>
<p>ಆದರೆ, ಇದು ತಪ್ಪು ಅನಿಸಿಕೆ. ಎಂತಹ ವಿಶಯವನ್ನು ಬೇಕಿದ್ದರೂ ತಿಳಿಸಲು ಬೇಕಾಗುವಂತಹ ಪದಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿದೆ. ಎಲ್ಲಾ ಸ್ವಾಬಾವಿಕವಾಗಿ ಬೆಳೆದುಬಂದ ನುಡಿಗಳಿಗೂ ಇಂತಹ ಅಳವು ಇರುತ್ತದೆ. ಕನ್ನಡದ ಈ ಅಳವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡು, ಅದನ್ನು ಬಳಸಿ, ಕನ್ನಡಕ್ಕೆ ಬೇಕಾಗಿರುವ ಹೊಸ ಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಅಂತಹ ಹೊಸ ಪದಗಳಿರುವ ಬರವಣಿಗೆಯನ್ನು ಹೆಚ್ಚು ಹೆಚ್ಚು ಕನ್ನಡಿಗರು ಸುಲಬವಾಗಿ ಓದಿ ತಿಳಿದುಕೊಳ್ಳಬಲ್ಲರು, ಮತ್ತು ಬರವಣಿಗೆಯ ಮೂಲಕ ನಡೆಯುವ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲೂ ಬಲ್ಲರು. ಬರವಣಿಗೆಯ ಗುರಿಯೇ ಇದಲ್ಲವೆ?</p>
<p>ಎಲ್ಲಾ ನುಡಿಗಳಿಗೂ ಅವುಗಳದೇ ಆದ ಪದಗಳ ಸೊಗಡು ಎಂಬುದಿರುತ್ತದೆ; ಕನ್ನಡ ಪದಗಳ ಸೊಗಡು ಸಂಸ್ಕ್ರುತ ಪದಗಳ ಸೊಗಡಿಗಿಂತ ತೀರ ಬೇರಾಗಿದೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಬಳಸಿದಂತೆಲ್ಲ, ಅದರ ಪದಗಳ ಸೊಗಡು ಮರೆಯಾಗುತ್ತಾ ಹೋಗುತ್ತದೆ, ಮತ್ತು ಅದನ್ನು ಓದಿ ತಿಳಿಯುವ ಕೆಲಸ ಕನ್ನಡಿಗರಿಗೆ ಹೆಚ್ಚು ಹೆಚ್ಚು ತೊಡಕಿನದಾಗುತ್ತಾ ಹೋಗುತ್ತದೆ.</p>
<p>ಹಾಗಾಗಿ, ಕನ್ನಡ ಬರಹಗಳಲ್ಲಿ ಹೆಚ್ಚು ಹೆಚ್ಚು ಎರವಲು ಪದಗಳನ್ನು ಬಳಸಹೋಗದೆ, ಅದರ ಪದಗಳ ಸೊಗಡನ್ನು ಉಳಿಸಿಕೊಳ್ಳಬೇಕು ಎನ್ನುವುದು ಬರಿಯ ಅಬಿಮಾನದ ಪ್ರಶ್ನೆ ಮಾತ್ರ ಅಲ್ಲ; ಕನ್ನಡ ಬರಹ ಎಲ್ಲಾ ಕನ್ನಡಿಗರನ್ನೂ ತಲಪಬೇಕು ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಬರಬೇಕೆಂಬ ಮುಕ್ಯವಾದ ಗುರಿಯನ್ನು ಮುಟ್ಟುವ ಪ್ರಶ್ನೆಯೂ ಹೌದು.</p>
<p>ಇತ್ತೀಚೆಗೆ ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವವರು ಈ ವಿಶಯವನ್ನು ಪೂರ‍್ತಿ ಮರೆತಿರುವಂತೆ ಕಾಣುತ್ತದೆ. ಕನ್ನಡದವೇ ಆದ ಪದಗಳು ಅವರ ಕಣ್ಣಿಗೆ ಕಾಣಿಸದೆ ಹೋಗುತ್ತಿವೆ. ಅವರು ಉಂಟುಮಾಡಿರುವ ಪದಕೋಶಗಳಲ್ಲಿ ನೂರಕ್ಕೆ ತೊಂಬತ್ತರಶ್ಟು ಸಂಸ್ಕ್ರುತದಿಂದ ಎರವಲು ಪಡೆದ, ಇಲ್ಲವೇ ಸಂಸ್ಕ್ರುತದಲ್ಲಿ ಹೊಸದಾಗಿ ಉಂಟುಮಾಡಿ ಕನ್ನಡಕ್ಕೆ ಎರವಲು ತಂದ ಪದಗಳೇ ಕಾಣಿಸಿಕೊಳ್ಳುತ್ತವೆ; ಇಂತಹ ಪದಕೋಶಗಳನ್ನು ಕನ್ನಡ ಪದಕೋಶಗಳೆಂದು ಕರೆಯುತ್ತಿರುವುದು ನಿಜಕ್ಕೂ ಅಚ್ಚರಿಯ ವಿಶಯವಾಗಿದೆ!</p>
<p>ಇಂಗ್ಲಿಶ್‌ನಲ್ಲಿರುವ ಹಲವು ಅರಿಮೆಯ ಪದಗಳು ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿ ಕಾಣಿಸಿಕೊಳ್ಳುತ್ತವೆ, ಮತ್ತು ಅವನ್ನು ಓದಿ ತಿಳಿದುಕೊಳ್ಳುವ ಕೆಲಸ ಕನ್ನಡಿಗರಿಗೆ ತುಂಬಾ ತೊಡಕಿನದಾಗುತ್ತದೆ. ಹಾಗಾಗಿ, ನಾವು ಅವುಗಳ ಬದಲು ಬೇರೆ ಕನ್ನಡದವೇ ಆದ ಅರಿಮೆಯ ಪದಗಳನ್ನು ಉಂಟುಮಾಡಲು ಹೋಗುತ್ತೇವೆ.</p>
<p>ಆದರೆ, ಹಾಗೆ ಪದಗಳನ್ನು ಉಂಟುಮಾಡಬೇಕಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತ ಪದಗಳನ್ನು ಬಳಸಿದೆವಾದರೆ, ನಮ್ಮವೇ ಆದ ಪದಗಳನ್ನು ಉಂಟುಮಾಡುವುದರ ಹಿಂದಿರುವ ಮುಕ್ಯವಾದ ಗುರಿಯನ್ನು ನಾವು ತಲಪುವುದೇ ಇಲ್ಲ. ಯಾಕೆಂದರೆ, ಇಂಗ್ಲಿಶ್ ಎರವಲುಗಳ ಹಾಗೆ ಹಲವು ಸಂಸ್ಕ್ರುತ ಎರವಲುಗಳೂ ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಮತ್ತು ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿಯೇ ಉಳಿಯುತ್ತವೆ. ಅವನ್ನು ಓದಿ, ಅವು ತಿಳಿಸುವ ವಿಶಯಗಳನ್ನು ತಿಳಿದುಕೊಳ್ಳುವ ಕೆಲಸವೂ ತುಂಬಾ ತೊಡಕಿನದಾಗಿಯೇ ಉಳಿಯುತ್ತದೆ.</p>
<p>ಸಂಸ್ಕ್ರುತ ಪದಗಳನ್ನು ಬಳಸಿ ಪಳಗಿರುವ ಕನ್ನಡ ಬರಹಗಾರರಿಗೆ ಮತ್ತು ಓದುಗರಿಗೆ ತುಂಬಾ ಸಂಸ್ಕ್ರುತ ಪದಗಳನ್ನು ಬಳಸಿರುವ ಬರಹಗಳೂ ಅಶ್ಟೊಂದು ತೊಡಕಿನವೆಂದು ಅನಿಸದಿರಬಹುದು. ಇದಕ್ಕೆ ಕಾರಣವೇನೆಂದರೆ, ಅವರು ಕನ್ನಡ ಪದಗಳ ಸೊಗಡನ್ನು ಮಾತ್ರವಲ್ಲದೆ ಸಂಸ್ಕ್ರುತ ಪದಗಳ ಸೊಗಡನ್ನೂ ತಮ್ಮದಾಗಿಸಿಕೊಂಡಿರುತ್ತಾರೆ.</p>
<p>ಆದರೆ, ಹೆಚ್ಚಿನ ಕನ್ನಡಿಗರಿಗೂ ಅಂತಹ ಬರಹಗಳು ತೊಡಕಿನವಾಗಿ ಕಾಣಿಸುತ್ತವೆ; ಅವರ ಆಡುನುಡಿಗಳಲ್ಲಿ ತುಂಬಾ ಕಡಿಮೆ ಸಂಸ್ಕ್ರುತ ಎರವಲುಗಳು ಬಳಕೆಯಾಗುತ್ತಿರುವುದು, ಮತ್ತು ಹಾಗೆ ಬಳಕೆಯಾಗುತ್ತಿರುವವೂ ಕನ್ನಡ ಪದಗಳ ಸೊಗಡಿಗೆ ಹೊಂದಿಕೆಯಾಗುವಂತೆ ಮಾರ‍್ಪಟ್ಟಿರುವುದು ಇದಕ್ಕೆ ಕಾರಣ.</p>
<p>ಹಾಗಾಗಿ, ಕನ್ನಡ ಬರಹಗಳು ಎಲ್ಲಾ ಕನ್ನಡಿಗರನ್ನೂ ತಲಪಬೇಕಿದ್ದಲ್ಲಿ, ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಹೊಮ್ಮಬೇಕಿದ್ದಲ್ಲಿ, ಅವುಗಳಲ್ಲಿ ಬಳಕೆಯಾಗುವ ಎರವಲು ಪದಗಳನ್ನು, ಅವು ಸಂಸ್ಕ್ರುತದವಿರಲಿ ಇಲ್ಲವೇ ಇಂಗ್ಲಿಶಿನವಿರಲಿ, ಆದಶ್ಟು ಕಡಿಮೆ ಮಾಡಲು ಪ್ರಯತ್ನಿಸಬೇಕು, ಮತ್ತು ಬಳಸಲೇಬೇಕೆಂದಿರುವವು ಕನ್ನಡದ ಸೊಗಡನ್ನು ಕೆಡಿಸದಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಿಕೊಳ್ಳಬೇಕು.</p>
<p>ಎಲ್ಲಾ ಮಟ್ಟದ ಬಳಕೆಗಳಿಗೂ ಕನ್ನಡ ಪದಗಳು ತಕ್ಕುದಾದುವು ಎಂಬುದನ್ನು ಕನ್ನಡದ ಬರಹಗಾರರು ಮತ್ತು ಕನ್ನಡದಲ್ಲಿ ಹೊಸ ಪದಗಳನ್ನು ಉಂಟುಮಾಡುವವರು ಮನಗಾಣಬೇಕು, ಮತ್ತು ಮೇಲ್ಮಟ್ಟದ ಬಳಕೆಗಳಿಗೆ ಕನ್ನಡದವೇ ಆದ ಪದಗಳನ್ನು ಬಳಸುವುದು ಹೆಮ್ಮೆಯ ವಿಶಯವಶ್ಟೇ ಅಲ್ಲ, ಬರವಣಿಗೆಯ ಮುಕ್ಯ ಗುರಿಯನ್ನು ಮುಟ್ಟುವ ಬಗೆಯೂ ಹೌದೆಂಬ ಅನಿಸಿಕೆ ಅವರಲ್ಲಿ ಬೆಳೆದುಬರಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;t=%E0%B2%AE%E0%B2%A8%E0%B3%86%E0%B2%AF%20%E0%B2%B9%E0%B3%8A%E0%B2%B0%E0%B2%97%E0%B2%A1%E0%B3%86%20%E0%B2%85%E0%B2%A1%E0%B2%BF%E0%B2%97%E0%B3%86%E0%B2%AE%E0%B2%A8%E0%B3%86%20%E0%B2%AA%E0%B2%BE%E0%B2%95%E0%B2%B6%E0%B2%BE%E0%B2%B2%E0%B3%86%E0%B2%AF%E0%B2%BE%E0%B2%97%E0%B2%AC%E0%B3%87%E0%B2%95%E0%B3%87%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;p&#091;images&#093;&#091;0&#093;=&#038;p&#091;title&#093;=%E0%B2%AE%E0%B2%A8%E0%B3%86%E0%B2%AF%20%E0%B2%B9%E0%B3%8A%E0%B2%B0%E0%B2%97%E0%B2%A1%E0%B3%86%20%E0%B2%85%E0%B2%A1%E0%B2%BF%E0%B2%97%E0%B3%86%E0%B2%AE%E0%B2%A8%E0%B3%86%20%E0%B2%AA%E0%B2%BE%E0%B2%95%E0%B2%B6%E0%B2%BE%E0%B2%B2%E0%B3%86%E0%B2%AF%E0%B2%BE%E0%B2%97%E0%B2%AC%E0%B3%87%E0%B2%95%E0%B3%87%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ae%25e0%25b2%25a8%25e0%25b3%2586%25e0%25b2%25af-%25e0%25b2%25b9%25e0%25b3%258a%25e0%25b2%25b0%25e0%25b2%2597%25e0%25b2%25a1%25e0%25b3%2586-%25e0%25b2%2585%25e0%25b2%25a1%25e0%25b2%25bf%25e0%25b2%2597%25e0%25b3%2586%25e0%25b2%25ae%25e0%25b2%25a8%25e0%25b3%2586-%25e0%25b2%25aa%25e0%25b2%25be%25e0%25b2%2595%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/feed/</wfw:commentRss>
		<slash:comments>0</slash:comments>
		</item>
	</channel>
</rss>
