<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; ಪ್ರತ್ಯಯಗಳು</title>
	<atom:link href="http://dnshankarabhat.net/tag/%e0%b2%aa%e0%b3%8d%e0%b2%b0%e0%b2%a4%e0%b3%8d%e0%b2%af%e0%b2%af%e0%b2%97%e0%b2%b3%e0%b3%81/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಕನ್ನಡ ನುಡಿಯ ಸೊಗಡು</title>
		<link>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%a8%e0%b3%81%e0%b2%a1%e0%b2%bf%e0%b2%af-%e0%b2%b8%e0%b3%8a%e0%b2%97%e0%b2%a1%e0%b3%81/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581</link>
		<comments>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%a8%e0%b3%81%e0%b2%a1%e0%b2%bf%e0%b2%af-%e0%b2%b8%e0%b3%8a%e0%b2%97%e0%b2%a1%e0%b3%81/#comments</comments>
		<pubDate>Mon, 14 Apr 2014 17:06:44 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Ellara Kannada]]></category>
		<category><![CDATA[Kannada linguistics]]></category>
		<category><![CDATA[linguistics]]></category>
		<category><![CDATA[prefix]]></category>
		<category><![CDATA[suffix]]></category>
		<category><![CDATA[ಇಂಗ್ಲಿಶ್]]></category>
		<category><![CDATA[ಉಲಿ]]></category>
		<category><![CDATA[ಎಲ್ಲರ ಕನ್ನಡ]]></category>
		<category><![CDATA[ಎಲ್ಲರ ಕನ್ನಡ ಸರಣಿ]]></category>
		<category><![CDATA[ಒಟ್ಟುಗಳು]]></category>
		<category><![CDATA[ಕನ್ನಡ]]></category>
		<category><![CDATA[ಕನ್ನಡ ಸೊಗಡು]]></category>
		<category><![CDATA[ಪ್ರತ್ಯಯಗಳು]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಸೊಗಡು]]></category>
		<category><![CDATA[ಸೊಲ್ಲು]]></category>

		<guid isPermaLink="false">http://dnshankarabhat.net/?p=127</guid>
		<description><![CDATA[ನುಡಿಯರಿಮೆಯ ಇಣುಕುನೋಟ – 33 ಎಲ್ಲಾ ನುಡಿಗಳಿಗೂ ಅವುಗಳದೇ ಆದ ಒಂದು ಸೊಗಡುಎಂಬುದಿರುತ್ತದೆ. ಇದನ್ನು ಬರಹಗಳು ಹೆಚ್ಚು ಕೆಡದಂತೆ ಉಳಿಸಿಕೊಳ್ಳಬೇಕು. ಇಲ್ಲವಾದರೆ ಅವು ತಮ್ಮ ಜೀವಂತಿಕೆಯನ್ನು ಕಳೆದುಕೊಳ್ಳುತ್ತವೆ, ಮತ್ತು ಸಾಮಾನ್ಯ ಜನರಿಂದ ದೂರವಾಗುತ್ತವೆ. ಅಂತಹ ಬರಹಗಳನ್ನು ಕಲಿಯುವ ಮತ್ತು ಬಳಸುವ ಕೆಲಸವೂ ಆ ನುಡಿಯನ್ನಾಡುವ ಜನರಿಗೆ ತುಂಬಾ ತೊಡಕಿನದಾಗುತ್ತದೆ. ನುಡಿಗಳಿಗಿರುವ ಈ ಸೊಗಡು ಅವುಗಳ ಪದಗಳಲ್ಲಿ ಬರುವ ಉಲಿಗಳಲ್ಲಿ, ಉಲಿಗಳ ಓರಣಗಳಲ್ಲಿ, ಪದಗಳಿಗೆ ಒಟ್ಟು(ಪ್ರತ್ಯಯ)ಗಳನ್ನು ಇಲ್ಲವೇ ಬೇರೆ ಪದಗಳನ್ನು ಸೇರಿಸಿದಾಗ ಅವುಗಳ ಉಲಿಗಳಲ್ಲಿ ನಡೆಯುವ ಮಾರ್ಪಾಡುಗಳಲ್ಲಿ, ಪದಗಳನ್ನು ಸೇರಿಸಿ ಬೇರೆ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 33</strong></p>
<p>ಎಲ್ಲಾ <strong>ನುಡಿ</strong>ಗಳಿಗೂ ಅವುಗಳದೇ ಆದ ಒಂದು <strong>ಸೊಗಡು</strong>ಎಂಬುದಿರುತ್ತದೆ. ಇದನ್ನು ಬರಹಗಳು ಹೆಚ್ಚು ಕೆಡದಂತೆ ಉಳಿಸಿಕೊಳ್ಳಬೇಕು. ಇಲ್ಲವಾದರೆ ಅವು ತಮ್ಮ ಜೀವಂತಿಕೆಯನ್ನು ಕಳೆದುಕೊಳ್ಳುತ್ತವೆ, ಮತ್ತು ಸಾಮಾನ್ಯ ಜನರಿಂದ ದೂರವಾಗುತ್ತವೆ. ಅಂತಹ ಬರಹಗಳನ್ನು ಕಲಿಯುವ ಮತ್ತು ಬಳಸುವ ಕೆಲಸವೂ ಆ ನುಡಿಯನ್ನಾಡುವ ಜನರಿಗೆ ತುಂಬಾ ತೊಡಕಿನದಾಗುತ್ತದೆ. ನುಡಿಗಳಿಗಿರುವ ಈ ಸೊಗಡು ಅವುಗಳ ಪದಗಳಲ್ಲಿ ಬರುವ ಉಲಿಗಳಲ್ಲಿ, ಉಲಿಗಳ ಓರಣಗಳಲ್ಲಿ, ಪದಗಳಿಗೆ ಒಟ್ಟು(ಪ್ರತ್ಯಯ)ಗಳನ್ನು ಇಲ್ಲವೇ ಬೇರೆ ಪದಗಳನ್ನು ಸೇರಿಸಿದಾಗ ಅವುಗಳ ಉಲಿಗಳಲ್ಲಿ ನಡೆಯುವ ಮಾರ್ಪಾಡುಗಳಲ್ಲಿ, ಪದಗಳನ್ನು ಸೇರಿಸಿ ಬೇರೆ ಪದಗಳನ್ನು ಉಂಟುಮಾಡುವ ಬಗೆಗಳಲ್ಲಿ, ಮತ್ತು ಪದಗಳಿಂದ ಪದಕಂತೆಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳಲ್ಲಿ ಕಾಣಿಸಿಕೊಳ್ಳುತ್ತದೆ.</p>
<p>ಕನ್ನಡಕ್ಕೂ ಇಂತಹ ತನ್ನದೇ ಆದ ಒಂದು ಸೊಗಡಿದೆ, ಮತ್ತು ಅದು ಸಂಸ್ಕ್ರುತ, ಹಿಂದಿ, ಇಂಗ್ಲಿಶ್ ಮೊದಲಾದ ಬೇರೆ ನುಡಿಗಳಿಗಿರುವ ಸೊಗಡಿಗಿಂತ ತೀರ ಬೇರಾಗಿದೆ; ಕನ್ನಡದ ಉಲಿಗಳು, ಅವುಗಳ ಓರಣಗಳು, ಅವುಗಳ ಸೇರಿಕೆಯ ಮಾರ್ಪಾಡುಗಳು, ಕನ್ನಡದಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳು ಮೊದಲಾದುವನ್ನು ಸಂಸ್ಕ್ರುತದಂತಹ ಬೇರೆ ನುಡಿಗಳಲ್ಲಿ ಕಾಣಿಸುವ ಬಗೆಗಳೊಂದಿಗೆ ಹೋಲಿಸಿ ನೋಡಿದಾಗ, ನಿಜಕ್ಕೂ ಕನ್ನಡದ ಸೊಗಡು ಎಂತಹದು ಎಂಬುದು ಗೊತ್ತಾಗುತ್ತದೆ.</p>
<p>(1) ಸಂಸ್ಕ್ರುತ ಪದಗಳಲ್ಲಿ ಬಳಕೆಯಾಗುವ ಖಛಠಥಫ ಮತ್ತು ಘಝಢಧಭಗಳೆಂಬ ಒತ್ತುಸಿರಿನ ಬರಿಗೆಗಳು (ಮಹಾಪ್ರಾಣಾಕ್ಶರಗಳು) ಕನ್ನಡ ಪದಗಳಲ್ಲಿಲ್ಲ; ಆದರೆ, ಸಂಸ್ಕ್ರುತ ಪದಗಳಲ್ಲಿ ಕಾಣಿಸದಿರುವ ಗಿಡ್ಡ ಎಕಾರ ಮತ್ತು ಒಕಾರಗಳು ಕನ್ನಡ ಪದಗಳಲ್ಲಿವೆ. ಸಂಸ್ಕ್ರುತದಲ್ಲಿರುವ ಋಕಾರ ಮತ್ತು ಷಕಾರಗಳು ಕನ್ನಡದಲ್ಲಿಲ್ಲ; ಆದರೆ, ಸಂಸ್ಕ್ರುತದಲ್ಲಿಲ್ಲದ ಎಯ್, ಒಯ್, ಉಯ್, ಆಯ್, ಒವ್, ಇವ್ ಮೊದಲಾದ ಹಲವು ಸ್ವರ ಮತ್ತು ಯಕಾರ ಇಲ್ಲವೇ ವಕಾರಗಳ ಜೋಡಿಗಳು ಕನ್ನಡದಲ್ಲಿವೆ.</p>
<p>(2) ಈ ಎರಡು ನುಡಿಗಳಿಗೂ ಸಮಾನವಾಗಿರುವ ಅಕ್ಶರಗಳು ಹಲವಿವೆಯಾದರೂ ಅವು ಒಂದೇ ರೀತಿಯಾಗಿ ಬಳಕೆಯಾಗುವುದಿಲ್ಲ. ಸಂಸ್ಕ್ರುತದಲ್ಲಿ ಒತ್ತಕ್ಶರಗಳಿಂದ ಮೊದಲಾಗುವ ಪದಗಳು ಸಾಕಶ್ಟಿವೆ (ಕ್ರಾಂತಿ, ಕ್ಷಮೆ, ಜ್ಞಾನ, ಜ್ಯೋತಿ, ದ್ವೇಷ, ಮ್ಲೇಚ್ಛ). ಆದರೆ ಕನ್ನಡದವೇ ಆದ ಪದಗಳಲ್ಲಿ ಆ ರೀತಿ ಒತ್ತಕ್ಶರಗಳು ಪದಗಳ ಮೊದಲಿಗೆ ಬರುವುದಿಲ್ಲ. ಪದಗಳ ನಡುವೆ ಬರಬಲ್ಲ ಒತ್ತಕ್ಶರಗಳಲ್ಲೂ ಸಂಸ್ಕ್ರುತ ಮತ್ತು ಕನ್ನಡ ನುಡಿಗಳ ನಡುವೆ ವ್ಯತ್ಯಾಸವಿದೆ. ಸಂಸ್ಕ್ರುತದ ಭಕ್ತ, ಅಜ್ಞಾನ, ವತ್ಸ, ಮತ್ಸ್ಯ ಮೊದಲಾದ ಪದಗಳಲ್ಲಿ ನಡುವೆ ಬಂದಿರುವ ಕ್ತ್, ಜ್ಞ್, ತ್ಸ್, ತ್ಸ್ಯ್ ಮೊದಲಾದ ಹಲವು ಬಗೆಯ ಒತ್ತಕ್ಶರಗಳು ಕನ್ನಡ ಪದಗಳಲ್ಲಿ ಕಾಣಿಸುವುದಿಲ್ಲ.</p>
<p>(3) ಎರಡು ಇಲ್ಲವೇ ಹೆಚ್ಚು ಪದಗಳನ್ನು ಒಟ್ಟುಸೇರಿಸಿ ಹೊಸ ಪದಗಳನ್ನು ತಯಾರಿಸುವ ಹೊಲಬುಗಳು ಈ ಎರಡು ನುಡಿಗಳಲ್ಲಿ ಬೇರೆ ಬೇರಾಗಿವೆ. ಸಂಸ್ಕ್ರುತದಲ್ಲಿ ಸಾಮಾನ್ಯವಾಗಿ ಹೆಸರುಪದಗಳನ್ನು ಮಾತ್ರ ಇಂತಹ ರಚನೆಗಳಲ್ಲಿ ಬಳಸಲಾಗುತ್ತದೆ; ಆದರೆ, ಕನ್ನಡದಲ್ಲಿ ಹೆಸರುಪದ (ತಲೆಗೂದಲು, ಬಯಲಾಟ), ಎಸಕಪದ (ಚುಚ್ಚುಮದ್ದು, ಕಡೆಗೋಲು) ಮತ್ತು ಪರಿಚೆಪದಗಳೆಂಬ (ದೊಡ್ಡಮ್ಮ, ಬಿಸಿನೀರು) ಮೂರು ಬಗೆಯ ಪದಗಳನ್ನೂ ಇಂತಹ ರಚನೆಗಳಲ್ಲಿ ಬಳಸಲು ಬರುತ್ತದೆ.</p>
<p>(4) ಕನ್ನಡದಲ್ಲಿ ಸಾಮಾನ್ಯವಾಗಿ ಎರಡಕ್ಕಿಂತ ಹೆಚ್ಚು ಪದಗಳನ್ನು ಈ ರೀತಿ ಜೋಡಿಸುವುದು ಅಪರೂಪ; ಆದರೆ, ಸಂಸ್ಕ್ರುತದಲ್ಲಿ ಮೂರು-ನಾಲ್ಕು ಪದಗಳನ್ನು ಸೇರಿಸಿ ರಚಿಸಿರುವ ಜೋಡುಪದಗಳೂ ಬೇಕಾದಶ್ಟಿವೆ (ಪೂರ್ವಜನ್ಮಕೃತಂ, ಮತ್ತಮಾತಂಗಗಾಮಿ, ಸಕಲನೀತಿಶಾಸ್ತ್ರತತ್ವಜ್ಞಃ).</p>
<p>(5) ಒಟ್ಟು(ಪ್ರತ್ಯಯ)ಗಳನ್ನು ಸೇರಿಸಿ ಹೊಸ ಪದಗಳನ್ನು ತಯಾರಿಸುವ ವಿಶಯದಲ್ಲೂ ಕನ್ನಡ ಸಂಸ್ಕ್ರುತಕ್ಕಿಂತ ಬೇರಾಗಿದೆ. ಕನ್ನಡದಲ್ಲಿ ಒಂದಕ್ಕಿಂತ ಹೆಚ್ಚು ಒಟ್ಟುಗಳನ್ನು ಸೇರಿಸಿ ರಚಿಸಿರುವ ಪದಗಳು ತುಂಬಾ ಕಡಿಮೆ; ಆದರೆ, ಸಂಸ್ಕ್ರುತದ ಹೆಚ್ಚಿನ ಪದಗಳಲ್ಲೂ ಎರಡು ಇಲ್ಲವೇ ಹೆಚ್ಚು ಒಟ್ಟುಗಳು ಸೇರಿರುವುದನ್ನು ಕಾಣಬಹುದು (ಅ-ಜ್ಞಾನ್-ಇ, ಕರ್-ತೃ-ತ್ವ). ಕನ್ನಡದಲ್ಲಿ ಒಟ್ಟುಗಳನ್ನು ಪದಗಳ ಕೊನೆಯಲ್ಲಿ ಮಾತ್ರ ಬಳಸಲು ಬರುತ್ತದೆ; ಆದರೆ, ಸಂಸ್ಕ್ರುತದಲ್ಲಿ ಅವನ್ನು ಪದಗಳ ಮೊದಲಿಗೂ ಬಳಸಬಹುದು (ಸತ್ಯ-ಅಸತ್ಯ, ಸ್ವಾಗತ-ಸುಸ್ವಾಗತ, ಜೀವಿ-ನಿರ್ಜೀವಿ, ರಕ್ಷಣೆ-ಸಂರಕ್ಷಣೆ).</p>
<p>(6) ಪದಕ್ಕೆ ಪದ ಸೇರಿದಾಗ, ಇಲ್ಲವೇ ಪದಕ್ಕೆ ಒಟ್ಟು ಸೇರಿದಾಗ, ಅವುಗಳಲ್ಲಿ ನಡೆಯುವ ಸೇರಿಕೆಯ ಬದಲಾವಣೆಗಳು ಕನ್ನಡ ಮತ್ತು ಸಂಸ್ಕ್ರುತ ನುಡಿಗಳಲ್ಲಿ ಬೇರೆ ಬೇರಾಗಿವೆ: ಇಕಾರದ ಅನಂತರ ಅಕಾರ ಬಂದಾಗ, ಕನ್ನಡದಲ್ಲಿ ಇಕಾರ ಬಿದ್ದುಹೋಗಿ ಅಕಾರ ಉಳಿಯುತ್ತದೆ (ಅಲ್ಲಿ+ಅಲ್ಲಿ=ಅಲ್ಲಲ್ಲಿ); ಆದರೆ, ಸಂಸ್ಕ್ರುತದಲ್ಲಿ ಇಕಾರ ಯಕಾರವಾಗುತ್ತದೆ (ಅತಿ+ಅಲ್ಪ=ಅತ್ಯಲ್ಪ). ಅಕಾರದ ಅನಂತರ ಇಕಾರ ಬಂದರೂ ಕನ್ನಡದಲ್ಲಿ ಇಂತಹದೇ ಮೊದಲನೆಯ ಸ್ವರ ಬಿದ್ದುಹೋಗಿ ಎರಡನೆಯದು ಉಳಿಯುತ್ತದೆ (ಅಲ್ಲಿಂದ+ಇಳಿದು=ಅಲ್ಲಿಂದಿಳಿದು); ಆದರೆ, ಸಂಸ್ಕ್ರುತದಲ್ಲಿ ಅವೆರಡೂ ಬಿದ್ದುಹೋಗಿ ಹೊಸದೊಂದು ಸ್ವರ (ಏಕಾರ) ಬಂದುಸೇರುತ್ತದೆ (ರಾಜ+ಇಂದ್ರ=ರಾಜೇಂದ್ರ).</p>
<p>(7) ಒಟ್ಟುಗಳನ್ನು ಸೇರಿಸಿ ಹೊಸಪದಗಳನ್ನು ರಚಿಸುವಲ್ಲಿ ಕನ್ನಡ ಮತ್ತು ಸಂಸ್ಕ್ರುತಗಳ ನಡುವೆ ಹಲವು ಮುಕ್ಯವಾದ ವ್ಯತ್ಯಾಸಗಳಿವೆ: ಸಂಸ್ಕ್ರುತ ಪದಗಳಿಗೆ ಯ ಇಲ್ಲವೇ ಇಕ ಒಟ್ಟನ್ನು ಸೇರಿಸಿದಾಗ, ಹಲವು ತೊಡಕಾದ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಪದಗಳ ಮೊದಲಿಗೆ ಬರುವ ಗಿಡ್ಡ ಅಕಾರ ಉದ್ದ ಆ ಎಂದಾಗುವುದು (ಚಪಲ-ಚಾಪಲ್ಯ, ಪ್ರಮಾಣ-ಪ್ರಾಮಾಣಿಕ), ಇ, ಈ ಮತ್ತು ಏ ಸ್ವರಗಳು ಐ ಎಂದಾಗುವುದು (ನಿಸರ್ಗ-ನೈಸರ್ಗಿಕ, ದೀನ-ದೈನ್ಯ, ಚೇತನ-ಚೈತನ್ಯ), ಉ, ಊ ಮತ್ತು ಓ ಸ್ವರಗಳು ಔ ಎಂದಾಗುವುದು (ಸುಖ-ಸೌಖ್ಯ, ಪೂರ್ವಾಹ್ನ-ಪೌರ್ವಾಹ್ನಿಕ, ಲೋಕ-ಲೌಕಿಕ) ಮೊದಲಾದವು ಇಂತಹ ಕೆಲವು ಸಂಸ್ಕ್ರುತದ ನಿಯಮಗಳು.</p>
<p>ಆದರೆ, ಕನ್ನಡದಲ್ಲಿ ಒಟ್ಟುಗಳನ್ನು ಸೇರಿಸಿ ಪದಗಳನ್ನು ರಚಿಸುವಲ್ಲಿ ಇವಕ್ಕಿಂತ ತೀರ ಬೇರಾಗಿರುವ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಇವು (ಕನ್ನಡಿಗರ ಮಟ್ಟಿಗೆ) ಸಂಸ್ಕ್ರುತದ ಸೇರಿಕೆಯ ನಿಯಮಗಳಶ್ಟು ತೊಡಕಿನವಾಗಿಲ್ಲ. ಕನ್ನಡ ಪದಗಳಿಗೆ ಇಕೆ ಒಟ್ಟನ್ನು ಸೇರಿಸಿದಾಗ ಪದಗಳ ಕೊನೆಯ ಉಕಾರ ಬಿದ್ದುಹೋಗುತ್ತದೆ (ಬಳಲು-ಬಳಲಿಕೆ, ಹೊಗಳು-ಹೊಗಳಿಕೆ, ಅಂಜು-ಅಂಜಿಕೆ) ಮತ್ತು ಪದಗಳ ಕೊನೆಯ ಇಕಾರ ಹಾಗೆಯೇ ಉಳಿದು ಇಕೆ ಒಟ್ಟಿನ ಮೊದಲ ಸ್ವರ ಬಿದ್ದುಹೋಗುತ್ತದೆ (ಇರಿ-ಇರಿಕೆ, ತಿರಿ-ತಿರಿಕೆ, ಇಳಿ-ಇಳಿಕೆ).</p>
<p>ಕನ್ನಡದ ಸೊಗಡು ಸಂಸ್ಕ್ರುತದ ಸೊಗಡಿಗಿಂತ ತೀರ ಬೇರಾದುದು ಎಂಬುದನ್ನು ಅವು ಬಳಸುವ ಪದಗಳ ಸ್ವರೂಪದಲ್ಲಿ ಕಾಣಿಸುವಂತಹ ಈ ವ್ಯತ್ಯಾಸಗಳು ತುಂಬಾ ಸ್ಪಶ್ಟವಾಗಿ ತೋರಿಸಿಕೊಡುತ್ತವೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಅವುಗಳಲ್ಲಿ ಸ್ವಲ್ಪವೂ ಬದಲಾವಣೆಯನ್ನು ಮಾಡದೆ ಬಳಸಿದಲ್ಲಿ ಅಂತಹ ಬರಹ ತನ್ನದೇ ಆದ ಸೊಗಡನ್ನು ಪೂರ್ತಿ ಕಳೆದುಕೊಳ್ಳುತ್ತದೆ. ಈ ರೀತಿ ತನ್ನ ಹುಟ್ಟುಸೊಗಡನ್ನು ಕಳೆದುಕೊಳ್ಳುವ ಬರಹ ತನ್ನತನವನ್ನೂ ಕಳೆದುಕೊಳ್ಳುತ್ತದೆ, ಮತ್ತು ಅದರ ಜೀವಂತಿಕೆ ನಶ್ಟವಾಗಿ ಅದರಲ್ಲಿ ಕ್ರುತಕತೆ ತುಂಬಿಕೊಳ್ಳುತ್ತದೆ. ಇದಲ್ಲದೆ, ಅಂತಹ ಬರಹಕ್ಕೂ ಹೆಚ್ಚಿನ ಕನ್ನಡಿಗರ ಮಾತಿಗೂ ನಡುವೆ ದೊಡ್ಡ ಕಂದಕವೇರ್ಪಟ್ಟು, ಅದು ಅವರೆಲ್ಲರಿಂದಲೂ ದೂರವಾಗುತ್ತದೆ. ಯಾಕೆಂದರೆ, ಬರಹ ಆ ರೀತಿ ಬದಲಾದಾಗಲೂ ಜನರ ಆಡುನುಡಿ ಅದಕ್ಕನುಗುಣವಾಗಿ ಬದಲಾಗುವುದಿಲ್ಲ. ಅದು ತನ್ನ ಪದಸ್ವರೂಪವನ್ನು ಮತ್ತು ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ.</p>
<p>ಇದಕ್ಕೆ ಕಾರಣವೇನೆಂದರೆ, ಆಡುನುಡಿಯನ್ನು ಮಕ್ಕಳು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುತ್ತಾರೆ; ಅದನ್ನು ಮಕ್ಕಳಿಗೆ ಯಾರೂ ಕಲಿಸಿಕೊಡಬೇಕಾಗಿಲ್ಲ. ಹಾಗಾಗಿ, ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಮಾರೆಡೆಗೊಳ್ಳುವಾಗ, ಅದು ತಿರುತಿರುಗಿ ಹೊಸತನವನ್ನು ಮತ್ತು ಜೀವಂತಿಕೆಯನ್ನು ಪಡೆಯುತ್ತಿರುತ್ತದೆ. ಆದರೆ, ಬರಹವನ್ನು ಮಕ್ಕಳು ಶಾಲೆಯಲ್ಲಿ ದೊಡ್ಡವರ ನೆರವಿನಿಂದ ಕಲಿಯಬೇಕಾಗುತ್ತದೆ; ಅದನ್ನು ಅವರು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುವುದಿಲ್ಲ.</p>
<p>ಹಾಗಾಗಿ, ಬರಹಗಾರರು ಕಾಲದಿಂದ ಕಾಲಕ್ಕೆ ಅದನ್ನು ಹೊಸದಾಗಿಸಿಕೊಳ್ಳದಿದ್ದರೆ, ಮತ್ತು ಆಡುನುಡಿಗೆ ಹತ್ತಿರವಾಗುವಂತೆ ಮಾರ್ಪಡಿಸಿಕೊಳ್ಳದಿದ್ದರೆ, ಅದು ಕ್ರುತಕವಾಗುತ್ತಾ ಹೋಗಿ ತನ್ನ ಹುಟ್ಟುಸೊಗಡನ್ನು ಮತ್ತು ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಕನ್ನಡದಲ್ಲಿ ಕತೆ-ಕಾದಂಬರಿಗಳನ್ನು ಬರೆಯುವವರು ತಮ್ಮ ಬರಹ ಈ ರೀತಿ ಕ್ರುತಕವಾಗದಂತೆ ನೋಡಿಕೊಳ್ಳುತ್ತಾರೆ; ಆದರೆ, ಬೇರೆ ಬಗೆಯ ಬರಹಗಳನ್ನು ಬರೆಯುವವರು ಇದನ್ನು ಮಾಡಲು ಹೋಗದುದರಿಂದಾಗಿ ಇವತ್ತು ಅಂತಹ ಬರಹಗಳು ತುಂಬಾ ಕ್ರುತಕವಾಗಿದ್ದು ಸಾಮಾನ್ಯ ಜನರಿಗೆ ತಿಳಿಯದ ಹಾಗಾಗಿವೆ.</p>
<p><em><em>(<em>ಈ ಬರಹ ವಿಜಯ </em></em>ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;t=%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%A8%E0%B3%81%E0%B2%A1%E0%B2%BF%E0%B2%AF%20%E0%B2%B8%E0%B3%8A%E0%B2%97%E0%B2%A1%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%A8%E0%B3%81%E0%B2%A1%E0%B2%BF%E0%B2%AF%20%E0%B2%B8%E0%B3%8A%E0%B2%97%E0%B2%A1%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25a8%25e0%25b3%2581%25e0%25b2%25a1%25e0%25b2%25bf%25e0%25b2%25af-%25e0%25b2%25b8%25e0%25b3%258a%25e0%25b2%2597%25e0%25b2%25a1%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%a8%e0%b3%81%e0%b2%a1%e0%b2%bf%e0%b2%af-%e0%b2%b8%e0%b3%8a%e0%b2%97%e0%b2%a1%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಕನ್ನಡ ಬರಹಗಳಲ್ಲಿ ‘ಕರಣ’ದ ಹಾವಳಿ</title>
		<link>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%ac%e0%b2%b0%e0%b2%b9%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%b0%e0%b2%a3%e0%b2%a6-%e0%b2%b9/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%2595%25e0%25b2%25b0%25e0%25b2%25a3%25e0%25b2%25a6-%25e0%25b2%25b9</link>
		<comments>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%ac%e0%b2%b0%e0%b2%b9%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%b0%e0%b2%a3%e0%b2%a6-%e0%b2%b9/#comments</comments>
		<pubDate>Mon, 14 Apr 2014 17:05:52 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Ellara Kannada]]></category>
		<category><![CDATA[Kannada linguistics]]></category>
		<category><![CDATA[linguistics]]></category>
		<category><![CDATA[ಇಂಗ್ಲಿಶ್]]></category>
		<category><![CDATA[ಎರವಲು]]></category>
		<category><![CDATA[ಎಲ್ಲರ ಕನ್ನಡ]]></category>
		<category><![CDATA[ಎಲ್ಲರ ಕನ್ನಡ ಸರಣಿ]]></category>
		<category><![CDATA[ಎಸಕ]]></category>
		<category><![CDATA[ಕನ್ನಡ ಒಟ್ಟುಗಳು]]></category>
		<category><![CDATA[ಪರ್ಶಿಯನ್]]></category>
		<category><![CDATA[ಪ್ರತ್ಯಯಗಳು]]></category>
		<category><![CDATA[ಬರಹ]]></category>
		<category><![CDATA[ಸಂಸ್ಕ್ರುತ]]></category>

		<guid isPermaLink="false">http://dnshankarabhat.net/?p=125</guid>
		<description><![CDATA[ನುಡಿಯರಿಮೆಯ ಇಣುಕುನೋಟ – 32 ಕನ್ನಡ ಬರಹಗಳಲ್ಲಿ ಇತ್ತೀಚೆಗೆ ಸಂಸ್ಕ್ರುತದ ‘ಕರಣ’ ಎಂಬ ಪದದ ಬಳಕೆ ತುಂಬಾ ಹೆಚ್ಚಾಗುತ್ತಿದೆ; ಅದನ್ನು ಬಳಸುವವರು ನಿಜಕ್ಕೂ ಅದು ಬೇಕೇ ಇಲ್ಲವೇ ಬೇಡವೇ ಎಂಬುದನ್ನು ಗಮನಿಸುವುದೇ ಇಲ್ಲ. ಹಲವೆಡೆಗಳಲ್ಲಿ ಅದಕ್ಕೆ ಬದಲು ಕನ್ನಡದ್ದೇ ಆದ ‘ಇಸು’ ಒಟ್ಟನ್ನು ಬಳಸುವುದೇ ಕನ್ನಡದ ಮಟ್ಟಿಗೆ ಒಳ್ಳೆಯದು. ಯಾಕೆಂದರೆ, ‘ಕರಣ’ ಪದದ ಬಳಕೆಯಿಂದಾಗಿ ಮೂಡುವ ಹಲವು ಬಗೆಯ ಗೊಂದಲಗಳು ‘ಇಸು’ ಒಟ್ಟಿನ ಬಳಕೆಯಲ್ಲಿ ಕಾಣಿಸುವುದಿಲ್ಲ. ಇದಲ್ಲದೆ, ಕನ್ನಡದ್ದೇ ಆದ ‘ಇಸು’ ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆಗಳು ಎಲ್ಲಾ ಕನ್ನಡಿಗರಿಗೂ ತಿಳಿದಿರುತ್ತವೆ; [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 32</strong></p>
<p>ಕನ್ನಡ <strong>ಬರಹ</strong>ಗಳಲ್ಲಿ ಇತ್ತೀಚೆಗೆ ಸಂಸ್ಕ್ರುತದ <strong>‘ಕರಣ’</strong> ಎಂಬ ಪದದ ಬಳಕೆ ತುಂಬಾ ಹೆಚ್ಚಾಗುತ್ತಿದೆ; ಅದನ್ನು ಬಳಸುವವರು ನಿಜಕ್ಕೂ ಅದು ಬೇಕೇ ಇಲ್ಲವೇ ಬೇಡವೇ ಎಂಬುದನ್ನು ಗಮನಿಸುವುದೇ ಇಲ್ಲ. ಹಲವೆಡೆಗಳಲ್ಲಿ ಅದಕ್ಕೆ ಬದಲು ಕನ್ನಡದ್ದೇ ಆದ ‘ಇಸು’ ಒಟ್ಟನ್ನು ಬಳಸುವುದೇ ಕನ್ನಡದ ಮಟ್ಟಿಗೆ ಒಳ್ಳೆಯದು. ಯಾಕೆಂದರೆ, ‘ಕರಣ’ ಪದದ ಬಳಕೆಯಿಂದಾಗಿ ಮೂಡುವ ಹಲವು ಬಗೆಯ ಗೊಂದಲಗಳು ‘ಇಸು’ ಒಟ್ಟಿನ ಬಳಕೆಯಲ್ಲಿ ಕಾಣಿಸುವುದಿಲ್ಲ. ಇದಲ್ಲದೆ, ಕನ್ನಡದ್ದೇ ಆದ ‘ಇಸು’ ಒಟ್ಟಿನ ಬಳಕೆಯ ಹಿಂದಿರುವ ಕಟ್ಟಲೆಗಳು ಎಲ್ಲಾ ಕನ್ನಡಿಗರಿಗೂ ತಿಳಿದಿರುತ್ತವೆ; ಹಾಗಾಗಿ, ‘ಕರಣ’ ಪದದ ಬಳಕೆಯ ಹಾಗೆ ಹೊಸ ಕಟ್ಟಲೆಗಳನ್ನು ಅವರು ಕಲಿಯಬೇಕಾಗುವುದಿಲ್ಲ.</p>
<p>ಸಂಸ್ಕ್ರುತದ ಎರವಲುಗಳೊಂದಿಗೆ ಮಾತ್ರವಲ್ಲದೆ ಇಂಗ್ಲಿಶ್, ಪರ್ಶಿಯನ್ ಮೊದಲಾದ ಬೇರೆ ಎರವಲು ಪದಗಳೊಂದಿಗೆ, ಮತ್ತು ಕನ್ನಡದವೇ ಆದ ಪದಗಳೊಂದಿಗೂ ಈ ‘ಕರಣ’ ಎಂಬುದನ್ನು ಬಳಸಲಾಗುತ್ತದೆ; ಸಬಲೀಕರಣ, ಉದಾರೀಕರಣ, ಪ್ರಮಾಣೀಕರಣ ಎಂಬ ಪದಗಳ ಹಾಗೆ, ಡಿಜಿಟಲೀಕರಣ, ಅಯಾನೀಕರಣ, ಕಾಸಗೀಕರಣ, ದಾಕಲೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ.</p>
<p>ಕನ್ನಡದ ಹಸಿರು ಪದದಿಂದ ಹಸಿರೀಕರಣ, ಅಗಲ ಪದದಿಂದ ಅಗಲೀಕರಣ, ಮತ್ತು ಕಯ್ಗಾರಿಕೆ ಪದದಿಂದ ಕಯ್ಗಾರಿಕೀಕರಣ ಎಂಬಂತಹ ಪದಗಳನ್ನೂ ಉಂಟುಮಾಡಲಾಗಿದೆ. ಇಂತಹ ಹಲವು ಕಡೆಗಳಲ್ಲಿ ಸಬಲಿಸು, ಪ್ರಮಾಣಿಸು, ಡಿಜಿಟಲಿಸು, ಅಯಾನಿಸು, ದಾಕಲಿಸು, ಹಸಿರಿಸು, ಅಗಲಿಸು ಎಂಬಂತಹ ಪದಗಳನ್ನು ಮತ್ತು ಅವುಗಳ ಹೆಸರುರೂಪಗಳಾದ ಪ್ರಮಾಣಿಸುವಿಕೆ, ದಾಕಲಿಸುವಿಕೆ, ಅಯಾನಿಸುವಿಕೆ, ಹಸಿರಿಸುವಿಕೆ ಎಂಬಂತಹ ಪದಗಳನ್ನೂ ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ.</p>
<p>‘ಕರಣ’ ಎಂಬುದನ್ನು ಬಳಸುವವರಲ್ಲಿ ಹಲವರಿಗೆ ಅದರೊಂದಿಗೆ ಬರುವ ಹೆಸರುಪದದಲ್ಲಿ ಎಂತಹ ಮಾರ್ಪಾಡುಗಳನ್ನೆಲ್ಲ ಮಾಡಬೇಕು ಎಂಬ ವಿಶಯದಲ್ಲೂ ಗೊಂದಲಗಳಿವೆ; ಕೆಲವರು ಆದುನಿಕೀಕರಣ, ಜಾಗತಿಕೀಕರಣ, ಯಾಂತ್ರಿಕೀಕರಣ ಎಂದು ಬರೆದರೆ, ಇನ್ನು ಕೆಲವರು ಆದುನೀಕರಣ, ಜಗತೀಕರಣ, ಯಾಂತ್ರೀಕರಣ ಎಂಬುದಾಗಿ ಬರೆಯುತ್ತಾರೆ. ಸಾಮಾಜೀಕರಣವೂ ಇದೆ, ಸಮಾಜೀಕರಣವೂ ಇದೆ; ಸಾದ್ರುಶೀಕರಣವೂ ಇದೆ, ತುರ್ತುಕರಣವೂ ಇದೆ. ಮೇಲಿನ ಪದಗಳಲ್ಲಿ ಬಳಕೆಯಾಗಿರುವ ಮಹಾಪ್ರಾಣಾಕ್ಶರಗಳನ್ನು ಈ ಅಂಕಣದಲ್ಲಿ ಕಯ್ಬಿಡಲಾಗಿದೆ; ಆದರೆ, ಅದರ ಬಳಕೆಯಲ್ಲೂ ಸಾಕಶ್ಟು ಗೊಂದಲಗಳಿವೆ.</p>
<p>‘ಕರಣ’ ಪದವನ್ನು ಬಳಸುವವರೂ ಆ ಪದಗಳಿಂದ ಎಸಕ(ಕ್ರಿಯಾ)ಪದಗಳನ್ನು ಉಂಟುಮಾಡಬೇಕಿದ್ದಲ್ಲಿ ಕನ್ನಡದ ‘ಇಸು’ ಒಟ್ಟನ್ನು ಬಳಸಲೇಬೇಕಾಗುತ್ತದೆ; ಸಬಲೀಕರಣ, ದಾಕಲೀಕರಣ, ಡಿಜಿಟಲೀಕರಣ ಎಂಬಂತಹ ಪದಗಳನ್ನು ಬಳಸುವವರು ಅವುಗಳಿಂದ ಎಸಕಪದವನ್ನು ಪಡೆಯಬೇಕಿದ್ದಲ್ಲಿ ಸಬಲೀಕರಿಸು, ದಾಕಲೀಕರಿಸು, ಡಿಜಿಟಲೀಕರಿಸು ಎಂಬುದಾಗಿ ಇಸು ಒಟ್ಟನ್ನು ಸೇರಿಸಿಯೇ ಹೇಳಬೇಕಾಗುತ್ತದೆ; ಇದಕ್ಕೆ ಬದಲು ಸಬಲಿಸು, ದಾಕಲಿಸು, ಡಿಜಿಟಲಿಸು ಎಂದಶ್ಟೇ ಹೇಳಿದರೆ ಸಾಕಾಗುವುದಿಲ್ಲವೇ? ಅವುಗಳ ನಡುವೆ ಕರಣವನ್ನು ಯಾಕೆ ತಂದುಹಾಕಬೇಕು? ಸ್ತಿರೀಕರಣಗೊಳ್ಳು ಎಂಬುದೂ ಇಂತಹದೇ ಇನ್ನೊಂದು ಅನವಶ್ಯಕವಾದ ಕರಣ ಪದವನ್ನು ಸೇರಿಸಿರುವ ಪದರೂಪ; ಸ್ತಿರಗೊಳ್ಳು ಎಂಬುದು ಹೆಚ್ಚು ಅಡಕವಾಗಿ ಅದೇ ಹುರುಳನ್ನು ಕೊಡಬಲ್ಲುದು.</p>
<p>ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವಲ್ಲೂ ಕನ್ನಡದ ಅರಿವಿಗರು ಈ ‘ಕರಣ’ ಪದವನ್ನು ಹಲವೆಡೆಗಳಲ್ಲಿ ಬಳಸಿದ್ದಾರೆ; ಕಾರ್ಬನೀಕರಣ, ನಯ್ಟ್ರೀಕರಣ, ಪಾಲಿಮರೀಕರಣ ಎಂಬಂತಹ ಈ ಪದಗಳನ್ನು ಬಳಸಿದಲ್ಲಿ, ಅವಕ್ಕೆ ಸಂಬಂದಿಸಿದಂತೆ ಕರಿಸು (ಅಯಾನೀಕರಿಸು), ಕ್ರುತ (ಅಯಾನೀಕ್ರುತ), ಕಾರಕ (ಅಯಾನೀಕಾರಕ), ಕಾರಿ (ಅಯಾನೀಕಾರಿ) ಎಂಬಂತಹ ಕರಣ ಪದಕ್ಕೆ ಸಂಬಂದಿಸಿದಂತಹ ಬೇರೆ ಕೆಲವು ಪದಗಳನ್ನೂ ಬಳಸಬೇಕಾಗುತ್ತದೆ, ಮತ್ತು ಅವು ಕನ್ನಡದ್ದಲ್ಲವಾದ ಕಾರಣ, ಅವನ್ನು ಬಳಸುವಲ್ಲಿ ಹಲವಾರು ತಪ್ಪುಗಳೂ ಕಾಣಿಸಿಕೊಳ್ಳುತ್ತವೆ; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದಲ್ಲಿ ಕನ್ನಡದಲ್ಲಿ ಈಗಾಗಲೇ ಬಳಕೆಯಲ್ಲಿರುವ ಮತ್ತು ಎಲ್ಲಾ ಕನ್ನಡಿಗರಿಗೂ ತಿಳಿದಿರುವ ಇಸುವಿಕೆ (ಅಯಾನಿಸುವಿಕೆ), ಇಸಿದ (ಅಯಾನಿಸಿದ), ಇಸುವ (ಅಯಾನಿಸುವ) ಎಂಬಂತಹ ರೂಪಗಳನ್ನು ಬಳಸಲು ಬರುತ್ತದೆ.</p>
<p>ಇಂತಹ ಕಡೆಗಳಲ್ಲಿ ಅರಿವಿಗರು ಇನ್ನೂ ಒಂದು ತೊಡಕನ್ನು ಎದುರಿಸಬೇಕಾಗುತ್ತದೆ: ಇಂಗ್ಲಿಶ್ನ ಅಯ್ಸ್ ಎಂಬ ಒಟ್ಟು ಬಂದಿರುವಲ್ಲಿ ಕರಿಸು ಎಂಬುದನ್ನು ಬಳಸುವ (ಪೋಲರಯ್ಸ್ – ದ್ರುವೀಕರಿಸು, ಅನೊಡಯ್ಸ್ – ಅನೊಡೀಕರಿಸು) ಈ ಅರಿವಿಗರು ಇಂಗ್ಲಿಶ್ನ ಅಯ್ಸ್ ಎಂಬುದಕ್ಕಿರುವ ಮಾಡುವಿಕೆ ಮತ್ತು ಆಗುವಿಕೆ ಎಂಬ ಎರಡು ಹುರುಳುಗಳಲ್ಲಿ ಒಂದನ್ನು ಮಾತ್ರ ತಿಳಿಸಬಲ್ಲರು; ಇದಕ್ಕೆ ಬದಲು ಇಸು ಎಂಬುದನ್ನಶ್ಟೇ ಬಳಸಿದರೆ ಆ ಎರಡು ಹುರುಳುಗಳನ್ನೂ ತಿಳಿಸಬಲ್ಲರು. ಯಾಕೆಂದರೆ, ಕರಣ ಎಂಬುದಕ್ಕೆ ಆಗುವಿಕೆ ಎಂಬ ಹುರುಳು ಸಿಗಲಾರದು; ಆದರೆ, ಇಸು ಎಂಬುದನ್ನು ಬಳಸಿರುವ ಅನೋಡಿಸು, ಅಲ್ಯೂಮಿನಿಸು ಎಂಬುವಕ್ಕೆ ಆಗುವಿಕೆಯ ಹುರುಳೂ ಸಿಗಬಲ್ಲುದು.</p>
<p>ಅರಿಮೆಯ (ಪಾರಿಬಾಶಿಕ)ಪದಗಳನ್ನು ಉಂಟುಮಾಡುವಲ್ಲಿ ಆತ್ಮಕ ಎಂಬುದನ್ನು ಬಳಸುವುದೂ ಇಂತಹದೇ ಒಂದು ಬೇಕಿಲ್ಲದ ಚಾಳಿ. ನುಡಿಯರಿಮೆಯ ಒಂದು ಪದನೆರಕೆಯಲ್ಲಿ ಈ ರೀತಿ ಆತ್ಮಕ ಎಂಬುದನ್ನು ಬಳಸಿರುವ ಇನ್ನೂರಯ್ವತ್ತಕ್ಕಿಂತಲೂ ಹೆಚ್ಚು (ಎಂದರೆ, ಸುಮಾರು ನೂರಕ್ಕೆ ಹದಿಮೂರರಶ್ಟು) ಪದಗಳಿವೆ! ಇವುಗಳಲ್ಲಿ ಹೆಚ್ಚಿನವುಗಳಲ್ಲಿಯೂ ಆತ್ಮಕ ಎಂಬುದನ್ನು ಬಳಸಬೇಕಾಗಿಯೇ ಇಲ್ಲ (ವ್ಯಾಕರಣಾತ್ಮಕ ನಿಯಮ – ವ್ಯಾಕರಣ ನಿಯಮ, ದ್ವನ್ಯಾತ್ಮಕ ರಚನೆ – ದ್ವನಿರಚನೆ, ಪ್ರೇರಣಾತ್ಮಕ ವಾಕ್ಯ – ಪ್ರೇರಣ ವಾಕ್ಯ). ಅರಿಮೆಯ ಪದಗಳು ಸಿಕ್ಕಲಾಗಿದ್ದಶ್ಟೂ ಒಳ್ಳೆಯದು ಎಂಬ ಅನಿಸಿಕೆ ಈ ಪದಗಳನ್ನು ಉಂಟುಮಾಡಿರುವ ಅರಿವಿಗರಲ್ಲಿರುವ ಹಾಗೆ ಕಾಣಿಸುತ್ತದೆ.</p>
<p>ಇದಲ್ಲದೆ, ತಮ್ಮ ಬರಹಗಳಲ್ಲಿ ಎಲ್ಲರಿಗೂ ಗೊತ್ತಾಗುವ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತದ ಎರವಲುಗಳನ್ನು ತಂದು ತುಂಬಿಸಿದರೆ ಅವುಗಳ ಮಟ್ಟ ಮೇಲೇರುತ್ತದೆಯೆಂದು ಕೆಲವರು ತಿಳಿದ ಹಾಗಿದೆ. ಆದರೆ, ಹಲವು ಮಂದಿ ಹೀಗೆ ಮಾಡುವಲ್ಲಿ ಹಲವು ಬಗೆಯ ತಪ್ಪುಗಳನ್ನೂ ಮಾಡಿ ನಗುವಿಗೆ ಎಡೆಮಾಡಿಕೊಡುತ್ತಾರೆ. ‘ಕಾರಣ’ ಎಂಬ ಪದದ ಬದಲು ಹಲವು ಮಂದಿ ‘ಸಕಾರಣ’ ಎಂಬ ಪದವನ್ನು ಬಳಸುತ್ತಾರೆ; ಆದರೆ, ಇವೆರಡರ ನಡುವೆ ಹುರುಳಿನಲ್ಲಿ ವ್ಯತ್ಯಾಸವಿದೆ ಎಂಬುದನ್ನು ಅವರು ಗಮನಿಸುವುದಿಲ್ಲ. ಸಕಾರಣ ಎಂಬುದಕ್ಕೆ ‘ಕಾರಣವಿರುವ’ ಎಂಬ ಹುರುಳಿದೆ. ಇದನ್ನು ಗಮನಿಸದ ಕೆಲವರ ಬರಹಗಳಲ್ಲಿ ಸಕಾರಣವಿಲ್ಲದೆ, ಸಕಾರಣ ನೀಡದೆ, ಸಕಾರಣಗಳಿರಲಿಲ್ಲ ಎಂಬಂತಹ ಬಳಕೆಗಳನ್ನು ಕಾಣಬಹುದು! ಆದರೆ, ಇಂತಹದೇ ಬಳಕೆ ಮುಂದುವರಿದರೆ, ಸಕಾರಣ ಎಂಬುದಕ್ಕೆ ಕನ್ನಡದಲ್ಲಿ ಬರಿಯ ಕಾರಣ ಎಂಬುದರ ಹುರುಳೇ ಇರುವಂತಾದೀತು.</p>
<p>ಇಹಲೋಕ ಮತ್ತು ಪರಲೋಕ ಎಂಬ ಬೇರೆ ಎರಡು ಸಂಸ್ಕ್ರುತ ಎರವಲುಗಳ ಬಳಕೆಯೂ ಇಂತಹದೇ. ಅವುಗಳ ನಿಜವಾದ ಹುರುಳು ಏನೆಂದು ತಿಳಿಯದಿದ್ದರೂ ಬಳಸುವ ಆಸೆ. ಆತನನ್ನು ಕಚ್ಚಿದ ಹಾವೇ ಸತ್ತುಹೋಯಿತು ಎಂಬುದನ್ನು ಹೇಳಬೇಕಿರುವಲ್ಲಿ ಕಚ್ಚಿದ ಹಾವೇ ಇಹಲೋಕಕ್ಕೆ ಹೋಯಿತು ಎಂಬುದಾಗಿ ಬರೆದಿರುವುದನ್ನು ಕಾಣಬಹುದು! ಇಹಲೋಕ ಮತ್ತು ಪರಲೋಕಗಳೆಂಬ ಈ ಪದಗಳ ಬದಲು ಈ ಲೋಕ ಮತ್ತು ಬೇರೆ ಲೋಕ ಎಂಬ ಎಲ್ಲರಿಗೂ ಗೊತ್ತಾಗುವ ಪದಕಂತೆಗಳನ್ನು ಬಳಸಿದ್ದರೆ, ಇಂತಹ ತಪ್ಪು ಮಾಡಿ ನಗೆಪಾಟಲಾಗುವ ಹಾಗಾಗುತ್ತಿರಲಿಲ್ಲ.</p>
<p>ದಿನಪತ್ರಿಕೆಗಳಲ್ಲಿ ತಲೆಬರಹವನ್ನು ಬರೆಯುವವರೂ ಇಂತಹದೇ ಕೀಳರಿಮೆಯಿಂದ ಬಳಲುತ್ತಿರುವ ಹಾಗೆ ಕಾಣಿಸುತ್ತದೆ. ಒಂದು ಬರಹದಲ್ಲಿ ಉದ್ದಕ್ಕೂ ನಾಯಿ, ಬೆಕ್ಕು, ಕೋಳಿ, ಮೀನು ಎಂಬಂತಹ ಕನ್ನಡದವೇ ಆದ ಪದಗಳನ್ನು ಬರುತ್ತವೆ; ಆದರೆ, ತಲೆಬರಹದಲ್ಲಿ ಮಾತ್ರ ಶ್ವಾನ, ಮಾರ್ಜಾಲ, ಕುಕ್ಕುಟ, ಮತ್ಸ್ಯ ಎಂಬಂತಹ ಸಂಸ್ಕ್ರುತ ಎರವಲುಗಳು ಬರುತ್ತವೆ. ತಲೆಬರಹದಲ್ಲಿ ಎಲ್ಲರಿಗೂ ಗೊತ್ತಿರುವ ನಾಯಿ, ಬೆಕ್ಕು, ಮೀನು ಮೊದಲಾದ ಕನ್ನಡ ಪದಗಳು ಬಂದರೆ ದಿನಪತ್ರಿಕೆಯ ತಕ್ಕಮೆ ಇಲ್ಲವಾಗಬಹುದೆಂಬ ಹೆದರಿಕೆ ಅವರಿಗಿರುವಂತೆ ತೋರುತ್ತದೆ. ತನ್ನ ಮುದಿ ತಂದೆಯನ್ನು ಅಪ್ಪ ಎನ್ನಲು ಹಿಂಜರಿಯುವ ದೊಡ್ಡ ಅದಿಕಾರಿಯ ಕೀಳು ಸಂಸ್ಕ್ರುತಿಯಿದು.</p>
<p><em><em>(<em>ಈ ಬರಹ ವಿಜಯ </em></em>ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%2595%25e0%25b2%25b0%25e0%25b2%25a3%25e0%25b2%25a6-%25e0%25b2%25b9%2F&#038;t=%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%AC%E0%B2%B0%E0%B2%B9%E0%B2%97%E0%B2%B3%E0%B2%B2%E0%B3%8D%E0%B2%B2%E0%B2%BF%20%E2%80%98%E0%B2%95%E0%B2%B0%E0%B2%A3%E2%80%99%E0%B2%A6%20%E0%B2%B9%E0%B2%BE%E0%B2%B5%E0%B2%B3%E0%B2%BF&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%2595%25e0%25b2%25b0%25e0%25b2%25a3%25e0%25b2%25a6-%25e0%25b2%25b9%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%AC%E0%B2%B0%E0%B2%B9%E0%B2%97%E0%B2%B3%E0%B2%B2%E0%B3%8D%E0%B2%B2%E0%B2%BF%20%E2%80%98%E0%B2%95%E0%B2%B0%E0%B2%A3%E2%80%99%E0%B2%A6%20%E0%B2%B9%E0%B2%BE%E0%B2%B5%E0%B2%B3%E0%B2%BF" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%2595%25e0%25b2%25b0%25e0%25b2%25a3%25e0%25b2%25a6-%25e0%25b2%25b9%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%ac%e0%b2%b0%e0%b2%b9%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%b0%e0%b2%a3%e0%b2%a6-%e0%b2%b9/feed/</wfw:commentRss>
		<slash:comments>0</slash:comments>
		</item>
	</channel>
</rss>
