<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; Kannada linguisitics</title>
	<atom:link href="http://dnshankarabhat.net/tag/kannada-linguisitics/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಉಲಿ ಮಾರ‍್ಪಾಡಿನ ಗೆರೆಗಳು</title>
		<link>http://dnshankarabhat.net/%e0%b2%89%e0%b2%b2%e0%b2%bf-%e0%b2%ae%e0%b2%be%e0%b2%b0%e2%80%8d%e0%b3%8d%e0%b2%aa%e0%b2%be%e0%b2%a1%e0%b2%bf%e0%b2%a8-%e0%b2%97%e0%b3%86%e0%b2%b0%e0%b3%86%e0%b2%97%e0%b2%b3%e0%b3%81/?utm_source=rss&#038;utm_medium=rss&#038;utm_campaign=%25e0%25b2%2589%25e0%25b2%25b2%25e0%25b2%25bf-%25e0%25b2%25ae%25e0%25b2%25be%25e0%25b2%25b0%25e2%2580%258d%25e0%25b3%258d%25e0%25b2%25aa%25e0%25b2%25be%25e0%25b2%25a1%25e0%25b2%25bf%25e0%25b2%25a8-%25e0%25b2%2597%25e0%25b3%2586%25e0%25b2%25b0%25e0%25b3%2586%25e0%25b2%2597%25e0%25b2%25b3%25e0%25b3%2581</link>
		<comments>http://dnshankarabhat.net/%e0%b2%89%e0%b2%b2%e0%b2%bf-%e0%b2%ae%e0%b2%be%e0%b2%b0%e2%80%8d%e0%b3%8d%e0%b2%aa%e0%b2%be%e0%b2%a1%e0%b2%bf%e0%b2%a8-%e0%b2%97%e0%b3%86%e0%b2%b0%e0%b3%86%e0%b2%97%e0%b2%b3%e0%b3%81/#comments</comments>
		<pubDate>Mon, 14 Apr 2014 17:00:51 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Kannada linguisitics]]></category>
		<category><![CDATA[language change]]></category>
		<category><![CDATA[language transformation]]></category>
		<category><![CDATA[linguistics]]></category>
		<category><![CDATA[ಆದಿಕರ‍್ನಾಟಕ]]></category>
		<category><![CDATA[ಒಕ್ಕಲಿಗ]]></category>
		<category><![CDATA[ಒಳನುಡಿಗಳು]]></category>
		<category><![CDATA[ಕೊಳ್ಳೆಗಾಲ]]></category>
		<category><![CDATA[ದಾರವಾಡ]]></category>
		<category><![CDATA[ನಂಜನಗೂಡು]]></category>
		<category><![CDATA[ನುಡಿ]]></category>
		<category><![CDATA[ಪಿರಿಯಾಪಟ್ಟಣ]]></category>
		<category><![CDATA[ಬಾಶೆ]]></category>
		<category><![CDATA[ಬಾಶೆಯ ಎಲ್ಲೆಗಳು]]></category>
		<category><![CDATA[ಬಾಶೆಯ ಬದಲಾವಣೆ]]></category>
		<category><![CDATA[ಬ್ರಾಹ್ಮಣ]]></category>
		<category><![CDATA[ಮಂಗಳೂರು]]></category>
		<category><![CDATA[ಮಯ್ಸೂರು]]></category>

		<guid isPermaLink="false">http://dnshankarabhat.net/?p=113</guid>
		<description><![CDATA[ನುಡಿಯರಿಮೆಯ ಇಣುಕುನೋಟ – 26 ಕನ್ನಡ ನುಡಿ ಹಳ್ಳಿಯಿಂದ ಹಳ್ಳಿಗೆ, ಜಿಲ್ಲೆಯಿಂದ ಜಿಲ್ಲೆಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿದೆಯೆಂಬುದು ನಮಗೆಲ್ಲ ಗೊತ್ತಿದೆ. ಮಯ್ಸೂರಿನವರ ಕನ್ನಡ ಒಂದು ತರವಾದರೆ ಮಂಗಳೂರಿನವರದು ಇನ್ನೊಂದು ತರ, ಮತ್ತು ದಾರವಾಡದವರದು ಮತ್ತೊಂದು ತರ. ಇಶ್ಟೇ ಅಲ್ಲ, ಮಯ್ಸೂರಿನಂತಹ ಒಂದೇ ಜಿಲ್ಲೆಯಲ್ಲೂ ಎಲ್ಲಾ ಕಡೆ ಒಂದೇ ರೀತಿಯ ಕನ್ನಡ ಬಳಕೆಯಲ್ಲಿಲ್ಲ. ಕೊಳ್ಳೇಗಾಲದ ಕನ್ನಡಕ್ಕೂ ನಂಜನಗೂಡಿನ ಕನ್ನಡಕ್ಕೂ ನಡುವೆ ವ್ಯತ್ಯಾಸವಿದೆ, ಮತ್ತು ಹೆಗ್ಗಡದೇವನ ಕೋಟೆಯ ಕನ್ನಡಕ್ಕೂ ಕೆ. ಆರ್. ನಗರದ ಕನ್ನಡಕ್ಕೂ ನಡುವೆ ವ್ಯತ್ಯಾಸವಿದೆ. ಇದಲ್ಲದೆ, [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 26</strong></p>
<p><strong>ಕನ್ನಡ ನುಡಿ</strong> ಹಳ್ಳಿಯಿಂದ ಹಳ್ಳಿಗೆ, ಜಿಲ್ಲೆಯಿಂದ ಜಿಲ್ಲೆಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿದೆಯೆಂಬುದು ನಮಗೆಲ್ಲ ಗೊತ್ತಿದೆ. ಮಯ್ಸೂರಿನವರ ಕನ್ನಡ ಒಂದು ತರವಾದರೆ ಮಂಗಳೂರಿನವರದು ಇನ್ನೊಂದು ತರ, ಮತ್ತು ದಾರವಾಡದವರದು ಮತ್ತೊಂದು ತರ. ಇಶ್ಟೇ ಅಲ್ಲ, ಮಯ್ಸೂರಿನಂತಹ ಒಂದೇ ಜಿಲ್ಲೆಯಲ್ಲೂ ಎಲ್ಲಾ ಕಡೆ ಒಂದೇ ರೀತಿಯ ಕನ್ನಡ ಬಳಕೆಯಲ್ಲಿಲ್ಲ. ಕೊಳ್ಳೇಗಾಲದ ಕನ್ನಡಕ್ಕೂ ನಂಜನಗೂಡಿನ ಕನ್ನಡಕ್ಕೂ ನಡುವೆ ವ್ಯತ್ಯಾಸವಿದೆ, ಮತ್ತು ಹೆಗ್ಗಡದೇವನ ಕೋಟೆಯ ಕನ್ನಡಕ್ಕೂ ಕೆ. ಆರ್. ನಗರದ ಕನ್ನಡಕ್ಕೂ ನಡುವೆ ವ್ಯತ್ಯಾಸವಿದೆ.</p>
<p>ಇದಲ್ಲದೆ, ಒಂದೇ ಹಳ್ಳಿಯಲ್ಲಿ ವಾಸಿಸುವ ಜನರಲ್ಲೂ ಬ್ರಾಹ್ಮಣರ ಕನ್ನಡ, ಒಕ್ಕಲಿಗರ ಕನ್ನಡ, ಆದಿಕರ‍್ನಾಟಕರ ಕನ್ನಡ ಎಂದೆಲ್ಲಾ ವ್ಯತ್ಯಾಸಗಳು ಕಾಣಿಸುತ್ತವೆ. ಆಡುಗನ್ನಡದಲ್ಲಿ ಇಂತಹ ಹಲವು ವ್ಯತ್ಯಾಸಗಳಿವೆಯೆಂಬುದನ್ನು ನಾವೆಲ್ಲ ತಿಳಿದಿರುವೆವಾದರೂ ಈ ವ್ಯತ್ಯಾಸಗಳು ನಿಜಕ್ಕೂ ಎಂತಹವು ಎಂಬುದನ್ನು ಇದುವರೆಗೆ ಯಾರೂ ಸರಿಯಾಗಿ ಮತ್ತು ವಿವರವಾಗಿ ತಿಳಿದುಕೊಳ್ಳಲು ಹೋಗಿಲ್ಲ. ಹಾಗೆ ತಿಳಿಯಲು ಹೋದಲ್ಲಿ, ಅವುಗಳ ಹಿಂದೆ ಹಲವಾರು ಕಟ್ಟುನಿಟ್ಟಾದ ಕಟ್ಟಲೆಗಳೇ ಅಡಗಿವೆ ಎಂಬುದರ ಅರಿವು ನಮಗಾಗದಿರದು.</p>
<p>ಎತ್ತುಗೆಗಾಗಿ, ಮಯ್ಸೂರಿನವರು ಮನೆ ಎನ್ನುವರಾದರೆ, ದಾರವಾಡದವರು ಮನಿ ಎನ್ನುತ್ತಾರೆ; ಮಯ್ಸೂರಿನ ಹಣೆ ದಾರವಾಡದಲ್ಲಿ ಹಣಿಯಾಗುತ್ತದೆ; ಕೆರೆ ಎಂಬುದು ಕೆರಿಯಾಗುತ್ತದೆ, ಗೆರೆ ಎಂಬುದು ಗೆರಿಯಾಗುತ್ತದೆ. ಎಕಾರದಲ್ಲಿ ಕೊನೆಗೊಳ್ಳುವ ಹೆಸರು(ನಾಮ)ಪದಗಳೆಲ್ಲ ದಾರವಾಡ ಕನ್ನಡದಲ್ಲಿ ಇಕಾರದಲ್ಲಿ ಕೊನೆಗೊಳ್ಳುತ್ತವೆ ಎಂಬ ಕಟ್ಟಲೆಯೊಂದು ಈ ವ್ಯತ್ಯಾಸದ ಹಿಂದೆ ಅಡಗಿದೆ. ಮಯ್ಸೂರು ಜಿಲ್ಲೆಯೊಳಗೇನೇ ಕೊಳ್ಳೇಗಾಲದಲ್ಲಿ ಬರೆ ಎಂದಿರುವುದು ನಂಜನಗೂಡಿನಲ್ಲಿ ಬರಿ ಎಂದಾಗುತ್ತದೆ, ಅಗೆ ಎಂಬುದು ಅಗಿಯಾಗುತ್ತದೆ, ಕರೆ ಎಂಬುದು ಕರಿಯಾಗುತ್ತದೆ, ಒಡೆ ಎಂಬುದು ಒಡಿಯಾಗುತ್ತದೆ. ಇದು ಅಂತಹದೇ ಇನ್ನೊಂದು ಮಾರ‍್ಪಾಡು.</p>
<p>ಆದರೆ ಈ ಮಾರ‍್ಪಾಡು ಎಕಾರದಲ್ಲಿ ಕೊನೆಗೊಳ್ಳುವ ಎಸಕ(ಕ್ರಿಯಾ)ಪದಗಳನ್ನು ಮಾತ್ರ ನಾಟುತ್ತದೆ. ಯಾಕೆಂದರೆ, ಮೇಲೆ ಸೂಚಿಸಿದ ಹಾಗೆ, ಎಕಾರದಲ್ಲಿ ಕೊನೆಗೊಳ್ಳುವ ಹೆಸರುಪದಗಳು ಮಯ್ಸೂರಿನಲ್ಲಿ ಎಲ್ಲ ಕಡೆಗಳಲ್ಲೂ (ನಂಜನಗೂಡಿನಲ್ಲೂ) ಬದಲಾಗದೆ ಉಳಿದಿವೆ. ಇದಲ್ಲದೆ, ದಾರವಾಡ ಕನ್ನಡದಲ್ಲಿ ಎಕಾರದಲ್ಲಿ ಕೊನೆಗೊಳ್ಳುವ ಹೆಸರುಪದಗಳ ಹಾಗೆ ಎಕಾರದಲ್ಲಿ ಕೊನೆಗೊಳ್ಳುವ ಎಸಕಪದಗಳೂ ಇಕಾರದಲ್ಲಿ ಕೊನೆಗೊಳ್ಳುವವುಗಳಾಗಿ ಮಾರ‍್ಪಟ್ಟಿವೆ. ಎಂದರೆ, ಹೆಸರುಪದಗಳ ಮಟ್ಟಿಗೆ ಕೊಳ್ಳೇಗಾಲದೊಂದಿಗೆ ಸೇರುವ ನಂಜನಗೂಡಿನ ಕನ್ನಡ ಎಸಕಪದಗಳ ಮಟ್ಟಿಗೆ ದಾರವಾಡ ಕನ್ನಡದೊಂದಿಗೆ ಸೇರುತ್ತದೆ.</p>
<p>ಒಂದು ಊರಿನಿಂದ ಇನ್ನೊಂದು ಊರಿಗೆ ಆಡುಗನ್ನಡದಲ್ಲಿ ತೋರಿಬರುವ ವ್ಯತ್ಯಾಸಗಳ ಹಿಂದೆ ಈ ರೀತಿ ಹಲವು ಕಟ್ಟಲೆಗಳಿವೆ ಮಾತ್ರವಲ್ಲ, ಅವುಗಳಿಗೊಂದು ನಿಶ್ಚಿತವಾದ ಹರವೂ ಇದೆ. ಎತ್ತುಗೆಗಾಗಿ, ಪದಗಳ ಮೊದಲಿಗೆ ಬರುವ ಹಕಾರ ಬಿದ್ದುಹೋಗುತ್ತದೆಯೆಂಬ ಕಟ್ಟಲೆಯನ್ನು ಗಮನಿಸಬಹುದು. ಮಯ್ಸೂರು ಜಿಲ್ಲೆಯ ಹುಣಸೂರಿನಲ್ಲಿ ಹಕ್ಕಿ ಎಂದು ಹೇಳುವುದಕ್ಕೆ ನಂಜನಗೂಡಿನಲ್ಲಿ ಅಕ್ಕಿ ಎನ್ನುತ್ತಾರೆ; ಹುಣಸೂರಿನ ಹಾಲು ನಂಜನಗೂಡಿನಲ್ಲಿ ಆಲು ಎಂದಾಗುತ್ತದೆ; ಹಂಬು ಎಂಬುದು ಅಂಬು ಎಂದಾಗುತ್ತದೆ, ಹಾವು ಎಂಬುದು ಆವು ಎಂದಾಗುತ್ತದೆ. ಪದಗಳ ಮೊದಲಿಗೆ ಬರುವ ಹಕಾರಗಳೆಲ್ಲ ನಂಜನಗೂಡಿನ ಕನ್ನಡದಲ್ಲಿ ಬಿದ್ದುಹೋಗಿವೆ ಎಂಬ ಕಟ್ಟಲೆ ಈ ವ್ಯತ್ಯಾಸದ ಹಿಂದೆ ಅಡಗಿದೆ.</p>
<p>ಹಕಾರ ಬಿದ್ದುಹೋಗುವ ಈ ಮಾರ‍್ಪಾಡಿಗೆ ಒಂದು ನಿಶ್ಚಿತವಾದ ಹರವೂ ಇದೆ. ಹುಣಸೂರು, ಕೆ.ಆರ್.ನಗರ ಮತ್ತು ಪಿರಿಯಾಪಟ್ಟಣಗಳಲ್ಲಿ ಪದಗಳ ಮೊದಲಿಗೆ ಬರುವ ಹಕಾರವನ್ನು ಜನರು ಸರಿಯಾಗಿಯೇ ಉಲಿಯುತ್ತಾರೆ. ಹುಣಸೂರು ಬಿಟ್ಟು ಹೆಗ್ಗಡದೇವನ ಕೋಟೆಗೆ ಹೋದೆವಾದರೆ, ಅಲ್ಲಿ ಇಂತಹ ಹಕಾರಗಳೆಲ್ಲ ಬಿದ್ದುಹೋಗಿರುವುದನ್ನು ಕಾಣಬಹುದು. ಮುಂದೆ ಗುಂಡ್ಲುಪೇಟೆ, ಚಾಮರಾಜನಗರ, ತಿ.ನರಸೀಪುರ, ನಂಜನಗೂಡು, ಕೊಳ್ಳೇಗಾಲ ಮೊದಲಾದ ಕಡೆಗಳಲ್ಲೂ ಹಕಾರ ಹೀಗೆ ಬಿದ್ದುಹೋಗಿದೆ.</p>
<p>ಈ ರೀತಿ ಪದಗಳ ಮೊದಲಿನ ಹಕಾರ ಎಲ್ಲೆಲ್ಲ ಬಿದ್ದುಹೋಗಿದೆ ಮತ್ತು ಎಲ್ಲೆಲ್ಲ ಬಿದ್ದುಹೋಗಿಲ್ಲ ಎಂಬುದನ್ನು ಹಳ್ಳಿಯಿಂದ ಹಳ್ಳಿಗೆ ಸುತ್ತಾಡಿ ತಿಳಿದುಕೊಂಡು ಬಂದೆವಾದರೆ, ಮಯ್ಸೂರಿನ ನಕಾಶೆಯಲ್ಲಿ ಒಂದು ‘ಹಕಾರದ ಗೆರೆ’ಯನ್ನು ಎಳೆಯಲು ಸಾದ್ಯವಾದೀತು. ಈ ಗೆರೆ ನಂಜನಗೂಡು ಮತ್ತು ಹುಣಸೂರುಗಳ ನಡುವೆ ಹೆಗ್ಗಡದೇವನ ಕೋಟೆಯ ಪಡುವ ದಿಕ್ಕಿಗಾಗಿ ಹಾಯ್ದೀತು.</p>
<p>ಈ ಹಕಾರದ ಗೆರೆಗೆ ಬೇರೆಯೂ ಕೆಲವು ಕಟ್ಟುಗಳಿವೆ. ಎತ್ತುಗೆಗಾಗಿ, ಮಯ್ಸೂರು ಜಿಲ್ಲೆಯ ಬ್ರಾಹ್ಮಣರ ಆಡುನುಡಿಯಲ್ಲಿ ಹಕಾರ ಎಲ್ಲಿಯೂ (ನಂಜನಗೂಡು, ಕೊಳ್ಳೇಗಾಲ, ಚಾಮರಾಜಪುರ, ತಿ.ನರಸೀಪುರ ಮೊದಲಾದ ಕಡೆಗಳಲ್ಲೂ) ಬಿದ್ದುಹೋಗಿಲ್ಲ. ಹಾಗಾಗಿ ಈ ಹಕಾರದ ಗೆರೆ ಮಯ್ಸೂರು ಜಿಲ್ಲೆಯನ್ನು ಉದ್ದಕ್ಕೆ ಮಾತ್ರವಲ್ಲದೆ ನೆಟ್ಟಗೂ ಕತ್ತರಿಸುತ್ತದೆಯೆಂದು ಹೇಳಬೇಕಾಗುತ್ತದೆ. ಆಡುನುಡಿಗಳ ನಡುವೆ ಕಾಣಿಸುವ ವ್ಯತ್ಯಾಸಗಳಿಗೆ ಇಂತಹ ಊರಿನ ಮತ್ತು ಜಾತಿಯ ಕಟ್ಟುಗಳು ಮಾತ್ರವಲ್ಲದೆ ಸಮಯದ ಕಟ್ಟೂ ಇದೆಯೆಂದು ಹೇಳಬಹುದು.</p>
<p>ಯಾಕೆಂದರೆ, ಎರಡು ಬೇರೆ ಬೇರೆ ಸಮಯಗಳಲ್ಲಿ ಬಳಕೆಯಲ್ಲಿದ್ದ ಆಡುನುಡಿಗಳ ನಡುವಿರುವ ವ್ಯತ್ಯಾಸಗಳ ಹಿಂದೆಯೂ ಮೇಲೆ ವಿವರಿಸಿದಂತಹ ಕಟ್ಟಲೆಗಳೇ ಕಾಣಿಸುತ್ತವೆ. ಎತ್ತುಗೆಗಾಗಿ, ಹಳೆಗನ್ನಡದ ಪಾಲ್ ಪದ ಹೊಸಗನ್ನಡದಲ್ಲಿ ಹಾಲು ಎಂಬುದಾಗಿ ಕಾಣಿಸುತ್ತದೆ; ಪಣ್ ಪದ ಹಣ್ಣು ಎಂಬುದಾಗಿ, ಪಲ್ ಪದ ಹಲ್ಲು ಎಂಬುದಾಗಿ ಮತ್ತು ಪುಲ್ ಪದ ಹುಲ್ಲು ಎಂಬುದಾಗಿ ಕಾಣಿಸುತ್ತದೆ. ಹಳೆಗನ್ನಡದ ಪದಗಳ ಮೊದಲಿಗಿದ್ದ ಪಕಾರಗಳೆಲ್ಲವೂ ಈ ರೀತಿ ಹೊಸಗನ್ನಡದಲ್ಲಿ ಹಕಾರಗಳಾಗಿ ಕಾಣಿಸಿಕೊಳ್ಳುತ್ತವೆ. ಹಳೆಗನ್ನಡ ಮತ್ತು ಹೊಸಗನ್ನಡಗಳ ನಡುವಿನ ವ್ಯತ್ಯಾಸವೊಂದನ್ನು ವಿವರಿಸುವ ಈ ಕಟ್ಟಲೆ ಮಯ್ಸೂರಿನ ಆಡುನುಡಿಗಳ ನಡುವಿನ ವ್ಯತ್ಯಾಸವೊಂದನ್ನು ವಿವರಿಸುವ ಹಕಾರದ ಕಟ್ಟಲೆಯ ಹಾಗೆಯೇ ಇದೆ.</p>
<p>ಆಡುನುಡಿಗಳ ನಡುವೆ ಕಾಣಿಸುವ ಇಂತಹ ವ್ಯತ್ಯಾಸಗಳು ಪದಗಳ ವ್ಯತ್ಯಾಸಗಳಲ್ಲ, ಉಲಿಗಳ ವ್ಯತ್ಯಾಸಗಳು ಎಂಬುದನ್ನು ಗಮನಿಸುವುದು ಅವಶ್ಯ. ಪದಗಳ ಮೊದಲಿನ ಪಕಾರ ಹಕಾರವಾಗುವ ಕಟ್ಟಲೆ ಹಳೆಗನ್ನಡದಲ್ಲಿ ಅಂತಹ ಪಕಾರವಿರುವ ಎಲ್ಲಾ ಎಂದರೆ ಸಾವಿರಕ್ಕೂ ಹೆಚ್ಚು ಪದಗಳನ್ನು ಮಾರ‍್ಪಡಿಸಿದೆ. ಇವತ್ತು ಈ ಕಟ್ಟಲೆಗೆ ಹೊರಪಡಿಕೆಗಳಾಗಿ ಕಾಣಿಸುವ ಪಾಲು, ಪಾರೆ, ಪೂನು ಮೊದಲಾದ ಪದಗಳು ಹಿಂದಿನ ಬರಹಗಳಿಂದ ಇಲ್ಲವೇ ಮಾರ‍್ಪಡದ ಆಡುನುಡಿಗಳಿಂದ ಎರವಲಾಗಿ ಪಡೆದ ಪದಗಳಲ್ಲದೆ ನಿಜಕ್ಕೂ ಆ ಕಟ್ಟಲೆಗೆ ಹೊರಪಡಿಕೆಗಳಲ್ಲ.</p>
<p>ಒಂದು ತಲೆಮಾರಿನ ಮಕ್ಕಳು ತಮ್ಮ ತಾಯ್ನುಡಿಯನ್ನು ತಮ್ಮದಾಗಿಸಿಕೊಳ್ಳುವ ಸಮಯದಲ್ಲಿ ಇಂತಹ ಮಾರ‍್ಪಾಡುಗಳು ಅವರು ಪಡೆಯುವ ಆಡುನುಡಿಯಲ್ಲಿ ನಡೆದುಹೋಗುತ್ತವೆಯೆಂದು ತೋರುತ್ತದೆ. ಈ ಮಕ್ಕಳ ನಡುವೆ ಯಾವ ರೀತಿಯ ಜಾತಿ, ಜಾಗ ಮೊದಲಾದ ಕಟ್ಟುಗಳಿದ್ದುವೋ ಅವು ಈ ಮಾರ‍್ಪಾಡುಗಳ ಹರವನ್ನು ನಿರ‍್ದರಿಸುತ್ತವೆ.</p>
<p>ನುಡಿಗಳಲ್ಲಿ ನಡೆಯುವ ಇಂತಹ ಕಟ್ಟುನಿಟ್ಟಾದ ಉಲಿಗಳ ಮಾರ‍್ಪಾಡುಗಳು ನುಡಿಗಳ ಹಿನ್ನಡವಳಿ(ಚರಿತ್ರೆ)ಯನ್ನು ತಿಳಿಯುವಲ್ಲಿ ಹೆಚ್ಚಿನ ನೆರವನ್ನು ನೀಡುತ್ತವೆ. ಒಂದು ಮೂಲ ನುಡಿಯಿಂದ ಹಲವಾರು ನುಡಿಗಳು ಯಾವ ರೀತಿಯಲ್ಲಿ ಕವಲೊಡೆದು ಬೇರೆ ಬೇರಾಗಿವೆ ಎಂಬುದನ್ನು ಮುಕ್ಯವಾಗಿ ಆ ನುಡಿಗಳಲ್ಲಿ ನಡೆದಿರುವ ಇಂತಹ ಕಟ್ಟುನಿಟ್ಟಾದ ಉಲಿಗಳ ಮಾರ‍್ಪಾಡುಗಳ ನೆರವಿನಿಂದ ತೀರ‍್ಮಾನಿಸಲಾಗುತ್ತದೆ.</p>
<p><em><em>(<em>ಈ ಬರಹ ವಿಜಯ </em></em>ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2589%25e0%25b2%25b2%25e0%25b2%25bf-%25e0%25b2%25ae%25e0%25b2%25be%25e0%25b2%25b0%25e2%2580%258d%25e0%25b3%258d%25e0%25b2%25aa%25e0%25b2%25be%25e0%25b2%25a1%25e0%25b2%25bf%25e0%25b2%25a8-%25e0%25b2%2597%25e0%25b3%2586%25e0%25b2%25b0%25e0%25b3%2586%25e0%25b2%2597%25e0%25b2%25b3%25e0%25b3%2581%2F&#038;t=%E0%B2%89%E0%B2%B2%E0%B2%BF%20%E0%B2%AE%E0%B2%BE%E0%B2%B0%E2%80%8D%E0%B3%8D%E0%B2%AA%E0%B2%BE%E0%B2%A1%E0%B2%BF%E0%B2%A8%20%E0%B2%97%E0%B3%86%E0%B2%B0%E0%B3%86%E0%B2%97%E0%B2%B3%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2589%25e0%25b2%25b2%25e0%25b2%25bf-%25e0%25b2%25ae%25e0%25b2%25be%25e0%25b2%25b0%25e2%2580%258d%25e0%25b3%258d%25e0%25b2%25aa%25e0%25b2%25be%25e0%25b2%25a1%25e0%25b2%25bf%25e0%25b2%25a8-%25e0%25b2%2597%25e0%25b3%2586%25e0%25b2%25b0%25e0%25b3%2586%25e0%25b2%2597%25e0%25b2%25b3%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%89%E0%B2%B2%E0%B2%BF%20%E0%B2%AE%E0%B2%BE%E0%B2%B0%E2%80%8D%E0%B3%8D%E0%B2%AA%E0%B2%BE%E0%B2%A1%E0%B2%BF%E0%B2%A8%20%E0%B2%97%E0%B3%86%E0%B2%B0%E0%B3%86%E0%B2%97%E0%B2%B3%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2589%25e0%25b2%25b2%25e0%25b2%25bf-%25e0%25b2%25ae%25e0%25b2%25be%25e0%25b2%25b0%25e2%2580%258d%25e0%25b3%258d%25e0%25b2%25aa%25e0%25b2%25be%25e0%25b2%25a1%25e0%25b2%25bf%25e0%25b2%25a8-%25e0%25b2%2597%25e0%25b3%2586%25e0%25b2%25b0%25e0%25b3%2586%25e0%25b2%2597%25e0%25b2%25b3%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%89%e0%b2%b2%e0%b2%bf-%e0%b2%ae%e0%b2%be%e0%b2%b0%e2%80%8d%e0%b3%8d%e0%b2%aa%e0%b2%be%e0%b2%a1%e0%b2%bf%e0%b2%a8-%e0%b2%97%e0%b3%86%e0%b2%b0%e0%b3%86%e0%b2%97%e0%b2%b3%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಕಲಿಕೆ ಮತ್ತು ಅರಕೆ</title>
		<link>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/?utm_source=rss&#038;utm_medium=rss&#038;utm_campaign=%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586</link>
		<comments>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/#comments</comments>
		<pubDate>Mon, 14 Apr 2014 16:55:06 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Education]]></category>
		<category><![CDATA[guide]]></category>
		<category><![CDATA[guiding]]></category>
		<category><![CDATA[Kannada linguisitics]]></category>
		<category><![CDATA[learning]]></category>
		<category><![CDATA[linguistics]]></category>
		<category><![CDATA[research]]></category>
		<category><![CDATA[teaching]]></category>
		<category><![CDATA[ಅರಿಗ]]></category>
		<category><![CDATA[ಅರಿಮೆ]]></category>
		<category><![CDATA[ಕಲಿಕೆ]]></category>
		<category><![CDATA[ಕಲಿಗ]]></category>
		<category><![CDATA[ಕೇಶಿರಾಜ]]></category>
		<category><![CDATA[ಡಾಕ್ಟರೇಟ್]]></category>
		<category><![CDATA[ತಿಳಿವಿಗ]]></category>
		<category><![CDATA[ದಾರಿತೋರುಗ]]></category>
		<category><![CDATA[ಪೆರ‍್ಬರಹ]]></category>
		<category><![CDATA[ವಯ್ಯಾಕರಣಿ]]></category>
		<category><![CDATA[ವಿಶ್ವವಿದ್ಯಾಲಯ]]></category>
		<category><![CDATA[ವ್ಯಾಕರಣ]]></category>
		<category><![CDATA[ಸಂಶೋದನೆ]]></category>
		<category><![CDATA[ಸೊಲ್ಲರಿಮೆ]]></category>

		<guid isPermaLink="false">http://dnshankarabhat.net/?p=99</guid>
		<description><![CDATA[ನುಡಿಯರಿಮೆಯ ಇಣುಕುನೋಟ – 19 ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು. ಅರಕೆ ಎಂಬುದು ಇದಕ್ಕಿಂತ ತೀರ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 19</strong></p>
<p>ಯಾವುದಾದರೂ ಒಂದು ವಿಶಯವನ್ನು ಕಲಿಯುವುದಕ್ಕೂ, ಅದರ ಮೇಲೆ ಅರಕೆ (ಸಂಶೋದನೆ) ನಡೆಸುವುದಕ್ಕೂ ನಡುವೆ ಕೆಲವು ಮುಕ್ಯವಾದ ವ್ಯತ್ಯಾಸಗಳಿವೆ; ನಾವು ಎತ್ತಿಕೊಂಡ ವಿಶಯದ ಮೇಲೆ ಬೇರೆ ಬೇರೆ ಹೊತ್ತಗೆಗಳಲ್ಲಿ, ಬಿಡಿ ಬರಹಗಳಲ್ಲಿ, ಮತ್ತು ಅವನ್ನು ಓದಿ ತಿಳಿದುಕೊಂಡಿರುವ ತಿಳಿವಿಗರಲ್ಲಿ ಸಾಕಶ್ಟು ತಿಳಿವುಗಳು ಕಲೆತಿರುತ್ತವೆ. ಅಂತಹ ಹೊತ್ತಗೆ ಮತ್ತು ಬಿಡಿ ಬರಹಗಳನ್ನು ಓದಿ, ತಿಳಿವಿಗರು ಹೇಳುವುದನ್ನು ಕೇಳಿ, ಆ ವಿಶಯದ ಕುರಿತು ತಿಳಿವನ್ನು ಕಲೆಹಾಕುವುದಕ್ಕೆ ಕಲಿಕೆ ಎಂದು ಹೆಸರು.</p>
<p>ಅರಕೆ ಎಂಬುದು ಇದಕ್ಕಿಂತ ತೀರ ಬೇರಾದುದು; ಒಂದು ವಿಶಯದ ಕುರಿತು ತಮ್ಮ ಸಮಾಜದಲ್ಲಿ ಕಲೆತಿರುವ ತಿಳಿವಿನಲ್ಲಿ ತಪ್ಪುಗಳು ಏನಾದರೂ ಇವೆಯೇ, ಮತ್ತು ಆ ವಿಶಯದ ಕುರಿತಾಗಿ ಯಾರಿಗೂ ತಿಳಿಯದಿರುವಂತಹ ಹೊಸ ಸಂಗತಿಗಳೇನಾದರೂ ಇವೆಯೇ ಎಂಬುದನ್ನು ಕಂಡುಹಿಡಿಯುವುದೇ ಅರಕೆ.</p>
<p>ಈ ವ್ಯತ್ಯಾಸದಂತೆ, ಒಂದು ವಿಶಯವನ್ನು ನಮಗೆ ಕಲಿಯಬೇಕೆಂದಿದ್ದಲ್ಲಿ ಅದಕ್ಕೆ ಕಲಿಸುಗರ ನೆರವು ಬೇಕಾಗುತ್ತದೆ; ಆದರೆ, ಒಂದು ವಿಶಯದ ಕುರಿತು ಅರಕೆಯನ್ನು ನಡೆಸಬೇಕೆಂದಿದ್ದಲ್ಲಿ, ಅದಕ್ಕೆ ನಮಗೆ ‘ದಾರಿತೋರುಗರ’ ನೆರವು ಬೇಕಾಗುತ್ತಲ್ಲದೆ ಕಲಿಸುಗರ ನೆರವು ಬೇಕಾಗುವುದಿಲ್ಲ.</p>
<p>ಕಲಿಯುವವರ ಮಟ್ಟಿಗೆ ಕಲಿಸುಗರೆಂದರೆ ಎಲ್ಲವನ್ನೂ ತಿಳಿದವರು; ಕಲಿಯುವವರಲ್ಲಿ ಏಳುವ ಸಂಶಯಗಳನ್ನೆಲ್ಲ ಇಲ್ಲವಾಗಿಸುವ ಅಳವು ಅವರಿಗಿದೆ; ಹಾಗಾಗಿ, ಅವರು ಏನು ಹೇಳುತ್ತಿದ್ದಾರೆ ಎಂಬುದನ್ನು ಕಿವಿಗೊಟ್ಟು ಕೇಳಿ, ಅದನ್ನು ಸರಿಯಾಗಿ ತಿಳಿದುಕೊಳ್ಳುವುದೇ ಕಲಿಗರು ಮಾಡಬೇಕಾಗಿರುವ ಮುಕ್ಯ ಕೆಲಸ.</p>
<p>ಆದರೆ, ಅರಕೆಯನ್ನು ನಡೆಸುವವರ ಮಟ್ಟಿಗೆ ಎಲ್ಲವನ್ನೂ ತಿಳಿದವರು ಯಾರೂ ಇಲ್ಲ; ದಾರಿತೋರುಗರು ಅವರಿಗೆ ಯಾವ ರೀತಿಯಲ್ಲಿ ಅರಕೆಯನ್ನು ನಡೆಸಬಹುದು ಎಂಬುದನ್ನು ತಿಳಿಸಬಲ್ಲರಲ್ಲದೆ, ಅರಕೆಯ ಕೊನೆಯ ತೀರ‍್ಮಾನ ಹೇಗಿರಬಹುದು, ಇಲ್ಲವೇ ಹೇಗಿರಬೇಕು ಎಂಬುದನ್ನು ತಿಳಿಸಲಾರರು. ಅದನ್ನು ತಮ್ಮ ಅರಕೆಗಳ ಮೂಲಕ ಹೊಸದಾಗಿ ಕಂಡುಹಿಡಿಯುವುದೇ ಅರಕೆಯನ್ನು ನಡೆಸುವವರ ಮುಕ್ಯ ಕೆಲಸ. ಈ ರೀತಿ, ಯಾರಿಗೂ ಗೊತ್ತಿಲ್ಲದಿರುವ ಸಂಗತಿಗಳನ್ನು ಕಂಡುಹಿಡಿಯುವ ಮೂಲಕ, ಮತ್ತು ತಪ್ಪು ತಪ್ಪಾಗಿ ತಿಳಿದುಕೊಂಡಿರುವ ಸಂಗತಿಗಳನ್ನು ಸರಿಪಡಿಸುವ ಮೂಲಕ ಸಮಾಜದಲ್ಲಿರುವ ತಿಳಿವಿನ ಬೊಕ್ಕಸವನ್ನು ಹಿರಿದಾಗಿಸುವುದೇ ಅರಕೆ ನಡೆಸುವವರ ಕೆಲಸವಾಗಿದೆ.</p>
<p>ಕಲಿಕೆಗೂ ಅರಕೆಗೂ ನಡುವೆ ವ್ಯತ್ಯಾಸವಿರುವ ಹಾಗೆ, ಕಲಿಕೆಯನ್ನು ಕೊಡಿಸುವ ಕಲಿಸುಗರಿಗೂ ಅರಕೆಯನ್ನು ನಡೆಸಲು ದಾರಿತೋರುಗರಿಗೂ ನಡುವೆ ವ್ಯತ್ಯಾಸವಿರುವುದು ಅವಶ್ಯ. ಕಲಿಸುಗನೊಬ್ಬ ತಾನು ಕಲಿಸುವ ವಿಶಯವನ್ನು ಸರಿಯಾಗಿ ತಿಳಿದಿರಬೇಕು ಮಾತ್ರವಲ್ಲ, ತಾನು ತಿಳಿದಿರುವುದೆಲ್ಲವೂ ಸರಿ ಎಂಬ ಆತ್ಮವಿಶ್ವಾಸವೂ ಆತನಲ್ಲಿರಬೇಕು. ಈ ವಿಶಯದಲ್ಲಿ ಸ್ವಲ್ಪವಾದರೂ ಸಂಶಯವಿದೆಯಾದರೆ, ಆತ ಎದೆಗಾರಿಕೆಯಿಂದ ಕಲಿಗರಿಗೆ ಕಲಿಸಿಕೊಡಲಾರ.</p>
<p>ಆದರೆ, ಅರಕೆಯನ್ನು ನಡೆಸುವವರು, ಮತ್ತು ಅರಕೆಗೆ ದಾರಿ ತೋರಿಸುವವರು ಯಾವ ಹೇಳಿಕೆಯನ್ನೂ ಪೂರ‍್ತಿಯಾಗಿ ಸರಿಯೆಂದು ತಿಳಿದುಕೊಳ್ಳಬಾರದು. ಎಲ್ಲವನ್ನೂ ಸಂಶಯದಿಂದ ನೋಡಿದಾಗ ಮಾತ್ರ ಅವರ ಅರಕೆ ಮುಂದೆ ಹೋಗಬಲ್ಲುದು. ಎಂತಹ ದೊಡ್ಡ ತಿಳಿವಿಗರು ಹೇಳಿದ್ದನ್ನೂ ಹಾಗೆಯೇ ಒಪ್ಪಿಕೊಳ್ಳದೆ ವಿಚಾರಣೆಗೆ ಒಳಪಡಿಸಲು ಅವರು ಅಣಿಯಾಗಿರಬೇಕು.</p>
<p>ಈ ಕಾರಣಕ್ಕಾಗಿ, ಪರೀಕ್ಶೆಗಳಲ್ಲಿ ರ‍್ಯಾಂಕ್ ಗಳಿಸುವ ಕಲಿಗ ಉತ್ತಮ ಅರಕೆಗಾರನಾಗಬೇಕೆಂದೇನಿಲ್ಲ. ಇದೇ ರೀತಿಯಲ್ಲಿ, ಕಲಿಗರ ಅಚ್ಚುಮೆಚ್ಚಿನ ಕಲಿಸುಗ ಅರಕೆಗಳಿಗೆ ಒಳ್ಳೆಯ ದಾರಿತೋರುಗನಾಗಬೇಕೆಂದೂ ಇಲ್ಲ. ಕಲಿಯುವುದಕ್ಕೆ ಮತ್ತು ಕಲಿಸುವುದಕ್ಕೆ ಬೇಕಾಗುವ ಮನೋಬಾವ ಅರಕೆಗೆ ಮತ್ತು ಅದರ ದಾರಿತೋರಿಕೆಗೆ ಬೇಕಾಗುವ ಮನೋಬಾವಕ್ಕಿಂತ ತೀರ ಬೇರಾಗಿರುವುದೇ ಇದಕ್ಕೆ ಕಾರಣ.</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಈ ಎರಡು ಕೆಲಸಗಳನ್ನೂ ಒಬ್ಬರೇ ಮಾಡಬೇಕಾಗುವುದರಿಂದ, ಹೆಚ್ಚಿನೆಡೆಗಳಲ್ಲೂ ಅರಕೆಯ ಹೆಸರಿನಲ್ಲಿ ಕಲಿಕೆ ಮಾತ್ರ ನಡೆಯುವುದು ಕಾಣಿಸುತ್ತದೆ. ಈ ಎರಡು ಬಗೆಯ ಕೆಲಸಗಳನ್ನು ಒಬ್ಬರಿಗೇನೇ ನಡೆಸಿಕೊಂಡು ಹೋಗಲು ಹೆಚ್ಚಿನವರಿಗೂ ಸಾದ್ಯವಾಗದಿರುವುದೇ ಇದಕ್ಕೆ ಕಾರಣ.</p>
<p>ಒಮ್ಮೆ ನನ್ನ ಮಿತ್ರರೊಬ್ಬರು ಡಾಕ್ಟರೇಟ್ ಪದವಿಗಾಗಿ ತಾವು ಬರೆದ ಪೆರ‍್ಬರಹವನ್ನು ನನಗೆ ತೋರಿಸಿದರು. ಅದನ್ನು ಓದಿದಾಗ ನನಗೆ ತುಂಬಾ ಆಶ್ಚರ‍್ಯವಾಯಿತು: ಮೂವತ್ತು ವರ‍್ಶಗಳಶ್ಟು ಹಳೆಯ ಸಿದ್ದಾಂತಗಳನ್ನು ಬಳಸಿ ಅವರು ಅದನ್ನು ಬರೆದಿದ್ದರು. ಆ ಸಿದ್ದಾಂತಗಳಲ್ಲಿ ಹೆಚ್ಚಿನವೂ ಸರಿಯಲ್ಲ ಎಂದು ಅವರಿಗೆ ಸ್ಪಶ್ಟವಾಗಿ ತಿಳಿದಿದ್ದರೂ ಅವರು ಹೀಗೆ ಮಾಡಿದ್ದರು. “ಇದು ಯಾಕೆ ಹೀಗೆ?” ಎಂದು ನಾನು ಕೇಳಿದಾಗ ಅವರು ಹೇಳಿದರು, “ನನ್ನ ದಾರಿತೋರುಗರು ತಮ್ಮ ಡಾಕ್ಟರೇಟ್ ಪೆರ‍್ಬರಹದಲ್ಲಿ ಈ ಸಿದ್ದಾಂತಗಳನ್ನು ಬಳಸಿದ್ದಾರೆ; ಈಗ ನಾನು ಹೊಸ ಸಿದ್ದಾಂತಗಳನ್ನು ಬಳಸಿದಲ್ಲಿ, ಅವರು ಹಿಂದೆ ಬರೆದಿದ್ದ ಪೆರ‍್ಬರಹ ಸರಿಯಲ್ಲ ಎಂಬುದಾಗಿ ನಾನು ಹೇಳಿದ ಹಾಗಾದೀತು. ಹಾಗೆ ಮಾಡಿದಲ್ಲಿ, ನನ್ನ ಪೆರ‍್ಬರಹಕ್ಕೆ ಅವರ ಒಪ್ಪಿಗೆ ಸಿಗಲಾರದು.”</p>
<p>ನಮ್ಮ ವಿಶ್ವವಿದ್ಯಾಲಯಗಳಲ್ಲಿ ಜಾಗತಿಕ ಮಟ್ಟದ ಅರಕೆಗಳು ನಡೆಯದಿರುವುದಕ್ಕೆ ಒಂದು ಮುಕ್ಯವಾದ ಕಾರಣವನ್ನು ಇದು ಬಹಳ ಸ್ಪಶ್ಟವಾಗಿ ತಿಳಿಸುತ್ತದೆ. ತಮ್ಮ ದಾರಿತೋರಿಕೆಯಲ್ಲಿ ಪೆರ‍್ಬರಹಗಳನ್ನು ಬರೆಯುತ್ತಿರುವ ಅರಕೆಗಾರರು ತಾವು ಬರೆದಿರುವ ಪೆರ‍್ಬರಹಕ್ಕಿಂತ ಒಂದು ಹೆಜ್ಜೆ ಮುಂದೆ ಹೋದರೂ ಬೇಸರಪಟ್ಟುಕೊಳ್ಳುವ ತಿಳಿವಿಗರಿರುವಶ್ಟು ದಿವಸ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಅರಕೆಗಳನ್ನು ನಡೆಸುವುದು ಅಸಾದ್ಯವೆಂದೇ ಹೇಳಬಹುದು. ತನ್ನ ಕಲಿಗನಿಂದ ಸೋಲನ್ನು ಬಯಸುವ ತಿಳಿವಿಗರು ಮಾತ್ರ ನಿಜಕ್ಕೂ ಅರಕೆಗೆ ದಾರಿತೋರಿಸಬಲ್ಲರು. ಅಂತಹ ತಿಳಿವಿಗರು ನಮ್ಮಲ್ಲಿ ಬೆರಳೆಣಿಕೆಯಶ್ಟೂ ಇಲ್ಲ ಎಂಬುದು ಬೇಸರದ ಸಂಗತಿ.</p>
<p>ಈ ಮಾತು ಎಶ್ಟು ಸರಿ ಎಂಬುದನ್ನು ಕನ್ನಡದ ಸೊಲ್ಲರಿಮೆಯ (ವ್ಯಾಕರಣದ) ಕುರಿತಾಗಿ ನಡೆದಿರುವ ಅರಕೆಗಳನ್ನು ಪರಿಶೀಲಿಸಿದಲ್ಲಿ ಗೊತ್ತಾಗಬಹುದು. <a href="http://honalu.net/tag/%E0%B2%B6%E0%B2%AC%E0%B3%8D%E0%B2%A6%E0%B2%AE%E0%B2%A3%E0%B2%BF%E0%B2%A6%E0%B2%B0%E2%80%8D%E0%B3%8D%E0%B2%AA%E0%B2%A3/" target="_blank">ಕೇಶಿರಾಜ</a>ನೇ ಮೊದಲಾದ ಕನ್ನಡದ ಸೊಲ್ಲರಿಗರು ಏನು ಹೇಳಿದ್ದಾರೆ ಎಂಬುದನ್ನು ಚರ‍್ಚಿಸುವುದು ಸೊಲ್ಲರಿಮೆಯ ಕಲಿಕೆಯಲ್ಲದೆ ಅರಕೆಯಲ್ಲ. ಅವರು ಬರೆದಿರುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ತಪ್ಪುಗಳೇನಾದರೂ ಇವೆಯೇ? ಇದ್ದರೆ ಅವನ್ನು ಇಲ್ಲವಾಗಿಸುವುದು ಹೇಗೆ? ಅವರು ಹೇಳದೇ ಇರುವಂತಹ ಸೊಲ್ಲರಿಮೆಯ ಕಟ್ಟಲೆಗಳು ಯಾವುವಾದರೂ ಇವೆಯೇ? ಇದ್ದರೆ ಅವು ಎಂತಹವು? ಎಂಬಂತಹ ವಿಶಯಗಳ ಕುರಿತು ಚರ‍್ಚೆ ನಡೆದಲ್ಲಿ ಮಾತ್ರ ಈ ಸೊಲ್ಲರಿಮೆಗಳ ಮೇಲೆ ಅರಕೆ ನಡೆದಿದೆಯೆಂದು ಹೇಳಬಹುದು.</p>
<p>ಹಳೆಗನ್ನಡದಲ್ಲಿ ದ, ದಪ, ಮತ್ತು ವ ಎಂಬ ಮೂರು ಹೊತ್ತಿನ ಒಟ್ಟುಗಳು (ಕಾಲಪ್ರತ್ಯಯಗಳು) ಬಳಕೆಯಾಗುತ್ತವೆ, ಮತ್ತು ಇವು ಹಿಂಬೊತ್ತು (ಬೂತ), ಈಪೊತ್ತು (ವರ‍್ತಮಾನ), ಮತ್ತು ಮುಂಬೊತ್ತು (ಬವಿಶ್ಯತ್) ಎಂಬ ಮೂರು ಹೊತ್ತುಗಳನ್ನು ತಿಳಿಸುತ್ತವೆ ಎಂಬುದಾಗಿ ಕೇಶಿರಾಜನೇ ಮೊದಲಾದ ಎಲ್ಲಾ ಕನ್ನಡದ ಸೊಲ್ಲರಿಗರೂ ಹೇಳುತ್ತಾರೆ. ಆದರೆ, ನಿಜಕ್ಕೂ ಈ ಹೇಳಿಕೆ ಸರಿಯಲ್ಲ; ಎತ್ತುಗೆಗಾಗಿ, ಪಂಪಬಾರತದ “ಸೆರಗಂ ಬಗೆದೊಡೆ ಸಾವಾದಪುದು” ಎಂಬ ಸೊಲ್ಲಿಗೆ ‘ಸಹಾಯವನ್ನು ಬಯಸಿದರೆ ಸಾವಾಗುತ್ತದೆ’ ಎಂಬ ಹುರುಳಿದ್ದು, ಅದರಲ್ಲಿ ಬಂದಿರುವ ದಪ ಒಟ್ಟಿಗೆ ಮುಂದೆ ಏನಾಗಬಲ್ಲುದು ಎಂಬುದನ್ನು ತಿಳಿಸುವ ಮುಂಬೊತ್ತಿನ ಹುರುಳಿದೆಯಲ್ಲದೆ ಈಗ ಏನಾಗುತ್ತಿದೆ ಎಂಬುದನ್ನು ತಿಳಿಸುವ ಈಪೊತ್ತಿನ ಹುರುಳಿಲ್ಲ.</p>
<p>ಆದರೆ, ಹಳೆಗನ್ನಡದ ಸೊಲ್ಲರಿಮೆಯ ಕುರಿತಾಗಿ ಅರಕೆ ನಡೆಸಿದವರು ಯಾರೂ ಇದನ್ನು ಗಮನಿಸಿದ ಹಾಗೆ ಕಾಣಿಸುವುದಿಲ್ಲ. ಇಂತಹ ಇನ್ನೂ ಹಲವಾರು ತಪ್ಪುಗಳು ಕೇಶಿರಾಜನೇ ಮೊದಲಾದ ಕನ್ನಡದ ಸೊಲ್ಲರಿಗರು ತಿಳಿಸುವ ಸೊಲ್ಲರಿಮೆಯ ಕಟ್ಟಲೆಗಳಲ್ಲಿ ಕಾಣಿಸುತ್ತವೆ; ಇದಲ್ಲದೆ, ಅವರು ಹೇಳದಿರುವಂತಹ ಬೇರೆ ಹಲವು ಕಟ್ಟಲೆಗಳೂ ಹಳೆಗನ್ನಡದ ಸೊಲ್ಲರಿಮೆಯನ್ನು ವಿವರಿಸಲು ಬೇಕಾಗುತ್ತವೆ. ಇವುಗಳಲ್ಲಿ ಕೆಲವನ್ನಾದರೂ ಪಟ್ಟಿಮಾಡಬಲ್ಲವರು ಮಾತ್ರ ನಿಜಕ್ಕೂ ಹಳೆಗನ್ನಡದ ಮೇಲೆ ಅರಕೆ ನಡೆಸಿದ್ದಾರೆಂದು ಹೇಳಲು ಬರುತ್ತದೆ.</p>
<p>ಬೇರೆ ಬಗೆಯ ತಿಳಿವುಗಳ ಕುರಿತಾಗಿಯೂ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಮತ್ತು ಬೇರೆ ಬಗೆಯ ಅರಕೆಮನೆಗಳಲ್ಲಿ ಇವತ್ತು “ಅರಕೆ”ಗಳು ನಡೆಯುತ್ತಿವೆ; ಆದರೆ, ಇವುಗಳಲ್ಲಿ ಹೆಚ್ಚಿನವೂ ಮೇಲೆ ವಿವರಿಸಿದ ಹಾಗೆ ದಾರಿತಪ್ಪಿರುವ ಅರಕೆಗಳು; ಹೊಸ ತಿಳಿವನ್ನು ಕಂಡುಹಿಡಿಯುವ ಇಲ್ಲವೇ ಹಳೇ ತಿಳಿವನ್ನು ಸಾಣೆಗೆ ಹಿಡಿಯುವ ಉದ್ದೇಶ ಅವಕ್ಕಿಲ್ಲ. ಹಾಗಾಗಿ, ಅರಕೆಗಾರರಿಗೆ ಒಂದು ಡಿಗ್ರಿಯನ್ನು ಕೊಡಿಸುವ ಕೆಲಸವನ್ನಶ್ಟೇ ಅವು ನಡೆಸಬಲ್ಲುವು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;t=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;p&#091;images&#093;&#091;0&#093;=&#038;p&#091;title&#093;=%E0%B2%95%E0%B2%B2%E0%B2%BF%E0%B2%95%E0%B3%86%20%E0%B2%AE%E0%B2%A4%E0%B3%8D%E0%B2%A4%E0%B3%81%20%E0%B2%85%E0%B2%B0%E0%B2%95%E0%B3%86" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2595%25e0%25b2%25b2%25e0%25b2%25bf%25e0%25b2%2595%25e0%25b3%2586-%25e0%25b2%25ae%25e0%25b2%25a4%25e0%25b3%258d%25e0%25b2%25a4%25e0%25b3%2581-%25e0%25b2%2585%25e0%25b2%25b0%25e0%25b2%2595%25e0%25b3%2586%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%95%e0%b2%b2%e0%b2%bf%e0%b2%95%e0%b3%86-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%b0%e0%b2%95%e0%b3%86/feed/</wfw:commentRss>
		<slash:comments>0</slash:comments>
		</item>
	</channel>
</rss>
