<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; science</title>
	<atom:link href="http://dnshankarabhat.net/tag/science/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಅರಿಮೆಯ ಬರಹಗಳ ತೊಡಕುಗಳು</title>
		<link>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/?utm_source=rss&#038;utm_medium=rss&#038;utm_campaign=%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581</link>
		<comments>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/#comments</comments>
		<pubDate>Mon, 14 Apr 2014 16:57:31 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[dictionary]]></category>
		<category><![CDATA[Kannada linguistics]]></category>
		<category><![CDATA[Kannada scientific words]]></category>
		<category><![CDATA[Kannada technical dictionary]]></category>
		<category><![CDATA[Kannada technical words]]></category>
		<category><![CDATA[linguistics]]></category>
		<category><![CDATA[science]]></category>
		<category><![CDATA[scientific words]]></category>
		<category><![CDATA[technical dictionary]]></category>
		<category><![CDATA[technical words]]></category>
		<category><![CDATA[ಅರಿಮೆ]]></category>
		<category><![CDATA[ಅರಿಮೆಯ]]></category>
		<category><![CDATA[ಎರವಲು]]></category>
		<category><![CDATA[ಕನ್ನಡ ವಿಜ್ನಾನ ಬರಹಗಳು]]></category>
		<category><![CDATA[ಕಲಿಕೆ]]></category>
		<category><![CDATA[ಪಾರಿಬಾಶಿಕ]]></category>
		<category><![CDATA[ಮಕ್ಕಳು]]></category>
		<category><![CDATA[ವಿಜ್ನಾನ]]></category>
		<category><![CDATA[ಸಂಸ್ಕ್ರುತ]]></category>

		<guid isPermaLink="false">http://dnshankarabhat.net/?p=105</guid>
		<description><![CDATA[ನುಡಿಯರಿಮೆಯ ಇಣುಕುನೋಟ – 22 ಅರಿಮೆಯ (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 22</strong></p>
<p><strong>ಅರಿಮೆಯ</strong> (ವಿಜ್ನಾನದ) ಬರಹಗಳನ್ನು ಓದುತ್ತಿರುವವರಿಗೆ ಅವು ತುಂಬಾ ತೊಡಕಿನವಾಗಿ ಕಾಣಿಸಲು ಹಲವು ಕಾರಣಗಳಿವೆ; ಇವುಗಳಲ್ಲಿ ಎಸಕ(ಕ್ರಿಯೆ)ಗಳನ್ನು ತಿಳಿಸಲು ಎಸಕಪದಗಳನ್ನು ಬಳಸುವ ಬದಲು ಅವುಗಳ ಹೆಸರುರೂಪಗಳನ್ನು ಇಲ್ಲವೇ ಬೇರೆ ಹೆಸರುಕಂತೆಗಳನ್ನು ಬಳಸುವುದು ಒಂದು ಮುಕ್ಯ ಕಾರಣ. ಓಡು ಎಂಬುದು ಒಂದು ಎಸಕವನ್ನು ತಿಳಿಸುತ್ತದೆ; ರಾಜು ಓಡುತ್ತಿದ್ದಾನೆ ಎಂಬ ಸೊಲ್ಲಿನಲ್ಲಿ ಇದನ್ನು ಒಂದು ಎಸಕಪದದ ಮೂಲಕ ಒಂದು ಎಸಕವಾಗಿ ತಿಳಿಸಲಾಗಿದೆ. ಸಾಮಾನ್ಯವಾಗಿ ಮಾತಿನಲ್ಲಿ ಈ ರೀತಿ ಎಸಕಗಳನ್ನು ಎಸಕಗಳಾಗಿಯೇ ತಿಳಿಸಲಾಗುತ್ತದೆ; ಆದರೆ, ಅದನ್ನೊಂದು ವಿಶಯವಾಗಿಯೂ ತಿಳಿಸಲು ಬರುತ್ತದೆ, ಮತ್ತು ಇದಕ್ಕಾಗಿ ಮೇಲಿನ ಸೊಲ್ಲನ್ನು ರಾಜುವಿನ ಓಡುವಿಕೆ ಇಲ್ಲವೇ ರಾಜುವಿನ ಓಟ ಎಂಬ ಒಂದು ಹೆಸರುಕಂತೆಯಾಗಿ ಮಾರ‍್ಪಡಿಸಲು ಬರುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ಮಾತಿನಲ್ಲಿ ಇಲ್ಲವೇ ಸಾಮಾನ್ಯ ಬರಹಗಳಲ್ಲಿ ಕಾಣಿಸಿಕೊಳ್ಳುವುದು ತುಂಬಾ ಕಡಿಮೆ; ಆದರೆ, ಅರಿಮೆಯ ಬರಹಗಳಲ್ಲಿ ಅವನ್ನು ತುಂಬಾ ಹೆಚ್ಚು ಬಳಸಲಾಗುತ್ತದೆ. ಇದಕ್ಕೆ ಕಾರಣವೇನೆಂದರೆ, ಅವನ್ನು ಬಳಸುವ ಮೂಲಕ ಹೇಳಬೇಕೆಂದಿರುವ ಸಂಗತಿಯನ್ನು ತುಂಬಾ ಅಡಕವಾಗಿ ಹೇಳಲು ಬರುತ್ತದೆ; ಎತ್ತುಗೆಗಾಗಿ, ಮಕ್ಕಳನ್ನು ತಾಯಂದಿರು ಸಾಕುತ್ತಾರೆ ಎಂಬುದನ್ನು ಒಮ್ಮೆ ಸೂಚಿಸಿದ ಮೇಲೆ, ಅದರ ಕುರಿತಾಗಿ ಬೇರೆ ಸಂಗತಿಗಳನ್ನು ತಿಳಿಸಬೇಕಾದಾಗ ಅದನ್ನು ಅಡಕವಾಗಿ ಮಕ್ಕಳ ಸಾಕುವಿಕೆ ಇಲ್ಲವೇ ಬರೀ ಸಾಕುವಿಕೆ ಎಂಬುದಾಗಿ ಮಾರ‍್ಪಡಿಸಿ ಸೂಚಿಸಲು ಬರುತ್ತದೆ.</p>
<p>ಇದಲ್ಲದೆ, ಅರಿಮೆಯ ಬರಹಗಳ ಇಟ್ಟಳ (ರಚನೆ) ಬೇರೆ ಬರಹಗಳ ಇಟ್ಟಳಕ್ಕಿಂತ ಈ ವಿಶಯದಲ್ಲಿ ಬೇರಾಗಿದೆ; ಸಾಮಾನ್ಯ ಬರಹಗಳಲ್ಲಿ ಉದ್ದಕ್ಕೂ ಒಬ್ಬ ವ್ಯಕ್ತಿ ಇಲ್ಲವೇ ಕೆಲವು ವ್ಯಕ್ತಿಗಳು ಏನು ಮಾಡಿದ್ದಾರೆ ಎಂಬುದಾಗಿ ಹಲವು ಬಗೆಯ ಎಸಕಗಳು ಒಂದರ ಬಳಿಕ ಒಂದರಂತೆ ನಡೆದಿರುವುದನ್ನು ತಿಳಿಸಲಾಗುತ್ತದೆ; ಇದಕ್ಕೆ ಬದಲು, ಅರಿಮೆಯ ಬರಹಗಳಲ್ಲಿ ಒಂದು ಎಸಕವನ್ನು ತಿಳಿಸಿದ ಮೇಲೆ, ಆ ಎಸಕದ ಕುರಿತಾಗಿ ಹಲವಾರು ವಿಶಯಗಳನ್ನು ತಿಳಿಸಬೇಕಾಗುತ್ತದೆ, ಮತ್ತು ಇದಕ್ಕಾಗಿ ಆ ಎಸಕವನ್ನು ಮುಂದಿನ ಸೊಲ್ಲುಗಳ ನೆಲೆಯಾಗಿ ಬಳಸಬೇಕಾಗುತ್ತದೆ; ಆದರೆ, ಹೆಸರುಪದಗಳು ಇಲ್ಲವೇ ಎಸಕಪದಗಳ ಹೆಸರುರೂಪಗಳು ಮಾತ್ರ ಸೊಲ್ಲುಗಳ ನೆಲೆಗಳಾಗಬಲ್ಲುವು; ಹಾಗಾಗಿ, ಆ ಎಸಕವನ್ನು ತಿಳಿಸಲು ಒಂದು ಹೆಸರುಕಂತೆಯನ್ನು ಬಳಸಬೇಕಾಗುತ್ತದೆ.</p>
<p>ಇಂತಹ ಮಾರ‍್ಪಡಿಸಿದ ಬಳಕೆಗಳು ತೊಡಕಿನವಾಗಿ ಕಾಣಿಸಲು ಮುಕ್ಯ ಕಾರಣವೇನೆಂದರೆ, ಸಾಮಾನ್ಯವಾಗಿ ನಮ್ಮ ಮಾತಿನಲ್ಲಿ ಎಸಕಪದಗಳು ಎಸಕಗಳನ್ನು ಸೂಚಿಸುತ್ತವೆ ಮತ್ತು ಹೆಸರುಪದಗಳು ವ್ಯಕ್ತಿ, ವಸ್ತು ಮೊದಲಾದುವನ್ನು ಸೂಚಿಸುತ್ತವೆ; ಆದರೆ, ಈ ಮಾರ‍್ಪಡಿಸಿದ ಬಳಕೆಗಳಲ್ಲಿ ಹೆಸರುಪದಗಳ ಮೂಲಕ ಎಸಕಗಳನ್ನು ಸೂಚಿಸಲಾಗುತ್ತದೆ. ಎಂದರೆ, ಇವು ನಾವು ಜಗತ್ತನ್ನು ನೋಡುವ ಬಗೆಯನ್ನೇ ಬೇರೆ ಮಾಡುತ್ತವೆ: ಅವು ಎಸಕಗಳನ್ನು ಹೆಸರುಗಳಾಗಿ, ಎಂದರೆ ವಸ್ತು ಇಲ್ಲವೇ ವಿಶಯಗಳಾಗಿ ನೋಡುವಂತೆ ಮಾಡುತ್ತವೆ. ಅರಿಮೆಯ ಬರಹಗಳನ್ನು ಓದುವವರು ಜಗತ್ತನ್ನು ಈ ರೀತಿ ಒಂದು ಹೊಸ ಬಗೆಯಲ್ಲಿ ನೋಡಲು ಕಲಿಯಬೇಕಾಗುತ್ತದೆ. ಇದು ಸುಲಬದ ಕೆಲಸವಲ್ಲ.</p>
<p>ಕನ್ನಡದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಇನ್ನೊಂದು ತೊಡಕೂ ಕಾಣಿಸಿಕೊಳ್ಳುತ್ತದೆ: ಅರಿಮೆಯ ಬರಹಗಳನ್ನು ಬರೆಯುವವರು ಎಸಕಪದಗಳನ್ನು ಹೆಸರುಕಂತೆಗಳಾಗಿ ಮಾರ‍್ಪಡಿಸುವಲ್ಲಿ ಕನ್ನಡದ ಕಸುವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಹಾಗಾಗಿ, ಅವರು ಕನ್ನಡದವೇ ಆದ ಹೆಸರುಪದಗಳನ್ನು ಇಲ್ಲವೇ ಎಸಕಪದಗಳ ಹೆಸರುರೂಪಗಳನ್ನು ಬಳಸುವ ಬದಲು, ಸಂಸ್ಕ್ರುತದ ಪದ ಮತ್ತು ಪದರೂಪಗಳನ್ನು ಅನವಶ್ಯಕವಾಗಿ ಎರವಲು ಪಡೆದು ಬಳಸಹೋಗುತ್ತಾರೆ, ಮತ್ತು ಆ ಮೂಲಕ ತಮ್ಮ ಬರಹಗಳಲ್ಲಿ ಇನ್ನಶ್ಟು ತೊಡಕುಗಳನ್ನು ಸೇರಿಸಿಕೊಳ್ಳುತ್ತಾರೆ.</p>
<p>ಎತ್ತುಗೆಗಾಗಿ, ಈ ಮಣ್ಣಿನಲ್ಲಿ ಕ್ಶಾರ ಇದೆ ಎಂಬ ಸೊಲ್ಲನ್ನು ಕನ್ನಡದಲ್ಲೇನೇ ಕ್ಶಾರವಿರುವ (ಇಲ್ಲವೇ ಕ್ಶಾರವುಳ್ಳ) ಮಣ್ಣು ಎಂಬುದಾಗಿ ಮಾರ‍್ಪಡಿಸಬಹುದು. ಆದರೆ ಇದು ಕನ್ನಡದಲ್ಲಿ ಅರಿಮೆಯ ಬರಹಗಳನ್ನು ಬರೆಯುವವರ ಗಮನಕ್ಕೇ ಬರುವುದಿಲ್ಲ. ಅದಕ್ಕೆ ಬದಲಾಗಿ ಅವರು ಕ್ಶಾರಯುಕ್ತ ಮಣ್ಣು ಎಂಬುದಾಗಿ ಸಂಸ್ಕ್ರುತದಿಂದ ಯುಕ್ತ ಪದರೂಪವನ್ನು ಎರವಲು ಪಡೆದು ಬಳಸುತ್ತಾರೆ. ಜೀವ ಹೇಗೆ ಹುಟ್ಟಿತು? ಎಂಬ ಪ್ರಶ್ನೆಯೊಂದನ್ನು ಕೇಳಿ, ಅದರ ಮುಂದಿನ ಸೊಲ್ಲಿನಲ್ಲಿ ಜೀವದ ಹುಟ್ಟು ಎಂಬುದಾಗಿ ಅದನ್ನು ಮಾರ‍್ಪಡಿಸಿಕೊಳ್ಳುವ ಬದಲು, ಜೀವದ ಉಗಮ ಎಂಬುದಾಗಿ ಬರೆಯುತ್ತಾರೆ; ಎಂದರೆ, ಸಂಸ್ಕ್ರುತದ ಉಗಮ ಪದವನ್ನು ಅನವಶ್ಯಕವಾಗಿ ಎರವಲಾಗಿ ಪಡೆದು ಬಳಸುತ್ತಾರೆ. ಇದರಿಂದಾಗಿ, ಮೊದಲೇ ತೊಡಕಿನದಾಗಿ ಕಾಣಿಸುವ ಅರಿಮೆಯ ಬರಹ ಇನ್ನಶ್ಟು ತೊಡಕಿನದಾಗುತ್ತದೆ.</p>
<p>ಎಸಕಗಳನ್ನು ತಿಳಿಸಲು ಹೆಸರುಕಂತೆಗಳನ್ನು ಬಳಸಿರುವಲ್ಲಿ ಓದುಗರು ಎಸಕದಿಂದ ವಿಶಯಕ್ಕೆ ನೆಗೆಯಬೇಕಾಗುತ್ತದೆ. ಯಾಕೆಂದರೆ, ಮೇಲೆ ಸೂಚಿಸಿದ ಹಾಗೆ, ಎಸಕವನ್ನು ಇಲ್ಲಿ ಎಸಕಪದದ ಮೂಲಕ ಒಂದು ಎಸಕವಾಗಿ ಸೂಚಿಸದೆ, ಹೆಸರುಪದದ ಮೂಲಕ ಒಂದು ವಿಶಯವಾಗಿ ಸೂಚಿಸಲಾಗುತ್ತದೆ. ಇದಲ್ಲದೆ, ಆ ರೀತಿ ಬದಲಾವಣೆಯನ್ನು ಮಾಡಲಾಗಿದೆ ಎಂಬುದನ್ನು ಬರಹಗಳಲ್ಲಿ ಯಾವ ರೀತಿಯಲ್ಲೂ ಸೂಚಿಸಲಾಗುವುದಿಲ್ಲ. ಓದುಗರು ಈ ನೆಗೆತವನ್ನು ತಾವೇ ಮಾಡಿಕೊಳ್ಳಬಲ್ಲರು ಎಂಬುದಾಗಿ ತಿಳಿಯಲಾಗುತ್ತದೆ.</p>
<p>ಆದರೆ, ಅರಿಮೆಯ ಬರಹಗಳನ್ನು ಓದಿ ಪಳಗಿಲ್ಲದ ಓದುಗರಿಗೆ ಈ ನೆಗೆತ ತೊಂದರೆಯನ್ನು ಕೊಡುತ್ತದೆ. ಕನ್ನಡದ ಅರಿಮೆಯ ಬರಹಗಳಲ್ಲಿ ಈ ನೆಗೆತದೊಂದಿಗೆ ಇನ್ನೊಂದು ನೆಗೆತವನ್ನೂ ಓದುಗರ ಮೇಲೆ ಹೊರಿಸಲಾಗುತ್ತದೆ: ಅವರು ಎಸಕದಿಂದ ಹೆಸರಿಗೆ ನೆಗೆಯಬೇಕಾಗುತ್ತದೆ ಮಾತ್ರವಲ್ಲ, ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೂ ನೆಗೆಯಬೇಕಾಗುತ್ತದೆ. ಎತ್ತುಗೆಗಾಗಿ, ಒಂದು ಜೀವಿ ಇನ್ನೊಂದು ಜೀವಿಯನ್ನು ಹುಟ್ಟಿಸುತ್ತದೆ ಎಂಬಲ್ಲಿಂದ ಹುಟ್ಟಿಸುವಿಕೆ ಎಂಬುದಕ್ಕೆ ಹೋಗದೆ ನೇರವಾಗಿ ಪ್ರಜನನ ಕ್ರಿಯೆ ಎಂಬುದಕ್ಕೆ ನೆಗೆಯಬೇಕಾಗುತ್ತದೆ.</p>
<p>ಚಿಕ್ಕ ಮಕ್ಕಳಿಗಾಗಿ ಬರೆದ ಅರಿಮೆಯ ಬರಹಗಳಲ್ಲೂ ಇಂತಹ ಹಲವಾರು ಸಂಸ್ಕ್ರುತದ ಪದರೂಪಗಳನ್ನು ಕಾಣಬಹುದು. ಇವನ್ನು ಮಕ್ಕಳು ಕಣ್ಣು ಮುಚ್ಚಿ ಬಾಯಿಪಾಟ ಮಾಡುತ್ತಾರಲ್ಲದೆ, ಅವು ನಿಜಕ್ಕೂ ಏನು ಹೇಳುತ್ತವೆ ಎಂಬುದು ಅವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಿಗೆ ಇವುಗಳಲ್ಲಿ ಬರುವ ಎಸಕದಿಂದ ಹೆಸರಿಗೆ ಹಾರುವ ಮೊದಲ ನೆಗೆತವೇ ತೊಡಕಿನದಾಗಿ ಕಾಣಿಸುತ್ತದೆ; ಇನ್ನು ಕನ್ನಡದ ಹೆಸರಿನಿಂದ ಸಂಸ್ಕ್ರುತದ ಹೆಸರಿಗೆ ಹಾರುವ ಎರಡನೆಯ ನೆಗೆತ ಅವರ ಅಳವಿಗೆ ಮೀರಿದ್ದು.</p>
<p>ಅರಿಮೆಯ ಬರಹಗಳನ್ನು ಮಂದಿ ಮೆಚ್ಚುವ (ಜನಪ್ರಿಯವಾಗುವ) ಹಾಗೆ ಇಲ್ಲವೇ ಚಿಕ್ಕ ಮಕ್ಕಳಿಗೆ ಗೊತ್ತಾಗುವ ಹಾಗೆ ಬರೆಯಬೇಕಿದ್ದಲ್ಲಿ ಬರಹಗಾರರು ಕೆಳಗೆ ಕೊಟ್ಟಿರುವ ಉಪಾಯಗಳನ್ನು ಬಳಸಿಕೊಳ್ಳಬೇಕಾಗುತ್ತದೆ: (೧) ಆದಶ್ಟು ಮಟ್ಟಿಗೆ ಅವರು ಅರಿಮೆಯ (ಪಾರಿಬಾಶಿಕ) ಪದಗಳ ಬಳಕೆಯನ್ನು ಕಡಿಮೆ ಮಾಡಬೇಕು; (೨) ಎಸಕಗಳನ್ನು ತಿಳಿಸುವ ಹೆಸರುಕಂತೆಗಳನ್ನು ಸೊಲ್ಲುಗಳಾಗಿ ಬದಲಾಯಿಸಿಕೊಳ್ಳಬೇಕು; (೩) ಸಿಕ್ಕಲು ಸೊಲ್ಲುಗಳನ್ನು ಸುಳುಸೊಲ್ಲುಗಳಾಗಿ ಬಿಡಿಸಿ ಬರೆಯಬೇಕು; ಮತ್ತು (೪) ಸಂಸ್ಕ್ರುತ (ತತ್ಸಮ) ಪದಗಳ ಬದಲು ಆದಶ್ಟು ಮಟ್ಟಿಗೆ ಕನ್ನಡದವೇ ಆದ ಪದಗಳನ್ನು ಬಳಸಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;t=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AC%E0%B2%B0%E0%B2%B9%E0%B2%97%E0%B2%B3%20%E0%B2%A4%E0%B3%8A%E0%B2%A1%E0%B2%95%E0%B3%81%E0%B2%97%E0%B2%B3%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25ac%25e0%25b2%25b0%25e0%25b2%25b9%25e0%25b2%2597%25e0%25b2%25b3-%25e0%25b2%25a4%25e0%25b3%258a%25e0%25b2%25a1%25e0%25b2%2595%25e0%25b3%2581%25e0%25b2%2597%25e0%25b2%25b3%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%ac%e0%b2%b0%e0%b2%b9%e0%b2%97%e0%b2%b3-%e0%b2%a4%e0%b3%8a%e0%b2%a1%e0%b2%95%e0%b3%81%e0%b2%97%e0%b2%b3%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಅರಿಮೆಯ ಪದಗಳಿಗೆ ಕನ್ನಡವೇ ಮೇಲು</title>
		<link>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%aa%e0%b2%a6%e0%b2%97%e0%b2%b3%e0%b2%bf%e0%b2%97%e0%b3%86-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%b5%e0%b3%87-%e0%b2%ae/?utm_source=rss&#038;utm_medium=rss&#038;utm_campaign=%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25b5%25e0%25b3%2587-%25e0%25b2%25ae</link>
		<comments>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%aa%e0%b2%a6%e0%b2%97%e0%b2%b3%e0%b2%bf%e0%b2%97%e0%b3%86-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%b5%e0%b3%87-%e0%b2%ae/#comments</comments>
		<pubDate>Mon, 14 Apr 2014 16:46:10 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[linguistics]]></category>
		<category><![CDATA[science]]></category>
		<category><![CDATA[scientific dictionary]]></category>
		<category><![CDATA[scientific words]]></category>
		<category><![CDATA[technical]]></category>
		<category><![CDATA[technical dictionary]]></category>
		<category><![CDATA[technical words]]></category>
		<category><![CDATA[technology]]></category>
		<category><![CDATA[ಅರಿಮೆಯ ಪದಗಳು]]></category>
		<category><![CDATA[ಅರಿವಿಗ]]></category>
		<category><![CDATA[ಇಂಗ್ಲಿಶ್‌]]></category>
		<category><![CDATA[ಕಲಿವಿಗರು]]></category>
		<category><![CDATA[ಗ್ರೀಕ್]]></category>
		<category><![CDATA[ಪದಕೋಶ]]></category>
		<category><![CDATA[ಪಾರಿಬಾಶಿಕ ಪದಗಳು]]></category>
		<category><![CDATA[ಲ್ಯಾಟಿನ್]]></category>
		<category><![CDATA[ವಿಜ್ನಾನ]]></category>
		<category><![CDATA[ಸಂಸ್ಕ್ರುತ]]></category>

		<guid isPermaLink="false">http://dnshankarabhat.net/?p=82</guid>
		<description><![CDATA[ನುಡಿಯರಿಮೆಯ ಇಣುಕುನೋಟ – 11 ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡಬೇಕಾದಾಗಲೆಲ್ಲ ಹೆಚ್ಚಿನ ಅರಿವಿಗರೂ ಸಂಸ್ಕ್ರುತ ಪದಗಳನ್ನೇ ಆರಿಸಿಕೊಳ್ಳುತ್ತಾರೆ; ಇದಕ್ಕಾಗಿ ಕನ್ನಡದವೇ ಆದ ಪದಗಳನ್ನು ಬಳಸುವುದು ತುಂಬಾ ಅಪರೂಪ. ಈ ಕಾರಣಕ್ಕಾಗಿ, ಕನ್ನಡದವೆಂದು ಹೇಳಲಾಗುವ ಹೆಚ್ಚಿನ ಅರಿಮೆಯ ಪದಕೋಶಗಳಲ್ಲೂ ಇವತ್ತು ನೂರಕ್ಕೆ ಎಂಬತ್ತರಶ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚು ಸಂಸ್ಕ್ರುತ ಪದಗಳನ್ನು ಕಾಣಬಹುದು. ಕನ್ನಡ ಅರಿವಿಗರ ಈ ನಿಲುವಿನಿಂದಾಗಿ, ಇವತ್ತು ಕನ್ನಡದ ಅರಿಮೆಯ ಬರಹಗಳು ಸಂಸ್ಕ್ರುತ ಪದಗಳಿಂದ ತುಂಬಿ ತುಳುಕುತ್ತಿವೆ. ಹಿಂದಿನ ಕಾಲದಲ್ಲಿ ಕನ್ನಡದಲ್ಲಿ ಬರೆಯುವವರಿಗೆ ಬೇಕಾಗಿರುವ ಹೆಚ್ಚಿನ ತಿಳಿವುಗಳೂ ಸಂಸ್ಕ್ರುತದಲ್ಲಿದ್ದುವು; [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 1<strong>1</strong></strong></p>
<p>ಕನ್ನಡದಲ್ಲಿ <strong>ಅರಿಮೆಯ</strong> (ಪಾರಿಬಾಶಿಕ) ಪದಗಳನ್ನು ಉಂಟುಮಾಡಬೇಕಾದಾಗಲೆಲ್ಲ ಹೆಚ್ಚಿನ ಅರಿವಿಗರೂ ಸಂಸ್ಕ್ರುತ ಪದಗಳನ್ನೇ ಆರಿಸಿಕೊಳ್ಳುತ್ತಾರೆ; ಇದಕ್ಕಾಗಿ ಕನ್ನಡದವೇ ಆದ ಪದಗಳನ್ನು ಬಳಸುವುದು ತುಂಬಾ ಅಪರೂಪ.</p>
<p>ಈ ಕಾರಣಕ್ಕಾಗಿ, ಕನ್ನಡದವೆಂದು ಹೇಳಲಾಗುವ ಹೆಚ್ಚಿನ ಅರಿಮೆಯ ಪದಕೋಶಗಳಲ್ಲೂ ಇವತ್ತು ನೂರಕ್ಕೆ ಎಂಬತ್ತರಶ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚು ಸಂಸ್ಕ್ರುತ ಪದಗಳನ್ನು ಕಾಣಬಹುದು. ಕನ್ನಡ ಅರಿವಿಗರ ಈ ನಿಲುವಿನಿಂದಾಗಿ, ಇವತ್ತು ಕನ್ನಡದ ಅರಿಮೆಯ ಬರಹಗಳು ಸಂಸ್ಕ್ರುತ ಪದಗಳಿಂದ ತುಂಬಿ ತುಳುಕುತ್ತಿವೆ.</p>
<p>ಹಿಂದಿನ ಕಾಲದಲ್ಲಿ ಕನ್ನಡದಲ್ಲಿ ಬರೆಯುವವರಿಗೆ ಬೇಕಾಗಿರುವ ಹೆಚ್ಚಿನ ತಿಳಿವುಗಳೂ ಸಂಸ್ಕ್ರುತದಲ್ಲಿದ್ದುವು; ಹಾಗಾಗಿ, ಅವನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಅರಿಮೆಯ ಪದಗಳಲ್ಲಿ ಹೆಚ್ಚಿನವನ್ನೂ ಸಂಸ್ಕ್ರುತದಿಂದಲೇನೇ ಎರವಲು ಪಡೆಯಲಾಗುತ್ತಿತ್ತು, ಮತ್ತು ಆವತ್ತಿಗೆ ಅದು ಸರಿಯಾದ ದಾರಿಯಾಗಿತ್ತು.</p>
<p>ಆದರೆ, ಇವತ್ತು ಅರಿಮೆಯ (ವಿಜ್ನಾನದ) ಬರಹಗಾರರಿಗೆ ಬೇಕಾಗುವ ಹೆಚ್ಚಿನ ತಿಳಿವುಗಳೂ ಇಂಗ್ಲಿಶ್‌ನಲ್ಲಿವೆ; ಹಾಗಾಗಿ, ಅವನ್ನು ಇಂಗ್ಲಿಶ್‌ನಿಂದ ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಪದಗಳನ್ನು ಇಂಗ್ಲಿಶ್‌ನಿಂದ ಎರವಲು ಪಡೆಯುವುದು, ಇಲ್ಲವೇ ಕನ್ನಡದಲ್ಲೇನೇ ಹೊಸದಾಗಿ ಉಂಟುಮಾಡಿಕೊಳ್ಳುವುದು ಎಂಬ ಎರಡು ದಾರಿಗಳು ಇವತ್ತಿನ ಮಟ್ಟಿಗೆ ಸರಿಯಾದುವು.</p>
<p>ಹೀಗಿದ್ದರೂ, ಕನ್ನಡದ ಬರಹಗಾರರು ಇವತ್ತಿಗೂ ಅರಿಮೆಯ ಪದಗಳಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಹಳೆಯ ಸಂಪ್ರದಾಯವನ್ನೇ ಮುಂದುವರಿಸುತ್ತಿದ್ದಾರೆ; ತಮಗೆ ಬೇಕಾಗಿರುವ ಪದಗಳು ಸಂಸ್ಕ್ರುತದಲ್ಲಿಲ್ಲವಾದರೆ, ಹೊಸ ಪದಗಳನ್ನು ಸಂಸ್ಕ್ರುತದಲ್ಲೇನೇ ಉಂಟುಮಾಡಿ ಕನ್ನಡಕ್ಕೆ ತರುವಂತಹ ಇನ್ನೊಂದು ವಿಚಿತ್ರವಾದ ಸಂಪ್ರದಾಯವನ್ನೂ ಅವರು ಹುಟ್ಟುಹಾಕಿಕೊಂಡಿದ್ದಾರೆ.</p>
<p>ಹೀಗೆ ಮಾಡುತ್ತಿರುವುದಕ್ಕಾಗಿ, ಅವರು ಕೆಲವು ನೆವಗಳನ್ನೂ ಕೊಡುತ್ತಿದ್ದಾರೆ: ಇಂಗ್ಲಿಶ್‌ನಲ್ಲಿ ಅರಿಮೆಯ ಪದಗಳಾಗಿ ಲ್ಯಾಟಿನ್ ಇಲ್ಲವೇ ಗ್ರೀಕ್ ಪದಗಳನ್ನು ಬಳಸುವ ಹಾಗೆ ಕನ್ನಡದಲ್ಲಿ ಸಂಸ್ಕ್ರುತ ಪದಗಳನ್ನು ಬಳಸಲಾಗುತ್ತದೆಯೆಂಬುದು ಇವುಗಳಲ್ಲೊಂದು.</p>
<p>ಆದರೆ, ಇಂಗ್ಲಿಶ್‌ಗೆ ಲ್ಯಾಟಿನ್ ಇರುವ ಹಾಗೆ ಕನ್ನಡಕ್ಕೆ ಸಂಸ್ಕ್ರುತ ಅಲ್ಲ; ಯಾಕೆಂದರೆ, ಇಂಗ್ಲಿಶ್ ಮತ್ತು ಲ್ಯಾಟಿನ್‌ಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆ, ಮತ್ತು ಕನ್ನಡ ಮತ್ತು ಸಂಸ್ಕ್ರುತಗಳು ಬೇರೆ ಬೇರೆ ನುಡಿಕುಟುಂಬಗಳಿಗೆ ಸೇರಿವೆ. ಇಂಗ್ಲಿಶ್‌ಗೆ ಬೇಕಾಗುವ ಪದಗಳನ್ನು ಲ್ಯಾಟಿನ್‌ನಲ್ಲಿ ಉಂಟುಮಾಡಿದಾಗ ಹೆಚ್ಚಿನ ತೊಂದರೆಗಳೇನೂ ಎದುರಾಗುವುದಿಲ್ಲ; ಆದರೆ, ಕನ್ನಡಕ್ಕೆ ಬೇಕಾಗುವ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿದಾಗ ಹಲವು ತೊಂದರೆಗಳು ಎದುರಾಗುತ್ತವೆ:</p>
<p>ಇಂಗ್ಲಿಶ್‌ನಲ್ಲಿ ಮುಕ್ಯವಾಗಿ ನವ್ನ್, ವರ‍್ಬ್, ಮತ್ತು ಎಜಕ್ಟಿವ್ ಎಂಬುದಾಗಿ ಮೂರು ಬಗೆಯ ಪದಗಳಿವೆ; ಕನ್ನಡದಲ್ಲೂ ಇಂತಹವೇ ಮೂರು ಬಗೆಯ ಪದಗಳಿವೆ. ಆದರೆ, ಸಂಸ್ಕ್ರುತದಲ್ಲಿ ಮುಕ್ಯವಾಗಿ ನಾಮಪದ ಮತ್ತು ಕ್ರಿಯಾಪದ ಎಂಬ ಎರಡು ಬಗೆಯ ಪದಗಳು ಮಾತ್ರ ಇವೆ.</p>
<p>ಹಾಗಾಗಿ, ಇಂಗ್ಲಿಶ್‌ನ ಅರಿಮೆಯ ಪದಗಳಿಗೆ ಸಮನಾದ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡಕ್ಕೆ ತರಹೋದರೆ, ನವ್ನ್ ಮತ್ತು ಎಜಕ್ಟಿವ್‌ಗಳ ನಡುವಿನ ವ್ಯತ್ಯಾಸವನ್ನು ಅವುಗಳಲ್ಲಿ ಸರಿಯಾಗಿ ತೋರಿಸಲು ಬರುವುದಿಲ್ಲ. ಈ ತೊಂದರೆಯಿಂದಾಗಿ, ಇವತ್ತು ಬಳಕೆಯಲ್ಲಿರುವ ಅರಿಮೆಯ ಪದಕೋಶಗಳಲ್ಲಿ ತುಂಬಾ ಗೊಂದಲವುಂಟಾಗಿರುವುದನ್ನು ಕಾಣಬಹುದು.</p>
<p>ಅರಿಮೆಯ ಬರಹಗಳಲ್ಲಿ ಕನ್ನಡ ಪದಗಳನ್ನು ಬಳಸಿದರೆ, ಅವು ಸಂಸ್ಕ್ರುತ ಪದಗಳ ಹಾಗೆ ಕಚಿತವಾದ ಹುರುಳನ್ನು ಕೊಡಲಾರವು ಎಂಬುದು ಇನ್ನೊಂದು ನೆವ; ಆದರೆ, ಸಂಸ್ಕ್ರುತ ಪದಗಳು ಕನ್ನಡದಲ್ಲಿ ಉಂಟುಮಾಡುತ್ತಿರುವ ಮೇಲಿನ ಗೊಂದಲವೇ ಇದನ್ನು ತಳ್ಳಿಹಾಕುತ್ತದೆ.</p>
<p>ಇವತ್ತು ಇಂಗ್ಲಿಶ್‌ನಲ್ಲಿ ಕಂಪ್ಯೂಟರ್‌ಗೆ ಸಂಬಂದಿಸಿದ ಹಲವು ಅರಿಮೆಯ ಪದಗಳನ್ನು ದಿನಬಳಕೆಯ ಪದಗಳನ್ನು ಬಳಸಿಯೇ ಉಂಟುಮಾಡಲಾಗುತ್ತಿದೆ; ಮವ್ಸ್ ‘ಇಲಿ’, ವಿಂಡೋಸ್ ‘ಕಿಟಿಕಿ’, ಟ್ರೀ ‘ಮರ’, ವೆಬ್ ‘ಬಲೆ’ ಎಂಬಂತಹ ಈ ಪದಗಳಿಂದಾಗಿ ಗೊಂದಲವೇನೂ ಉಂಟಾದ ಹಾಗೆ ಕಾಣಿಸುವುದಿಲ್ಲ.</p>
<p>ಹಾಗಾಗಿ, ಕನ್ನಡದ ಅರಿಮೆಯ ಪದಗಳಿಗಾಗಿ ಸಂಸ್ಕ್ರುತದ ಮೊರೆಹೊಗುವ ಇವತ್ತಿನ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಒಳ್ಳೆಯದು. ಇಂಗ್ಲಿಶ್‌ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಕನ್ನಡ ಪದಗಳ ಸೊಗಡನ್ನು ಕೆಡಿಸದಂತಹ ಇಂಗ್ಲಿಶ್ ಪದಗಳನ್ನು ಉಳಿಸಿಕೊಳ್ಳಬಹುದು, ಮತ್ತು ಅದನ್ನು ಕೆಡಿಸುವಂತಹ ಪದಗಳ ಬದಲು ಕನ್ನಡದವೇ ಆದ ಪದಗಳನ್ನು ಬಳಸಿ ಹೊಸ ಪದಗಳನ್ನು ಉಂಟುಮಾಡಿಕೊಳ್ಳಬಹುದು; ಇದೇ ಕನ್ನಡಕ್ಕೆ ಸರಿಯಾದ ದಾರಿ.</p>
<p>ಇಲ್ಲಿ ಇನ್ನೊಂದು ವಿಶಯವನ್ನೂ ಒತ್ತಿ ಹೇಳಬೇಕಾಗಿದೆ: ಇಂಗ್ಲಿಶ್‌ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಎರಡು ಮುಕ್ಯ ಗುರಿಗಳಿಗಾಗಿ ನಾವು ಅವುಗಳಲ್ಲಿರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳನ್ನು ಬಳಸಲು ಹೋಗುತ್ತೇವೆ: ಹಾಗೆ ಮಾಡುವ ಮೂಲಕ ಬರಹ ಏನನ್ನು ತಿಳಿಸುತ್ತದೆ ಎಂಬುದು ಕನ್ನಡಿಗರಿಗೆ ಸುಲಬವಾಗಿ ತಿಳಿಯುವಂತಾಗಬೇಕು ಎಂಬುದೊಂದು, ಮತ್ತು ಕನ್ನಡದ ಸೊಗಡು ಕೆಡದಂತೆ ಉಳಿಯಬೇಕು ಎಂಬುದಿನ್ನೊಂದು.</p>
<p>ಇತ್ತೀಚೆಗೆ ಕಂಪ್ಯೂಟರ್‌ಗಳಿಗೆ ಸಂಬಂದಿಸಿದ ಕೆಲವು ಕಯ್ಪಿಡಿಗಳಲ್ಲಿ ಹೆಚ್ಚಿನ ಇಂಗ್ಲಿಶ್ ಪದಗಳನ್ನೂ ಹಾಗೆಯೇ ಉಳಿಸಿರುವುದನ್ನು ಕಾಣಬಹುದು. ಇಂಗ್ಲಿಶ್ ಪದಗಳ ಹುರುಳು ಗೊತ್ತಿರುವವರು ಮಾತ್ರ ಅವನ್ನು ಓದಿ ತಿಳಿದುಕೊಳ್ಳಬಲ್ಲರು, ಮತ್ತು ಅವುಗಳಲ್ಲಿ ಕನ್ನಡದ ಸೊಗಡು ಪೂರ‍್ತಿ ಕೆಟ್ಟುಹೋಗಿರುತ್ತದೆ; ಎಂದರೆ, ಮೇಲಿನ ಎರಡು ಗುರಿಗಳನ್ನೂ ಅವು ತಲಪುವುದೇ ಇಲ್ಲ.</p>
<p>ಇಂತಹ ಕಯ್ಪಿಡಿಗಳಲ್ಲಿ ಬರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸಿದರೂ ಪರಿಣಾಮ ಒಂದೇ: ಅವನ್ನು ಓದಿ ತಿಳಿಯಲು ಇಂಗ್ಲಿಶ್ ಪದಗಳ ಬದಲು ಸಂಸ್ಕ್ರುತ ಪದಗಳ ಹುರುಳು ಗೊತ್ತಿರಬೇಕು, ಮತ್ತು ಅವು ಕನ್ನಡದ ಸೊಗಡನ್ನು ಕೆಡಿಸದಿರುವುದಿಲ್ಲ. ಎಂದರೆ, ಇಂತಹ ಬರಹಗಳೂ ಮೇಲಿನ ಎರಡು ಗುರಿಗಳನ್ನು ತಲಪುವುದೇ ಇಲ್ಲ.</p>
<p>ಹಲವು ಹೆಚ್ಚಿನ ಸಂಸ್ಕ್ರುತ ಪದಗಳ ಹುರುಳುಗಳನ್ನು ಕಲಿಯುವುದಕ್ಕಿಂತಲೂ ಮೂಲ ಬರಹದಲ್ಲಿದ್ದ ಇಂಗ್ಲಿಶ್ ಪದಗಳ ಹುರುಳುಗಳನ್ನು ಕಲಿಯುವುದೇ ಕನ್ನಡಿಗರ ಮಟ್ಟಿಗೆ ಒಳ್ಳೆಯದಲ್ಲವೇ? ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಬೇಕೆಂದಿರುವವರಿಗೆ ಇಂಗ್ಲಿಶ್ ಪದಗಳ ತಿಳಿವು ನೆರವಾಗಬಲ್ಲುದು; ಆದರೆ, ಸಂಸ್ಕ್ರುತ ಪದಗಳ ತಿಳಿವು ಯಾವ ನೆರವನ್ನೂ ನೀಡಲಾರವು.</p>
<p>ಅರಿಮೆಯ ಬರಹಗಳಿಂದ ತಿಳಿವನ್ನು ಪಡೆಯುವುದು ಮಾತ್ರವಲ್ಲದೆ, ಅದನ್ನು ಒರೆಗೆ ಹಚ್ಚುವ ಮತ್ತು ಅವುಗಳಲ್ಲಿಲ್ಲದ ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸವನ್ನೂ ನಾವಿಂದು ನಡೆಸಬೇಕಾಗಿದೆ. ಹೆಚ್ಚು ಹೆಚ್ಚು ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸಿರುವ ಬರಹಗಳನ್ನು ಕಶ್ಟಪಟ್ಟು ಅರಿಯುವುದರಲ್ಲಿಯೇ ನಮ್ಮ ಸಮಯವೆಲ್ಲ ಕಳೆದುಹೋಗುತ್ತದೆ. ಅವನ್ನು ಒರೆಗೆ ಹಚ್ಚುವ ಮತ್ತು ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸದಲ್ಲೂ ನಮ್ಮ ಕಲಿವಿಗರು ತೊಡಗಬೇಕಿದ್ದಲ್ಲಿ, ಅರಿಮೆಯ ಪದಗಳಲ್ಲಿ ಹೆಚ್ಚಿನವೂ ಕನ್ನಡದವೇ ಆಗಿರಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25b5%25e0%25b3%2587-%25e0%25b2%25ae%2F&#038;t=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AA%E0%B2%A6%E0%B2%97%E0%B2%B3%E0%B2%BF%E0%B2%97%E0%B3%86%20%E0%B2%95%E0%B2%A8%E0%B3%8D%E0%B2%A8%E0%B2%A1%E0%B2%B5%E0%B3%87%20%E0%B2%AE%E0%B3%87%E0%B2%B2%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25b5%25e0%25b3%2587-%25e0%25b2%25ae%2F&#038;p&#091;images&#093;&#091;0&#093;=&#038;p&#091;title&#093;=%E0%B2%85%E0%B2%B0%E0%B2%BF%E0%B2%AE%E0%B3%86%E0%B2%AF%20%E0%B2%AA%E0%B2%A6%E0%B2%97%E0%B2%B3%E0%B2%BF%E0%B2%97%E0%B3%86%20%E0%B2%95%E0%B2%A8%E0%B3%8D%E0%B2%A8%E0%B2%A1%E0%B2%B5%E0%B3%87%20%E0%B2%AE%E0%B3%87%E0%B2%B2%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2585%25e0%25b2%25b0%25e0%25b2%25bf%25e0%25b2%25ae%25e0%25b3%2586%25e0%25b2%25af-%25e0%25b2%25aa%25e0%25b2%25a6%25e0%25b2%2597%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%2595%25e0%25b2%25a8%25e0%25b3%258d%25e0%25b2%25a8%25e0%25b2%25a1%25e0%25b2%25b5%25e0%25b3%2587-%25e0%25b2%25ae%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%aa%e0%b2%a6%e0%b2%97%e0%b2%b3%e0%b2%bf%e0%b2%97%e0%b3%86-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%b5%e0%b3%87-%e0%b2%ae/feed/</wfw:commentRss>
		<slash:comments>0</slash:comments>
		</item>
	</channel>
</rss>
