<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಡಾ. ಡಿ. ಎನ್. ಶಂಕರ ಬಟ್ &#187; writing</title>
	<atom:link href="http://dnshankarabhat.net/tag/writing/feed/" rel="self" type="application/rss+xml" />
	<link>http://dnshankarabhat.net</link>
	<description>Dr. D N Shankara Bhat</description>
	<lastBuildDate>Sun, 12 Apr 2026 03:37:44 +0000</lastBuildDate>
	<language>en-US</language>
		<sy:updatePeriod>hourly</sy:updatePeriod>
		<sy:updateFrequency>1</sy:updateFrequency>
	<generator>https://wordpress.org/?v=3.9.40</generator>
	<item>
		<title>ಬರಹದಲ್ಲಿ ಯಾವುದು ಸರಿ, ಯಾವುದು ತಪ್ಪು?</title>
		<link>http://dnshankarabhat.net/%e0%b2%ac%e0%b2%b0%e0%b2%b9%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%b8%e0%b2%b0%e0%b2%bf-%e0%b2%af%e0%b2%be%e0%b2%b5%e0%b3%81/?utm_source=rss&#038;utm_medium=rss&#038;utm_campaign=%25e0%25b2%25ac%25e0%25b2%25b0%25e0%25b2%25b9%25e0%25b2%25a6%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%25b8%25e0%25b2%25b0%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581</link>
		<comments>http://dnshankarabhat.net/%e0%b2%ac%e0%b2%b0%e0%b2%b9%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%b8%e0%b2%b0%e0%b2%bf-%e0%b2%af%e0%b2%be%e0%b2%b5%e0%b3%81/#comments</comments>
		<pubDate>Mon, 14 Apr 2014 16:55:48 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[Kannada linguistics]]></category>
		<category><![CDATA[Kannada writing]]></category>
		<category><![CDATA[linguistics]]></category>
		<category><![CDATA[loan words]]></category>
		<category><![CDATA[word usage]]></category>
		<category><![CDATA[Words]]></category>
		<category><![CDATA[writing]]></category>
		<category><![CDATA[ಆಡುನುಡಿ]]></category>
		<category><![CDATA[ಆಲು]]></category>
		<category><![CDATA[ಉಲಿ]]></category>
		<category><![CDATA[ಋಕಾರ]]></category>
		<category><![CDATA[ಎರವಲು ಪದ]]></category>
		<category><![CDATA[ಕಿಟ್ಟೆಲ್]]></category>
		<category><![CDATA[ಕಿಟ್ಟೆಲ್ ಡಿಕ್ಶನರಿ]]></category>
		<category><![CDATA[ಕ್ರಿಯಾಪದ]]></category>
		<category><![CDATA[ನಾಮಪದ]]></category>
		<category><![CDATA[ಪದ ಬಳಕೆ]]></category>
		<category><![CDATA[ಪುಲ್ಲಿಂಗ]]></category>
		<category><![CDATA[ಬಡಗ ಕರ‍್ನಾಟಕ]]></category>
		<category><![CDATA[ಬರಹ]]></category>
		<category><![CDATA[ವಯ್ಯಾಕರಣಃ]]></category>
		<category><![CDATA[ವಯ್ಯಾಕರಣಿ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಸೊಲ್ಲರಿಮೆ]]></category>
		<category><![CDATA[ಸ್ತ್ರೀಲಿಂಗ]]></category>
		<category><![CDATA[ಹಕಾರ]]></category>

		<guid isPermaLink="false">http://dnshankarabhat.net/?p=101</guid>
		<description><![CDATA[ನುಡಿಯರಿಮೆಯ ಇಣುಕುನೋಟ – 20 ಕನ್ನಡದಲ್ಲಿ ಬಳಕೆಯಾಗುವ ಪದಗಳು ಮತ್ತು ಪದರೂಪಗಳುಸರಿಯೋ ತಪ್ಪೋ ಎಂಬುದನ್ನು ತೀರ‍್ಮಾನಿಸುವಲ್ಲಿ ನಾವು ಯಾವ ಕಟ್ಟಲೆಗಳನ್ನು ಬಳಸಬೇಕು? ಕನ್ನಡದ ಕಟ್ಟಲೆಗಳನ್ನೇ ಬಳಸಬೇಕೆಂದು ಯಾರೂ ಹೇಳಬಹುದು. ಆದರೆ, ಇವತ್ತು ಹಲವು ಮಂದಿ ಕನ್ನಡದ ವಿದ್ವಾಂಸರಿಗೆ ಇದು ಒಪ್ಪಿಗೆಯಾಗುವುದಿಲ್ಲ. ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡದಲ್ಲಿ ಬಳಸುವಾಗ ಸಂಸ್ಕ್ರುತದ ಕಟ್ಟಲೆಗಳನ್ನೇ ತಪ್ಪದೆ ಬಳಸಬೇಕೆಂಬುದಾಗಿ ಅವರು ಹೇಳುತ್ತಾರೆ. ಕನ್ನಡದ ವಿದ್ವಾಂಸರಲ್ಲಿ ಹಿಂದಿನ ಕಾಲದಿಂದಲೂ ಬೆಳೆದುಬಂದಿರುವ ಕನ್ನಡದ ಕುರಿತಾಗಿರುವ ಕೀಳರಿಮೆ ಮತ್ತು ಸಂಸ್ಕ್ರುತದ ಕುರಿತಾಗಿರುವ ಅತಿಯಾದ ಆದರ ಮತ್ತು ಅಬಿಮಾನಗಳೇ ಇದಕ್ಕೆ ಕಾರಣ. [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 20</strong></p>
<p>ಕನ್ನಡದಲ್ಲಿ ಬಳಕೆಯಾಗುವ <strong>ಪದಗಳು</strong> ಮತ್ತು <strong>ಪದರೂಪಗಳು</strong>ಸರಿಯೋ ತಪ್ಪೋ ಎಂಬುದನ್ನು ತೀರ‍್ಮಾನಿಸುವಲ್ಲಿ ನಾವು ಯಾವ ಕಟ್ಟಲೆಗಳನ್ನು ಬಳಸಬೇಕು? ಕನ್ನಡದ ಕಟ್ಟಲೆಗಳನ್ನೇ ಬಳಸಬೇಕೆಂದು ಯಾರೂ ಹೇಳಬಹುದು. ಆದರೆ, ಇವತ್ತು ಹಲವು ಮಂದಿ ಕನ್ನಡದ ವಿದ್ವಾಂಸರಿಗೆ ಇದು ಒಪ್ಪಿಗೆಯಾಗುವುದಿಲ್ಲ. ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡದಲ್ಲಿ ಬಳಸುವಾಗ ಸಂಸ್ಕ್ರುತದ ಕಟ್ಟಲೆಗಳನ್ನೇ ತಪ್ಪದೆ ಬಳಸಬೇಕೆಂಬುದಾಗಿ ಅವರು ಹೇಳುತ್ತಾರೆ. ಕನ್ನಡದ ವಿದ್ವಾಂಸರಲ್ಲಿ ಹಿಂದಿನ ಕಾಲದಿಂದಲೂ ಬೆಳೆದುಬಂದಿರುವ ಕನ್ನಡದ ಕುರಿತಾಗಿರುವ ಕೀಳರಿಮೆ ಮತ್ತು ಸಂಸ್ಕ್ರುತದ ಕುರಿತಾಗಿರುವ ಅತಿಯಾದ ಆದರ ಮತ್ತು ಅಬಿಮಾನಗಳೇ ಇದಕ್ಕೆ ಕಾರಣ.</p>
<p>ಎತ್ತುಗೆಗಾಗಿ, ಸೊಲ್ಲರಿಗರನ್ನು ಸೂಚಿಸಲು ಸಂಸ್ಕ್ರುತದಲ್ಲಿ ಎರಡು ಪದಗಳಿವೆ. ಇವುಗಳಲ್ಲಿ ‘ವಯ್ಯಾಕರಣಃ’ ಎಂಬುದು ಗಂಡಸರನ್ನು ಸೂಚಿಸುತ್ತದೆ ಮತ್ತು ‘ವಯ್ಯಾಕರಣೀ’ ಎಂಬುದು ಹೆಂಗಸರನ್ನು ಸೂಚಿಸುತ್ತದೆ. ಆದರೆ, ಕನ್ನಡದಲ್ಲಿ ಗಂಡಸರನ್ನು ಸೂಚಿಸುವುದಕ್ಕಾಗಿಯೂ ‘ವಯ್ಯಾಕರಣಿ’ ಎಂಬ ಪದವೇ ಬಳಕೆಗೆ ಬಂದಿದೆ. ಇದನ್ನು ಕಿಟ್ಟೆಲ್ ಅವರ ಡಿಕ್ಶನರಿಯಲ್ಲಿ ನೋಡಬಹುದು. ಆದರೆ ಇದು ತಪ್ಪು, ಗಂಡಸರನ್ನು ಸೂಚಿಸಲು ‘ವಯ್ಯಾಕರಣ’ ಎಂಬುದನ್ನೇ ಬಳಸಬೇಕು ಎಂಬುದಾಗಿ ಕೆಲವರು ಕನ್ನಡದ ವಿದ್ವಾಂಸರು ವಾದಿಸುತ್ತಾರೆ.</p>
<p>ಇದಕ್ಕೆ ಅವರಿಗೆ ಸಂಸ್ಕ್ರುತ ವ್ಯಾಕರಣದ ಕಟ್ಟಲೆಯೇ ಆದಾರ. ಆದರೆ ನಿಜಕ್ಕೂ ಇದು ಸರಿಯಲ್ಲ. ಯಾಕೆಂದರೆ, ಯಾವ ನುಡಿಯಿಂದಲೇ ಆಗಲಿ ಒಂದು ಪದವನ್ನು ಎರವಲಾಗಿ ಪಡೆದ ಮೇಲೆ, ಅದನ್ನು ಯಾವ ರೀತಿಯಲ್ಲಿ ಮತ್ತು ಯಾವ ರೂಪದಲ್ಲಿ ಬಳಸಬೇಕು ಎಂಬುದಕ್ಕೆ ಎರವಲಾಗಿ ಪಡೆದ ನುಡಿಯಲ್ಲಿರುವ ಬಳಕೆಯ ಕಟ್ಟಲೆಗಳೇ ಆದಾರವಾಗಬೇಕಲ್ಲದೆ ಎರವಲು ಕೊಟ್ಟ ನುಡಿಯ ಕಟ್ಟಲೆಗಳಲ್ಲ.</p>
<p>ಎತ್ತುಗೆಗಾಗಿ, ಸಂಸ್ಕ್ರುತದಿಂದ ಹಲವು ನಾಮಪದಗಳನ್ನು ನಾವು ಕನ್ನಡಕ್ಕೆ ಎರವಲಾಗಿ ಪಡೆದು ಬಳಸುತ್ತೇವೆ. ಇವುಗಳಲ್ಲಿ ಕೆಲವಕ್ಕೆ ಇಸು ಒಟ್ಟನ್ನು ಸೇರಿಸಿ ಕ್ರಿಯಾಪದಗಳಾಗಿ ಮಾಡಿಯೂ ಬಳಸುತ್ತೇವೆ (ಜಪ-ಜಪಿಸು, ಕೋಪ-ಕೋಪಿಸು, ರುಚಿ-ರುಚಿಸು). ಆದರೆ, ಈ ಬಳಕೆಗೆ ಕನ್ನಡದ ಕಟ್ಟಲೆಗಳು ಆದಾರವಲ್ಲದೆ ಸಂಸ್ಕ್ರುತದ ಕಟ್ಟಲೆಗಳಲ್ಲ.</p>
<p>ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳ ಲಿಂಗವನ್ನು ನಿರ‍್ದರಿಸುವಲ್ಲೂ ನಾವು ಕನ್ನಡದ ಕಟ್ಟಲೆಗಳನ್ನು ಬಳಸುತ್ತೇವಲ್ಲದೆ ಸಂಸ್ಕ್ರುತದ ಕಟ್ಟಲೆಗಳನ್ನಲ್ಲ. ಎತ್ತುಗೆಗಾಗಿ, ಸಂಸ್ಕ್ರುತದಲ್ಲಿ ಪುಲ್ಲಿಂಗದಲ್ಲಿರುವ ದೇಶ, ಮಾರ‍್ಗ, ದೀಪ ಮೊದಲಾದ ಪದಗಳನ್ನು, ಮತ್ತು ಸ್ತ್ರೀಲಿಂಗದಲ್ಲಿರುವ ನದಿ, ಲಿಪಿ, ಚರ‍್ಚೆ ಮೊದಲಾದ ಪದಗಳನ್ನು ನಾವು ನಪುಂಸಕ ಲಿಂಗದಲ್ಲಿ ಬಳಸುತ್ತೇವಲ್ಲದೆ ಪುಲ್ಲಿಂಗ ಇಲ್ಲವೇ ಸ್ತ್ರೀಲಿಂಗದಲ್ಲಲ್ಲ. ಸಂಸ್ಕ್ರುತದಲ್ಲಿ ನಾಮಪದಗಳಿಂದ ಬೇರಾದ ಗುಣಪದಗಳೆಂಬ ಪದಗಳಿಲ್ಲ.</p>
<p>ಹೀಗಿದ್ದರೂ, ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ವ್ಯಾವಹಾರಿಕ, ಸಾಮಾಜಿಕ, ಯಾಂತ್ರಿಕ ಮೊದಲಾದ ಹಲವು ಪದಗಳನ್ನು ನಾವು ನಾಮಪದಗಳಿಂದ ಬೇರಾಗಿರುವ ಗುಣಪದಗಳಾಗಿ ಬಳಸುತ್ತೇವೆ. ಹಾಗಾಗಿ, ವಯ್ಯಾಕರಣಿಯಂತಹ ಪದಗಳ ಮಟ್ಟಿಗೂ ನಾವು ಇದೇ ಕ್ರಮವನ್ನು ಅನುಸರಿಸುವುದು ಸರಿಯಾದ ದಾರಿ. ಕನ್ನಡದಲ್ಲಿ ಅವು ಯಾವ ರೀತಿಯಲ್ಲಿ ಬಳಕೆಗೆ ಬಂದಿವೆ ಎಂಬುದು ನಮಗೆ ಮುಕ್ಯವಲ್ಲದೆ ಆ ಬಳಕೆ ಸಂಸ್ಕ್ರುತದ ನಿಯಮಗಳಿಗೆ ಅನುಸಾರವಾಗಿದೆಯೇ ಇಲ್ಲವೇ ಎಂಬುದು ಮುಕ್ಯವಲ್ಲ.</p>
<p>ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ಬರುವ ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳು ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಕಾಣಿಸುವುದಿಲ್ಲ; ಹಾಗಿದ್ದರೂ ‘ಅವನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು; ಇಲ್ಲವಾದರೆ ಅದು ತಪ್ಪಾಗುತ್ತದೆ’ ಎಂದು ಹೇಳುವುದೂ ಸಂಸ್ಕ್ರುತದ ಕಟ್ಟಲೆಗಳನ್ನು ಕನ್ನಡದ ಮೇಲೆ ಹೊರಿಸುವ ತಪ್ಪು ದಾರಿಯಾಗಿದೆ. ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಈ ಎರವಲು ಪದಗಳು ಹೇಗೆ ಕಾಣಿಸುತ್ತವೆಯೋ ಹಾಗೆ ಬರೆಯುವುದೇ ಕನ್ನಡದ ಮಟ್ಟಿಗೆ ಸರಿಯಾದ ದಾರಿ.</p>
<p>ಇನ್ನೊಂದು ಬಗೆಯ ‘ತಪ್ಪು’ಗಳು ಆಡುನುಡಿಯಿಂದ ಪದಗಳನ್ನು ಇಲ್ಲವೇ ಪದರೂಪಗಳನ್ನು ಬರಹಕ್ಕೆ ತಂದು ಬಳಸುವಲ್ಲಿ ಕಾಣಿಸಿಕೊಳ್ಳುತ್ತವೆ. ಆಡುನುಡಿಯೆಂಬುದು ಊರಿನಿಂದ ಊರಿಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿರುತ್ತದೆ. ಆದರೆ, ಬರಹದ ನುಡಿ ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕೆಂದು ನಾವು ಬಯಸುತ್ತೇವೆ. ಯಾಕೆಂದರೆ, ಹಾಗಿಲ್ಲವಾದರೆ ಒಂದು ಊರಿನ ಮತ್ತು ಜಾತಿಯ ಬರಹಗಾರರು ಬರೆದುದನ್ನು ಇನ್ನೊಂದು ಊರಿನ ಮತ್ತು ಜಾತಿಯ ಜನರಿಗೆ ಓದಿ ಅರ‍್ತಮಾಡಿಕೊಳ್ಳಲು ಕಶ್ಟವಾಗುತ್ತದೆ.</p>
<p>ಈ ಸಮಾನತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಬರಹದ ನುಡಿಯಲ್ಲಿ ಎಂತಹ ಮಾರ‍್ಪಾಡನ್ನು ನಡೆಸುವುದಿದ್ದರೂ ಅದು ಎಲ್ಲಾ ಊರು ಮತ್ತು ಜಾತಿಗಳಿಗೆ ಸೇರಿದ ಜನರಿಗೂ ಒಪ್ಪಿಗೆಯಾಗುವಂತಹದಾಗಿರಬೇಕು. ಎಲ್ಲಾ ಬರಹಗಾರರೂ ತಮಗೆ ಅನಿಸಿದ ಹಾಗೆ ತಮ್ಮ ಬರಹದ ನುಡಿಯಲ್ಲಿ ಮಾರ‍್ಪಾಡುಗಳನ್ನು ಮಾಡಹೊರಟರೆ ಈ ಸಮಾನತೆ ಪೂರ‍್ತಿ ಅಳಿದು ಹೋದೀತು.</p>
<p>ಬರಹದಲ್ಲಿ ತಪ್ಪು-ಸರಿ ಎಂಬ ಪರಿಕಲ್ಪನೆಯನ್ನು ಈ ಅರ‍್ತದಲ್ಲಿ ಬಳಸಲು ಸಾದ್ಯವಿದೆ. ಕನ್ನಡದ ಕೆಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಬಿದ್ದುಹೋಗಿದೆ; ಹಾಲು ಎಂಬುದು ಆಲು ಎಂದಾಗಿದೆ, ಹಣ್ಣು ಎಂಬುದು ಅಣ್ಣು ಎಂದಾಗಿದೆ, ಹುಳ ಎಂಬುದು ಉಳ ಎಂದಾಗಿದೆ. ಈ ರೀತಿ ಕೆಲವರು ಕನ್ನಡಿಗರು ತಮ್ಮ ಆಡುನುಡಿಯ ಪದಗಳಲ್ಲಿದ್ದ ಹಕಾರವನ್ನು ಕಳೆದುಕೊಂಡುದರಲ್ಲಿ ತಪ್ಪಾಗಿರುವಂತಹದು ಏನೂ ಇಲ್ಲ. ಅದು ಅವರ ಆಡುನುಡಿಯಲ್ಲಿ ಸ್ವಾಬಾವಿಕವಾಗಿ ನಡೆದಿರುವ ಒಂದು ಮಾರ‍್ಪಾಡು ಮಾತ್ರ. ಇದಲ್ಲದೆ, ಅದು ಅವರ ಆಡುನುಡಿಯನ್ನು ಕೆಡಿಸಿಲ್ಲ; ಅದರ ಜೀವಂತಿಕೆಯನ್ನು ಉಳಿಸಿದೆ.</p>
<p>ಆದರೆ, ಕನ್ನಡದ ಬೇರೆ ಹಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಈ ರೀತಿ ಬಿದ್ದುಹೋಗಿಲ್ಲ; ಹಾಗಾಗಿ, ಇವತ್ತು ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕಾದ ಬರಹದ ಕನ್ನಡದಲ್ಲಿ ಹಕಾರವನ್ನು ಉಳಿಸಿಕೊಳ್ಳಬೇಕೇ ಇಲ್ಲವೇ ಬಿದ್ದುಹೋಗಲು ಬಿಡಬೇಕೇ ಎಂಬುದನ್ನು ನಿರ‍್ದರಿಸಬೇಕಾಗುತ್ತದೆ. ಉಳಿಸಬೇಕೆಂದು ಹೆಚ್ಚಿನ ಕನ್ನಡಿಗರೂ ಬಯಸುವುದಾದರೆ, ಬರಹದಲ್ಲಿ ಹಕಾರವನ್ನು ಬಳಸದಿರುವುದು (ಇಲ್ಲವೇ ಬೇಡದಲ್ಲಿ ಬಳಸುವುದು) ‘ತಪ್ಪಾ’ಗುತ್ತದೆ.</p>
<p>ಇದೇ ರೀತಿಯಲ್ಲಿ, ಇವತ್ತು ಬಡಗ ಕರ‍್ನಾಟಕದ ಕೆಲವು ಆಡುನುಡಿಗಳಲ್ಲಿ ನಾಮಪದಗಳ ಕೊನೆಯಲ್ಲಿದ್ದ ಎಕಾರ ಇಕಾರವಾಗಿದೆ. ಮನೆ ಎಂಬುದು ಮನಿ ಎಂದಾಗಿದೆ, ಕಾಗೆ ಎಂಬುದು ಕಾಗಿ ಎಂದಾಗಿದೆ, ಕುದುರೆ ಎಂಬುದು ಕುದ್ರಿ ಎಂದಾಗಿದೆ. ಆದರೆ ಕನ್ನಡದ ಬೇರೆ ಆಡುನುಡಿಗಳಲ್ಲಿ ಈ ಮಾರ‍್ಪಾಡು ನಡೆದಿಲ್ಲ. ಇಲ್ಲೂ ಕೂಡ, ಎಲ್ಲರಿಗೂ ಸಮಾನವಾಗಿರಬೇಕಾದ ಬರಹದ ಕನ್ನಡಕ್ಕೆ ಈ ಮಾರ‍್ಪಾಡನ್ನು ತರಬೇಕೇ ಬೇಡವೇ ಎಂಬುದನ್ನು ತೀರ‍್ಮಾನಿಸಬೇಕಾಗುತ್ತದೆ, ಮತ್ತು ಬೇಡವೆಂದು ತೀರ‍್ಮಾನಿಸಿದಲ್ಲಿ ಹಾಗೆ ತರುವುದು ಬರಹದ ಮಟ್ಟಿಗೆ ‘ತಪ್ಪು’ ಎಂಬುದಾಗಿ ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಬೇಕಾಗುತ್ತದೆ.</p>
<p>ಆದರೆ, ಇಂತಹ ಯಾವ ಮಾರ‍್ಪಾಡೂ ಬರಹದ ಕನ್ನಡವನ್ನು ಕೆಡಿಸುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸುವುದು ಅವಶ್ಯ. ಆಲು ಇಲ್ಲವೇ ಮನಿ ಎಂಬ ಪದರೂಪದಲ್ಲಿಲ್ಲದಂತಹ ನುಡಿಯ ಬಳಕೆಗೆ ಅವಶ್ಯವಾಗಿರುವ ಯಾವ ಅಂಶವೂ ಹಾಲು ಇಲ್ಲವೇ ಮನೆ ಎಂಬ ಪದರೂಪದಲ್ಲಿಲ್ಲ. ಇಲ್ಲಿ ತಪ್ಪು ಮತ್ತು ಸರಿ ಎಂಬವುಗಳು ಎಂತಹ ಬರಹ ನಮ್ಮೊಳಗೆ ಸಮಾನವಾಗಿ ಉಳಿಯಬೇಕು ಎಂಬ ತೀರ‍್ಮಾನವನ್ನಶ್ಟೇ ಅವಲಂಬಿಸಿದೆ. ಇವತ್ತು ಬಳಕೆಯಲ್ಲಿರುವ ತೀರ‍್ಮಾನವನ್ನು ನಾವು ಅವಶ್ಯವೆಂದೆನಿಸಿದಲ್ಲಿ ಮಾರ‍್ಪಡಿಸಬಲ್ಲೆವು, ಮತ್ತು ಹಾಗೆ ಮಾರ‍್ಪಡಿಸಿದಾಗ ಇವತ್ತು ತಪ್ಪು ಎಂದು ತಿಳಿದಿರುವ ಪದರೂಪಗಳು ಸರಿಯೆಂದೆನಿಸಬಲ್ಲುವು.</p>
<p>ಸಂಸ್ಕ್ರುತ ಎರವಲುಗಳನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು ಎಂಬ ಕಟ್ಟಲೆ ಕನ್ನಡದ ಮಟ್ಟಿಗೆ ತೀರ ಅನವಶ್ಯಕವಾದುದು ಮಾತ್ರವಲ್ಲ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಸುಲಬವಾಗಿ ಕಲಿತು ತಮ್ಮದಾಗಿಸಿಕೊಳ್ಳುವಲ್ಲಿ ಒಂದು ದೊಡ್ಡ ತೊಡಕಾಗಿದೆ; ಕೆಲವೇ ಕೆಲವು ಜನರಶ್ಟೇ ಬರಹವನ್ನು ಬಳಸುತ್ತಿದ್ದ ಹಿಂದಿನ ಕಾಲದಲ್ಲಿ ಈ ಕಟ್ಟಲೆ ಹೆಚ್ಚು ತೊಡಕಿನದೆಂದು ಅನಿಸುತ್ತಿರಲಿಲ್ಲ. ಆದರೆ, ಇವತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗಬೇಕಾಗಿದೆ; ಹಾಗಾಗಿ, ಕನ್ನಡಕ್ಕೆ ಬೇಡದ ಈ ಸಂಸ್ಕ್ರುತದ ಹೊರೆಯನ್ನು ತೆಗೆದುಹಾಕುವುದೇ ಒಳ್ಳೆಯದು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%25a6%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%25b8%25e0%25b2%25b0%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%2F&#038;t=%E0%B2%AC%E0%B2%B0%E0%B2%B9%E0%B2%A6%E0%B2%B2%E0%B3%8D%E0%B2%B2%E0%B2%BF%20%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%B8%E0%B2%B0%E0%B2%BF%2C%20%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%A4%E0%B2%AA%E0%B3%8D%E0%B2%AA%E0%B3%81%3F&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%25a6%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%25b8%25e0%25b2%25b0%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%AC%E0%B2%B0%E0%B2%B9%E0%B2%A6%E0%B2%B2%E0%B3%8D%E0%B2%B2%E0%B2%BF%20%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%B8%E0%B2%B0%E0%B2%BF%2C%20%E0%B2%AF%E0%B2%BE%E0%B2%B5%E0%B3%81%E0%B2%A6%E0%B3%81%20%E0%B2%A4%E0%B2%AA%E0%B3%8D%E0%B2%AA%E0%B3%81%3F" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ac%25e0%25b2%25b0%25e0%25b2%25b9%25e0%25b2%25a6%25e0%25b2%25b2%25e0%25b3%258d%25e0%25b2%25b2%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%25e0%25b2%25a6%25e0%25b3%2581-%25e0%25b2%25b8%25e0%25b2%25b0%25e0%25b2%25bf-%25e0%25b2%25af%25e0%25b2%25be%25e0%25b2%25b5%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ac%e0%b2%b0%e0%b2%b9%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%b8%e0%b2%b0%e0%b2%bf-%e0%b2%af%e0%b2%be%e0%b2%b5%e0%b3%81/feed/</wfw:commentRss>
		<slash:comments>0</slash:comments>
		</item>
		<item>
		<title>ಮಕ್ಕಳಿಗೆ ಬರೆಯಲು ಕಲಿಸುವ ಬಗೆ</title>
		<link>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%ac%e0%b2%b0%e0%b3%86%e0%b2%af%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac/?utm_source=rss&#038;utm_medium=rss&#038;utm_campaign=%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac</link>
		<comments>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%ac%e0%b2%b0%e0%b3%86%e0%b2%af%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac/#comments</comments>
		<pubDate>Mon, 14 Apr 2014 16:53:08 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[children]]></category>
		<category><![CDATA[Education]]></category>
		<category><![CDATA[grammar]]></category>
		<category><![CDATA[Kannada grammar]]></category>
		<category><![CDATA[Kannada linguistics]]></category>
		<category><![CDATA[linguistics]]></category>
		<category><![CDATA[school]]></category>
		<category><![CDATA[writing]]></category>
		<category><![CDATA[ಅಕ್ಶರ]]></category>
		<category><![CDATA[ಓದುವಿಕೆ]]></category>
		<category><![CDATA[ಕಯ್ಬರಹ]]></category>
		<category><![CDATA[ಬರವಣಿಗೆ]]></category>
		<category><![CDATA[ಬರಹ]]></category>
		<category><![CDATA[ಬರಿಗೆ]]></category>
		<category><![CDATA[ಮಕ್ಕಳ ಕಲಿಕೆ]]></category>
		<category><![CDATA[ಮಕ್ಕಳು]]></category>
		<category><![CDATA[ವ್ಯಾಕರಣ]]></category>
		<category><![CDATA[ಶಾಲೆ]]></category>
		<category><![CDATA[ಸೊಲ್ಲರಿಮೆ]]></category>

		<guid isPermaLink="false">http://dnshankarabhat.net/?p=95</guid>
		<description><![CDATA[ನುಡಿಯರಿಮೆಯ ಇಣುಕುನೋಟ – 17 ಓದಲು ಕಲಿಯುವುದಕ್ಕಿಂತಲೂ ಬರೆಯಲು ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ: ಯಾವ ವಿಶಯಗಳ ಕುರಿತು ಬರೆಯಬೇಕು, ಆ ವಿಶಯಗಳನ್ನು ಯಾವ ರೀತಿಯಲ್ಲಿ ಜೋಡಿಸಿಕೊಳ್ಳಬೇಕು, ಎಂತಹ ಪದಗಳನ್ನು ಬಳಸಬೇಕು, ಅವನ್ನು ಒಟ್ಟುಗೂಡಿಸಿ ಸೊಲ್ಲುಗಳನ್ನು ಹೇಗೆ ಕಟ್ಟಬೇಕು, ಅವನ್ನು ಬರೆಯುವಲ್ಲಿ ಯಾವ ಬರಿಗೆಗಳನ್ನು ಬಳಸಬೇಕು ಎಂಬುದನ್ನೆಲ್ಲ ಅವರು ಒಂದೇ ಬಾರಿಗೆ ತೀರ‍್ಮಾನಿಸಿಕೊಳ್ಳಬೇಕಾಗುತ್ತದೆ. ಹೀಗೆ ಮಾಡಲು ಬರುವುದಿಲ್ಲವಾದಲ್ಲಿ, ಅವರ ಬರೆಯುವ ಕೆಲಸ ಮುಂದಕ್ಕೆ ಹೋಗುವುದೇ [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 17</strong></p>
<p>ಓದಲು ಕಲಿಯುವುದಕ್ಕಿಂತಲೂ <strong>ಬರೆಯಲು</strong> ಕಲಿಯುವುದು ಮಕ್ಕಳ ಮಟ್ಟಿಗೆ ಹೆಚ್ಚು ತೊಡಕಿನ ಕೆಲಸ. ಇದಕ್ಕೆ ಕಾರಣವೇನೆಂದರೆ, ಬರೆಯಬೇಕಿದ್ದಲ್ಲಿ ಅವರು ಒಂದೇ ಬಾರಿಗೆ ಹಲವಾರು ತೀರ‍್ಮಾನಗಳನ್ನು ತೆಗೆದುಕೊಳ್ಳಬೇಕಾಗುತ್ತದೆ: ಯಾವ ವಿಶಯಗಳ ಕುರಿತು ಬರೆಯಬೇಕು, ಆ ವಿಶಯಗಳನ್ನು ಯಾವ ರೀತಿಯಲ್ಲಿ ಜೋಡಿಸಿಕೊಳ್ಳಬೇಕು, ಎಂತಹ ಪದಗಳನ್ನು ಬಳಸಬೇಕು, ಅವನ್ನು ಒಟ್ಟುಗೂಡಿಸಿ ಸೊಲ್ಲುಗಳನ್ನು ಹೇಗೆ ಕಟ್ಟಬೇಕು, ಅವನ್ನು ಬರೆಯುವಲ್ಲಿ ಯಾವ ಬರಿಗೆಗಳನ್ನು ಬಳಸಬೇಕು ಎಂಬುದನ್ನೆಲ್ಲ ಅವರು ಒಂದೇ ಬಾರಿಗೆ ತೀರ‍್ಮಾನಿಸಿಕೊಳ್ಳಬೇಕಾಗುತ್ತದೆ. ಹೀಗೆ ಮಾಡಲು ಬರುವುದಿಲ್ಲವಾದಲ್ಲಿ, ಅವರ ಬರೆಯುವ ಕೆಲಸ ಮುಂದಕ್ಕೆ ಹೋಗುವುದೇ ಇಲ್ಲ.</p>
<p>ಹೆಚ್ಚಿನ ಮಕ್ಕಳಿಗೂ ಈ ತೊಡಕು ತೊಡಕಾದ ಕೆಲಸವನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ. ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಕಲಿಯುವಂತೆ ಯಾರಾದರೂ ಅವರಿಗೆ ನೆರವನ್ನಿತ್ತರೆ ಮಾತ್ರ, ಅವರು ಅದನ್ನು ಕಲಿಯಬಲ್ಲರು. ಇಲ್ಲವಾದರೆ, ಬರೆಯುವ ಕೆಲಸ ತಮಗೆ ಹೇಳಿದ್ದಲ್ಲ ಎಂಬುದಾಗಿ ಅವರು ಅದರಿಂದ ದೂರವೇ ಉಳಿಯುತ್ತಾರೆ. ಪರೀಕ್ಶೆಗಳಲ್ಲಿ ಬರೆಯಬೇಕಾದುದನ್ನೆಲ್ಲ ಉರುಹೊಡೆದು ಬರೆಯುವುದನ್ನಶ್ಟೇ ಅವರು ಮಾಡಬಲ್ಲರು.</p>
<p>ಹಾಗಾಗಿ, ಮಕ್ಕಳಿಗೆ ಬರೆಯಲು ಕಲಿಸುವವರು ಅದಕ್ಕೆ ಬೇಕಾಗುವ ಚಳಕಗಳನ್ನು ಒಂದೊಂದಾಗಿ ಹತೋಟಿಗೆ ತಂದುಕೊಳ್ಳುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕು. ಬರಿಗೆ(ಅಕ್ಶರ)ಗಳನ್ನು ಬರೆಯಲು ಕಲಿಯುವ ಸಮಯದಲ್ಲಿ ಅವರು ಈ ಕಲಿಕೆಯನ್ನು ಸರಿಯಾದ ಓರಣ(ಕ್ರಮ)ದಲ್ಲಿ ನಡೆಸುವ ಹಾಗೆ ನೋಡಿಕೊಳ್ಳಬೇಕು.</p>
<p>ಮಕ್ಕಳ ಕಯ್ಬರಹ ಓದಬಲ್ಲುದಾಗಿರಬೇಕು, ಮತ್ತು ಬರವಣಿಗೆ ಸಲೀಸಾಗಿರಬೇಕು. ಸಲೀಸಾಗಿ ಬರೆಯಲು ಬಾರದವರಿಗೆ ಬೇರೆ ವಿಶಯಗಳ ಕುರಿತು ಆಲೋಚಿಸಲು ಸಮಯವೇ ಸಿಗುವುದಿಲ್ಲ. ಸಲೀಸಾಗಿ ಬರೆಯಬೇಕಿದ್ದಲ್ಲಿ, ಮಕ್ಕಳು ಬರಿಗೆಗಳನ್ನು ಬರೆಯುವ ಬಗೆ, ಬಳಪವನ್ನು ಹಿಡಿಯುವ ಬಗೆ, ಮತ್ತು ಕಾಗದವನ್ನು ಎದುರು ಇರಿಸಿಕೊಳ್ಳುವ ಬಗೆ ಸರಿಯಾಗಿರಬೇಕು.</p>
<p>ಕೆಲವು ಮಕ್ಕಳು ಬರೆಯುವಾಗ ಬಲಗಯ್ಯನ್ನು ಬಳಸುವ ಬದಲು ಎಡಗಯ್ಯನ್ನು ಬಳಸುತ್ತಾರೆ. ಆದರೆ, ಇಂತಹ ಮಕ್ಕಳು ಬಲಗಯ್ಯಲ್ಲಿ ಬರೆಯುವವರನ್ನು ನೋಡಿ, ಅವರು ಬರೆಯುವ ಹಾಗೆಯೇ ಬರೆಯತೊಡಗುತ್ತಾರೆ. ಇದರಿಂದಾಗಿ ಅವರು ತೊಂದರೆಗೊಳಗಾಗುತ್ತಾರೆ. ಯಾಕೆಂದರೆ, ಹಾಗೆ ಬರೆಯುವಾಗ ಅವರಿಗೆ ತಮ್ಮ ಕಯ್ಬೆರಳು ಅಡ್ಡ ಬರುತ್ತದೆ, ಮತ್ತು ತಾವು ಬರೆದುದೇನೆಂಬುದು ಕಾಣಿಸುವುದಿಲ್ಲ. ಅದು ಕಾಣಿಸುವಂತೆ ಮಾಡಲು, ಅವರು ತಮ್ಮ ಮಣಿಗಂಟನ್ನು ಬಗ್ಗಿಸಿ ಬರೆಯಹೊರಡುತ್ತಾರೆ. ಆದರೆ ಹೀಗೆ ಮಾಡುವುದರಿಂದ ಅವರ ಬರವಣಿಗೆ ತುಂಬಾ ತೊಡಕಿನದಾಗಿಬಿಡುತ್ತದೆ.</p>
<p>ಎಡಗಯ್ಯಲ್ಲಿ ಬರೆಯುವ ಮಕ್ಕಳಿಗೆ ಅವರು ಬರೆಯಬೇಕಾಗಿರುವ ಬಗೆ ಹೇಗೆ ಎಂಬುದನ್ನು ಕಲಿಸಿಕೊಡಬೇಕು. ಬರೆಯುವ ಕಾಗದವನ್ನು ಇಲ್ಲವೇ ಪುಸ್ತಕವನ್ನು ಅವರು ಬಲಗಯ್ಯವರ ಹಾಗೆ ಎಡಕ್ಕೆ ತಿರುಗಿಸಿ ಇರಿಸಿಕೊಳ್ಳುವ ಬದಲು, ಬಲಕ್ಕೆ ತಿರುಗಿಸಿ ಇರಿಸಿಕೊಳ್ಳುವ ಹಾಗೆ ಮಾಡಬೇಕು, ಮತ್ತು ಪೆನ್ನನ್ನು ತುದಿಯಿಂದ ತುಸು ಮೇಲೆ ಹಿಡಿದುಕೊಳ್ಳಲು ಹೇಳಬೇಕು. ಬರೆಯುವಾಗ ಅವರು ಮಣಿಗಂಟನ್ನು ಬಗ್ಗಿಸಬಾರದು. ಎಡಗಯ್ಯವರಿಗೆ ತಕ್ಕುದಾಗಿರುವಂತಹ ಈ ಬರೆಯುವ ಬಗೆಯನ್ನು ಕಲಿತುಕೊಂಡಲ್ಲಿ ಮಾತ್ರ, ಅವರಿಗೆ ಸಲೀಸಾಗಿ ಬರೆಯಲು ಬರುತ್ತದೆ.</p>
<p>ಮಾತಿಗೂ ಬರಹಕ್ಕೂ ನಡುವೆ ಸೊಲ್ಲುಗಳ ರಚನೆಯಲ್ಲಿ ವ್ಯತ್ಯಾಸಗಳಿವೆಯಾದ ಕಾರಣ, ಬರೆಯಲು ಕಲಿಯುವ ಮಕ್ಕಳಿಗೆ ಬರಹಗಳಲ್ಲಿ ಎಂತಹ ಸೊಲ್ಲುಗಳನ್ನು ಬಳಸಬೇಕು ಎಂಬುದನ್ನೂ ಕಲಿಸಬೇಕಾಗುತ್ತದೆ. ಇಡೀ ಸೊಲ್ಲುಗಳನ್ನು ಬರೆಯುವುದು ಹೇಗೆ, ಚಿಕ್ಕ ಚಿಕ್ಕ ಸೊಲ್ಲುಗಳನ್ನು ಜೋಡಿಸಿ ಉದ್ದ ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ, ಒಂದು ಚಿಕ್ಕ ಸೊಲ್ಲಿನ ಒಳಗೆ ಬೇರೆ ಚಿಕ್ಕ ಸೊಲ್ಲುಗಳನ್ನು ಇರಿಸಿ ಸಿಕ್ಕಲು ಸೊಲ್ಲುಗಳನ್ನು ಉಂಟುಮಾಡುವುದು ಹೇಗೆ ಎಂಬುದನ್ನು ಅವರಿಗೆ ಕಲಿಸಬೇಕಾಗುತ್ತದೆ. ಎಲ್ಲಾ ಮಕ್ಕಳಿಗೂ ಇದನ್ನು ತಾವಾಗಿಯೇ ಕಲಿತುಕೊಳ್ಳಲು ಬರುವುದಿಲ್ಲ.</p>
<p>ಸೊಲ್ಲುಗಳನ್ನು ಸೇರಿಸಿ ಕುರಳು(ಪಾರಾ)ಗಳನ್ನು ರಚಿಸುವ ಬಗೆಯನ್ನೂ ಅವರಿಗೆ ಕಲಿಸಿಕೊಡಬೇಕಾಗುತ್ತದೆ. ಒಳ್ಳೇ ಮಾದರಿ ಕುರಳುಗಳಲ್ಲಿ ಮೊದಲಿಗೆ ಮುಕ್ಯ ವಿಶಯವನ್ನು ಮುಂದಿಡುವ ಚಿಕ್ಕ ಸೊಲ್ಲಿರುತ್ತದೆ; ಆಮೇಲೆ, ಅದನ್ನು ಹೆಚ್ಚು ವಿವರವಾಗಿ ತಿಳಿಸುವ, ಮತ್ತು ಅದಕ್ಕೆ ಬೆಂಬಲ ನೀಡುವ ವಿಶಯಗಳು ಬರುತ್ತವೆ; ಮತ್ತು ಕೊನೆಯಲ್ಲಿ, ಮುಕ್ತಾಯಗೊಳಿಸುವ ಸೊಲ್ಲು ಬರುತ್ತದೆ. ಸೊಲ್ಲುಗಳನ್ನು ಈ ರೀತಿ ಒಂದಕ್ಕೊಂದು ಹೊಂದಿಕೊಳ್ಳುವ ಹಾಗೆ ಬರೆಯುವುದು ಹೇಗೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.</p>
<p>ಬರಹದಲ್ಲಿ ಬರುವ ಕುರಳುಗಳನ್ನು ಹೇಗೆ ಅಣಿಗೊಳಿಸುವುದು ಎಂಬುದನ್ನೂ ಅವರು ಕಲಿಯಬೇಕಾಗುತ್ತದೆ. ಇದು ಬೇರೆ ಬೇರೆ ಗುರಿಗಳಿಗಾಗಿ ಬಳಕೆಯಾಗುವ ಬರಹಗಳಲ್ಲಿ ಬೇರೆ ಬೇರಾಗಿರುತ್ತದೆ. ಒಂದು ಕತೆಯನ್ನು ಬರೆಯುವವರು ಅದರ ನೆಗಳ್ತೆ ಮುಂದೆ ಹೋಗುವುದಕ್ಕೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಇದಕ್ಕೆ ಬದಲು, ಒಂದು ವಿಶಯದ ಮಟ್ಟಿಗೆ ಇನ್ನೊಬ್ಬರ ಒಪ್ಪಿಗೆ ಇಲ್ಲವೇ ಒಲವನ್ನು ಪಡೆಯಬೇಕೆಂದಿರುವವರು ಆ ವಿಶಯವನ್ನು ಓದುಗರ ಮುಂದಿರಿಸುವ ಮತ್ತು ಅದನ್ನು ಬೆಂಬಲಿಸುವ ವಿಚಾರಗಳನ್ನು ಕೊಡುವ ಬಗೆ ಹೇಗೆ ಎಂಬುದಕ್ಕೆ ಗಮನ ಕೊಡಬೇಕಾಗುತ್ತದೆ.</p>
<p>ಒಮ್ಮೆ ಬರೆದುದನ್ನು ಓದಿ ನೋಡಿ, ಅದು ಸರಿಯಿಲ್ಲವೆಂದು ಅನಿಸಿದಲ್ಲಿ ಅದನ್ನು ತಿದ್ದಿ ಸರಿಪಡಿಸುವುದು ಹೇಗೆ ಎಂಬುದನ್ನೂ ಮಕ್ಕಳು ತಿಳಿದಿರಬೇಕು. ಇದಕ್ಕಾಗಿ ಅವರು ತಾವು ಬರೆದಿರುವ ಸೊಲ್ಲನ್ನು ಬೇರೆ ಬೇರೆ ಬಗೆಗಳಲ್ಲಿ ಮಾರ‍್ಪಡಿಸುವುದು ಹೇಗೆ ಎಂಬುದನ್ನು ಕಲಿತಿರಬೇಕಾಗುತ್ತದೆ. ತಾವು ಬರೆದಿರುವ ಸೊಲ್ಲಿನ ಇಟ್ಟಳ (ಒಳರಚನೆ) ಎಂತಹದು, ಆ ಸೊಲ್ಲನ್ನು ಬೇರೆ ಯಾವ ಇಟ್ಟಳಗಳಿಗೆ ಮಾರ‍್ಪಡಿಸಬಹುದು ಎಂಬಂತಹ ಸೊಲ್ಲರಿಮೆಯ (ವ್ಯಾಕರಣದ) ತಿಳಿವು ಅವರಿಗಿದ್ದಲ್ಲಿ, ತಾವು ಬರೆದಿರುವ ಬರಹವನ್ನು ತಿದ್ದಿ ಸರಿಪಡಿಸುವ ಕೆಲಸವನ್ನು ಅವರು ಹೆಚ್ಚು ಚನ್ನಾಗಿ ನಡೆಸಬಲ್ಲರು.</p>
<p>ಬರವಣಿಗೆಯಲ್ಲಿ ಮಾಡಿರುವ ತಪ್ಪನ್ನು ಬರೆದವರೇ ಓದಿ ನೋಡಿ ಕಂಡುಕೊಳ್ಳುವಂತೆ ಮಾಡಿದಲ್ಲಿ, ಮತ್ತು ಅವು ಯಾಕೆ ತಪ್ಪಾಗಿವೆ ಎಂಬುದನ್ನೂ ತಿಳಿಯುವಂತೆ ಮಾಡಿದಲ್ಲಿ ಅವರ ಬರವಣಿಗೆ ಬೇಗನೆ ಮುಂದೆ ಸಾಗುತ್ತದೆ. ಬರೆದಶ್ಟೂ ಬರವಣಿಗೆ ಚನ್ನಾಗುತ್ತಾ ಹೋಗುತ್ತದೆ. ಹಾಗಾಗಿ, ಬರೆಯುವ ಸಂದರ‍್ಬಗಳು ಮಕ್ಕಳಿಗೆ ಹೆಚ್ಚು ಹೆಚ್ಚು ದೊರಕುವಂತೆ ಮಾಡಬೇಕು.</p>
<p>ಮಕ್ಕಳಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟಬೇಕೆಂಬುದು ಎಲ್ಲಕ್ಕಿಂತಲೂ ಮುಕ್ಯವಾದ ವಿಶಯ. ಏನನ್ನೇ ಬರೆಯಲಿ, ಅದು ಅವರಿಗೆ ನಲಿವನ್ನು ಮತ್ತು ಮೆಚ್ಚುಗೆಯನ್ನು ಕೊಡುವಂತಿರಬೇಕು. ಬೇರೆಯವರ ಒತ್ತಾಯಕ್ಕೆ ಬರೆಯುವ ಬರಹದಿಂದ ಅವರ ಬರವಣಿಗೆ ಒಳ್ಳೆಯದಾಗಲಾರದು.</p>
<p>ಏನಾದರೂ ಒಂದು ವಿಶಯವನ್ನು ಇನ್ನೊಬ್ಬರಿಗೆ ತಿಳಿಸಬೇಕೆಂಬ ತುಡಿತ ಮಕ್ಕಳಲ್ಲಿರುತ್ತದೆ. ಶಾಲೆಯಿಂದ ಮನೆಗೆ ಬಂದೊಡನೆ, ಶಾಲೆಯಲ್ಲಿ ಇಲ್ಲವೇ ಅಲ್ಲಿಂದ ಬರುವಾಗ ದಾರಿಯಲ್ಲಿ ಏನಾಯಿತು ಎಂಬುದನ್ನು ತಾಯಿಗೆ ಆದಶ್ಟು ಬೇಗನೆ ತಿಳಿಸಿಬಿಡಬೇಕೆಂಬ ಆತುರದಲ್ಲಿ ಮಕ್ಕಳಿರುತ್ತಾರೆ. ಗೆಳೆಯರನ್ನು ಕಂಡೊಡನೆ ತಮಗೆ ತಿಳಿದಿರುವ ಹೊಸ ವಿಶಯವೊಂದನ್ನು ಅವರಿಗೆ ತಿಳಿಸುವ ಆತುರವೂ ಅವರಿಗಿರುತ್ತದೆ.</p>
<p>ತಮ್ಮ ಮನಸ್ಸಿನಲ್ಲಿರುವ ಇಂತಹ ವಿಶಯಗಳನ್ನು ಮಾತಿನ ಮೂಲಕ ಇನ್ನೊಬ್ಬರಿಗೆ ತಿಳಿಸುವ ಹಾಗೆ ಬರಹದ ಮೂಲಕವೂ ತಿಳಿಸಲು ಬರುತ್ತದೆ ಎಂಬುದನ್ನು ಅವರಿಗೆ ತೋರಿಸಿಕೊಟ್ಟಲ್ಲಿ, ಅವರು ಬಹಳ ಬೇಗನೆ ಬರವಣಿಗೆಯಲ್ಲಿ ಮುಂದೆ ಹೋಗುತ್ತಾರೆ. ಮೊದಲಿಗೆ ಅವರ ಹತ್ತಿರ ಮಾತಿನ ಮೂಲಕ ಒಂದು ವಿಶಯವನ್ನು ತಿಳಿಸಲು ಹೇಳಿ, ಅದನ್ನು ಕಲಿಸುವವರೇ ಬರೆದು ತೋರಿಸಬಹುದು, ಮತ್ತು ಹಾಗೆ ಬರೆದುದನ್ನು ಅವರಿಗೆ ಓದಲು ಕೊಡಬಹುದು. ಹೀಗೆ ಮಾಡುವುದರಿಂದ ಅವರಿಗೆ ಬರೆಯುವುದರಲ್ಲಿ ಆಸಕ್ತಿ ಹುಟ್ಟುತ್ತದೆ.</p>
<p>ಬರೆಯಲು ಕಲಿಯಬೇಕೆಂದಿರುವವರಿಗೆ ಎರಡು ಬಗೆಯ ಕಲಿಕೆಗಳು ನೆರವು ನೀಡಬಲ್ಲುವು: ಮೊದಲನೆಯದಾಗಿ, ಬರೆಯಲಿರುವ ವಿಶಯದ ಕುರಿತು ಅವರು ಏನೆಲ್ಲಾ ಹೇಳಬಲ್ಲರೋ ಅದನ್ನೆಲ್ಲ ಹೇಳಲು ಬಿಡಬೇಕು. ಇದರಿಂದ ಅವರಲ್ಲಿ ಆಲೋಚಿಸುವ ಕಸುವು ಬೆಳೆಯುತ್ತದೆ. ಎರಡನೆಯದಾಗಿ, ಅವರಿಗೆ ಬೇರೆ ಯಾವುದಾದರೂ ಬರಹವನ್ನು ಎತ್ತಿಬರೆಯಲು ಕಲಿಸಬೇಕು. ಹೀಗೆ ಬರೆಯುವಾಗ, ಅಂತಹ ಬರಹಗಳಲ್ಲಿ ಸೊಲ್ಲುಗಳನ್ನು ಮತ್ತು ಕುರಲುಗಳನ್ನು ಯಾವ ರೀತಿಯಲ್ಲಿ ಅಳವಡಿಸಲಾಗಿದೆ ಎಂಬುದನ್ನು ಅವರು ಗಮನಿಸುವ ಹಾಗೆಯೂ ಮಾಡಬೇಕು.</p>
<p>ಓದುವ ಮತ್ತು ಬರೆಯುವ ಕೆಲಸಗಳೆರಡೂ ಬಹಳ ಮಟ್ಟಿಗೆ ಒಂದನ್ನೊಂದು ಅವಲಂಬಿಸಿವೆ. ಹಾಗಾಗಿ, ಅವೆರಡನ್ನೂ ಮಕ್ಕಳು ಒಟ್ಟೊಟ್ಟಾಗಿ ಕಲಿತುಕೊಳ್ಳುವಂತೆ ಮಾಡಬೇಕು.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%2F&#038;t=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%AC%E0%B2%B0%E0%B3%86%E0%B2%AF%E0%B2%B2%E0%B3%81%20%E0%B2%95%E0%B2%B2%E0%B2%BF%E0%B2%B8%E0%B3%81%E0%B2%B5%20%E0%B2%AC%E0%B2%97%E0%B3%86&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%2F&#038;p&#091;images&#093;&#091;0&#093;=&#038;p&#091;title&#093;=%E0%B2%AE%E0%B2%95%E0%B3%8D%E0%B2%95%E0%B2%B3%E0%B2%BF%E0%B2%97%E0%B3%86%20%E0%B2%AC%E0%B2%B0%E0%B3%86%E0%B2%AF%E0%B2%B2%E0%B3%81%20%E0%B2%95%E0%B2%B2%E0%B2%BF%E0%B2%B8%E0%B3%81%E0%B2%B5%20%E0%B2%AC%E0%B2%97%E0%B3%86" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%25ae%25e0%25b2%2595%25e0%25b3%258d%25e0%25b2%2595%25e0%25b2%25b3%25e0%25b2%25bf%25e0%25b2%2597%25e0%25b3%2586-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b2%25b2%25e0%25b3%2581-%25e0%25b2%2595%25e0%25b2%25b2%25e0%25b2%25bf%25e0%25b2%25b8%25e0%25b3%2581%25e0%25b2%25b5-%25e0%25b2%25ac%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%ac%e0%b2%b0%e0%b3%86%e0%b2%af%e0%b2%b2%e0%b3%81-%e0%b2%95%e0%b2%b2%e0%b2%bf%e0%b2%b8%e0%b3%81%e0%b2%b5-%e0%b2%ac/feed/</wfw:commentRss>
		<slash:comments>0</slash:comments>
		</item>
		<item>
		<title>ಓದುವ ಹಾಗೆಯೇ ಬರೆಯುವುದು</title>
		<link>http://dnshankarabhat.net/%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86%e0%b2%af%e0%b3%81%e0%b2%b5%e0%b3%81%e0%b2%a6%e0%b3%81/?utm_source=rss&#038;utm_medium=rss&#038;utm_campaign=%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b3%2581%25e0%25b2%25b5%25e0%25b3%2581%25e0%25b2%25a6%25e0%25b3%2581</link>
		<comments>http://dnshankarabhat.net/%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86%e0%b2%af%e0%b3%81%e0%b2%b5%e0%b3%81%e0%b2%a6%e0%b3%81/#comments</comments>
		<pubDate>Mon, 14 Apr 2014 16:44:47 +0000</pubDate>
		<dc:creator><![CDATA[admin]]></dc:creator>
				<category><![CDATA[ನುಡಿಯರಿಮೆ]]></category>
		<category><![CDATA[linguistics]]></category>
		<category><![CDATA[load words]]></category>
		<category><![CDATA[Sanskrit]]></category>
		<category><![CDATA[writing]]></category>
		<category><![CDATA[written Kannada]]></category>
		<category><![CDATA[ಎರವಲು ಪದಗಳು]]></category>
		<category><![CDATA[ಪ್ರಾಕ್ರುತ]]></category>
		<category><![CDATA[ಬರವಣಿಗೆ]]></category>
		<category><![CDATA[ಬರಹ ಕನ್ನಡ]]></category>
		<category><![CDATA[ಬ್ರಾಹ್ಮಣ]]></category>
		<category><![CDATA[ಬ್ರಾಹ್ಮೀ ಲಿಪಿ]]></category>
		<category><![CDATA[ಮಲಯಾಳ]]></category>
		<category><![CDATA[ಮಹಾಪ್ರಾಣ]]></category>
		<category><![CDATA[ರೋಮನ್ ಲಿಪಿ]]></category>
		<category><![CDATA[ಲಿಪಿ]]></category>
		<category><![CDATA[ಸಂಸ್ಕ್ರುತ]]></category>
		<category><![CDATA[ಹಳೆಗನ್ನಡ]]></category>
		<category><![CDATA[ಹೊಲಬು]]></category>
		<category><![CDATA[ಹೊಸ ಬರಹ]]></category>
		<category><![CDATA[ಹೊಸಗನ್ನಡ]]></category>

		<guid isPermaLink="false">http://dnshankarabhat.net/?p=80</guid>
		<description><![CDATA[ನುಡಿಯರಿಮೆಯ ಇಣುಕುನೋಟ – 10 ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, [&#8230;]]]></description>
				<content:encoded><![CDATA[<p><strong>ನುಡಿಯರಿಮೆಯ ಇಣುಕುನೋಟ – 10</strong></p>
<p>ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, ಅವನ್ನು ಹೇಗೆ ಬರೆಯಬೇಕು ಎಂಬುದನ್ನು ತೀರ‍್ಮಾನಿಸಬೇಕು.</p>
<p>ಬರಹದ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಇನ್ನೊಬ್ಬರಿಗೆ ತಿಳಿಸುತ್ತೇವೆ, ಮತ್ತು ಬರಹ ರೂಪದಲ್ಲಿರುವ ಇನ್ನೊಬ್ಬರ ಅನಿಸಿಕೆಗಳನ್ನು ಓದಿನ ಮೂಲಕ ತಿಳಿದುಕೊಳ್ಳುತ್ತೇವೆ. ಈ ಎರಡು ಕೆಲಸಗಳೂ ಸರಿಯಾಗಿ ನಡೆಯಬೇಕಿದ್ದಲ್ಲಿ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವ ಮತ್ತು ಓದುವ ಕೆಲಸಗಳನ್ನು ನಡೆಸಬೇಕಾಗುತ್ತದೆ. ಈ ಕೆಲಸಗಳನ್ನು ಇವತ್ತು ಶಾಲೆಗಳಲ್ಲಿ ಕಲಿಸಲಾಗುತ್ತದೆಯಾದ ಕಾರಣ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವಂತೆ ಮತ್ತು ಓದುವಂತೆ ಮಾಡುವುದು ತೊಡಕಿನ ಕೆಲಸವೇನಲ್ಲ.</p>
<p>ಶಕಾರವನ್ನು ಹೆಚ್ಚಿನ ಕನ್ನಡಿಗರೂ ಶಕಾರವಾಗಿಯೇ ಓದುತ್ತಾರಲ್ಲದೆ ಸಕಾರವಾಗಿ ಬದಲಾಯಿಸಿ ಓದುವುದಿಲ್ಲ. ಆದರೆ, ಷಕಾರವನ್ನು ಹೆಚ್ಚಿನವರೂ ಶಕಾರವಾಗಿ ಬದಲಾಯಿಸಿ ಓದುತ್ತಾರೆ. ಹಾಗಾಗಿ, ಸಂಸ್ಕ್ರುತ ಎರವಲುಗಳಲ್ಲಿ ಬರುವ ಷಕಾರವನ್ನು ಶಕಾರವಾಗಿ ಬದಲಾಯಿಸಿ ಬರೆಯಬೇಕು, ಮತ್ತು ಶಕಾರವನ್ನು ಹಾಗೆಯೇ ಉಳಿಸಬೇಕು ಎಂಬ ತೀರ‍್ಮಾನಕ್ಕೆ ಬರಬೇಕಾಗುತ್ತದೆ.</p>
<p>ಇದೇ ರೀತಿಯಲ್ಲಿ, ಋಕಾರ, ಮಹಾಪ್ರಾಣ, ವಿಸರ‍್ಗ ಮೊದಲಾದ ಬೇರೆ ಕೆಲವು ಬರಿಗೆಗಳ ವಿಶಯದಲ್ಲೂ ಹೆಚ್ಚಿನ ಕನ್ನಡಿಗರ ಓದು ಹೇಗಿದೆಯೆಂಬುದನ್ನು ಕಂಡುಹಿಡಿದು, ಅದಕ್ಕನುಸಾರವಾಗಿ ಬರವಣಿಗೆಯನ್ನು ಬದಲಾಯಿಸಬೇಕು. ಹೀಗೆ ಮಾಡಿದಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗಬಲ್ಲುದು, ಮತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗುವಂತೆ ಮಾಡುವ ಕೆಲಸವೂ ಸುಲಬವಾಗಬಲ್ಲುದು.</p>
<p>ಹಳೆಗನ್ನಡದ ಱಕಾರ ಮತ್ತು ೞಕಾರಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೆ ಎಂಬುದನ್ನು ಗಮನಿಸಿ, ಹೊಸಗನ್ನಡವನ್ನು ಬರಹದಲ್ಲಿ ಬಳಸಲು ತೊಡಗಿದ ಕಾಲದಲ್ಲಿ ಅವನ್ನು ರಕಾರ ಮತ್ತು ಳಕಾರಗಳಾಗಿ ಬದಲಾಯಿಸಿ ಬರೆಯಲು ತೊಡಗಲಾಯಿತು. ಈ ಮಾರ‍್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು. ಸಂಸ್ಕ್ರುತ ಎರವಲುಗಳಲ್ಲಿ ಬರುವ ಬರಿಗೆಗಳನ್ನು ಓದುವ ಹಾಗೆ ಬರೆಯುವಂತೆ ಮಾರ‍್ಪಡಿಸುವುದೂ ಇಂತಹದೇ ಒಂದು ಕೆಲಸ ಎಂಬುದನ್ನು ಇಲ್ಲಿ ಗಮನಿಸಬೇಕು.</p>
<p>ಇಶ್ಟರ ವರೆಗೆ ಈ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯುತ್ತಿದ್ದುದಕ್ಕೆ ಎರಡು ಮುಕ್ಯ ಕಾರಣಗಳಿದ್ದುವು: ಹಿಂದಿನ ಕಾಲದಲ್ಲಿ ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದವರೆಲ್ಲ ಅದನ್ನು ಸಂಸ್ಕ್ರುತದಲ್ಲಿ ಬರೆದಿರಿಸುತ್ತಿದ್ದರು; ಹಾಗಾಗಿ, ಯಾವುದೇ ಒಂದು ವಿಶಯದಲ್ಲಿ ಹೊಸ ತಿಳಿವನ್ನು ಪಡೆಯಬೇಕಿದ್ದರೂ ಸಂಸ್ಕ್ರುತದ ಮೊರೆಹೊಗಬೇಕಾಗಿತ್ತು.</p>
<p>ಇದರಿಂದಾಗಿ ಸಂಸ್ಕ್ರುತ ಬರಹಕ್ಕೆ ಒಂದು ಬಗೆಯ ಮೇಲ್ಮೆ ಬಂದಿತ್ತು; ಅದರ ಪದಗಳನ್ನು ಕನ್ನಡದಲ್ಲಿಯೂ ಸಂಸ್ಕ್ರುತದಲ್ಲಿರುವ ಹಾಗೆಯೇ ಉಳಿಸಿಕೊಳ್ಳುವುದರಿಂದ, ಮುಂದೆ ಸಂಸ್ಕ್ರುತ ಬರಹಗಳನ್ನು ಓದಲು ಕಲಿಯುವ ಕೆಲಸ ಕನ್ನಡಿಗರಿಗೆ ಸುಲಬವಾಗಬಹುದಾಗಿತ್ತು. ಕನ್ನಡ ಓದಿನ ಕಲಿಕೆ ಮುಂದೆ ನಡೆಸಲೇಬೇಕಾಗಿದ್ದ ಸಂಸ್ಕ್ರುತ ಓದಿಗೆ ಒಂದು ಮೆಟ್ಟಲಾಗಬಹುದಾಗಿತ್ತು. ಇದು ಒಂದು ಕಾರಣ.</p>
<p>ಆದರೆ, ಇವತ್ತು ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದಿರುವವರು ಯಾರೂ ಅದನ್ನು ಸಂಸ್ಕ್ರುತದಲ್ಲಿ ಬರೆಯಲು ಹೋಗುವುದಿಲ್ಲ; ಹಾಗಾಗಿ, ಹಿಂದಿನ ಕಾಲದಲ್ಲಿ ಅದಕ್ಕಿದ್ದ ಮೇಲ್ಮೆ ಇಂದು ಉಳಿದಿಲ್ಲ, ಮತ್ತು ಅದರ ಪದಗಳನ್ನು ಅದರ ಬರಹಗಳಲ್ಲಿರುವ ಹಾಗೆ ಬರೆಯಲು ಕಲಿಯುವ ಅವಶ್ಯಕತೆಯೂ ಇವತ್ತು ಕನ್ನಡಿಗರಿಗಿಲ್ಲ.</p>
<p>ಹಿಂದಿನ ಕಾಲದಲ್ಲಿ ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸವನ್ನು ಮುಕ್ಯವಾಗಿ ಉತ್ತರದಿಂದ ವಲಸೆಬಂದ ಮೇಲ್ವರ‍್ಗದ ಜನರು ನಡೆಸುತ್ತಿದ್ದರು; ಆರ‍್ಯರಾಗಿದ್ದ ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಆದರ ಮತ್ತು ಪೂಜ್ಯಬಾವಗಳಿದ್ದುವು. ಹಾಗಾಗಿ, ಅದರ ಪದಗಳನ್ನು ಮಾರ‍್ಪಡಿಸದೆ ಉಳಿಸುವುದು ಅವರ ಮಟ್ಟಿಗೆ ಅವಶ್ಯವಾಗಿತ್ತು. ಇದು ಇನ್ನೊಂದು ಕಾರಣ.</p>
<p>ಆದರೆ, ಇವತ್ತು ಎಲ್ಲಾ ವರ‍್ಗಗಳಿಗೆ ಸೇರಿದ ಕನ್ನಡಿಗರೂ ಕನ್ನಡ ಬರಹವನ್ನು ಬಳಸಲು ಕಲಿಯಬೇಕಾಗಿದೆ. ಇವರಲ್ಲಿ ಹೆಚ್ಚಿನವರೂ ದ್ರಾವಿಡ ಮೂಲದವರಾಗಿದ್ದು, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಮಾರ‍್ಪಡಿಸದೆ ಉಳಿಸಿಕೊಳ್ಳುವುದು ಅಂತಹ ಒಂದು ಪೂಜ್ಯವಾದ ವಿಶಯವೇ ಅಲ್ಲ; ಅದರಿಂದ ಅವರಿಗೆ ಬೇರೆ ಪ್ರಯೋಜನಗಳೂ ದೊರಕುವುದಿಲ್ಲ. ಹಾಗಾಗಿ, ಸಂಸ್ಕ್ರುತ ಎರವಲುಗಳನ್ನು ಕನ್ನಡದ ಸೊಗಡನ್ನು ಕೆಡಿಸದಂತೆ ಮಾರ‍್ಪಡಿಸುವುದಕ್ಕೆ ಹೆಚ್ಚಿನ ಕನ್ನಡಿಗರಿಂದಲೂ ವಿರೋದ ಬರಲಾರದು.</p>
<p>ಬೇರೆ ನುಡಿಗಳಿಂದ ಎರವಲಾಗಿ ಪಡೆದ ಪದಗಳನ್ನು ಯಾವ ನುಡಿಯಲ್ಲೂ ಆ ನುಡಿಯಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ; ಇದಕ್ಕೆ ಕೆಲವೇ ಕೆಲವು ಹೊರಪಡಿಕೆಗಳು ಮಾತ್ರ ಇವೆ. ಎತ್ತುಗೆಗಾಗಿ, ಸಂಸ್ಕ್ರುತ ಇಲ್ಲವೇ ಪ್ರಾಕ್ರುತ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಬ್ರಾಹ್ಮೀ ಲಿಪಿಯನ್ನು ಕನ್ನಡದಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಸಂಸ್ಕ್ರುತದ ಎರವಲುಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಸಂಸ್ಕ್ರುತ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.</p>
<p>ಇದೇ ರೀತಿಯಲ್ಲಿ, ಅರೇಬಿಕ್ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಲಿಪಿಯನ್ನು ಟರ‍್ಕಿಶ್‌ನಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಅರೇಬಿಕ್ ಎರವಲುಗಳನ್ನು ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಅರೇಬಿಕ್ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.</p>
<p>ಆದರೆ, ಎಲ್ಲಾ ನುಡಿಗಳೂ ಈ ರೀತಿ ಬೇರೊಂದು ನುಡಿಯ ಲಿಪಿಯನ್ನು ತಮ್ಮ ನುಡಿಗೆ ಅಳವಡಿಸಿಕೊಳ್ಳುವಾಗ ಆ ನುಡಿಯ ಪದಗಳನ್ನು ಅದರಲ್ಲಿರುವಂತೆ ಬರೆಯಲು ಬೇಕಾಗುವ ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಿಲ್ಲ; ಎತ್ತುಗೆಗಾಗಿ, ನಾಗರಿ ಲಿಪಿಯನ್ನು ಪಂಜಾಬಿ ನುಡಿಗೆ ಅಳವಡಿಸುವಾಗ, ಷಕಾರ, ಋಕಾರ, ಹಲವು ಬಗೆಯ ಒತ್ತುಬರಿಗೆಗಳು ಮೊದಲಾದುವನ್ನು ಉಳಿಸಿಕೊಂಡಿಲ್ಲ; ಈ ಕಾರಣಕ್ಕಾಗಿ, ಸಂಸ್ಕ್ರುತ ಎರವಲು ಪದಗಳನ್ನು ಇವತ್ತು ಪಂಜಾಬಿ ಬರಹದಲ್ಲಿ ಓದುವ ಹಾಗೆ ಬರೆಯಲಾಗುತ್ತದೆಯಲ್ಲದೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯುವುದಿಲ್ಲ.</p>
<p>ಮಲಯಾಳ ಬರಹದಲ್ಲೂ ಮೊದಲಿಗೆ ಮಹಾಪ್ರಾಣಾಕ್ಶರಗಳು, ಗಜಡದಬ ಮೊದಲಾದ ಆ ನುಡಿಗೆ ಬೇಡದಿರುವ ಹಲವು ಬರಿಗೆಗಳು ಇರಲಿಲ್ಲ; ಸಂಸ್ಕ್ರುತ ಬರಹಗಳನ್ನು ಬರೆಯಲು, ಮತ್ತು ಕೆಲವೊಮ್ಮೆ ಸಂಸ್ಕ್ರುತ ಪದಗಳನ್ನು ಮಲಯಾಳ ಬರಹಗಳಲ್ಲಿ ಬರೆಯಲು ಆ ಸಮಯದಲ್ಲಿ ಗ್ರಂತಲಿಪಿಯೆಂಬ ಬೇರೆಯೇ ಒಂದು ಲಿಪಿಯನ್ನು ಬಳಸಲಾಗುತ್ತಿತ್ತು.</p>
<p>ಆದರೆ, ಹದಿನೇಳನೇ ಶತಮಾನಕ್ಕಾಗುವಾಗ, ಮಲಯಾಳ ಸಾಹಿತ್ಯದಲ್ಲಿ ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾಯಿತು; ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಒಲವಿದ್ದುದರಿಂದ, ಮತ್ತು ಇವರ ಬರಹಗಳಲ್ಲಿ ತುಂಬಾ ಸಂಸ್ಕ್ರುತ ಪದಗಳು ಬಳಕೆಯಾಗುತ್ತಿದ್ದುದರಿಂದ, ಇವರು ತಮ್ಮ ಮಲಯಾಳ ಬರಹಗಳಲ್ಲೂ ಗ್ರಂತ ಲಿಪಿಯನ್ನೇ ಬಳಸಲು ತೊಡಗಿದರು. ಇದರಿಂದಾಗಿ, ಇವತ್ತಿನ ಮಲಯಾಳ ಬರಹ ಕನ್ನಡ ಬರಹದ ಹಾಗೆಯೇ ಅನವಶ್ಯಕವಾಗಿ ತೊಡಕಿನದಾಗಿದೆ.</p>
<p>ಎಲ್ಲಾ ಜನರೂ ಬರಹಬಲ್ಲವರಾಗಬೇಕಿರುವ ಇವತ್ತಿನ ದಿನಗಳಲ್ಲಿ ಈ ರೀತಿ ಒಂದು ನುಡಿಯ ಬರವಣಿಗೆಗೆ ಅವಶ್ಯವಿಲ್ಲದ ಬರಿಗೆಗಳನ್ನು ಎರವಲು ಪದಗಳ ಬರವಣಿಗೆಗಾಗಿ ಉಳಿಸಿಕೊಳ್ಳುವುದು ಜಾಣತನವಲ್ಲ; ಇದನ್ನು ಮನಗಂಡ ತಿಳಿವಿಗರು ಟರ‍್ಕಿ, ಇಂಡೊನೇಶಿಯಾ, ಮಲಯೇಶಿಯಾ ಮೊದಲಾದ ನಾಡುಗಳಲ್ಲಿ ಅರೇಬಿಕ್ ಮೂಲದ ಲಿಪಿಯನ್ನೇ ಬಿಟ್ಟುಕೊಟ್ಟು ರೋಮನ್ ಮೂಲದ ಲಿಪಿಯನ್ನು ತಮ್ಮ ಬರಹಕ್ಕೆ ಅಳವಡಿಸಿಕೊಂಡಿದ್ದಾರೆ.</p>
<p>ಕೊರಿಯಾದಂತಹ ಬೇರೆ ಕೆಲವು ನಾಡುಗಳಲ್ಲಿ ಎರವಲು ಪದಗಳನ್ನು ಓದುವ ಹಾಗೆಯೇ ಬರೆಯಲು ತೊಡಗುವ ಮೂಲಕ ಈ ತೊಡಕನ್ನು ನಿವಾರಿಸಿಕೊಳ್ಳಲಾಗಿದೆ. ಕನ್ನಡದಲ್ಲಿಯೂ ಇಂತಹದೇ ಮಾರ‍್ಪಾಡನ್ನು ನಾವು ಇವತ್ತು ನಡೆಸಬೇಕಾಗಿದೆ.</p>
<p><em>(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)</em></p>
<p></p><span class="synved-social-container synved-social-container-share"><a class="synved-social-button synved-social-button-share synved-social-size-24 synved-social-resolution-single synved-social-provider-facebook" data-provider="facebook" target="_blank" rel="nofollow" title="Share on Facebook" href="http://www.facebook.com/sharer.php?u=http%3A%2F%2Fdnshankarabhat.net%2F%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b3%2581%25e0%25b2%25b5%25e0%25b3%2581%25e0%25b2%25a6%25e0%25b3%2581%2F&#038;t=%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B3%81%E0%B2%B5%E0%B3%81%E0%B2%A6%E0%B3%81&#038;s=100&#038;p&#091;url&#093;=http%3A%2F%2Fdnshankarabhat.net%2F%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b3%2581%25e0%25b2%25b5%25e0%25b3%2581%25e0%25b2%25a6%25e0%25b3%2581%2F&#038;p&#091;images&#093;&#091;0&#093;=&#038;p&#091;title&#093;=%E0%B2%93%E0%B2%A6%E0%B3%81%E0%B2%B5%20%E0%B2%B9%E0%B2%BE%E0%B2%97%E0%B3%86%E0%B2%AF%E0%B3%87%20%E0%B2%AC%E0%B2%B0%E0%B3%86%E0%B2%AF%E0%B3%81%E0%B2%B5%E0%B3%81%E0%B2%A6%E0%B3%81" style="font-size: 0px; width:24px;height:24px;margin:0;margin-bottom:15px;margin-right:15px;"><img alt="facebook" title="Share on Facebook" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/facebook.png" /></a><a class="synved-social-button synved-social-button-share synved-social-size-24 synved-social-resolution-single synved-social-provider-twitter" data-provider="twitter" target="_blank" rel="nofollow" title="Share on Twitter" href="http://twitter.com/share?url=http%3A%2F%2Fdnshankarabhat.net%2F%25e0%25b2%2593%25e0%25b2%25a6%25e0%25b3%2581%25e0%25b2%25b5-%25e0%25b2%25b9%25e0%25b2%25be%25e0%25b2%2597%25e0%25b3%2586%25e0%25b2%25af%25e0%25b3%2587-%25e0%25b2%25ac%25e0%25b2%25b0%25e0%25b3%2586%25e0%25b2%25af%25e0%25b3%2581%25e0%25b2%25b5%25e0%25b3%2581%25e0%25b2%25a6%25e0%25b3%2581%2F&#038;text=Hey%20check%20this%20out" style="font-size: 0px; width:24px;height:24px;margin:0;margin-bottom:15px;"><img alt="twitter" title="Share on Twitter" class="synved-share-image synved-social-image synved-social-image-share" width="24" height="24" style="display: inline; width:24px;height:24px; margin: 0; padding: 0; border: none; box-shadow: none;" src="http://dnshankarabhat.net/wp-content/plugins/social-media-feather/synved-social/image/social/regular/48x48/twitter.png" /></a></span>]]></content:encoded>
			<wfw:commentRss>http://dnshankarabhat.net/%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86%e0%b2%af%e0%b3%81%e0%b2%b5%e0%b3%81%e0%b2%a6%e0%b3%81/feed/</wfw:commentRss>
		<slash:comments>0</slash:comments>
		</item>
	</channel>
</rss>
