ಕನ್ನಡ ಬರಹದ ಸೊಲ್ಲರಿಮೆ – ೧

sollarime-1


ಬರಹಗಾರರು:
ಡಾ. ಡಿ. ಎನ್. ಶಂಕರ ಬಟ್
ಪುಟಗಳು: 328
ಅಚ್ಚು: ಮೊದಲನೇ ಅಚ್ಚು, 2010

ಹೊತ್ತಗೆಯನ್ನು ಕೆಳಗಿಳಿಸಿಕೊಳ್ಳಿ   down_arrow

ಕೊಂಡುಕೊಳ್ಳಿರಿ
munnota
totalkannada
navakarnataka


 

ವಿವರಗಳು

ಇವತ್ತು ನಮ್ಮಲ್ಲಿ ಬಳಕೆಯಲ್ಲಿರುವ ‘ಕನ್ನಡ ವ್ಯಾಕರಣ’ಗಳು ನಿಜಕ್ಕೂ ಕನ್ನಡದ ವ್ಯಾಕರಣಗಳೇ ಅಲ್ಲ; ಯಾಕೆಂದರೆ, ಅವು ಕನ್ನಡದ ಪದ, ಪದಕಂತೆ, ಮತ್ತು ಸೊಲ್ಲುಗಳನ್ನು ಉಂಟುಮಾಡುವಲ್ಲಿ ಎಂತಹ ಕಟ್ಟಲೆಗಳು ಬಳಕೆಯಾಗುತ್ತವೆ ಎಂಬುದನ್ನು ತಿಳಿಸುವ ಬದಲು, ಸಂಸ್ಕ್ರುತ ವ್ಯಾಕರಣದ ಕಟ್ಟಲೆಗಳನ್ನು ಕನ್ನಡಕ್ಕೆ ಅಳವಡಿಸಲು ಪ್ರಯತ್ನಿಸುತ್ತವೆ ಎಂಬುದಾಗಿ ಹತ್ತು ವರುಶಗಳ ಹಿಂದೆಯೇ ಶಂಕರ ಬಟ್ಟರು ತಮ್ಮ ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ ಎಂಬ ಹೊತ್ತಗೆಯಲ್ಲಿ ತೋರಿಸಿ ಕೊಟ್ಟಿದ್ದರು. ಆದರೆ, ಈ ಹೊತ್ತಗೆಯ ಮೂಲಕ ಕನ್ನಡಕ್ಕೆ ಕನ್ನಡದ್ದೇ ಸೊಲ್ಲರಿಮೆ(ವ್ಯಾಕರಣ)ಯನ್ನು ಬರೆಯುವ ಮೊದಲನೇ ಹೆಜ್ಜೆಯನ್ನಿಟ್ಟಿದ್ದಾರೆ.

ನುಡಿಯ ಸೊಲ್ಲರಿಮೆಗಿಂತ ಬರಹದ ಸೊಲ್ಲರಿಮೆಯು ಹಲವು ವಿಶಯಗಳಲ್ಲಿ ಬೇರಾಗಿರುತ್ತದೆ, ಮತ್ತು ಇವತ್ತು ಕನ್ನಡ ಬರಹದಲ್ಲಿ ಎಂತಹ ಸೊಲ್ಲರಿಮೆಯ ಕಟ್ಟಲೆಗಳು ಬಳಕೆಯಾಗುತ್ತವೆ, ಎಂತಹವು ಬಳಕೆಯಾದರೆ ಒಳ್ಳೆಯದು ಎಂಬುದನ್ನು ಈ ಹೊತ್ತಗೆಯಲ್ಲಿ ಬಟ್ಟರು ವಿವರಿಸಿದ್ದಾರೆ. ಇದಲ್ಲದೆ, ಕನ್ನಡದ್ದೇ ಆದ ಪದ ಮತ್ತು ಒಟ್ಟುಗಳನ್ನೂ ಬಳಸಿ ಹೊಸ ಪದಗಳನ್ನು ಹೇಗೆ ಉಂಟುಮಾಡಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ. ಅರಿಮೆಯ ಬರಹಗಳಲ್ಲಿ ಹೊಸ ಪದಗಳನ್ನು ಹುಟ್ಟುಹಾಕಬೇಕೆಂದಿರುವವರು ಸಂಸ್ಕ್ರುತದ ಮೊರೆಹೊಗುವ ಬದಲು, ಕನ್ನದದಲ್ಲೇನೆ ತಮಗೆ ಬೇಕಾಗಿರುವ ಪದಗಳನ್ನು ಉಂಟುಮಾಡಲು ಇದು ತಿಳಿವನ್ನೀಯಬಲ್ಲುದು.

ಶಂಕರ ಬಟ್ಟರು ತಮ್ಮ ಕನ್ನಡ ವ್ಯಾಕರಣ ಯಾಕೆ ಬೇಕು ಎಂಬ ಹೊತ್ತಗೆಯಲ್ಲಿ ಹಲವು ಬಗೆಯ ಕಲಿಕೆ ಮತ್ತು ಉದ್ಯೋಗಗಳಲ್ಲಿ ಕನ್ನಡದ ಸೊಲ್ಲರಿಮೆ ಹೇಗೆ ನೆರವಿಗೆ ಬರಬಲ್ಲುದು ಎಂಬುದನ್ನು ವಿವರಿಸಿದ್ದರು. ಅಂತಹ ನೆರವನ್ನು ಕೊಡಬಲ್ಲ ಹೊತ್ತಗೆಗಳನ್ನು ಬರೆಯುವವರಿಗೆ ಈ ಕನ್ನಡ ಬರಹದ ಸೊಲ್ಲರಿಮೆ ಅಡಿಗಟ್ಟನ್ನೊದಗಿಸಬಲ್ಲುದು.

facebooktwitter